ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ: ಅರ್ಹರಿಗೆ ಸಿಕ್ಕ ಗೌರವ


Team Udayavani, Nov 1, 2021, 6:10 AM IST

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ: ಅರ್ಹರಿಗೆ ಸಿಕ್ಕ ಗೌರವ

ನಾವೀಗ  ಕರ್ನಾಟಕ ರಾಜ್ಯೋತ್ಸವದ ಸಂಭ್ರಮದಲ್ಲಿದ್ದೇವೆ. ಈ ಬಾರಿ 66ನೇ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ರವಿವಾರ ರಾಜ್ಯ ಸರಕಾರ  ರಾಜ್ಯೋತ್ಸವ ಪುರಸ್ಕೃತರ ಹೆಸರುಗಳನ್ನೂ ಪ್ರಕಟಿಸಲಾಗಿದೆ. ಇವರಿಗೆಲ್ಲ ಸೋಮವಾರ ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕೇಂದ್ರ ಸರಕಾರ ನೀಡುವ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಯಂತೆ ಈ ಬಾರಿಯೂ ಕರ್ನಾಟಕ ಸರಕಾರ, ಎಲೆಮರೆಯ ಕಾಯಿಗಳನ್ನು ಗುರುತಿಸಿ ಪ್ರಶಸ್ತಿ ನೀಡಿರುವುದು ಪ್ರಶಂಸನೀಯವೇ ಸರಿ. ವಿಶೇಷವೆಂದರೆ ಹಲವಾರು ಮಂದಿಗೆ ರಾಜ್ಯೋತ್ಸವ ಪುರಸ್ಕೃತರ ಹೆಸರೂ ಗೊತ್ತಿರಲಿಕ್ಕಿಲ್ಲ.

ಇದೇ ಮೊದಲ ಬಾರಿಗೆ ಎಂಬಂತೆ ರಾಜ್ಯ ಸರಕಾರ, ರಾಜ್ಯೋತ್ಸವ ಪ್ರಶಸ್ತಿಗಾಗಿ ಹೆಸರುಗಳನ್ನು ಶಿಫಾರಸು ಮಾಡುವಂತೆ ಜನರಲ್ಲಿ ಮನವಿ ಮಾಡಿತ್ತು. ಸೇವಾ ಸಿಂಧು ಮೂಲಕ ಶಿಫಾರಸು ಮಾಡಬಹುದು ಎಂದಿತ್ತು. ಇದರಲ್ಲಿ ಒಟ್ಟು 4,500 ಹೆಸರುಗಳು ಪ್ರಶಸ್ತಿಗಾಗಿ  ಶಿಫಾರಸುಗೊಂಡಿದ್ದವು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್‌ ಕುಮಾರ್‌ ಅವರ ನೇತೃತ್ವದ ಸಮಿತಿ ಈ ಹೆಸರುಗಳನ್ನು ಪರಿಶೀಲಿಸಿ ಕಡೆಗೆ ರಾಜ್ಯೋತ್ಸವ ಪುರಸ್ಕೃತರ ಹೆಸರುಗಳನ್ನು ಬಿಡುಗಡೆ ಮಾಡಿದೆ.

ಇದನ್ನೂ ಓದಿ:ಟಿ20 ವಿಶ್ವಕಪ್‌: ನಿರ್ಗಮನ ಬಾಗಿಲಲ್ಲಿ ನಿಂತ ಭಾರತ

ಸಾಹಿತ್ಯ ವಲಯದಲ್ಲಿ ಆರು ಮಂದಿಗೆ, ರಂಗಭೂಮಿಯ ಐವರಿಗೆ, ಜಾನಪದ ಕ್ಷೇತ್ರದಲ್ಲಿ ಏಳು ಮಂದಿಗೆ, ಸಂಗೀತ ಕ್ಷೇತ್ರದಲ್ಲಿ ಇಬ್ಬರು, ಶಿಲ್ಪಕಲೆಯಲ್ಲಿ ಇಬ್ಬರು, ಸಮಾಜ ಸೇವೆಯಲ್ಲಿ ಐವರು, ವೈದ್ಯಕೀಯ ಕ್ಷೇತ್ರದಲ್ಲಿ ಆರು ಮಂದಿ, ಕ್ರೀಡೆಯಲ್ಲಿ ನಾಲ್ವರು, ಸಿನೆಮಾದಲ್ಲಿ ಒಬ್ಬರು, ಶಿಕ್ಷಣದಲ್ಲಿ ಮೂವರು, ಸಂಕೀರ್ಣ ವಿಭಾಗದಲ್ಲಿ ಮೂವರು, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಇಬ್ಬರು, ಕೃಷಿಯಲ್ಲಿ ಮೂವರು, ಪರಿಸರದಲ್ಲಿ ಇಬ್ಬರು, ಪತ್ರಿಕೋದ್ಯಮದಲ್ಲಿ ಇಬ್ಬರು, ನ್ಯಾಯಾಂಗ, ಆಡಳಿತ, ಸೇನೆ, ಯಕ್ಷಗಾನ, ಪೌರ ಕಾರ್ಮಿಕ, ಉದ್ಯಮ, ಕಲ್ಯಾಣ ಕರ್ನಾಟಕ ಏಕೀಕರಣ ಹೋರಾಟದಲ್ಲಿ ತಲಾ ಒಬ್ಬರು, ಹೊರನಾಡು ಕನ್ನಡಿಗ ವಿಭಾಗದಲ್ಲಿ ನಾಲ್ವರು, ಯೋಗದಲ್ಲಿ ಇಬ್ಬರಿಗೆ ಪ್ರಶಸ್ತಿ ಘೋಷಿಸಲಾಗಿದೆ.

ಕೊರೊನಾ ಕಾಲದಲ್ಲಿ ಜನರಿಗೆ ನಿಸ್ವಾರ್ಥ ಸೇವೆ ಮಾಡಿದ ವೈದ್ಯರು, ಕಳೆದ 50 ವರ್ಷಗಳಿಂದ ಶಿಲ್ಪಕಲೆಯನ್ನೇ ನಂಬಿ ಜೀವನ ಮಾಡುತ್ತಿರುವ ಶಿಲ್ಪಿ, 15 ಲಕ್ಷಕ್ಕೂ ಹೆಚ್ಚು ಬಡವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು, ಸೂಲಗಿತ್ತಿ ಯಮುನವ್ವ, ಜಾನಪದ ಕಲಾವಿದರು, ಮುಂದಿನ ಮಾರ್ಚ್‌ಗೆ ನಿವೃತ್ತಿಯಾಗಲಿರುವ ಯಾದಗಿರಿಯ ಪೌರ ಕಾರ್ಮಿಕ ಮಹಿಳೆ, ಸಾವಯವ ಕೃಷಿ ಮಾಡುತ್ತಿರುವ ಕೃಷಿಕ ಹೀಗೆ ಸಮಾಜದಲ್ಲಿ ಎಲೆಮರೆ ಕಾಯಿಯಂತೆ ಕೆಲಸ ಮಾಡುತ್ತಿರುವವರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಪ್ರಶಸ್ತಿ ಪಟ್ಟಿಯನ್ನು ನೋಡಿದರೆ, ಸರಕಾರ ಯಾವುದೇ ಪ್ರಭಾವಗಳಿಗೆ ಮಣಿಯದೇ ಆಯ್ಕೆ ಮಾಡಿರುವುದು ಕಂಡು ಬಂದಿದೆ. ಮುಂದೆಯೂ ಇದೀ ರೀತಿಯಲ್ಲೇ ಪ್ರಶಸ್ತಿ ನೀಡಿದರೆ, ಪ್ರಶಸ್ತಿಗೂ ಒಂದು ಗೌರವ ಬಂದಂತಾಗುವುದರಲ್ಲಿ ಯಾವುದೇ ಸಂದೇಹವಿಲ್ಲ.

ಇದರ ಜತೆಗೆ ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ 10 ಸಂಘ ಸಂಸ್ಥೆಗಳಿಗೆ ಈ ವರ್ಷಕ್ಕೆ ಅನ್ವಯವಾಗುವ ರೀತಿಯಲ್ಲಿ ಪ್ರಶಸ್ತಿ ನೀಡಲಾಗಿದೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.