ಫ‌ಲಪ್ರದವಾಗಲಿ ವಿಧಾನಮಂಡಲ ಅಧಿವೇಶನ


Team Udayavani, Jan 28, 2021, 7:13 AM IST

ಫ‌ಲಪ್ರದವಾಗಲಿ ವಿಧಾನಮಂಡಲ ಅಧಿವೇಶನ

ಇಂದಿನಿಂದ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಪ್ರಾರಂಭವಾಗಲಿದೆ. ಸಹಜವಾಗಿಯೇ ವಿಧಾನಮಂಡಲ ಅಧಿವೇಶ ನದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಪರಿಹಾರ, ಪ್ರಮುಖ ಕಾನೂನು ರಚನೆ ಸಹಿತ ಪ್ರಮುಖ ವಿಷಯಗಳ ಬಗ್ಗೆ ಫ‌ಲಪ್ರದ ಚರ್ಚೆಗಳು  ನಡೆಯಲಿ ಎಂಬುದು ಜನಸಾಮಾನ್ಯರ ನಿರೀಕ್ಷೆಯಾಗಿದೆ. ಮೊದಲ ದಿನ ರಾಜ್ಯಪಾಲರು ಜಂಟಿ ಸದನ  ಉದ್ದೇಶಿಸಿ ಮಾತನಾಡಿದ ಅನಂತರ ಇತರೆ ಕಾರ್ಯಕಲಾಪಗಳು ಮುಂದುವರಿಯಲಿವೆ.

ಆದರೆ ಇತ್ತೀಚೆಗಿನ ಅಧಿವೇಶನ ಗಮನಿಸಿದರೆ ಗಲಾಟೆ, ಕೋಲಾಹಲ, ಗದ್ದಲದಲ್ಲೇ ಕಲಾಪ ಮುಗಿಯುತ್ತಿದೆ. ಯಾವುದೇ ವಿಷಯ ಅಥವಾ ಯೋಜನೆಗಳ ಕುರಿತು ಸಮಗ್ರ ಚರ್ಚೆ, ಪರ-ವಿರೋಧ ಅಭಿಪ್ರಾಯ ಆಲಿಸುವಿಕೆ, ಮನವರಿಕೆ ಕೆಲಸವೇ ಆಗುತ್ತಿಲ್ಲ.

ಒಂದೆಡೆ ವಿಪಕ್ಷ ವಿರೋಧಿಸಬೇಕೆಂಬ ಕಾರಣಕ್ಕಾಗಿಯೇ ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ಮಾಡಿದರೆ, ಇನ್ನೊಂದೆಡೆ ಬಹುಮತ ಇದೆ ಎನ್ನುವ ಕಾರಣಕ್ಕೆ ಆಡಳಿತ ಪಕ್ಷ ಧ್ವನಿಮತದ ಮೂಲಕ ಅಂಗೀಕಾರ ಮಾಡಿಕೊಂಡು ನಾವು ಮಾಡಿದ್ದೇ ಸರಿ ಎಂಬ ವರ್ತನೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರಿಯಲ್ಲ.  ಮಹತ್ವದ ಮಸೂದೆಗಳ ವಿಚಾರದಲ್ಲೂ ಇದೇ ರೀತಿಯ ತೀರ್ಮಾನ ಆಗುತ್ತಿದೆ. ಜತೆಗೆ ಕೆಲವು ಮಸೂದೆಗಳು ವಿಧಾನಸಭೆಯಲ್ಲಿ ಅಂಗೀಕಾರವಾದರೆ ಪರಿಷತ್‌ನಲ್ಲಿ ಅಂಗೀಕಾರ ವಾಗದೆ ವಾಪಸ್‌ ಕಳುಹಿಸಿದ್ದೂ ಇದೆ.

ಕಲಾಪ ಸಲಹಾ ಸಮಿತಿಯಲ್ಲಿ ಎಲ್ಲ ಪಕ್ಷದ ನಾಯಕರು ಕುಳಿತು ಚರ್ಚಿಸಿದರೂ ಸದನದಲ್ಲಿ ಒಮ್ಮತ ಅಥವಾ ಸಹಮತ ಕಂಡುಬರು ವುದಿಲ್ಲ. ಇದರಿಂದ ಗದ್ದಲ, ಕೋಲಾಹಲವುಂಟಾಗಿ ಸದನ ಮುಂದೂಡಿಕೆಯಾಗುವುದು ಸಾಮಾನ್ಯವಾಗಿದೆ. ಇಡೀ ದಿನದ ಕಲಾಪದಲ್ಲಿ ಒಂದೆರಡು ಗಂಟೆ ಮಾತ್ರ ಚರ್ಚೆ ನಡೆದದ್ದನ್ನೂ ನೋಡಿದ್ದೇವೆ. ಇಷ್ಟಕ್ಕೆ ಅಧಿಕಾರಿಗಳನ್ನು ಗುಡ್ಡೆ ಹಾಕಿಕೊಂಡು ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡಬೇಕಾ ಎನ್ನುವ ಪ್ರಶ್ನೆ ಈ ಕಾರಣಕ್ಕಾಗಿಯೇ ಆಗಾಗ ಎದುರಾಗುತ್ತಿರುವುದು. ಈ ಬಗ್ಗೆ ಆಡಳಿತ ಹಾಗೂ ಪ್ರತಿಪಕ್ಷ ಆತ್ಮಾವಲೋಕನ ಮಾಡಿಕೊಳ್ಳಬೇಕು.

ವರ್ಷಕ್ಕೆ ಕನಿಷ್ಠ 60 ದಿನ ಅಧಿವೇಶನ ನಡೆಸಬೇಕು ಎಂಬ ತೀರ್ಮಾನವಾಗಿದೆ. ಆದರೆ 2002ರಿಂದ ಇದುವರೆಗೂ ಅದು ಪಾಲನೆಯಾಗಿಲ್ಲ. ಈ ವರ್ಷವಾದರೂ 60 ದಿನ ಕಲಾಪ ನಡೆಯುವಂತಾಗಲಿ. ರಾಜ್ಯದ ಆರ್ಥಿಕ ಸ್ಥಿತಿಗೆ ಕೋವಿಡ್‌ ಸಮಯದಲ್ಲಿ ಎದುರಾಗಿರುವ ಸಂಕಷ್ಟ ಅಷ್ಟಿಷ್ಟಲ್ಲ. ಇನ್ನು ಲಾಕ್‌ಡೌನ್‌ ಸಮಯದಲ್ಲಿ, ಅನಂತರದ ನಿರ್ಬಂಧಗಳು ಹಾಗೂ ಆರ್ಥಿಕ ಕೊರತೆಯಿಂದಾಗಿ ಅನೇಕ ಅಭಿವೃದ್ಧಿ ಯೋಜನೆಗಳೂ ಅನಷ್ಠಾನಕ್ಕೆ ಬರದೇ ನಿಂತಿವೆ. ಆಡಳಿತ ಪಕ್ಷ ಹಾಗೂ ವಿಪಕ್ಷಗಳು  ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಕಾನೂನು, ಯೋಜನೆಗಳ ವಿಚಾರದಲ್ಲಿ ಚರ್ಚೆ, ಪರ-ವಿರೋಧ ಅಭಿಪ್ರಾಯ ಎಲ್ಲದಕ್ಕೂ ಅವಕಾಶ ಇರುವಂತೆ ಮಾಡಿ, ಅಂತಿಮವಾಗಿ ಜನಹಿತಕ್ಕಾಗಿ ಸರ್ವಸಮ್ಮತ ನಿರ್ಧಾರ ಕೈಗೊಳ್ಳಬೇಕು. ಅಧಿವೇಶನ ಎನ್ನುವುದು ಬಲಪ್ರದರ್ಶನದ ಅಖಾಡವಾಗದಿರಲಿ. ಇಲ್ಲಿ ಯಾರೂ ಸಹ ಸೋಲು-ಗೆಲುವು ಎಂದು ಭಾವಿಸಬೇಕಿಲ್ಲ. ಜನರ ಸಮಸ್ಯೆಗಳಿಗೆ ಪರಿಹಾರ ಮುಖ್ಯ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.