ಉಗ್ರರ ತವರಾಗಿ ಬದಲಾದ ಕೇರಳ: ಇನ್ನೂ ತಗ್ಗದ ಐಸಿಸ್‌ ಆಕರ್ಷಣೆ


Team Udayavani, Nov 4, 2017, 11:56 AM IST

04-28.jpg

ಇರಾಕ್‌ ಮತ್ತು ಸಿರಿಯಾದಲ್ಲಿ ಐಸಿಸ್‌ ಬಹುತೇಕ ಅಳಿವಿನಂಚಿಗೆ ಬಂದಿದ್ದರೂ ಭಾರತವೂ ಸೇರಿದಂತೆ ಕೆಲವು ದೇಶಗಳಲ್ಲಿ ಈ ಉಗ್ರ ಸಂಘಟನೆಯತ್ತ ಕೆಲವು ಮತಾಂಧ ಜನರಿಗೆ ಇರುವ ಆಕರ್ಷಣೆ ಇನ್ನೂ ಕಡಿಮೆಯಾಗಿಲ್ಲ. ಕೆಲವು ದಿನಗಳ ಹಿಂದೆ ಅಮೆರಿಕದಲ್ಲಿ ಐಸಿಸ್‌ ಉಗ್ರನೊಬ್ಬ ಟ್ರಕ್‌ ಚಲಾಯಿಸಿ 8 ಮಂದಿಯನ್ನು ಕೊಂದಿರುವುದು ಮತ್ತು ಕೇರಳದಲ್ಲಿ ಐವರು ಐಸಿಸ್‌ ಉಗ್ರರನ್ನು ಬಂಧಿಸಿರುವುದು ಇತ್ತೀಚೆಗಿನ ಪ್ರಕರಣಗಳು.

ಐದು ವರ್ಷಗಳ ಹಿಂದೆ ಇರಾಕ್‌ ಮತ್ತು ಸಿರಿಯಾ ದೇಶಗಳನ್ನು ಆಕ್ರಮಿಸಿಕೊಂಡ ಐಸಿಸ್‌ ಅನಂತರ ಇಂಗ್ಲಂಡ್‌, ಫ್ರಾನ್ಸ್‌, ಅಮೆರಿಕದಂತಹ ಮುಂದುವರಿದ ದೇಶಗಳಿಗೆ ಕಬಂಧ ಬಾಹು ಚಾಚಿದ್ದರೂ ಭಾರತದಲ್ಲಿ ಐಸಿಸ್‌ ನೆಲೆಯೂರಲು ಸಾಧ್ಯವಿಲ್ಲ ಎಂದು ನಾವು ನಿರುಮ್ಮಳವಾಗಿದ್ದೆವು. ಆದರೆ ಕಳೆದ ವರ್ಷ ಕೇರಳದ ಉತ್ತರ ತುದಿಯ ಕಾಸರಗೋಡಿನ 21 ಮಂದಿ ನಿಗೂಢವಾಗಿ ನಾಪತ್ತೆಯಾದ ಪ್ರಕರಣ ಬೆಳಕಿಗೆ ಬಂದಾಗಲೇ ನಮಗೆ ಐಸಿಸ್‌ ನಮ್ಮ ಮನೆಯಂಗಳಕ್ಕೆ ತಲುಪಿದೆ ಎಂದು ಅರಿವಾದದ್ದು. ಅನಂತರ ಐಸಿಸ್‌ ಸೇರುವವರ ಸಂಖ್ಯೆ ಬೆಳೆಯುತ್ತಲೇ ಹೋಗುತ್ತಿದೆ. ಅದರಲ್ಲೂ ದೇವರ ಸ್ವಂತ ನಾಡು ಎಂಬ ಖ್ಯಾತಿಯಿರುವ ಕೇರಳ ಐಸಿಸ್‌ ಉಗ್ರರ ತವರು ನೆಲವಾಗಿ ಬದಲಾಗಿರುವುದು ಆತಂಕಕಾರಿ ಬೆಳವಣಿಗೆ. ಕಾಸರಗೋಡು, ಕಣ್ಣೂರು ಜಿಲ್ಲೆಗಳನ್ನು ಒಳಗೊಂಡಿರುವ ಮಲಬಾರ್‌ ವಲಯ ಐಸಿಸ್‌ನ ನೇಮಕಾತಿ ಕ್ಯಾಂಪಸ್‌ ಆಗಿದೆ. ಆರಂಭದಲ್ಲಿ ಐಸಿಸ್‌ ಜಾಡು ಪತ್ತೆ ಹಚ್ಚಲು ಭದ್ರತಾ ಪಡೆ ವಿಫ‌ಲವಾದದ್ದೇ ಕೇರಳದಲ್ಲಿ ಈ ಉಗ್ರ ಸಂಘಟನೆ ಈ ಪರಿ ಬೆಳೆಯಲು ಕಾರಣ.

ಸಾಕ್ಷರತೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿರುವ ರಾಜ್ಯವೆಂಬ ಹಿರಿಮೆ ಇದ್ದರೂ ಇದುವೆ ಈಗ ಮುಳುವಾಗಿ ಪರಿಣಮಿಸಿದೆ. ವಿದ್ಯಾವಂತ ಯುವಕ, ಯುವತಿಯರೇ ಐಸಿಸ್‌ನತ್ತ ಹೆಚ್ಚು ಆಕರ್ಷಿತರಾಗುತ್ತಿರುವುದು ಇದಕ್ಕೆ ಸಾಕ್ಷಿ. ಡಾಕ್ಟರ್‌, ಎಂಜಿನಿಯರಿಂಗ್‌ ಕಲಿತ ಯುವಕರು ಕೂಡ ಬುದ್ಧಿಯನ್ನು ಮತಾಂಧ ಶಕ್ತಿಗಳ ಕೈಗೆ ಕೊಟ್ಟು ಅವರನ್ನು ಕುರುಡಾಗಿ ಅನುಸರಿಸುತ್ತಿರುವುದನ್ನು ನೋಡುವಾಗ ಖೇದವಾಗುತ್ತದೆ. ಕಳೆದ ವಾರ ಸೆರೆಯಾಗಿರುವ ಉಗ್ರರ ಪೈಕಿ ಹಂಝ ತಲಶೆÏàರಿ ಎಂಬಾತ ಐಸಿಸ್‌ ನೇಮಕಾತಿಯ ಪ್ರಮುಖ ಕೊಂಡಿಯಾಗಿದ್ದವ. 40ಕ್ಕೂ ಹೆಚ್ಚು ಮಂದಿಯನ್ನು ಐಸಿಸ್‌ಗೆ ಸೇರಿಸಿರುವುದನ್ನು ಅವನು ಒಪ್ಪಿಕೊಂಡಿದ್ದಾನೆ. ಐಸಿಸ್‌ ಸೇರಿದವರ ಸಂಖ್ಯೆ ಪೊಲೀಸರು ಲೆಕ್ಕ ಹಾಕಿರುವುದಕ್ಕಿಂತ ಬಹಳ ಹೆಚ್ಚಿದೆ ಎಂದು ಇದರಿಂದ ಸ್ಪಷ್ಟವಾಗುತ್ತದೆ. ಗಲ್ಫ್ ದೇಶಗಳ ಜತೆಗೆ ಇರುವ ಸಂಪರ್ಕ ರಾಜ್ಯದಲ್ಲಿ ಐಸಿಸ್‌ ಹುಲುಸಾಗಿ ಬೆಳೆಯಲು ಮುಖ್ಯ ಕಾರಣ. ಉಗ್ರ ಮತ್ತು ದೇಶದ್ರೋಹಿ ಚಟುವಟಿಕೆಗಳಿಗಾಗಿ ಗಲ್ಫ್ನಿಂದ ಹವಾಲಾ ಮೂಲಕ ಧಾರಾಳ ಹಣ ಹರಿದು ಬರುತ್ತಿರುವುದು ರಹಸ್ಯವಾಗಿ ಉಳಿದಿಲ್ಲ. ಕೆಲ ದಿನಗಳ ಹಿಂದೆ ರಾಷ್ಟ್ರೀಯ ಟಿವಿ ವಾಹಿನಿ ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ವಿದೇಶದಿಂದ ಹವಾಲ ಮೂಲಕ ಭಾರೀ ಪ್ರಮಾಣದ ಹಣ ಬರುತ್ತಿರುವುದಕ್ಕೆ ಸಾಕ್ಷ್ಯಗಳು ಲಭಿಸಿವೆ.  

ಇತರ ಕೆಲವು ಸ್ಥಳೀಯ ಮೂಲಭೂತವಾದಿ ಸಂಘಟನೆಗಳು ಕೂಡ ಉಗ್ರ ಚಟುವಟಿಕೆಗೆ ಕುಮ್ಮಕ್ಕು ನೀಡುತ್ತಿರುವ ಗುಮಾನಿಯಿದೆ. ಐಸಿಸ್‌ ಸೇರಿದವರಲ್ಲಿ ಅನೇಕ ಮಂದಿ ಇಂಥ ಸಂಘಟನೆಗಳ ಕಾರ್ಯಕರ್ತರಾಗಿದ್ದರು ಎನ್ನುವುದು ಈ ಅನುಮಾನವನ್ನು ಪುಷ್ಟೀಕರಿಸಿದೆ. ಲವ್‌ ಜೆಹಾದ್‌ ಮೂಲಕ ಇಂಥವು ಉಗ್ರ ಚಟುವಟಿಕೆಗಳಿಗೆ ನೆರವು ನೀಡುತ್ತಿರುವುದನ್ನು ಎನ್‌ಐಎ ಪತ್ತೆ ಹಚ್ಚಿದೆ. ಕಳೆದ ವರ್ಷ ನಾಪತ್ತೆಯಾದ 21 ಮಂದಿಯ ಪೈಕಿ ಇಬ್ಬರು ಯುವತಿಯರು ಮತ್ತು ಮೂವರು ಯುವಕರು ಮತಾಂತರಗೊಂಡ ಹಿಂದೂ ಮತ್ತು ಕ್ರೈಸ್ತ ಧರ್ಮೀಯರಾಗಿದ್ದರು. ಇವರ ಮತಾಂತರದ ಹಿಂದೆ ಇಂಥ ಸಂಘಟನೆಗಳ ಕೈವಾಡವಿತ್ತು ಎನ್ನುವುದು ತನಿಖೆಯಿಂದ ತಿಳಿದು ಬಂದಿದೆ.  

ಕೇರಳ ಇನ್ನೊಂದು ಕಾಶ್ಮೀರವಾಗುತ್ತಿದೆ ಎಂಬ ಆರೋಪವನ್ನು ಸಂಪೂರ್ಣ ಅಲ್ಲಗಳೆಯಲಾಗದಂತಹ ಸುದ್ದಿಗಳು ಪದೇ ಪದೇ ಬರುತ್ತಿವೆ. ಒಂದು ಕಾಲದಲ್ಲಿ ಅತ್ಯಂತ ಮುಕ್ತ ಸಾಮಾಜಿಕ ವ್ಯವಸ್ಥೆಯನ್ನು ಹೊಂದಿದ್ದ ರಾಜ್ಯದಲ್ಲೀಗ ಮೂಲಭೂತವಾದ ಆಳವಾಗಿ ಬೇರು ಬಿಟ್ಟಿದೆ. ವಿದ್ಯಾವಂತ ಯುವಕರನೇಕರು ಇಂಟರ್‌ನೆಟ್‌ ಮೂಲಕ ಇದಕ್ಕೆ ಸಂಬಂಧಿಸಿದ ಪ್ರವಚನಗಳನ್ನು ಕೇಳಿ ಪ್ರಭಾವಿತರಾಗುತ್ತಿದ್ದಾರೆ. ಈಗಲೇ ಇದನ್ನು ಹತ್ತಿಕ್ಕುವ ಕೆಲಸ ಮಾಡದಿದ್ದರೆ ಭವಿಷ್ಯದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಸುತ್ತಿದ್ದರೂ ಅಧಿಕಾರದಲ್ಲಿರುವವರು ಕಿವುಡಾ ಗಿದ್ದಾರೆ. ಸದ್ಯಕ್ಕೆ ಐಸಿಸ್‌ ಸೇರಿರುವವರ ಸಂಖ್ಯೆ ನಗಣ್ಯವೇ ಆಗಿದ್ದರೂ ಇಂತಹ ಸಣ್ಣ ಗುಂಪುಗಳನ್ನು ಈಗಲೇ ನಿಯಂತ್ರಿಸುವುದು ಅಗತ್ಯ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.