ಹಾಳೆಯ ಮೇಲಷ್ಟೇ ಸಮ್ಮೇಳನದ ನಿರ್ಣಯಗಳು ಉಳಿಯದಿರಲಿ


Team Udayavani, Jan 9, 2023, 6:00 AM IST

ಹಾಳೆಯ ಮೇಲಷ್ಟೇ ಸಮ್ಮೇಳನದ ನಿರ್ಣಯಗಳು ಉಳಿಯದಿರಲಿ

ಏಲಕ್ಕಿ ನಾಡು ಹಾವೇರಿಯಲ್ಲಿ ಮೂರು ದಿನಗಳ ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನಗೊಂಡಿದೆ. ಯಾವುದೇ ಗೊಂದಲಗಳು ಇಲ್ಲದೆ, ಅವ್ಯವಸ್ಥೆಗೆ ಆಸ್ಪದವಿಲ್ಲದೆ ಸಮ್ಮೇಳನ ನಡೆದಿದ್ದು ಉತ್ತಮ ಬೆಳವಣಿಗೆ. ಕೊರೊನಾದಿಂದಾಗಿ ಎರಡು ವರ್ಷಗಳ ಬಳಿಕ ಸಮ್ಮೇಳನ ನಡೆದಿದ್ದರಿಂದ ಭಾರೀ ಜನಸ್ತೋಮವೇ ಹರಿದು ಬಂದು, ಕನ್ನಡದ ಸಾಹಿತಿಗಳನ್ನು ಕಣ್ತುಂಬಿಕೊಂಡರು.

ಕನ್ನಡ, ಕನ್ನಡಿಗನ ವಿಚಾರದಲ್ಲಿಯೇ ಈ ಮೂರೂ ದಿನಗಳು ಚರ್ಚೆ ನಡೆದಿದ್ದು, ಪ್ರಸ್ತುತದಲ್ಲಿ ಕನ್ನಡ ಭಾಷೆ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಗೋಷ್ಠಿಗಳು ಬೆಳಕು ಚೆಲ್ಲಿವೆ. ಅದರಲ್ಲೂ ಎರಡನೇ ದಿನ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಜತೆಗಿನ ಸಂವಾದದಲ್ಲಿ ಕೆಲವೊಂದು ಉತ್ತಮ ಅನಿಸಿಕೆಗಳೂ ವ್ಯಕ್ತವಾದವು. ಹಾಗೆಯೇ ಸರ್ವಾಧ್ಯಕ್ಷರಾದ ಡಾ| ದೊಡ್ಡರಂಗೇಗೌಡರೇ, ಈಗ ಕನ್ನಡದ ಉಳಿವಿಗೆ ಗೋಕಾಕ್‌ ಚಳವಳಿಗಿಂತಲೂ ಕ್ರಾಂತಿಕಾರಕ ಚಳವಳಿಯ ಅಗತ್ಯವಿದೆ ಎಂದು ಹೇಳಿದ್ದು ತುಸು ಗಂಭೀರವಾದ ವಿಚಾರ. ಈ ಮೂಲಕ ಅವರು, ಕನ್ನಡ ಅಸ್ಮಿತೆಯ ರಕ್ಷಣೆಯ ಕುರಿತಂತೆ ಮನದೊಳಗಿನ ಸಂಕಟ, ತಳಮಳವನ್ನು ಹೊರಹಾಕಿದರು. ಹಾಗೆಯೇ ವ್ಯವಸ್ಥೆಯೊಳಗಿನ ಹುಳುಕನ್ನು ಹೊರಹಾಕಿ, ಶಾಸನಸಭೆಯೊಳಗೆ ಬಳಸುತ್ತಿರುವ ಭಾಷೆಯ ಬಗ್ಗೆಯೂ ಸಿಟ್ಟು ತೋರ್ಪಡಿಸಿದರು. ವ್ಯವಸ್ಥೆಯ ಜತೆ ಹೊಂದಾಣಿಕೆ ಮಾಡಿಕೊಂಡು ಹೋಗುವುದನ್ನು ಅಬುìದ ರೋಗವೆಂದು ಕರೆದ ಅವರು, ಇದರಿಂದ ವ್ಯಕ್ತಿತ್ವದ ವಿಕಸನವೇ ಪತನವಾಗುತ್ತಿದೆ ಎಂಬ ಬೇಸರವನ್ನೂ ತೋರಿದರು.

ಪ್ರತೀ ಬಾರಿಯ ಸಮ್ಮೇಳನದಂತೆ ಈ ಬಾರಿಯೂ ಕಡೆಯ ದಿನ ಆರು ನಿರ್ಣಯಗಳನ್ನು ಅಂಗೀಕರಿಸಲಾಗಿದೆ. ಕನ್ನಡ ಸಮಗ್ರ ಭಾಷಾ ಅಭಿವೃದ್ಧಿ ಮಸೂದೆಯನ್ನು ಈ ಕೂಡಲೇ ಅಧ್ಯಾದೇಶ ಮೂಲಕ ಜಾರಿಗೆ ತಂದು, ಶಿಕ್ಷಣ, ನ್ಯಾಯಾಂಗ, ಆಡಳಿತದಲ್ಲಿ ಕನ್ನಡವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು, ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಸುಪ್ರೀಂ ಕೋರ್ಟ್‌ನ ಅಂತಿಮ ತೀರ್ಪಿನ ಮಾರ್ಗದರ್ಶನದಂತೆ ವಿಳಂಬವಿಲ್ಲದೆ ಕ್ರಮ ತೆಗೆದುಕೊಳ್ಳಬೇಕು, ಕನ್ನಡ ಚಳವಳಿಗಾರರ ಮೇಲಿರುವ ಮೊಕದ್ದಮೆಗಳನ್ನು ವಾಪಸ್‌ ಪಡೆಯುವುದು, ಹಿಂದಿ ಅಥವಾ ಇನ್ನಾವುದೇ ಭಾಷೆಯನ್ನು ಕನ್ನಡದ ಮೇಲೆ ಹೇರಲು ಬಿಡಬಾರದು, ವಿಶ್ವಕನ್ನಡ ಸಮ್ಮೇಳನದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಅನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಹಾಗೂ 86ನೇ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿದ ಸ್ಥಳೀಯ ಪದಾಧಿಕಾರಿಗಳಿಗೆ ಧನ್ಯವಾದಗಳನ್ನು ಅರ್ಪಿಸುವ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಪ್ರತೀ ಬಾರಿಯ ಸಮ್ಮೇಳನದಲ್ಲಿಯೂ ಕನ್ನಡಕ್ಕಾಗಿ ಇಂಥ ನಿರ್ಣಯಗಳನ್ನು ಕೈಗೊಳ್ಳಲಾಗುತ್ತಿದೆ. ಆದರೆ ಜಾರಿಯಾಗುತ್ತಿರುವ ಉದಾಹರಣೆಗಳು ತೀರಾ ಕಡಿಮೆ ಇವೆ. ಹೀಗಾಗಿ ಈ ಬಾರಿಯ ಸಮ್ಮೇಳನದಲ್ಲಿ

ತೆಗೆದುಕೊಂಡಿರುವ ನಿರ್ಣಯಗಳನ್ನು ಜಾರಿ ಮಾಡುವ ಸಲುವಾಗಿ ಕಾಲಮಿತಿ ನಿಗದಿ ಪಡಿಸಬೇಕು ಮತ್ತು ಜಾರಿಗಾಗಿಯೇ ಒಂದು ಸಮಿತಿಯನ್ನು ನೇಮಕ ಮಾಡಿ ಮೇಲುಸ್ತುವಾರಿ ಮಾಡುವ ಜವಾಬ್ದಾರಿ ರಾಜ್ಯ ಸರಕಾರದ ಮೇಲಿದೆ. ಏಕೆಂದರೆ ಕನ್ನಡ ಸಾಹಿತ್ಯ ಸಮ್ಮೇಳನದಂಥ ಬೃಹತ್‌ ಕಾರ್ಯಕ್ರಮಗಳ ನಿರ್ಣಯಗಳು ಜಾರಿಯಾಗಲಿಲ್ಲ ಎಂಬ ಅವಮಾನ ಸರಕಾರಕ್ಕಾಗಲಿ ಅಥವಾ ನಿರ್ಣಯ ತೆಗೆದುಕೊಂಡವರಿಗಾಗಲಿ ಆಗಬಾರದು. ಈ ನಿಟ್ಟಿನಲ್ಲಿ ಸರಕಾರ ಯೋಚಿಸಲಿ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.