ಅಧಿವೇಶನದಲ್ಲಿ ನಾಡಿನ ಸಮಸ್ಯೆಗಳ ಚರ್ಚೆಯಾಗಲಿ


Team Udayavani, Feb 10, 2023, 6:00 AM IST

ಅಧಿವೇಶನದಲ್ಲಿ ನಾಡಿನ ಸಮಸ್ಯೆಗಳ ಚರ್ಚೆಯಾಗಲಿ

ರಾಜ್ಯದ 15ನೇ ವಿಧಾನಸಭೆಯ ಕೊನೆಯ ಅಧಿವೇಶನ ಶುಕ್ರವಾರ ಆರಂಭಗೊಳ್ಳಲಿದೆ. ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋತ್‌ ಅವರು ವಿಧಾನ ಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡುವ ಮೂಲಕ ಬಜೆಟ್‌ ಅಧಿವೇಶನಕ್ಕೆ ಚಾಲನೆ ನೀಡಲಿದ್ದಾರೆ. ತಮ್ಮ ಭಾಷಣದಲ್ಲಿ ರಾಜ್ಯ ಸರಕಾರದ ಸಾಧನೆಗಳ ಬಗ್ಗೆ ರಾಜ್ಯಪಾಲರು ಪಟ್ಟಿ ಮಾಡಲಿದ್ದಾರೆ. ಹಾಗೆಯೇ ರಾಜ್ಯ ವಿಧಾನಸಭೆ ಚುನಾವಣೆ ಸನಿಹದಲ್ಲಿಯೇ ಇರುವುದರಿಂದ ಈ ಬಾರಿಯ ಅಧಿವೇಶನ ಆಡಳಿತ ಮತ್ತು ವಿಪಕ್ಷಗಳ ಪಾಲಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು ಅಧಿವೇಶನದ ಫ‌ಲಶ್ರುತಿಯ ಬಗೆಗೆ ರಾಜ್ಯದ ಜನತೆ ಹೆಚ್ಚಿನದೇನನ್ನೂ ನಿರೀಕ್ಷಿಸುವುದು ಕಷ್ಟಸಾಧ್ಯ. ಇತ್ತಂಡ ಗಳಿಂದಲೂ ಪರಸ್ಪರ ಆರೋಪ-ಪ್ರತ್ಯಾರೋಪಗಳ ವಿನಿಮಯ, ಆಡಳಿತ ಪಕ್ಷದ ಶಾಸಕರಿಂದ ಸರಕಾರದ ಸಮರ್ಥನೆ, ವಿಪಕ್ಷಗಳಿಂದ ಸರಕಾರದ ವೈಫ‌ಲ್ಯ, ಹಗರಣಗಳ ಬಗೆಗೆ ವಾಗ್ಧಾಳಿಯ ಹೊರತಾಗಿ ಸುಗಮ ಮತ್ತು ಸುಲಲಿತ ಕಲಾಪ ನಡೆದೀತು ಎಂದು ಊಹಿಸುವುದು ಭ್ರಮೆಯಾದೀತು.

ಹಾಲಿ ಸರಕಾರದ ಅವಧಿ ಮೇ ತಿಂಗಳಲ್ಲಿ ಕೊನೆಗೊಳ್ಳುವುದರಿಂದ ಹಾಲಿ ಸರಕಾರ ಮಂಡಿಸುವ ಬಜೆಟ್‌ ಹೆಚ್ಚು ಕಡಿಮೆ ಲೇಖಾನುದಾನದಂತೆ ಇರಲಿದೆ. ಆದರೂ  ಈ ಹಿಂದಿನ ಎಲ್ಲ ಸರಕಾರಗಳಂತೆ ಹಾಲಿ ಬಿಜೆಪಿ ಸರಕಾರವೂ ಪೂರ್ಣ ಪ್ರಮಾಣದ ಬಜೆಟ್‌ನ್ನು ಮಂಡಿಸುವ ಮೂಲಕ ರಾಜ್ಯದ ಜನರನ್ನು ಓಲೈಸುವ ಸಾಧ್ಯತೆ  ನಿಚ್ಚಳವಾಗಿದೆ. ಇದೇ ವೇಳೆ ವಿಪಕ್ಷಗಳು ಸರಕಾರದ ವಿರುದ್ಧ ಮುಗಿ ಬೀಳಲು ಸಜ್ಜಾಗಿದ್ದು ಅಧಿವೇಶನದ ಅವಧಿಯಲ್ಲಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಶತಪ್ರಯತ್ನ ನಡೆಸಲಿರುವುದಂತೂ ಖಚಿತ.

ಫೆ.17ರಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ 2023- 24ನೇ ಸಾಲಿನ ಬಜೆಟ್‌ನ್ನು ಮಂಡಿಸಲಿದ್ದು ಇದಕ್ಕಾಗಿ ಈಗಾಗಲೇ ಸಿದ್ಧತೆಗಳನ್ನು ಮಾಡಿ ಕೊಂಡಿದ್ದಾರೆ. ಚುನಾವಣ ವರ್ಷವಾದ್ದರಿಂದ ಈ ಬಾರಿಯ ಬಜೆಟ್‌ ಹಲವಾರು ಜನಪ್ರಿಯ ಘೋಷಣೆಗಳನ್ನು ಹೊಂದಿರುವ ಜತೆಯಲ್ಲಿ ಜನಕಲ್ಯಾಣ ಮತ್ತು ರಾಜ್ಯದ ಅಭಿವೃದ್ಧಿಯ ಬಗೆಗಿನ ತನ್ನ ದೃಷ್ಟಿಕೋನ ಮತ್ತು ನಿಲುವನ್ನು ಈ ಬಜೆಟ್‌ ಮೂಲಕ ರಾಜ್ಯದ ಜನರ ಮುಂದೆ ತೆರೆದಿಡುವ ಎಲ್ಲ ಸಾಧ್ಯತೆಗಳಿವೆ. ಹಾಲಿ ಸರಕಾರ ಮಂಡಿಸಲಿರುವ ಬಜೆಟ್‌ ಸರಕಾರದ ಎನ್ನುವುದಕ್ಕಿಂತಲೂ ಮುಖ್ಯವಾಗಿ ಬಿಜೆಪಿಯ ಮುನ್ನೋಟವಾಗಿರಲಿದೆ. ಏಕೆಂದರೆ ಚುನಾವಣೆ ನಡೆದು ಹೊಸ ಸರಕಾರ ರಚನೆಯಾದ ಬಳಿಕ ಮತ್ತೆ ಪೂರ್ಣ ಪ್ರಮಾಣದ ಬಜೆಟ್‌ ಮಂಡನೆ ಯಾಗಲಿದ್ದು ಅದುವೇ ಅಧಿಕೃತ ಬಜೆಟ್‌ ಆಗಿರಲಿದೆ. ಒಂದು ವೇಳೆ ಬಿಜೆಪಿಯೇ ಮರಳಿ ಅಧಿಕಾರಕ್ಕೆ ಬಂದರೂ ನೂತನ ಸರಕಾರ ಹೊಸದಾಗಿ ಬಜೆಟ್‌ ಮಂಡಿಸ ಲಿರುವುದರಿಂದ ಈ ಬಜೆಟ್‌ಗೆ ಅಷ್ಟೇನೂ ಮಹತ್ವವಿಲ್ಲ. ಆದರೆ ಚುನಾವಣ ಪೂರ್ವದಲ್ಲಿ ಹಾಲಿ ಸರಕಾರ ಮಂಡಿಸುವ ಬಜೆಟ್‌ ಬಗೆಗೆ ಸಹಜವಾಗಿಯೇ ಜನರಲ್ಲಿ ಒಂದಿಷ್ಟು ಕುತೂಹಲ ಮತ್ತು ನಿರೀಕ್ಷೆಗಳಿದ್ದೇ ಇರುತ್ತವೆ.

ಇತ್ತ ವಿಪಕ್ಷಗಳು ಬಿಜೆಪಿ ಸರಕಾರವನ್ನು ಹಣಿಯಲು ಈ ಅಧಿವೇಶನವನ್ನು ಬಳಸಿಕೊಳ್ಳಲು ಆತುರದಿಂದ ಕಾಯುತ್ತಿವೆ. ಚಳಿಗಾಲದ ಅಧಿವೇಶನದ ಬಳಿಕ ಹೊರಬಿದ್ದ ಸ್ಯಾಂಟ್ರೋ ರವಿ ಪ್ರಕರಣ ಸಹಿತ ರಾಜ್ಯ ಸರಕಾರದ ವಿರುದ್ಧದ ಹಲ ವಾರು ಭ್ರಷ್ಟಾಚಾರ ಆರೋಪಗಳು, ನೀರಾವರಿ ಯೋಜನೆಗಳ ಅನುಷ್ಠಾನ ಕುರಿತಂತೆ ಸರಕಾರ ನೀಡುತ್ತಿರುವ ವಿರೋಧಾಭಾಸದ ಹೇಳಿಕೆಗಳು, ಕಾನೂನು ಸುವ್ಯವಸ್ಥೆ, ಕೇಂದ್ರ ಬಜೆಟ್‌ನಲ್ಲಿ ರಾಜ್ಯದ ನಿರ್ಲಕ್ಷ್ಯ ಮತ್ತಿತರ ವಿಚಾರಗಳನ್ನು ಸದನ ದಲ್ಲಿ ಪ್ರಸ್ತಾವಿಸುವ ಮೂಲಕ ಸರಕಾರದ ವಿರುದ್ಧ ಮುಗಿಬೀಳಲು ಸಜ್ಜಾಗಿವೆ.   ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವುದರಿಂದ ಈ ಬಾರಿಯ ಅಧಿವೇಶನದಲ್ಲಿ ಪೂರ್ಣಪ್ರಮಾಣದಲ್ಲಿ ಪಾಲ್ಗೊಳ್ಳುವ ಬಗೆಗೆ ಅನುಮಾನವಂತೂ ಇದ್ದೇ ಇದೆ.

ಇದು ವಿಧಾನಸಭೆಯ ಕೊನೆಯ ಅಧಿವೇಶನ ಆಗಿರುವುದರಿಂದ ಉಭಯ ಸದನಗಳಲ್ಲಿ ಜನರ ಸಮಸ್ಯೆ, ಬೇಡಿಕೆಗಳ ಬಗೆಗೆ ಹೆಚ್ಚಿನ ಚರ್ಚೆ ನಡೆಯಲಿ. ಹಾಗೆಯೇ, ಈ ಅಧಿವೇಶನ, ಆಡಳಿತ ಮತ್ತು ವಿಪಕ್ಷಗಳ ಮೇಲಾಟಕ್ಕೆ ವೇದಿಕೆಯಾಗದೇ ಜನಪರ ಚರ್ಚೆ ನಡೆಯಲಿ.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.