ದೇಶದ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವುದು ತರವಲ್ಲ


Team Udayavani, Jun 4, 2022, 6:00 AM IST

ದೇಶದ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವುದು ತರವಲ್ಲ

ಭಾರತದಲ್ಲಿ ಅಲ್ಪಸಂಖ್ಯಾಕರಿಗೆ ಕಿರುಕುಳ ನೀಡಲಾಗುತ್ತಿದೆ, ಹತ್ಯೆ ಮಾಡಲಾಗುತ್ತಿದೆ, ಹಲ್ಲೆ ನಡೆಸಲಾಗುತ್ತಿದೆ ಎಂಬ ಅಮೆರಿಕದ ವರದಿ ಖಂಡನಾರ್ಹ. ಅದರಲ್ಲೂ 2021ರ  ವರ್ಷಪೂರ್ತಿ ಇಂಥ ಘಟನೆಗಳು ನಡೆದಿವೆ ಎಂಬುದೂ ತರವಲ್ಲ. ಇಂಥ ವರದಿಗಳು ಭಾರತ ಮತ್ತು ಅಮೆರಿಕ ಇರಿಸಿಕೊಂಡಿರುವ ದ್ವಿಪಕ್ಷೀಯ ಸಂಬಂಧಗಳ ಮೇಲೆ ದೊಡ್ಡ ಪೆಟ್ಟು ನೀಡುತ್ತವೆ ಎಂಬುದನ್ನು ಆ ದೇಶ ಗಮನಿಸಬೇಕು.

ಅಮೆರಿಕದ ವರ್ತನೆ ಇದೇ ಮೊದಲಲ್ಲ. ಹಿಂದಿನಿಂದಲೂ ಅವಕಾಶ ಸಿಕ್ಕಾಗಲೆಲ್ಲ ಇಂಥ ವರದಿಗಳನ್ನು ಹೊರಡಿಸುವ ಮೂಲಕ ಮೂಗು ತೂರಿಸುವ ಕೆಲಸ ಮಾಡಿಕೊಂಡೇ ಬಂದಿದೆ. ಆದರೆ ಈ ಮಾಹಿತಿಗಳನ್ನು ಅಮೆರಿಕ ಹೇಗೆ ಸಂಗ್ರಹಿಸಿಕೊಂಡಿತು? ಆ ದೇಶದ ವರದಿಯ ಮೂಲ ಯಾವುದು ಎಂಬ ಬಗ್ಗೆ ನೋಡಬೇಕಾದುದು ಇಂದಿನ ಸ್ಥಿತಿಯಲ್ಲಿ ಪ್ರಮುಖವಾದದ್ದು.

ಅಮೆರಿಕದ ವರದಿಗೆ ಕೇಂದ್ರ ವಿದೇಶಾಂಗ ಇಲಾಖೆ ಸರಿಯಾಗಿಯೇ ತಿರುಗೇಟು ನೀಡಿದೆ. ಅಂತಾರಾಷ್ಟ್ರೀಯ ಸಂಬಂಧಗಳಲ್ಲಿಯೂ ಓಟ್‌ ಬ್ಯಾಂಕ್‌ ರಾಜಕೀಯವೇಕೆ ಎಂದು ಜರಿದಿದೆ. ಅಲ್ಲದೆ, ದುರುದ್ದೇಶಪೂರ್ವಕ ಮಾಹಿತಿ ಮತ್ತು ಪಕ್ಷಪಾತಿ ವಿವರಗಳನ್ನು ತೆಗೆದುಕೊಂಡು ಈ ವರದಿ ಸಿದ್ಧ ಮಾಡಲಾಗಿದೆ ಎಂದೂ ಹೇಳಿದೆ.

ಅಮೆರಿಕ ವಿದೇಶಾಂಗ ಇಲಾಖೆಯ ವರದಿ ಬಗ್ಗೆ ನಾವು ಗಮನಿಸಿದ್ದೇವೆ, ಅಮೆರಿಕದ ಅಧಿಕಾರಿಗಳು ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಸಂಬಂಧದಲ್ಲೂ ಓಟ್‌ ಬ್ಯಾಂಕ್‌ ರಾಜಕೀಯ ಮಾಡಿಕೊಂಡು ಬರುತ್ತಿರುವುದು ತೀರಾ ದುರದೃಷ್ಟಕರ ನಡೆ. ಇಂಥ ಮಾಹಿತಿಗಳನ್ನು ಸಂಗ್ರಹಿಸುವಾಗ ಪಕ್ಷಪಾತ ರಹಿತ ಮತ್ತು ಸದುದ್ದೇಶಪೂರ್ವಕ ಸಂಗತಿಗಳನ್ನು ಗಮನಿಸಿ ವಿಶ್ಲೇಷಿಸಬೇಕು ಎಂದು ಸರಿಯಾಗಿಯೇ ಟಾಂಗ್‌ ನೀಡಿದೆ.

ಭಾರತದ ವಿದೇಶಾಂಗ ಇಲಾಖೆ ಹೇಳಿರುವುದರಲ್ಲಿ ತಪ್ಪೇನಿಲ್ಲ. ಅಮೆರಿಕದಂಥ ದೇಶದಲ್ಲಿ ಆಗಾಗ್ಗೆ, ವೈಟ್‌ ಸುಪ್ರಿಮಸಿಯ ನೆಪದಲ್ಲಿ ಜನರನ್ನು ಗುಂಡಿಕ್ಕಿ ಕೊಲ್ಲಲಾಗುತ್ತಿದೆ. ಹಲವಾರು ಬಾರಿ, ಅಲ್ಪಸಂಖ್ಯಾಕರು, ಕಪ್ಪುವರ್ಣೀಯರು, ಹೊರದೇಶದವರು ದುಷ್ಕರ್ಮಿಗಳ ಗುಂಡಿಗೆ ಪ್ರಾಣ ಬಿಡುತ್ತಿದ್ದಾರೆ. ಇತ್ತೀಚೆಗಷ್ಟೇ ಕಪ್ಪುವರ್ಣೀಯರೇ ಹೆಚ್ಚಾಗಿದ್ದ ಮಾಲ್‌ವೊಂದನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿ 10ಕ್ಕೂ ಹೆಚ್ಚು ಮಂದಿಯನ್ನು ಕೊಂದಿದ್ದನ್ನು ಅಮೆರಿಕ ಮರೆತಂತೆ ಕಾಣುತ್ತಿದೆ. ತನ್ನೊಡಲಲ್ಲೇ ಇಂಥ ಘಟನೆಗಳನ್ನು ನೋಡುತ್ತಿರುವ ಅಮೆರಿಕ, ಇನ್ನೊಂದು ದೇಶದ ಆಂತರಿಕ ಸಂಗತಿಗಳ ಬಗ್ಗೆ ಮೂಗು ತೂರಿಸುವುದು ಎಷ್ಟರ ಮಟ್ಟಿಗೆ ಸರಿ ಎಂಬುದು ಬಹುತೇಕರ ಪ್ರಶ್ನೆಯಾಗಿದೆ.

ಪ್ರತಿಯೊಂದು ದೇಶದಲ್ಲೂ ತನ್ನ ನಾಗರಿಕರಿಗೆ ಭದ್ರತೆ ನೀಡಬೇಕು ಎಂಬುದು ಆಯಾ ಸರ್ಕಾರಗಳ ಉದ್ದೇಶವಾಗಿದೆ. ಹಾಗೆಯೇ ದೇಶಾದ್ಯಂತ ಗಲಭೆಗಳು ನಡೆಯಲಿ ಎಂದು ಸರಕಾರಗಳು ಬಯಸುವುದೂ ಇಲ್ಲ. ಹೀಗಾಗಿ, ಯಾವುದೇ ಘಟನೆಗಳು ನಡೆದರೂ ಆ ಘಟನೆಯ ಬಗ್ಗೆ ಪೂರ್ಣ ತನಿಖೆಯಾದ ಬಳಿಕ ಅಲ್ಲಿ ಏನಾಗಿದೆ ಎಂಬುದನ್ನು ಅರಿಯಬೇಕು. ಇದನ್ನು ಬಿಟ್ಟು ಯಾವುದೋ ಎನ್‌ಜಿಒಗಳು ನೀಡುವ ವರದಿಗಳನ್ನು ಆಧರಿಸಿ, ಇಡೀ ದೇಶಕ್ಕೆ ಅನ್ವಯವಾಗುವಂತೆ ವರದಿ ತಯಾರಿಸುವುದು ತಪ್ಪು ಎಂಬುದು ವಿದೇಶಾಂಗ ಇಲಾಖೆಯ ಅಭಿಪ್ರಾಯವಾಗಿದೆ. ಹಾಗೆಯೇ ಅಮೆರಿಕದಂಥ ಸರಕಾರ ಇನ್ನೊಂದು ದೇಶದ ಬಗ್ಗೆ ವರದಿ ತಯಾರಿಸುವಾಗ ಎಲ್ಲ ರೀತಿಯಲ್ಲೂ ಪುನರ್‌ವಿಮರ್ಶೆ ಮಾಡಿಕೊಳ್ಳಲಿ. ಆಗಷ್ಟೇ ನೈಜ ವರದಿ ಬರಲು ಸಾಧ್ಯವಾಗುತ್ತದೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.