ಗ್ರಾಮಗಳು ಕೈಬಿಟ್ಟು ಹೋಗುವ ಮುನ್ನ ಕಣ್ತೆರೆಯಿರಿ


Team Udayavani, Nov 22, 2022, 6:00 AM IST

tdy-33

ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ ಎಂದು ಮಹಾರಾಷ್ಟ್ರ ಇನ್ನೂ ಭಾವಿಸಿದಂತಿಲ್ಲ.  ಗಡಿ ವಿವಾದದ ಮೂಲಕವೇ ಅಲ್ಲಿ ಜನಪ್ರಿಯಗೊಂಡ ಏಕನಾಥ್‌ ಶಿಂಧೆ ಮುಖ್ಯಮಂತ್ರಿಯಾದ ಮೇಲೆ ಈ ವಿಚಾರವನ್ನು ಮತ್ತಷ್ಟು ಹಸುರಾಗಿರುವಂತೆ ನೋಡಿಕೊಳ್ಳುತ್ತಿರುವುದು ಸ್ಫುಟ. ಈ ಸಂಬಂಧ ಮುಖ್ಯಮಂತ್ರಿ ನೇತೃತ್ವದಲ್ಲಿ ರಚನೆಯಾದ ಸಮಿತಿ ಸೋಮವಾರ ಸಭೆ ನಡೆಸಿದೆ.  ಬೆಳಗಾವಿ ಜಿಲ್ಲೆಯಲ್ಲಿರುವ ಮರಾಠಿ ಭಾಷಿಕರೇ ಹೆಚ್ಚಾಗಿರುವ 865 ಹಳ್ಳಿಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡುವ ಸಂಬಂಧ ಸದ್ಯದಲ್ಲೇ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಈ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಮುಖ್ಯಮಂತ್ರಿ ಏಕ್‌ನಾಥ್‌ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌, ವಿಪಕ್ಷದ ನಾಯಕರು ಈ ಸಭೆಯಲ್ಲಿ ಭಾಗಿಯಾಗಿದ್ದರು.

ಸುಪ್ರೀಂ ಕೋರ್ಟ್‌ನಲ್ಲಿ ಒಂದು ಪ್ರಕರಣ ನಡೆಯುತ್ತಿರುವಾಗಲೇ ಪ್ರಧಾನಿಗಳ ಮಧ್ಯಸ್ಥಿಕೆಗೆ ಮಹಾರಾಷ್ಟ್ರ ಹೊರಟಿರುವುದು ಆತಂಕದ ಬೆಳವಣಿಗೆಯೇ. ಈ ನಡುವೆ ಬೆಳಗಾವಿಯ ಮರಾಠಿ ಭಾಷಿಕರು ಹೆಚ್ಚಿರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಮಹಾರಾಷ್ಟ್ರ ಸರಕಾರ ಸಲ್ಲಿಕೆ ಮಾಡಿರುವ ಅರ್ಜಿಯ ವಿಚಾರಣೆ ಬುಧವಾರ ನಡೆಯಲಿದೆ. ಇದಕ್ಕೆ ಮುನ್ನವೇ ಈ ಬೆಳವಣಿಗೆಗಳು ನಡೆದಿರುವುದು ಆತಂಕವನ್ನು ಹೆಚ್ಚಿಸಿದೆ.

ವಿಚಿತ್ರವೆಂದರೆ ಇಷ್ಟೆಲ್ಲ ಘಟನೆಗಳು ಆಗುತ್ತಿದ್ದರೂ ಕರ್ನಾಟಕದಲ್ಲಿ ಮಾತ್ರ ಏನೂ ಆಗಿಯೇ ಇಲ್ಲ ಎನ್ನುವ ರೀತಿಯಲ್ಲಿ ವಾತಾವರಣ ಗೋಚರಿಸುತ್ತಿದೆ. ಮಹಾರಾಷ್ಟ್ರದ ಸುದ್ದಿ ಹೊರಬಿದ್ದ ಬಳಿಕ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್‌ ಮಾಡಿ, ರಾಜ್ಯ ಸರಕಾರಕ್ಕೆ ಎಚ್ಚೆತ್ತುಕೊಳ್ಳುವಂತೆ ಆಗ್ರಹಿಸಿದ್ದಾರೆ. ನೆಲಜಲ ವಿಚಾರದಲ್ಲಿ ಈ ಹಿಂದೆ ಎಲ್ಲ ರಾಜಕೀಯ ಪಕ್ಷಗಳು ಒಗ್ಗಟ್ಟನ್ನು ಪ್ರದರ್ಶಿಸಿರುವುದು ಸಹಜವಾದರೂ ಆಡಳಿತ ಪಕ್ಷ ಬಿಜೆಪಿ ತನ್ನ ಸ್ಪಷ್ಟ ನಿಲುವನ್ನು ಹೇಳಲೇ ಬೇಕು.  ಈಗ ಮಹಾರಾಷ್ಟ್ರದಲ್ಲೂ ಬಿಜೆಪಿಯೇ ಆಡಳಿತದಲ್ಲಿದೆ. ಹೀಗಿ ರುವುದರಿಂದ ಎರಡು ರಾಜ್ಯಗಳ ಪ್ರಮುಖರು ಕುಳಿತು ಈ ವಿವಾ ದವನ್ನು ಬಗೆಹರಿಸುವ ಬದಲು ಪ್ರಧಾನಿ ಮಧ್ಯಸ್ಥಿಕೆಗೆ ಮುಂದಾ ಗಿರುವುದು ಮಹಾರಾಷ್ಟ್ರದ ಅತಿರೇಕದ ವರ್ತನೆ ಎಂದರೂ ತಪ್ಪಲ್ಲ.

ಇದರ ನಡುವೆಯೇ ರಾಜ್ಯ ಸರಕಾರದ ಕಡೆಯಿಂದ ಆಗಬೇಕಾಗಿರುವ ಕೆಲಸಗಳು ಸಾಕಷ್ಟಿವೆ. ಇತ್ತೀಚಿನ ದಿನಗಳಲ್ಲಿ ಬೆಳಗಾವಿ ಗಡಿ ವಿವಾದ ಸಂಬಂಧ ಕರ್ನಾಟಕದಲ್ಲಿ ಯಾವುದೇ ಸಭೆಗಳೇ ನಡೆದಿಲ್ಲ. ಕರ್ನಾಟಕ ಗಡಿ ರಕ್ಷಣ ಆಯೋಗದ ಅಧ್ಯಕ್ಷರಾಗಿದ್ದ ನ್ಯಾ| ಕೆ.ಎಲ್‌.ಮಂಜುನಾಥ್‌ ಅವರು ಆರು ತಿಂಗಳುಗಳ ಹಿಂದೆಯೇ ನಿಧನ ಹೊಂದಿದ್ದು, ಇವರ ಜಾಗಕ್ಕೆ ಬೇರೊಬ್ಬರನ್ನು ನೇಮಕ ಮಾಡಿಯೂ ಇಲ್ಲ. ಅಲ್ಲದೆ ಯಾವೊಬ್ಬ ಸಚಿವರಾಗಲಿ ಅಥವಾ ಉನ್ನತಾಧಿಕಾರದ ಸಮಿತಿಯಾಗಲಿ ಈ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡೂ ಇಲ್ಲ. ಹೀಗಾಗಿ ಗಡಿ ಹೋರಾಟದ ವಿಚಾರದಲ್ಲಿ ಕರ್ನಾಟಕ ಹಿಂದೆ ಬಿದ್ದಿದೆ ಎಂದು ತಜ್ಞರು ಹೇಳುತ್ತಿದ್ದಾರೆ.

ಹಾಗೆಯೇ ಗಡಿ ವಿವಾದದ ಮಹಾರಾಷ್ಟ್ರದ ಅರ್ಜಿ ಸ್ವೀಕಾರ ವಾಗುವುದಿಲ್ಲ ಎಂಬುದು ಕರ್ನಾಟಕದ ವಿಶ್ವಾಸ. ಆದರೂ ಸುಪ್ರೀಂ ಮನಸ್ಸು ಮಾಡಿದರೆ ಅರ್ಜಿ ಸ್ವೀಕಾರ ಮಾಡಬಹುದು. ನಮ್ಮ ಪ್ರದೇಶಗಳು ನಮ್ಮಿಂದ ಕೈತಪ್ಪಿ ಹೋಗುವ ಮುನ್ನ ರಾಜ್ಯ ಸರಕಾರ ಎಚ್ಚೆತ್ತುಕೊಳ್ಳಬೇಕು. ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.