ಶಿಕ್ಷಕರ ವರ್ಗಾವಣೆ ಸಮಸ್ಯೆ ಹೊಸ ವಿಧೇಯಕ ಪರಿಹಾರವೇ?


Team Udayavani, Mar 11, 2020, 6:22 AM IST

government-school

ಶಿಕ್ಷಕರ ವರ್ಗಾವಣೆ ಸಮಸ್ಯೆಗೆ ಮುಕ್ತಿ ಸಿಗಲಿ ಮತ್ತು ಹೊಸ ವಿಧೇಯಕದಿಂದಾದರೂ ಹಲವಾರು ವರ್ಷಗಳಿಂದ ವರ್ಗಾವಣೆಗಾಗಿ ಕಾದು ಕುಳಿತಿರುವ ಅರ್ಹ ಶಿಕ್ಷಕರಿಗೆ ಫ‌ಲ ಸಿಗಲಿ ಎಂಬುದು ಆಶಯ.

ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ಸಮಸ್ಯೆ ಇತ್ತೀಚಿನ ವರ್ಷಗಳಲ್ಲಿ ಆಡಳಿತ ನಡೆಸಿದ ಮೂರ್‍ನಾಲ್ಕು ಸರ್ಕಾರಗಳಿಗೆ ಕಬ್ಬಿಣದ ಕಡೆಲೆಯಾಗಿಯೇ ಪರಿಣಮಿಸಿತ್ತು. ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು ( ಶಿಕ್ಷಕರ ವರ್ಗಾವಣೆ ನಿಯಂತ್ರಣ) ವಿಧೇಯಕ್ಕೆ 2007ರ ಸಮ್ಮಿಶ್ರ ಸರ್ಕಾರ, ನಂತರದ ಬಿಜೆಪಿ ಸರ್ಕಾರ, ನಂತರ ಐದು ವರ್ಷ ಆಳಿದ ಕಾಂಗ್ರೆಸ್‌ ಸರ್ಕಾರ ಮತ್ತು ಒಂದೂವರೆ ವರ್ಷ ಆಡಳಿತ ನಡೆಸಿದ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರದಲ್ಲೂ ತಿದ್ದುಪಡಿ ತರಲಾಗಿತ್ತು. ಆದರೆ, ಶಿಕ್ಷಕರ ವರ್ಗಾವಣೆ ಸಮಸ್ಯೆಗೆ ಪರಿಹಾರ ಮಾತ್ರ ಸಿಕ್ಕಿಲ್ಲ.

ವರ್ಗಾವಣೆ ಮಿತಿಯಿಂದ ಶೇ.8ರಿಂದ ಶೇ.15ಕ್ಕೆ ಏರಿಸಿದರೂ, ಸಮಸ್ಯೆ ಬಹೆಹ‌ರಿದಿರಲಿಲ್ಲ. ಶಿಕ್ಷಕ ದಂಪತಿ
ವಿಷಯದಲ್ಲಿ ಕೆಲವು ವಿನಾಯತಿ ಹಾಗೂ ಅವಕಾಶಗಳನ್ನು ಕಲ್ಪಿಸಿದ್ದರೂ, ಸಮಸ್ಯೆ ಬಗೆಹರಿದಿಲ್ಲ. ಒಂದೊಂದು ಸರ್ಕಾರ ಬಂದಾಗಲೂ ಒಂದೊಂದು ತಿದ್ದುಪಡಿ ತರುತ್ತಿದ್ದಂತೆ ಶಿಕ್ಷಕರ ವರ್ಗಾವಣೆ ವಿಷಯದಲ್ಲಿ ಭಿನ್ನವಾದ ಇನ್ನೊಂದು ರೀತಿಯ ಸಮಸ್ಯೆ ಎದುರಾಗುತ್ತಲೇ ಬಂದಿದೆ.

ಘಟಕದ ಒಳಗಿನ ಮತ್ತು ಹೊರಗಿನ ವರ್ಗಾವಣೆ, ದಂಪತಿ ಶಿಕ್ಷಕರ ವರ್ಗಾವಣೆ, ಕೌನ್ಸೆಲಿಂಗ್‌ ಪ್ರಕ್ರಿಯೆ ಇತ್ಯಾದಿ ಸಮಸ್ಯೆಗಳು ಬಹುತೇಕ ಬಗೆಹರಿದಿದೆ ಎನ್ನುಷ್ಟರಲ್ಲಿ ಕಡ್ಡಾಯ ವರ್ಗಾವಣೆ ಹೊಸ ಸಮಸ್ಯೆಯಾಗಿ ಉದ್ಭವಿಸಿತ್ತು. ಕಳೆದ ಒಂದು ದಶಕದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ ಹಾಗೂ ಸಲ್ಲಿಸುತ್ತಿರುವ ಸಚಿವರಿಗೆ ಶಿಕ್ಷಕರ ವರ್ಗಾವಣೆ ಸಮಸ್ಯೆ ನಿತ್ಯವೂ ಕಾಡಿತ್ತು ಮತ್ತು ಕಾಡುತ್ತಲೇ ಇದೆ.

ಎ-ವಲಯ (ನಗರ ಪ್ರದೇಶ)ದಲ್ಲಿ ನಿರಂತರವಾಗಿ ಹತ್ತು ವರ್ಷಕ್ಕಿಂತ ಅಧಿಕ ಸಮಯ ಸೇವೆ ಸಲ್ಲಿಸಿದ
ಶಿಕ್ಷಕರಲ್ಲಿ ಜೇಷ್ಠತೆಯ ಆಧಾರದಲ್ಲಿ ಕಡ್ಡಾಯ ವರ್ಗಾವಣೆ ಮಾಡುವ ತಿದ್ದುಪಡಿಯನ್ನು ತನ್ವೀರ್‌ ಸೇs… ಅವರು ಸಚಿವರಾಗಿದ್ದಾಗ ತಂದಿದ್ದರು. ಇದಾದ ನಂತರ ನಗರ ಪ್ರದೇಶದಲ್ಲಿರುವ ಶಿಕ್ಷಕರ ವರ್ಗ ಕಡ್ಡಾಯ ವರ್ಗಾವಣೆ ಬೇಡ ಮತ್ತು ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಕಡ್ಡಾಯ ವರ್ಗಾವಣೆ ಬೇಕು ಎನ್ನುವ ಒತ್ತಾಯ ಆರಂಭಿಸಿ, ಶಿಕ್ಷಕರಲ್ಲೇ ಎರಡು ಬಣ ಹುಟ್ಟಿಕೊಂಡಿತು.

ಎರಡು ಬಣದಿಂದಲೂ ಒತ್ತಡ ಹೆಚ್ಚುತ್ತಿದ್ದಂತೆ ವರ್ಗಾವಣೆ ಪ್ರಕ್ರಿಯೆಯನ್ನೇ ತಾತ್ಕಾಲಿಕವಾಗಿ ತಡೆಹಿಡಿದು, ವಿಧೇಯಕ್ಕೆ ತಿದ್ದುಪಡಿ ತರುವುದಾಗಿ ಘೋಷಿಸಿ, ನಿಯಮದಲ್ಲಿ ಕೆಲವೊಂದು ತಿದ್ದುಪಡಿ ತಂದು, ಶಿಕ್ಷಕ
ಸ್ನೇಹಿ ವರ್ಗಾವಣೆ ನೀತಿ ರೂಪಿಸಿದರು. ಇಷ್ಟಾದರೂ ಸಮಸ್ಯೆ ಬಗೆಹರಿಸಿದಿಲ್ಲ.

ಅನೇಕ ಅವೈಜ್ಞಾನಿಕ ಅಂಶಗಳಿದ್ದು, ಅವುಗಳನ್ನು ಕೈಬಿಡಬೇಕು ಎಂದು ಪ್ರಾಥಮಿಕ ಶಾಲಾ
ಶಿಕ್ಷಕರ ಸಂಘದಿಂದಲೇ ಮೂರ್‍ನಾಲ್ಕು ಬಾರಿ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಈ ನಡುವೆ ಸಚಿವರ ಮಾರ್ಗದರ್ಶನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಕ ಸ್ನೇಹಿ ವರ್ಗಾವಣೆ ಕರಡನ್ನು ಪ್ರಕಟಿಸಿತ್ತು.

ಈಗ ರಾಜ್ಯ ಸರ್ಕಾರ ಕರ್ನಾಟಕ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ವಿಧೇಯಕ-2020ನ್ನು  ವಿಧಾನ ಸಭೆಯಲ್ಲಿ ಮಂಡಿಸಿದೆ. ಸಿ-ವಲಯದ ಶಿಕ್ಷಕರ ಕಡ್ಡಾಯ ನೇಮಕಾತಿ, ಶಿಕ್ಷಕರ ಸಮರ್ಪಕ ಮರುಹಂಚಿಕೆ, ವಲಯವಾರು ವರ್ಗಾವಣೆ, ಕೋರಿಕೆ ವರ್ಗಾವಣೆ, ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ, ನಿರ್ದಿಷ್ಟ ಹುದ್ದೆಗಳಿಗೆ ಶಿಕ್ಷಕರ ವರ್ಗಾವಣೆ, ವರ್ಗಾವಣೆ ನಿಯಮದಲ್ಲಿ ಕುಂದುಕೊರತೆ ನಿವಾರಣೆ, ಸೇರಿದಂತೆ ಪ್ರಮುಖ 20 ಅಂಶಗಳನ್ನು ಹೊಸ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.  ಇದರಿಂದಾದರೂ ಶಿಕ್ಷಕರ ವರ್ಗಾವಣೆ ಸಮಸ್ಯೆಗೆ ಮುಕ್ತಿ ಸಿಗಲಿ ಮತ್ತು ಹೊಸ ವಿಧೇಯಕದಿಂದಾದರೂ ಹಲವಾರು ವರ್ಷಗಳಿಂದ ವರ್ಗಾವಣೆಗಾಗಿ ಕಾದು ಕುಳಿತಿರುವ ಅರ್ಹ ಶಿಕ್ಷಕರಿಗೆ ಫ‌ಲ ಸಿಗಲಿ ಎಂಬುದು ಆಶಯ.

ಕಳೆದ ಒಂದು ದಶಕದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ ಹಾಗೂ ಸಲ್ಲಿಸುತ್ತಿರುವ ಸಚಿವರಿಗೆ ಶಿಕ್ಷಕರ ವರ್ಗಾವಣೆ ಸಮಸ್ಯೆ ನಿತ್ಯವೂ ಕಾಡಿತು, ಕಾಡುತ್ತಲೇ ಇದೆ.

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.