ಜಮ್ಮು-ಕಾಶ್ಮೀರ ವಿಧಾನಸಭೆ ವಿಸರ್ಜನೆ: ಚುನಾವಣೆ ನಡೆಯಲಿ


Team Udayavani, Nov 24, 2018, 6:00 AM IST

z-11.jpg

ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ಜಮ್ಮು-ಕಾಶ್ಮೀರದ ವಿಧಾನಸಭೆಯನ್ನು ವಿಸರ್ಜನೆಗೊಳಿಸುವುದರೊಂದಿಗೆ ಕಣಿವೆ ರಾಜ್ಯದ ರಾಜಕೀಯ ಇನ್ನೊಂದು ತಿರುವು ಪಡೆದುಕೊಂಡಿದೆ. ಆದರೆ ವಿಧಾನಸಭೆ ವಿಸರ್ಜ ನೆಗೊಳಿಸಲು ರಾಜ್ಯಪಾಲರು ನೀಡಿರುವ ಕಾರಣಗಳು ತೃಪ್ತಿಕರವಾಗಿಲ್ಲ. ಮೆಹಬೂಬ ಮುಫ್ತಿ ನೇತೃತ್ವದ ಪಿಡಿಪಿ, ಉಮರ್‌ ಅಬ್ದುಲ್ಲಾ ನೇತೃತ್ವದ ನ್ಯಾಶನಲ್‌ ಕಾನ್ಫರೆನ್ಸ್‌ ಮತ್ತು ಕಾಂಗ್ರೆಸ್‌ ಸೇರಿ ಸಮ್ಮಿಶ್ರ ಸರಕಾರ ರಚಿಸುವ ಕೋರಿಕೆ ಮಂಡಿಸಿದ ಕೆಲವೇ ತಾಸುಗಳಲ್ಲಿ ರಾಜ್ಯಪಾಲರು ವಿಧಾನಸಭೆ ವಿಸರ್ಜನೆಗೊಳಿಸಿದ್ದು ಹಲವು ಪ್ರಶ್ನೆಗಳನ್ನೆಬ್ಬಿಸಿದೆ. 

ಪರಸ್ಪರ ತದ್ವಿರುದ್ಧ ಸಿದ್ಧಾಂತಗಳನ್ನು ಹೊಂದಿರುವ ಪಕ್ಷಗಳು ಜತೆ ಸೇರಿದರೆ ಸ್ಥಿರ ಸರಕಾರ ರಚನೆ ಅಸಾಧ್ಯ ಎನ್ನುವುದು ನಿಜವೇ ಆಗಿದ್ದರೂ ಪ್ರಜಾತಂತ್ರದಲ್ಲಿ ಸರಕಾರ ರಚನೆಗೆ ಅಗತ್ಯವಾಗಿರುವುದು ಸಂಖ್ಯಾಬಲವೇ ಹೊರತು ಸಿದ್ಧಾಂತವಲ್ಲ. ಸದನದಲ್ಲಿ ಬಹುಮತ ಸಾಬೀತುಪಡಿಸುವ ಪಕ್ಷಕ್ಕೆ ಸರಕಾರ ರಚಿಸುವ ಹಕ್ಕು ಸಿಗುತ್ತದೆ. ಆದರೆ ರಾಜ್ಯಪಾಲರು ಇಲ್ಲಿ ಸರಕಾರ ರಚಿಸಲು ಕೋರಿಕೆ ಮಂಡಿಸಿದವರಿಗೆ ಈ ಅವಕಾಶವನ್ನೇ ನೀಡದೆ ವಿಧಾನಸಭೆಯನ್ನು ವಿಸರ್ಜಿಸಿರುವುದು ಪ್ರಜಾತಂತ್ರಕ್ಕೆ ಪೂರಕವಾದ ನಡೆಯಲ್ಲ. ರಾಜ್ಯಪಾಲರ ಕೆಲಸ ಸಂವಿಧಾನದ ರಕ್ಷಣೆಯೇ ಹೊರತು ಪಕ್ಷಗಳ ಸಿದ್ಧಾಂತಗಳ ರಕ್ಷಣೆಯಲ್ಲ. ಹೀಗಾಗಿ ಮಲಿಕ್‌ ನಡೆ ಪ್ರಜಾತಂತ್ರ ವಿರೋಧಿ ಎನ್ನಬೇಕಾಗುತ್ತದೆ. ಒಂದು ವೇಳೆ ಅವರು ಹೇಳಿದ ವಿರುದ್ಧ ಸಿದ್ಧಾಂತಗಳ ಪಕ್ಷಗಳು ತತ್ವವನ್ನು ಒಪ್ಪಿಕೊಂಡರೆ ಕರ್ನಾಟಕವೂ ಸೇರಿದಂತೆ ಕೆಲವು ರಾಜ್ಯಗಳಲ್ಲಿರುವ ಸಮ್ಮಿಶ್ರ ಸರಕಾರಗಳು ಆಡಳಿತ ನಡೆಸುವ ಅರ್ಹತೆಯನ್ನು ಕಳೆದುಕೊಳ್ಳುತ್ತವೆ. 

ಕರ್ನಾಟಕದಲ್ಲಿ ಚುನಾವಣೆ ಸಂದರ್ಭದಲ್ಲಿ ವಿಪರೀತವಾಗಿ ಕಚ್ಚಾಡಿದ್ದ ಎರಡು ಪಕ್ಷಗಳೇ ಚುನಾವಣೋತ್ತರ ಮೈತ್ರಿ ಮಾಡಿಕೊಂಡಿವೆ. ಇಲ್ಲಿ ಸಂಖ್ಯಾಬಲ ಈ ಪಕ್ಷಗಳ ಕಡೆಗಿದ್ದ ಕಾರಣ ರಾಜ್ಯಪಾಲರು ಸರಕಾರ ರಚನೆಗೆ ಅವಕಾಶ ನೀಡಲೇಬೇಕಾದ ಪರಿಸ್ಥಿತಿ ಸೃಷ್ಟಿಯಾಗಿತ್ತು. ಇಷ್ಟು ಮಾತ್ರವಲ್ಲ ಕಳೆದ ಜೂನ್‌ ತನಕ ಜಮ್ಮು-ಕಾಶ್ಮೀರದಲ್ಲಿ ಅಸ್ತಿತ್ವದಲ್ಲಿದ್ದ ಪಿಡಿಪಿ-ಬಿಜೆಪಿ ಸರಕಾರವೂ ಪರಸ್ಪರ ವಿರುದ್ಧ ಸಿದ್ಧಾಂತಗಳ ಪಕ್ಷಗಳ ಮೈತ್ರಿಕೂಟವಾಗಿತ್ತು ಎನ್ನುವುದನ್ನು ರಾಜ್ಯಪಾಲರು ಅಷ್ಟು ಬೇಗ ಮರೆತದ್ದು ಆಶ್ಚರ್ಯವುಂಟು ಮಾಡುತ್ತದೆ. 

ಜೂನ್‌ನಿಂದೀಚೆಗೆ ಕಣಿವೆ ರಾಜ್ಯ ರಾಜ್ಯಪಾಲರ ಆಳ್ವಿಕೆಯಲ್ಲಿದೆ. ಈ ಸಂದರ್ಭದಲ್ಲಿ ಸ್ಥಳೀಯಾಡಳಿತ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಭದ್ರತಾ ಪಡೆಗಳ ಮೇಲೆ ಕಲ್ಲು ತೂರುವಂಥ ಘಟನೆಗಳು ಗಮನೀಯವಾಗಿ ಕಡಿಮೆಯಾಗಿವೆ. ಅಂತೆಯೇ ಉಗ್ರ ಬೇಟೆಯೂ ಬಿರುಸಿನಿಂದ ನಡೆದಿದೆ. ಒಟ್ಟಾರೆಯಾಗಿ ಹಿಂಸಾಚಾರ ತುಸು ತಹಬಂದಿಗೆ ಬಂದಿರುವಂತೆ ಕಾಣಿಸುತ್ತಿರುವುದು ನಿಜ. ಆದರೆ ರಾಜ್ಯಪಾಲರ ಆಳ್ವಿಕೆ ಮುಂದುವರಿಸಲು ಇದು ಸಮರ್ಥನೆಯಾಗುವುದಿಲ್ಲ. ಸಂವಿಧಾನ ಪ್ರಕಾರ ಅಲ್ಲಿ ಚುನಾಯಿತ ಸರಕಾರ ಬರಲೇಬೇಕು. 

ಸಮ್ಮಿಶ್ರ ಸರಕಾರ ರಚನೆಯಾಗುವ ಸಂದರ್ಭದಲ್ಲಿ ಕುದುರೆ ವ್ಯಾಪಾರ ನಡೆಯುತ್ತದೆ ಎನ್ನುವುದು ನಮ್ಮ ರಾಜಕೀಯ ವ್ಯವಸ್ಥೆಯ ಎಲ್ಲರಿಗೂ ಗೊತ್ತಿರುವ ಗುಟ್ಟು. ಹಾಗೆಂದು ಕುದುರೆ ವ್ಯಾಪಾರವನ್ನು ತಡೆಯಲು ವಿಧಾಸನಸಭೆಯನ್ನು ವಿಸರ್ಜಿಸುವುದು ಸಮಂಜಸ ಕ್ರಮವಲ್ಲ. ಕುದುರೆ ವ್ಯಾಪಾರ ನಡೆಯದಂತೆ ನೋಡಿಕೊಳ್ಳುವುದು ಸಂಬಂಧಪಟ್ಟವರ ಹೊಣೆ. 

ಜೂನ್‌ನಲ್ಲಿ ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ಹಿಂದೆಗೆದುಕೊಂಡ ಬಳಿಕ ಜಮ್ಮು-ಕಾಶ್ಮೀರದ ರಾಜಕೀಯ ಅಸ್ಥಿರಗೊಂಡಿದೆ. ರಾಜೀನಾಮೆ ನೀಡುವ ಸಂದರ್ಭದಲ್ಲೇ ಮೆಹಬೂಬ ಮುಫ್ತಿ ವಿಧಾನಸಭೆಯನ್ನು ವಿಸರ್ಜಿಸಬೇಕೆಂದು ಆಗ್ರಹಿಸಿದ್ದರು. ಆದರೆ ಆಗ ವಿಧಾನಸಭೆಯನ್ನು ಅಮಾನತಿನಲ್ಲಿಟ್ಟು ರಾಜ್ಯಪಾಲರ ಕೈಗೆ ಆಡಳಿತ ಸೂತ್ರವನ್ನು ನೀಡಲಾಯಿತು. ಈ ನಡುವೆ ಪಿಡಿಪಿಯನ್ನು ಒಡೆದು ಸರಕಾರ ರಚಿಸುವ ಪ್ರಯತ್ನವನ್ನೂ ಬಿಜೆಪಿ ಮಾಡಿತು. ಸಜ್ಜನ್‌ ಘನಿ ಲೋನ್‌ ನೇತೃತ್ವದ ಪೀಪಲ್ಸ್‌ ಕಾನ್ಫರೆನ್ಸ್‌ ಎಂಬ ಚಿಕ್ಕ ಪಕ್ಷದ ಬೆಂಬಲ ಪಡೆಯುವ ಪ್ರಯತ್ನವನ್ನೂ ಬಿಜೆಪಿ ಮಾಡಿದೆ. ಆದರೆ ಪಿಡಿಪಿ- ನ್ಯಾಶನಲ್‌ ಕಾನ್ಫರೆನ್ಸ್‌ ಮತ್ತು ಕಾಂಗ್ರೆಸ್‌ ಜತೆಯಾದರೆ ಸಂಖ್ಯಾಬಲ ಸಾಕಾಗುವುದಿಲ್ಲ ಎಂದು ಅರಿವಾಗಿ ಈ ಪ್ರಯತ್ನವನ್ನು ಕೈಬಿಟ್ಟಿದೆ. ಈ ಹಿನ್ನೆಲೆಯಲ್ಲಿ ಮೂರು ಪಕ್ಷಗಳ ಮೈತ್ರಿ ಸರಕಾರ ರಚನೆಯಾಗುವುದನ್ನು ತಡೆಯಲು ಕೇಂದ್ರ ಸರಕಾರ ರಾಜ್ಯಪಾಲರನ್ನು ಬಳಸಿಕೊಂಡಿದೆಯೇ ಎಂಬ ಅನುಮಾನವೂ ಇದೆ. ಈ ಮಧ್ಯೆ ನಡೆದ ಸ್ಥಳೀಯಾಡಳಿತ ಚುನಾವಣೆಯನ್ನು ಪಿಡಿಪಿ ಮತ್ತು ನ್ಯಾಶನಲ್‌ ಕಾನ್ಫರೆನ್ಸ್‌ ಬಹಿಷ್ಕರಿಸಿದ ಕಾರಣ ಬಿಜೆಪಿ ಏಕಪಕ್ಷೀಯವಾಗಿ ಸ್ಪರ್ಧಿಸಿ ಗೆದ್ದುಕೊಂಡಿದೆ. ಹೀಗೆ ಕೆಲವು ತಿಂಗಳಿಂದೀಚೆಗೆ ಕಣಿವೆ ರಾಜ್ಯದ ರಾಜಕೀಯ ಕುತೂಹಲಕಾರಿ ತಿರುವುಗಳನ್ನು ಪಡೆಯುತ್ತಿದ್ದು, ಇದೀಗ ರಾಜ್ಯಪಾಲರು ವಿಧಾನಸಭೆ ವಿಸರ್ಜಿಸುವುದರೊಂದಿಗೆ ಈ ಅನಿಶ್ಚಿತತೆ ಸದ್ಯಕ್ಕೆ ಕೊನೆಗೊಂಡಂತಾಗಿದೆ. ಇದೀಗ ವಿಧಾನಸಭೆ ವಿಸರ್ಜನೆಯಾಗಿರುವುದರಿಂದ ಹೊಸದಾಗಿ ಜನಾದೇಶ ಪಡೆಯುವುದೊಂದೇ ಉಳಿದಿರುವ ಮಾರ್ಗ. ಹೀಗಾಗಿ ಆದಷ್ಟು ಬೇಗ ಚುನಾವಣೆ ನಡೆಯಲಿ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.