ರಾಜ್ಯದಲ್ಲಿ ಜೆಎಂಬಿ ಉಗ್ರರು ನಿರಂತರ ಎಚ್ಚರಿಕೆ ಅಗತ್ಯ


Team Udayavani, Oct 16, 2019, 5:33 AM IST

l-49

ಜಮಾತ್‌ ಉಲ್‌ ಮುಜಾಹಿದ್ದೀನ್‌ ಬಾಂಗ್ಲಾದೇಶ್‌ (ಜೆಎಂಬಿ) ಉಗ್ರ ಸಂಘಟನೆಯ 22 ಅಡಗುತಾಣಗಳು ಬೆಂಗಳೂರು ಹಾಗೂ ಹೊರವಲಯದಲ್ಲಿ ಪತ್ತೆಯಾಗಿವೆ ಎಂಬ ಮಾಹಿತಿ ನಿಜಕ್ಕೂ ರಾಜಧಾನಿ ಬೆಂಗಳೂರಷ್ಟೇ ಅಲ್ಲದೆ ರಾಜ್ಯಾದ್ಯಂತ ಆತಂಕಕ್ಕೆ ಕಾರಣವಾಗಿದೆ.

ಕೇಂದ್ರ ಗುಪ್ತಚರ ದಳ ಸೂಚನೆ ಮೇರೆಗೆ ಗೃಹ ಸಚಿವಾಲಯವು ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲು ಸೂಚನೆ ನೀಡಿದೆ. ಉಗ್ರರ ನುಸುಳುವಿಕೆ ತಡೆಗಟ್ಟುವುದು ಸೇರಿದಂತೆ ಭಯೋತ್ಪಾದಕರಿಗೆ ಕರ್ನಾಟಕ ಆಶ್ರಯ ತಾಣ ಆಗದಂತೆ ನೋಡಿಕೊಳ್ಳುವ ಮಹತ್ತರ ಹೊಣೆಗಾರಿಕೆ ರಾಜ್ಯ ಸರ್ಕಾರದ ಮೇಲೆ ಇದೆ.

ರೊಹಿಂಗ್ಯಾ ಮುಸ್ಲಿಂರ ಶಿಬಿರಗಳು ಹಾಗೂ ಬಾಂಗ್ಲಾ ವಲಸಿಗರ ಮೇಲೆ ಹೆಚ್ಚಿನ ನಿಗಾ ಇಡುವುದು ತೀರಾ ಅವಶ್ಯಕ. ಏಕೆಂದರೆ, ರಾಜ್ಯದಲ್ಲಿ ಜೆಎಂಬಿಯ ಮೂವರು ಉಗ್ರರನ್ನು ಎನ್‌ಐಎ ಬಂಧಿಸಿದೆ. ಈ ಬಗ್ಗೆ ತನಿಖೆಯೂ ನಡೆಯುತ್ತಿದೆ. ರಾಜ್ಯದಲ್ಲಿ ಉಳಿದುಕೊಂಡಿದ್ದ ಅವಧಿಯಲ್ಲಿ ಅವರು ನಡೆಸುತ್ತಿದ್ದ ಚಟುವಟಿಕೆಗಳು ಹಾಗೂ ಅವರು ಹೊಂದಿದ್ದ ಸಂಪರ್ಕಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಕರ್ನಾಟಕಕ್ಕೆ ಉಗ್ರರಿಂದ ಆತಂಕ ಎದುರಾಗದಂತೆ ನೋಡಿಕೊಳ್ಳಬೇಕಾಗಿದೆ. ಈ ವಿಚಾರದಲ್ಲಿ ರಾಜ್ಯ ಪೊಲೀಸರ ಹೊಣೆಗಾರಿಕೆಯೂ ಹೆಚ್ಚಾಗಿದೆ.

ಕೇಂದ್ರ ಗುಪ್ತಚರ ದಳ ಸೂಚನೆ ನೀಡಿದರೆ ಅಥವಾ ದೇಶದ ಇತರೆ ಭಾಗಗಲ್ಲಿ ಉಗ್ರರ ಕೃತ್ಯಗಳು ನಡೆದಾಗ ಅಲರ್ಟ್‌ ಆಗುವುದು ಬೇರೆ. ಉಗ್ರರು ಬೆಂಗಳೂರು ಸೇರಿದಂತೆ ಕರ್ನಾಟಕಕ್ಕೆ ಪ್ರವೇಶ ಮಾಡಿದ ಹಲವಾರು ಘಟನೆಗಳು ಹಿಂದೆ ನಡೆದಿವೆ. ಹೀಗಾಗಿ, ನಿರಂತರವಾಗಿ ಎಚ್ಚರ ವಹಿಸಬೇಕಾಗಿದೆ ಬೆಂಗಳೂರಿನ ಚಿಕ್ಕಬಾಣವಾರದ ಮನೆಯೊಂದರಲ್ಲಿ ಸ್ಫೋಟಕಗಳನ್ನು ತಯಾರಿಕೆಯಲ್ಲಿ ಭಾಗಿಯಾಗಿ ಆಶ್ರಯಪಡೆದುಕೊಂಡಿದ್ದ ಜೆಎಂಬಿ ಪ್ರಮುಖ ಉಗ್ರ ಕೌಸರ್‌ನ ನಾಲ್ವರು ಸಹಚರರ ಸುಳಿವು ರಾಜ್ಯ ಪೊಲೀಸರು ಹಾಗೂ ಎನ್‌ಐಎ ಅಧಿಕಾರಿಗಳಿಗೂ ಇದುವರೆಗೂ ಪತ್ತೆಯಾಗಿಲ್ಲ ಎಂಬ ಮಾಹಿತಿ ಆತಂಕಕಾರಿಯೂ ಹೌದು.

ಈಗಾಗಲೇ ಬಂಧಿಸಿರುವ ಜೆಎಂಬಿ ಉಗ್ರರ ಜತೆಗಿದ್ದ ನಾಲ್ವರು ರಾಜ್ಯದಲ್ಲಿಯೇ ತಲೆಮರೆಸಿಕೊಂಡಿರುವ ಶಂಕೆಯಿದೆ. ನಾಲ್ವರು ಆರೋಪಿಗಳು ಉಗ್ರ ಚಟುವಟಿಕೆಗಳನ್ನು ಸಕ್ರಿಯಗೊಳಿಸುತ್ತಿದ್ದಾರೆ ಎಂಬ ಮಾಹಿತಿಯೂ ಇರುವುದರಿಂದ ರಾಜ್ಯ ಸರ್ಕಾರ ಎಚ್ಚರ ತಪ್ಪುವಂತಿಲ್ಲ.

ಉಗ್ರರ ನೆಟ್‌ವರ್ಕ್‌ ಕರ್ನಾಟಕ ಹಾಗೂ ಸುತ್ತಮುತ್ತಲ ರಾಜ್ಯಗಳಲ್ಲಿ ವ್ಯಾಪಿಸಿದೆ ಎಂಬ ಮಾಹಿತಿ ಇರುವುದರಿಂದ ನೆರೆಯ ಆಂಧ್ರ, ತೆಲಂಗಾಣ, ಕೇರಳ, ತಮಿಳುನಾಡು ಪೊಲೀಸರ ಸಹಕಾರ ಪಡೆದು ಕಾರ್ಯೋನ್ಮುಖ ವಾಗಬೇಕಾಗಿದೆ.

ಉಗ್ರರು ಪ್ರವೇಶಿಸಿದ ನಂತರ ಸ್ಥಳೀಯವಾಗಿ ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡು ಜನರ ನಂಬಿಕೆ ಗಳಿಸಿ ಮನೆ ಬಾಡಿಗೆಗೆ ಪಡೆದು ಯಾರಿಗೂ ಗೊತ್ತಿಲ್ಲದಂತೆ ತಮ್ಮ ಚಟುವಟಿಕೆಗಳನ್ನು ನಡೆಸುವುದರಿಂದ ಪತ್ತೆ ಕಾರ್ಯ ಅಷ್ಟು ಸುಲಭವಲ್ಲ.

ಹಲವು ವರ್ಷಗಳ ಹಿಂದೆ ಬೆಂಗಳೂರನ್ನು ಬೆಚ್ಚಿ ಬೀಳಿಸಿದ್ದ ಎಂಎಸ್‌ಆರ್‌ ನಗರದಲ್ಲಿ ನಡೆದಿದ್ದ ಉಗ್ರರ ಎನ್‌ಕೌಂಟರ್‌ ಪ್ರಕರಣದ ನಂತರ ಮನೆ ಬಾಡಿಗೆಗೆ ಕೊಡುವಾಗ ಮಾಲೀಕರು ಪೂರ್ವಾಪರ ವಿಚಾರಿಸಿ ಗುರುತಿನ ಚೀಟಿ ಪರಿಶೀಲಿಸಿ ಕೊಡಬೇಕು ಎಂದು ನಗರ ಪೊಲೀಸ್‌ ಆಯುಕ್ತರು ಆದೇಶ ಹೊರಡಿಸಿದ್ದರು. ಅದಾದ ನಂತರವೂ ಕೆಲವು ಘಟನೆಗಳ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ನಗರಗಳಲ್ಲಿಯೂ ಇದೇ ರೀತಿಯ ಸೂಚನೆ ನೀಡಲಾಗಿತ್ತು. ಆದರೆ, ಅದು ಸರಿಯಾಗಿ ಪಾಲನೆಯಾಗುತ್ತಿಲ್ಲ. ಹೀಗಾಗಿ, ಉಗ್ರರು ಸೇರಿದಂತೆ ಸಮಾಜಘಾತುಕ ಕೃತ್ಯ ಎಸಗುವವರಿಗೆ ಸುಲಭವಾಗಿ ಬಾಡಿಗೆಗೆ ಮನೆ ಸಿಗುತ್ತಿದೆ. ಈ ಬಗ್ಗೆಯೂ ಪೊಲೀಸ್‌ ಇಲಾಖೆ ಗಮನಹರಿಸಬೇಕಾಗಿದೆ.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mob

OTT; ಅಸಭ್ಯ ಒಟಿಟಿ ನಿಯಂತ್ರಣ: ಶಾಶ್ವತ ಕಡಿವಾಣ ಅಗತ್ಯ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.