ಭಾರತದಲ್ಲಿ ದಾಳಿಗೆ ಐಸಿಸ್‌ ಸಂಚು; ಎಚ್ಚರಿಕೆ ಅಗತ್ಯ


Team Udayavani, Aug 23, 2022, 6:00 AM IST

ಭಾರತದಲ್ಲಿ ದಾಳಿಗೆ ಐಸಿಸ್‌ ಸಂಚು; ಎಚ್ಚರಿಕೆ ಅಗತ್ಯ

ಭಾರತದಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಐಸಿಸ್‌ ಉಗ್ರನೊಬ್ಬನನ್ನು ರಷ್ಯಾದಲ್ಲಿ ಸೆರೆ ಹಿಡಿಯಲಾಗಿದ್ದು, ಈ ಮೂಲಕ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಬಿಜೆಪಿ ನಾಯಕಿಯಾಗಿದ್ದ ನೂಪುರ್‌ ಶರ್ಮ ಅವರ ಪ್ರವಾದಿ ಮಹಮ್ಮದ್‌ ಕುರಿತ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಸೇಡು ತೀರಿಸಿಕೊಳ್ಳುವ ಸಲುವಾಗಿ ಈ ದಾಳಿಗೆ ಸಂಚು ರೂಪಿಸಲಾಗಿತ್ತಂತೆ. ಈ ಬಗ್ಗೆ ರಷ್ಯಾದ ಫೆಡರಲ್‌ ಸೆಕ್ಯೂರಿಟಿ ಸರ್ವೀಸ್‌ (ಎಫ್ಎಸ್‌ಬಿ) ಖಚಿತಪಡಿಸಿದೆ.

ನೂಪುರ್‌ ಶರ್ಮ ಮತ್ತು ನವೀನ್‌ ಕುಮಾರ್‌ ಜಿಂದಾಲ್‌ ಎಂಬ ಇಬ್ಬರು ಬಿಜೆಪಿ ನಾಯಕರು ಪ್ರವಾದಿ ಮೊಹಮ್ಮದ್‌ ಅವರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎಂಬ ವಿಷಯ ಭಾರೀ ವಿವಾದವನ್ನು ಸೃಷ್ಟಿಸಿತ್ತು. ದೇಶದಲ್ಲೂ ಮುಸ್ಲಿಂ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು. ಅಲ್ಲದೆ, ಜಗತ್ತಿನ ಬೇರೆ ಬೇರೆ ಮುಸ್ಲಿಂ ದೇಶಗಳೂ ಈ ಬಗ್ಗೆ ತೀವ್ರ ಪ್ರತಿರೋಧ ತೋರಿದ್ದವು. ಇದಾದ ಮೇಲೆ ನೂಪುರ್‌ ಶರ್ಮರನ್ನು ಬಿಜೆಪಿ ಸಸ್ಪೆಂಡ್‌ ಮಾಡಿತ್ತು. ಅದೇ ರೀತಿ ನವೀನ್‌ಕುಮಾರ್‌ ಜಿಂದಾಲ್‌ರನ್ನು ಪಕ್ಷದಿಂದ ವಜಾ ಮಾಡಲಾಗಿತ್ತು. ಇದಾದ ಮೇಲೆ ಕೆಲವು ದಿನಗಳ ಬಳಿಕ ವಿವಾದ ತಣ್ಣಗಾಗಿತ್ತು.

ಆದರೆ ದೇಶದಲ್ಲಿ ಈ ವಿವಾದ ತಣ್ಣಗಾಗಿದ್ದರೂ ಭಯೋತ್ಪಾದನಾ ಸಂಘಟನೆಗಳು ಮಾತ್ರ ಈ ಬಗ್ಗೆ ಇನ್ನೂ ಆಕ್ರೋಶ ಇರಿಸಿಕೊಂಡಿದ್ದವು. ಈ ಹಿಂದೆಯೇ ಭಾರತ ಉಪಖಂಡದಲ್ಲಿರುವ ಅಲ್‌ಖೈದಾ ಸಂಘಟನೆ, ದಿಲ್ಲಿ, ಮುಂಬಯಿ, ಉತ್ತರ ಪ್ರದೇಶ, ಗುಜರಾತ್‌ನಲ್ಲಿ ಆತ್ಮಹತ್ಯಾ ಬಾಂಬ್‌ ದಾಳಿ ನಡೆಸುವ ಬೆದರಿಕೆ ಹಾಕಿತ್ತು.
ಇದರ ಜತೆಗೆ ಐಸಿಸ್‌ ಉಗ್ರರೂ, ಪ್ರವಾದಿ ಮಹಮ್ಮದ್‌ ಅವರಿಗೆ ಅವಹೇಳನ ಮಾಡಿದ ನಾಯಕರ ವಿರುದ್ಧ ಸೇಡು ತೀರಿಸಿಕೊಳ್ಳಲು ಅಂದಿನಿಂದಲೂ ಹೊಂಚು ಹಾಕುತ್ತಲೇ ಇದ್ದರು ಎಂಬ ಮಾಹಿತಿಯೂ ಗೊತ್ತಾಗಿತ್ತು. ಈ ಹಿಂದಿನ ವಿದೇಶಿ ಗುಪ್ತಚರ ದಳದ ಮಾಹಿತಿ ಪ್ರಕಾರ, ಐಸಿಸ್‌ ಸಂಘಟನೆ ಇಬ್ಬರು ಉಗ್ರರನ್ನು ಭಾರತದಲ್ಲಿ ದಾಳಿ ಮಾಡುವ ಸಲುವಾಗಿ ಸಜ್ಜುಗೊಳಿಸಿತ್ತು. ಅಂದರೆ ಜು.27ರಂದೇ ವಿದೇಶಿ ಗುಪ್ತಚರ ಸಂಸ್ಥೆಯೊಂದು ಈ ಬಗ್ಗೆ ಭಾರತಕ್ಕೆ ಮಾಹಿತಿ ನೀಡಿತ್ತು.

ಈ ಪ್ರಕಾರ, ಉಗ್ರರಲ್ಲಿ ಒಬ್ಬ ಕಿರ್ಗಿಸ್ಥಾನದವನು, ಮತ್ತೊಬ್ಬ ಉಜ್ಬೇಕಿಸ್ಥಾನದವನಾಗಿದ್ದು,ಇವರು ಭಾರತದ ಮೇಲೆ ದಾಳಿಗೆ ಸಂಚು ರೂಪಿಸಿದ್ದರು. ಅಷ್ಟೇ ಅಲ್ಲ ಇವರಲ್ಲಿ ಒಬ್ಬ ಟರ್ಕಿಯಲ್ಲಿದ್ದಾನೆ ಎಂದೂ ಹೇಳಿತ್ತು. ಇದಾದ ಮೇಲೆ ಭಾರತವು ರಷ್ಯಾ ಜತೆಗೆ ಈ ಮಾಹಿತಿ ಹಂಚಿಕೊಂಡು, ತಮ್ಮ ಅಧಿಕಾರಿಗಳಿಗೆ ಮಾಸ್ಕೋಗೆ ಬರಲು ಅವಕಾಶ ಕೊಡಬೇಕು ಮತ್ತು ತನಿಖೆಗೆ ಸಹಕಾರ ನೀಡಬೇಕು ಎಂದು ಕೋರಿತ್ತು. ಇದರಂತೆ ಆಗಸ್ಟ್‌ ನಲ್ಲಿ ಈ ಬಗ್ಗೆ ಕಾರ್ಯಾಚರಣೆ ನಡೆಸಿ ಈಗ ಒಬ್ಬ ಉಗ್ರನನ್ನು ಬಂಧಿಸಲಾಗಿದೆ.

ಉಗ್ರರ ಈ ಎಲ್ಲ ಯೋಜನೆಗಳಿಗೆ ಮೂರನೇ ದೇಶದವರು ಸಾಥ್‌ ನೀಡುತ್ತಿರುವುದರಲ್ಲಿ ಯಾವುದೇ ಅನುಮಾನವಿಲ್ಲ. ಯಾವುದೇಉಗ್ರ ಮತ್ತೂಬ್ಬರ ಸಹಾಯವಿಲ್ಲದೆ ಒಂದು ದೇಶದಿಂದ ಮತ್ತೂಂದು ದೇಶಕ್ಕೆ ಸಲೀಸಾಗಿ ಓಡಾಡಲು ಸಾಧ್ಯವಿಲ್ಲ. ಈ ದೇಶಕ್ಕೂ ಕಟ್ಟುನಿಟ್ಟಿನ ಸಂದೇಶ ಮುಟ್ಟಿಸಬೇಕು. ಈ ಎಲ್ಲ ಸಂಗತಿಗಳನ್ನು ಗಮನಿಸಿದರೆ, ಇರಾಕ್‌ ಮತ್ತು ಸಿರಿಯಾದಲ್ಲಿರುವ ಐಸಿಸ್‌ ಉಗ್ರರು ವ್ಯವಸ್ಥಿತವಾಗಿಯೇ ಭಾರತದಲ್ಲಿ ದಾಳಿ ನಡೆಸಲು ಮುಂದಾಗಿದ್ದರು ಎಂಬುದು ಗೊತ್ತಾಗುತ್ತದೆ. ಅಲ್ಲದೆ, ಇನ್ನೂ ಒಬ್ಬ ಭಯೋತ್ಪಾದಕ ತಪ್ಪಿಸಿಕೊಂಡು ಓಡಾಡುತ್ತಿದ್ದಾನೆ. ಇವನನ್ನೂ ಬಂಧಿಸಬೇಕು. ಅಲ್ಲದೆ, ಉಗ್ರರ ಟಾರ್ಗೆಟ್‌ ಲಿಸ್ಟ್‌ನಲ್ಲಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ನಾಯಕರಿಗೆ ಸೂಕ್ತ ಭದ್ರತೆ ನೀಡುವ ಕೆಲಸವನ್ನೂ ಕೇಂದ್ರ ಸರಕಾರ ಮಾಡಬೇಕಾಗಿದೆ.

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

ಪಿಒಕೆ

Editorial; ಪಿಒಕೆ: ಭುಗಿಲೆದ್ದ ಜನಾಕ್ರೋಶ ಇಕ್ಕಟ್ಟಿಗೆ ಸಿಲುಕಿದ ಪಾಕಿಸ್ಥಾನ

1—–ewqeq

Health; ರೋಗಮುಕ್ತ ಸಮಾಜಕ್ಕಾಗಿ ಆರೋಗ್ಯಯುತ ಆಹಾರ ಕ್ರಮ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.