ಮತದಾನ ಪ್ರಮಾಣ ಹೆಚ್ಚಳ  ನಗರದಲ್ಲಿ ಮತ್ತೆ ನಿರಾಸಕ್ತಿ


Team Udayavani, May 11, 2023, 6:00 AM IST

ಮತದಾನ ಪ್ರಮಾಣ ಹೆಚ್ಚಳ  ನಗರದಲ್ಲಿ ಮತ್ತೆ ನಿರಾಸಕ್ತಿ

ಕೆಲವೊಂದು ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ, ರಾಜ್ಯ ವಿಧಾನಸಭೆ ಯ ಎಲ್ಲ 224 ಸ್ಥಾನಗಳಿಗೆ ಬಹುತೇಕ ಶಾಂತಿಯುತವಾಗಿ ಮತದಾನ ನಡೆದಿದ್ದು ಒಟ್ಟು 2,615 ಅಭ್ಯರ್ಥಿಗಳ ಭವಿಷ್ಯ ಮತಯಂತ್ರದೊಳಗೆ ಭದ್ರವಾಗಿದ್ದು ಮೇ 13ರಂದು ನಡೆಯಲಿರುವ ಮತಎಣಿಕೆಯ ಬಳಿಕ ಬಹಿರಂಗಗೊಳ್ಳಲಿದೆ.

ಬುಧವಾರ ನಡೆದ ಚುನಾವಣೆಯಲ್ಲಿ ಸುಮಾರು ಶೇ. 72.67ರಷ್ಟು ಮತ ದಾನವಾಗಿದೆ. ಕಳೆದ ಬಾರಿ ಅಂದರೆ 2018ರ ಚುನಾವಣೆಯಲ್ಲಿ ಅದುವರೆಗಿನ ಗರಿಷ್ಠ ಶೇ.72.13 ಮತದಾನವಾಗಿತ್ತು. ಈ ಬಾರಿ ಮತದಾನ ಪ್ರಮಾಣದಲ್ಲಿ ಒಂದಷ್ಟು ಏರಿಕೆಯಾಗಿದೆ. ಅಲ್ಲದೆ ಮತದಾನ ಪ್ರಮಾಣವನ್ನು ಹೆಚ್ಚಿಸುವ ಪಣ ತೊಟ್ಟಿದ್ದ ಚುನಾವಣ ಆಯೋಗ ಸಾಕಷ್ಟು ಮುಂಚಿತವಾಗಿಯೇ ಜನರಲ್ಲಿ ಮತ ಜಾಗೃತಿ ಮೂಡಿಸಲು ವಿಶೇಷ ಕಾರ್ಯಕ್ರಮ ಮತ್ತು ಅಭಿಯಾನಗಳನ್ನು ಹಮ್ಮಿ ಕೊಂಡಿತ್ತು. ಅಷ್ಟು ಮಾತ್ರವಲ್ಲದೆ ಅಂಗವಿಕಲರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ಕಲ್ಪಿಸಿಕೊಟ್ಟಿತ್ತು. ಇದು ಒಂದಷ್ಟು ಕೆಲಸ ಮಾಡಿರುವುದು ಕಾಣಿಸುತ್ತಿದೆ. ಆದರೆ ಬೆಂಗಳೂರಿನ ಮಂದಿ ಮತದಾನಕ್ಕಾಗಿ ಬರದೇ ಇರುವುದು ಅವರ ನಿರಾಸಕ್ತಿ ತೋರಿಸುತ್ತಿದೆ.  ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳ ಹಲವೆಡೆ ಸಂಜೆಯ ವೇಳೆ ಭಾರೀ ಮಳೆ ಸುರಿದದ್ದರಿಂದ ಸಂಜೆ ಮತ ಚಲಾಯಿಸುವ ಇರಾದೆಯಲ್ಲಿದ್ದವರಿಗೆ ತಮ್ಮ ಹಕ್ಕು ಚಲಾಯಿಸಲು ತೊಡಕುಂಟಾಯಿತು.

ಇದೇ ವೇಳೆ ರಾಜ್ಯದ ಅಲ್ಲಲ್ಲಿ ವಿದ್ಯುನ್ಮಾನ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಂಡುಬಂದಿತಾದರೂ ಮತಗಟ್ಟೆ ಅಧಿಕಾರಿಗಳು ಕ್ಷಿಪ್ರ ಕ್ರಮ ಕೈಗೊಂಡು ಬದಲಿ ಯಂತ್ರಗಳನ್ನು ಅಳವಡಿಸುವ ಮೂಲಕ ಮತದಾನ ಸುಸೂತ್ರವಾಗಿ ನಡೆಯು ವಂತೆ ನೋಡಿಕೊಂಡರು. ಇನ್ನು ಕೆಲವೆಡೆ ರಾಜಕೀಯ ಪಕ್ಷಗಳ ಕಾರ್ಯಕರ್ತರು ಮತಗಟ್ಟೆಯ ಹೊರಗಡೆ ಪರಸ್ಪರ ಘರ್ಷಣೆಯಲ್ಲಿ ತೊಡಗಿದ್ದರಿಂದಾಗಿ ಪೊಲೀ ಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರೆ ಒಂದೆರಡು ಕಡೆ ಅನಿ ವಾರ್ಯವಾಗಿ ಬಲಪ್ರಯೋಗ ನಡೆಸಿ ಘರ್ಷಣೆ ನಿರತರನ್ನು ಸ್ಥಳದಿಂದ ಚದು ರಿಸಿದರು. ಇದೇ ವೇಳೆ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿರುವುದು, ಯಾರದೋ ಹೆಸರಿನಲ್ಲಿ ಇನ್ಯಾರೋ ಮತ ಚಲಾಯಿಸಿದ ಕೆಲವೊಂದು ಪ್ರಕರಣಗಳು ಕೂಡ ವರದಿಯಾಗಿವೆ. ಈ ಘಟನೆಗಳನ್ನು ಹೊರತುಪಡಿಸಿದಂತೆ ರಾಜ್ಯದಲ್ಲಿ ಬಹುತೇಕ ಮತದಾನ ಪ್ರಕ್ರಿಯೆ ಸಾಂಗವಾಗಿ ನೆರವೇರಿರುವುದು ಚುನಾವಣ ಕರ್ತವ್ಯ ನಿರತ ಅಧಿಕಾರಿಗಳು, ಸಿಬಂದಿ, ಚುನಾವಣ ಆಯೋಗ ಮತ್ತು ರಾಜ್ಯದ ಪಾಲಿಗೆ ಸಂತಸದ ವಿಚಾರವೇ.

ಪ್ರಸಕ್ತ ವಿಧಾನಸಭೆ ಚುನಾವಣೆ ಅಕ್ರಮದಲ್ಲಿ ದಾಖಲೆ ನಿರ್ಮಿಸಿರುವುದು ಬಲುದೊಡ್ಡ ಕಪ್ಪುಚುಕ್ಕೆಯಾಗಿದೆ. ಈ ಬಾರಿ ಚುನಾವಣ ಅಕ್ರಮಗಳಿಗೆ ಸಂಬಂಧಿ ಸಿದಂತೆ ಜಪ್ತಿ ಮಾಡಲಾದ ನಗದು ಮತ್ತು ಇತರ ವಸ್ತುಗಳ ಮೌಲ್ಯ ಬರೋಬ್ಬರಿ 379 ಕೋ. ರೂ. ಗಳಾಗಿದೆ. ಚುನಾವಣ ಆಯೋಗ ಮತ್ತು ಸಂಬಂಧಿತ ಇಲಾಖೆ ಗಳು ಈ ಬಾರಿ ಅಕ್ರಮಗಳಿಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ನಿಗಾ ಇರಿಸಿದ್ದೇ ಅಲ್ಲದೆ ಇದಕ್ಕಾಗಿ ವಿಶೇಷ ದಳಗಳನ್ನು ನಿಯೋಜಿಸಿದ್ದರಿಂದಾಗಿ ಬಲುದೊಡ್ಡ ಪ್ರಮಾಣದ ಜಪ್ತಿ ನಡೆದಿದೆ.  ಸುಶಿಕ್ಷಿತ ಮತದಾರರನ್ನು ಒಳಗೊಂಡ ರಾಜ್ಯದಲ್ಲಿ ಪಕ್ಷಗಳು ಮತ್ತು ಇತರ ಅಭ್ಯರ್ಥಿಗಳು ಮತದಾರರಿಗೆ ಆಮಿಷ ವೊಡ್ಡಲು ಭಾರೀ ಪ್ರಮಾಣದ ಹಣವನ್ನು ವ್ಯಯಿಸಲು ಯತ್ನ ನಡೆಸಿರುವುದು ಕಳವಳಕಾರಿ ಬೆಳವಣಿಗೆ. ಈ ಹಿಂದೆ ಚುನಾವಣ ಅಕ್ರಮಗಳಲ್ಲಿ ಉತ್ತರ ಭಾರತದ ರಾಜ್ಯಗಳು ಮುಂಚೂಣಿಯಲ್ಲಿದ್ದರೆ ಇದೀಗ ಇದರ ಕರಿನೆರಳು ದೇಶದ ಇತರ ರಾಜ್ಯಗಳ ಮೇಲೆ ಬೀಳುತ್ತಿರುವುದರ ಬಗೆಗೆ ಕೇವಲ ಚುನಾವಣ ಆಯೋಗ ಮಾತ್ರವಲ್ಲದೆ ರಾಜಕೀಯ ಪಕ್ಷಗಳೂ ಗಂಭೀರವಾಗಿ ಚಿಂತನೆ ನಡೆಸುವುದು ಅತ್ಯವಶ್ಯ. ಚುನಾವಣೆಗಳಲ್ಲಿ ಕಾಂಚಾಣದ ರೌದ್ರ ನರ್ತನಕ್ಕೆ ಕಡಿವಾಣ ಹಾಕಬೇಕಿದೆ.

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.