ಅಧಿವೇಶನದಲ್ಲಿ ಅಭಿವೃದ್ಧಿ, ಜನಹಿತದ ವಿಷಯಗಳೇ ಆದ್ಯತೆಯಾಗಲಿ


Team Udayavani, Sep 12, 2022, 6:00 AM IST

ಅಧಿವೇಶನದಲ್ಲಿ ಅಭಿವೃದ್ಧಿ, ಜನಹಿತದ ವಿಷಯಗಳೇ ಆದ್ಯತೆಯಾಗಲಿ

ರಾಜ್ಯ ವಿಧಾನಮಂಡಲದ ಉಭಯ ಸದನಗಳ ಮಳೆಗಾಲದ ಅಧಿವೇಶನ ಸೋಮವಾರ ಆರಂಭಗೊಳ್ಳಲಿದೆ. ಬಜೆಟ್‌ ಅಧಿವೇಶನದ ನಡೆದು ಸುದೀರ್ಘ‌ ವಿರಾಮದ ಬಳಿಕ ವಿಧಾನಮಂಡಲದ ಅಧಿವೇಶನ ನಡೆಯು­ತ್ತಿದ್ದು ಸಹಜವಾಗಿಯೇ ಈ ಅಧಿವೇಶನದ ಬಗೆಗೆ ರಾಜ್ಯದ ಜನರಲ್ಲಿ ಭಾರೀ ಕುತೂಹಲವಿದೆ. ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಅಧಿಕಾರಿಗಳು ಮತ್ತು ನೌಕರರ ನೇಮಕಾತಿಗಾಗಿನ ಪರೀಕ್ಷೆಗಳಲ್ಲಿ ಭಾರೀ ಅಕ್ರಮಗಳು ನಡೆದು ಅನರ್ಹರು ಮತ್ತು ಪ್ರಭಾವಿಗಳು ಸರಕಾರಿ ಹುದ್ದೆಗೆ ನೇಮಕಗೊಂಡಿರುವ ಸರಣಿ ಪ್ರಕರಣಗಳು ಬಯಲಾಗಿವೆ. ಇದರ ನಡುವೆ ರಾಜಧಾನಿ ಬೆಂಗಳೂರು ಸಹಿತ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನರು ಸಂಕಷ್ಟ ಅನುಭವಿಸುವಂತಾಗಿದೆ.

ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆಗೆ ಭಂಗ, ಬೆಂಗಳೂರು-ಮೈಸೂರು ಹೆದ್ದಾರಿ, ಮಂಗಳೂ­ರಿನಲ್ಲಿ ಕೈಗೆತ್ತಿಕೊಳ್ಳಲಾಗಿರುವ ಸ್ಮಾರ್ಟ್‌ಸಿಟಿ ಯೋಜನೆ ಸೃಷ್ಟಿಸಿರುವ ಅವಾಂತರಗಳು, ವಿವಿಧ ಜಿಲ್ಲೆಗಳಲ್ಲಿ ಪ್ರಗತಿಯಲ್ಲಿರುವ ಹೆದ್ದಾರಿ ಕಾಮಗಾರಿ­ಗಳ ಅವ್ಯವಸ್ಥೆ, ಪ್ರತೀ ಮಳೆಗಾಲದಲ್ಲಿಯೂ ನಗರಗಳಲ್ಲಿ ಕೃತಕ ಪ್ರವಾಹ ಸೃಷ್ಟಿಯಾಗುತ್ತಿರುವುದು ಸಹಿತ ಹತ್ತು ಹಲವು ಸಮಸ್ಯೆಗಳ ಬಗೆಗೆ ವಿಪಕ್ಷಗಳು ಸರಕಾರದ ಗಮನ ಸೆಳೆಯಲು ಸಜ್ಜಾಗಿವೆ. ರಾಜ್ಯ ಸರಕಾರದ ವಿರುದ್ಧ ಈ ಹಿಂದೆ ಕೇಳಿ ಬಂದಿದ್ದ 40 ಪರ್ಸೆಂಟ್‌ ಕಮಿಷನ್‌ ಆರೋಪ ಪದೇ ಪದೆ ಪ್ರತಿಧ್ವನಿ­ಸುತ್ತಿದ್ದು ಈ ಬಗ್ಗೆಯೂ ಸದನಗಳಲ್ಲಿ ವಾಕ್ಸಮರ ನಡೆಯುವ ಎಲ್ಲ ಸಾಧ್ಯತೆ ಇದೆ.

ಅಧಿವೇಶನ ಎಂದ ಬಳಿಕ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ, ಚುಚ್ಚುಮಾತು, ಸಭಾತ್ಯಾಗ, ಧರಣಿ ಇವೆಲ್ಲವೂ ಸಾಮಾನ್ಯ. ಆದರೆ ವರ್ಷಗಳುರುಳಿದಂತೆಯೇ ಇವೆಲ್ಲವೂ ಎಲ್ಲೆ ಮೀರುತ್ತಿದ್ದು ಆಡಳಿತ ಮತ್ತು ವಿಪಕ್ಷಗಳ ನಾಯಕರು ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಸದನದ ನಿರ್ದಿಷ್ಟ ಕಾರ್ಯಕಲಾಪಗಳು ನಡೆಯುವುದರ ಜತೆಯಲ್ಲಿ ಜನರ ಸಮಸ್ಯೆ, ಬೇಡಿಕೆಗಳ ಕುರಿತಂತೆ ಶಾಸಕರು ಸದನದಲ್ಲಿ ಪ್ರಸ್ತಾವಿಸಿ ಅವುಗಳಿಗೆ ಸರಕಾರದಿಂದ ಸ್ಪಷ್ಟ ಉತ್ತರ ಬಯಸುವುದು ಸಹಜ. ಆದರೆ ಇದ್ಯಾವುದಕ್ಕೂ ಅವಕಾಶ ನೀಡದೆ ಯಾವುದಾದರೊಂದು ವಿಷಯವನ್ನು ಮುಂದಿಟ್ಟು ಅದನ್ನು ಸುದೀರ್ಘ‌ ಕಾಲ ಎಳೆದು ಸದನದ ಕಾರ್ಯಕಲಾಪವನ್ನು ಹಾಳುಗೆಡಹುವ ಸಂಪ್ರದಾಯ ಇದೀಗ ಮಾಮೂಲು ಎಂಬಂತಾಗಿದೆ.

ಅಧಿವೇಶನದ ಸಂದರ್ಭದಲ್ಲಿ ತಮಗೆ ಲಭಿಸುವ ವಿವಿಧ ಭತ್ತೆಗಳನ್ನು ಪಡೆದುಕೊಂಡು ಸದನದ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳದೆ ಕೇವಲ ಹರಟೆ, ಗಲಾಟೆ, ಗದ್ದಲ ನಡೆಸುವುದಷ್ಟೇ ನಮ್ಮ ಕರ್ತವ್ಯ ಎಂದು ಶಾಸಕರಾ­ದವರು ಭಾವಿಸುವುದು ಸರಿಯಲ್ಲ. ಒಂದೇ ಮಾತಿನಲ್ಲಿ ಹೇಳುವುದಿದ್ದಲ್ಲಿ ಇದು ತಮ್ಮನ್ನು ಚುನಾಯಿಸಿದ ಜನತೆಗೆ ದ್ರೋಹ ಬಗೆದಂತೆಯೇ.

ವಿಪಕ್ಷ ಶಾಸಕರು ಜನರ ಸಮಸ್ಯೆ, ಬೇಡಿಕೆಗಳನ್ನು ಪ್ರಸ್ತಾವಿಸಿದಾಗ ಮತ್ತು ಸರಕಾರದ ವೈಫ‌ಲ್ಯಗಳ ಬಗೆಗೆ ಬೆಟ್ಟು ಮಾಡಿದಾಗ ಸಮರ್ಪಕ ಉತ್ತರ ಮತ್ತು ಸ್ಪಷ್ಟನೆ ನೀಡುವುದು ಸರಕಾರದ ಕರ್ತವ್ಯ. ಇದನ್ನು ಬಿಟ್ಟು ಕಾಲೆಳೆಯಲೆಂದೇ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳುವುದು, ಸಚಿವರು ನೀಡುವ ಉತ್ತರ­ ಆಲಿಸುವ ಕನಿಷ್ಠ ಸೌಜನ್ಯ ತೋರದಿರು­ವಂತಹ ವಿಪಕ್ಷ ಶಾಸಕರ ಧೋರಣೆ­ಯಾಗಲಿ, ವಿಪಕ್ಷಗಳ ಮೇಲೆ ಮುಗಿಬೀಳು­ವಂತೆ ಆಡಳಿತಾ­ರೂಢ ಪಕ್ಷದ ಶಾಸಕರು ವರ್ತಿಸುವುದಾಗಲಿ ಸದನಗಳ ಘನತೆ, ಗೌರವಗಳಿಗೆ ತಕ್ಕುದಲ್ಲ.

ಈ ಬಾರಿಯ ಅಧಿವೇಶನ 10 ದಿನಗಳಷ್ಟೇ ನಡೆಯಲಿದ್ದು ಈ ಅಲ್ಪ ಅವಧಿ­­ಯಲ್ಲಿ ಉಭಯ ಸದನಗಳಲ್ಲಿ ಮಹತ್ವದ ವಿಷಯಗಳ ಬಗೆಗೆ ಚರ್ಚೆಗಳು ನಡೆಯಬೇಕಿದೆ. ರಾಜ್ಯದ ಅಭಿವೃದ್ಧಿ, ಜನರ ಹಿತದೃಷ್ಟಿಯನ್ನು ಗಮನದಲ್ಲಿರಿಸಿ­ಕೊಂಡು ಈ ಬಾರಿಯಾದರೂ ಅಧಿವೇಶನ ಸುಸೂತ್ರವಾಗಿ ನಡೆಯಲಿ.

ಟಾಪ್ ನ್ಯೂಸ್

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಬದಲಾದ ವಿಭಾಗಕ್ಕೆ ಹೊಂದಾಣಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.