ಆರ್ಥಿಕ ಹಿಂಜರಿತದ ಗಾಯಕ್ಕೆ ಉದ್ಯೋಗ ಕಡಿತದ ಬರೆ


Team Udayavani, Jan 23, 2023, 6:35 AM IST

ಆರ್ಥಿಕ ಹಿಂಜರಿತದ ಗಾಯಕ್ಕೆ ಉದ್ಯೋಗ ಕಡಿತದ ಬರೆ

ಸತತ ಎರಡು ವರ್ಷಗಳ ಕಾಲ ಇಡೀ ವಿಶ್ವವನ್ನು ಇನ್ನಿಲ್ಲದಂತೆ ಬಾಧಿಸಿದ ಕೊರೊನಾ ಸಾಂಕ್ರಾಮಿಕ ಜಗತ್ತಿನ ಆರ್ಥಿಕತೆಯ ಮೇಲೆ ಬಲುದೊಡ್ಡ ಬರೆ ಎಳೆದಿದೆ. ಇದರ ನಡುವೆಯೇ ರಷ್ಯಾ-ಉಕ್ರೇನ್‌ ನಡುವಣ ಯುದ್ಧ ಗಾಯದ ಮೇಲೆ ಉಪ್ಪು ಸವರಿದಂತಾಗಿದ್ದು ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ. ಈಗ ಉದ್ಯೋಗ ಕಡಿತವೆಂಬುದು ಪರಿಸ್ಥಿತಿಯನ್ನು ಸಂಪೂರ್ಣ ಹದಗೆಡುವಂತೆ ಮಾಡಿದೆ.

ಪ್ರತಿಯೊಂದೂ ರಾಷ್ಟ್ರಗಳೂ ಈಗ ತೀವ್ರ ತೆರನಾದ ಹಣದುಬ್ಬರ ಎದುರಿಸುತ್ತಿದ್ದು ಜನಸಾಮಾನ್ಯರ ಜೀವನ ತೀರಾ ದುಸ್ತರವೆನಿಸಿದೆ. ಅಮೆರಿಕ, ಬ್ರಿಟನ್‌, ಚೀನ ಆದಿಯಾಗಿ ವಿಶ್ವದ ಬಹುತೇಕ ದೇಶಗಳಲ್ಲಿ ಆರ್ಥಿಕತೆ ಅಲುಗಾಡತೊಡಗಿದ್ದರೆ ಕೆಲವೊಂದು ದೇಶಗಳು ದಿವಾಳಿಯಾಗಿವೆ. ಮತ್ತೂಂದಿಷ್ಟು ದೇಶಗಳು ದಿವಾಳಿಯಂಚಿಗೆ ಬಂದು ನಿಂತಿವೆ. ಈ ಎಲ್ಲ ಆರ್ಥಿಕ ವಿಪ್ಲವಗಳನ್ನು ಗಮನಿಸುತ್ತಲೇ ಬಂದ ಬಲಾಡ್ಯ ರಾಷ್ಟ್ರಗಳು ಹಿನ್ನಡೆಯ ಹಾದಿಯಲ್ಲಿದ್ದ ತಮ್ಮ ಆರ್ಥಿಕತೆಗೆ ಒಂದಿಷ್ಟು ಟಾನಿಕ್‌ ನೀಡಲು ಕೆಲವೊಂದು ನಿಷ್ಠುರ ಕ್ರಮಗಳನ್ನು ಕೈಗೊಳ್ಳಲು ಮುಂದಾದವು. ಅಲ್ಲಿನ ಸೆಂಟ್ರಲ್‌ ಬ್ಯಾಂಕ್‌ಗಳು ಪದೇ ಪದೆ ಬಡ್ಡಿದರವನ್ನು ಹೆಚ್ಚಿಸುವ ಮೂಲಕ ಹಿಂಜರಿತದ ಬಿರುಗಾಳಿಯಿಂದ ಪಾರಾಗುವ ಪ್ರಯತ್ನಗಳನ್ನು ನಡೆಸುತ್ತಲೇ ಬಂದಿವೆಯಾದರೂ ಈವರೆಗೆ ಅಂತಹ ಯಶಸ್ಸೇನೂ ಕಂಡಿಲ್ಲ. ಇನ್ನು ಅಭಿವೃದ್ಧಿಶೀಲ ಮತ್ತು ಹಿಂದುಳಿದ ದೇಶಗಳಲ್ಲಂತೂ ಆರ್ಥಿಕತೆ ಹೊಯ್ದಾಟದ ಸ್ಥಿತಿಯಲ್ಲಿದ್ದು ಅಕ್ಷರಶಃ ಅನಿಶ್ಚತತೆಯಲ್ಲಿದೆ.

ಈ ವರ್ಷದ ಆರಂಭದಿಂದೀಚೆಗೆ ಉದ್ಯೋಗ ಕಡಿತ ಪ್ರಕ್ರಿಯೆ ಬಿರುಸಾಗಿದ್ದು ಬಹುತೇಕ ಟೆಕ್‌ ಕಂಪೆನಿಗಳು ಮತ್ತು ಸಂಸ್ಥೆಗಳು ಆದ್ಯತೆಯ ಮತ್ತು ಅನಿವಾರ್ಯತೆಯ ಹುದ್ದೆಗಳನ್ನು ಹೊರತುಪಡಿಸಿದಂತೆ ಉಳಿದ ಹುದ್ದೆಗಳಲ್ಲಿ ಭಾರೀ ಕಡಿತವನ್ನು ಮಾಡುತ್ತಿವೆ. 2022ರ ಅಂತ್ಯಕ್ಕೆ ಟೆಕ್‌ ದಿಗ್ಗಜ ಕಂಪೆನಿಗಳು 1.5 ಲಕ್ಷಕ್ಕೂ ಅಧಿಕ ಉದ್ಯೋಗಿಗಳನ್ನು ಮನೆಗೆ ಕಳುಹಿಸಿದ್ದರೆ ಕಳೆದ ಮೂರು ವಾರಗಳ ಅವಧಿಯಲ್ಲಿ ಇದು ದುಪ್ಪಟ್ಟಾಗಿದೆ. ಮುಂದಿನ ದಿನಗಳಲ್ಲಿ ತೀವ್ರವಾಗಿ ಕಾಡಬಹುದೆನ್ನಲಾಗಿರುವ ಆರ್ಥಿಕ ಹಿಂಜರಿತದಿಂದ ಪಾರಾಗಲು ಕಂಪೆನಿಗಳು ಈ ಹೆಜ್ಜೆ ಇರಿಸಿವೆಯಾದರೂ ಇದೇ ಪರಿಸ್ಥಿತಿ ಮುಂದುವರಿದದ್ದೇ ಆದಲ್ಲಿ ಜಾಗತಿಕ ಮಟ್ಟದಲ್ಲಿ ಉದ್ಯೋಗ ಕಡಿತ ಬಲುದೊಡ್ಡ ಸಾಂಕ್ರಾಮಿಕವಾಗಿ ಮಾರ್ಪಡುವುದರಲ್ಲಿ ಅಚ್ಚರಿ ಇಲ್ಲ. ಈಗಾಗಲೇ ಕೋಟ್ಯಂತರ ವಿದ್ಯಾವಂತರು ಸೂಕ್ತ ಉದ್ಯೋಗವಿಲ್ಲದೆ ಹೆಣಗಾಟ ನಡೆಸುತ್ತಿರುವಾಗ ಬೃಹತ್‌ ಕಂಪೆನಿಗಳು ಇಷ್ಟೊಂದು ಭಾರೀ ಸಂಖ್ಯೆಯಲ್ಲಿ ಉದ್ಯೋಗ ಕಡಿತ ಮಾಡಿದಲ್ಲಿ ನಿರುದ್ಯೋಗ ಸಮಸ್ಯೆ ಇಡೀ ವಿಶ್ವವನ್ನು ಪೆಡಂಭೂತವಾಗಿ ಕಾಡಲಿದೆ.

ಟೆಕ್‌ ಕಂಪೆನಿಗಳಲ್ಲಿನ ಈ ಉದ್ಯೋಗ ಕಡಿತದ ನೇರ ಪರಿಣಾಮ ಭಾರತದ ಮೇಲೂ ಬೀಳುತ್ತಿದೆ. ಮೇಲ್ನೋಟಕ್ಕೆ ದೇಶದ ಮಟ್ಟಿಗೆ ಇದೊಂದು ಸಣ್ಣ ಬೆಳವಣಿಗೆಯಂತೆ ಕಂಡರೂ ಈ ಕ್ಷೇತ್ರದಲ್ಲಿ ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಇದನ್ನು ನಿರ್ಲಕ್ಷಿಸಲಾಗದು. ಉಳಿದ ಕ್ಷೇತ್ರ ಅಥವಾ ವಲಯಗಳೂ ಇದೇ ತಂತ್ರಗಾರಿಕೆಗೆ ಜೋತುಬಿದ್ದರೆ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಬಿಗಡಾಯಿಸಲಿದೆ. ಜಾಗತಿಕ ಪರಿಸ್ಥಿತಿಯನ್ನು ಅವಲೋಕಿಸಿದಾಗ ಭಾರತ ನಿಶ್ಚಿಂತೆಯಿಂದ ಇರಲು ಸಾಧ್ಯವಿಲ್ಲ. ಸಂಭಾವ್ಯ ಪರಿಸ್ಥಿತಿಯನ್ನು ಎದುರಿಸಲು ದೇಶ ಸನ್ನದ್ಧವಾಗಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಮುನ್ನೆಚ್ಚರಿಕ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.