ಲಂಕಾ ಸಮಸ್ಯೆ ಭಾರತ ಸರಕಾರಕ್ಕೂ ಸವಾಲು


Team Udayavani, Jul 11, 2022, 6:00 AM IST

lanka

ಶ್ರೀಲಂಕಾದಲ್ಲಿ ಉಂಟಾಗಿರುವ ಬಿಕ್ಕಟ್ಟು ತಲ್ಲಣ ಹುಟ್ಟಿಸುವಂಥದ್ದೇ ಆಗಿದೆ. ಆರ್ಥಿಕವಾಗಿ ಬಿಕ್ಕಟ್ಟು ಆ ದೇಶದ್ದೇ ಆಗಿದ್ದರೂ ಭಾರತ ಸರಕಾರ ಕಣ್ಣುಮುಚ್ಚಿ ಕುಳಿತುಕೊಳ್ಳುವಂತೆಯೇ ಇಲ್ಲ ಎನ್ನುವುದು ಗಮನಾರ್ಹ ವಾಗಿರುವ ಅಂಶ. ಇಂಥ ಒಂದು ಅಂಶವನ್ನು ಉಲ್ಲೇಖೀಸಲು ಬಲವಾ ಗಿರುವ ಕಾರಣಗಳು ಇವೆ. ದ್ವೀಪ ರಾಷ್ಟ್ರದ ಸರಕಾರ ವಿಫ‌ಲ ಹೊಂದಲು ಪ್ರಮುಖ ಕಾರಣವೇನೆಂದರೆ ಅಲ್ಲಿ ಆಡಳಿತ ಇರುವ ರಾಜಪಕ್ಸ ಕುಟುಂಬದ ದುರಾಡಳಿತ ಮತ್ತು ನಯವಾಗಿ ಮಾತನಾಡಿ ವಂಚಿಸುವ ಚೀನದ ಸಾಲದ ಸುಳಿಗೆ ಬಿದ್ದದ್ದು.

ಪ್ರಸಕ್ತ ವರ್ಷದ ಆರಂಭದಿಂದಲೇ ಆ ದೇಶದಲ್ಲಿ ಹಲವು ರೀತಿಯ ಬಿಕ್ಕಟ್ಟುಗಳು ಶುರುವಾಗುತ್ತಾ ಋಣಾತ್ಮಕವಾಗಿಯೇ ಸುದ್ದಿಯಾಗ ಲಾರಂಭಿಸಿತ್ತು. ಆ ದೇಶದ ಆಡಳಿತ ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಯಾವ ರೀತಿಯ ಕ್ರಮವನ್ನೂ ಕೈಗೊಂಡಿಲ್ಲ ಎಂಬುದು ದುರದೃಷ್ಟಕರ ವಾಗಿರುವ ಸಂಗತಿ. ಕೊಲಂಬೋದ ಕೇಂದ್ರ ಭಾಗದಲ್ಲಿ ಇರುವ
ಅಧ್ಯಕ್ಷರ ನಿವಾಸಕ್ಕೆ ನುಗ್ಗಿದ ಜನರಿಗೆ ಕೋಟ್ಯಂತರ ಮೌಲ್ಯದ ಶ್ರೀಲಂಕಾ ರೂಪಾಯಿ ನೋಟುಗಳು ಸಿಕ್ಕಿವೆ ಎಂದು ವರದಿಯಾಗಿದೆ. ಅದು ಸತ್ಯವೇ ಆಗಿದ್ದರೆ, ಚೀನ ಮತ್ತು ಇತರ ರಾಷ್ಟ್ರಗಳಿಂದ ಆ ದೇಶದ ಸರಕಾರ ಪಡೆದುಕೊಂಡಿದ್ದ ಸಾಲದ ಮೊತ್ತ ಎಲ್ಲಿಗೆ ಹೋಯಿತು, ದೇಶದ ಅರ್ಥ ವ್ಯವಸ್ಥೆ ಏಕೆ ಕುಸಿಯಿತು ಎಂಬ ಬಗ್ಗೆ ಉತ್ತರಗಳು ಯಾರೂ ಹೇಳದೆಯೇ ಸಿಗುತ್ತದೆ.

ಲಂಕಾ ಸರಕಾರ ಚೀನದಿಂದ ಸಾಲ ಪಡೆದು ಮಾಡಿಕೊಂಡ ತಪ್ಪಿಗೆ ಕೊಲಂಬೋ ಬಂದರು ಪ್ರದೇಶವನ್ನು ಚೀನಕ್ಕೆ ಭೋಗ್ಯಕ್ಕೆ ನೀಡಲಾಗಿದೆ. ಈಗಾಗಲೇ ಆ ನಿರ್ಧಾರದ ಪ್ರತಿಕೂಲ ಪರಿಣಾಮ ಆ ದೇಶದಲ್ಲಿ ಉಂಟಾಗುತ್ತಿದೆ. ನೆರೆಯ ದೇಶಗಳಲ್ಲಿ ಚೀನದ ಹಸ್ತಕ್ಷೇಪ ಹೆಚ್ಚಿದಷ್ಟು ನಮ್ಮ ದೇಶಕ್ಕೆ ಆಪತ್ತು ಕಟ್ಟಿಟ್ಟ ಬುತ್ತಿ. ಅದನ್ನು ತಪ್ಪಿಸುವ ನಿಟ್ಟಿನಲ್ಲಿಯೇ ದ್ವೀಪರಾಷ್ಟ್ರದ ಹಂಬಂತೋಟ ಬಂದರು ಸಮೀಪ ಇರುವ ಮಟ್ಟಾಲ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು 2017ರಲ್ಲಿ ಭಾರತ ಸರಕಾರ ಖರೀದಿಸಿ, ಅದನ್ನು ಪುನರ್‌ ನಿರ್ಮಾಣ ಮಾಡುತ್ತಿದೆ. ಇದರ ಜತೆಗೆ ಕೊಲಂಬೋ ಬಂದರಿನಲ್ಲಿ 700 ಮಿಲಿಯ ಡಾಲರ್‌ ವೆಚ್ಚದಲ್ಲಿ ಜೆಟ್ಟಿಯೊಂದನ್ನು ನಿರ್ಮಾಣ ಮಾಡುತ್ತಿದೆ.

ಏಕೆಂದರೆ ಶ್ರೀಲಂಕಾದಲ್ಲಿ ಮುಂದೆ ಅಸ್ತಿತ್ವಕ್ಕೆ ಬರುವ ಸರಕಾರ ಬಹುಸ್ತರದ ಸವಾಲುಗಳನ್ನು ಹೊಂದಿದೆ. ಆ ದೇಶದ ಅರ್ಥ ವ್ಯವಸ್ಥೆ ಸುಧಾರಿಸುವುದು, ಸದ್ಯದ ಉದ್ರಿಕ್ತತೆಯನ್ನು ಶಮನಗೊಳಿಸುವುದು, ಚೀನದ ಹಸ್ತಕ್ಷೇಪ ತಗ್ಗಿಸುವಂತೆ ಮಾಡುವಲ್ಲಿ ಮಾರ್ಗೋಪಾಯಗಳ ಅನುಸರಣೆ, ಆಂತರಿಕ ಭದ್ರತೆ ಮೇಲ್ದರ್ಜೆಗೆ ಏರಿಸುವುದು ಸವಾಲುಗಳು. ಇಂಥ ಸಂದರ್ಭವನ್ನು ಭಾರತ ಸರಕಾರ ತನಗೆ ಅನುಕೂಲವನ್ನಾಗಿ ಮಾರ್ಪಡಿಸಲು ಸುವರ್ಣಾವಕಾಶವನ್ನಾಗಿ ಪರಿವರ್ತಿಸಿಕೊಳ್ಳಬೇಕು. ಅಲ್ಲಿ ಬಿಕ್ಕಟ್ಟು ಕೈಮೀರಿ ಹೋದ ದಿನದಿಂದಲೂ ಭಾರತ ಸರಕಾರ ವಿತ್ತೀಯ ನೆರವು, ಪೆಟ್ರೋಲ್‌, ಡೀಸೆಲ್‌, ಅಕ್ಕಿ ಮತ್ತು ಇತರ ನೆರವು ನೀಡುತ್ತಾ ಬಂದಿದೆ. ಅದನ್ನು ಇನ್ನೂ ಹೆಚ್ಚಿಸುವ ಮೂಲಕ ದ್ವೀಪರಾಷ್ಟ್ರದ ಸದ್ಯದ ಆಡಳಿತ ಪಕ್ಷ ಮತ್ತು ವಿಪಕ್ಷಗಳ ಮುಖಂಡರ ವಿಶ್ವಾಸ ಗಳಿಸಬೇಕು. ಮುಂದಿನ ದಿನಗಳಲ್ಲಿ ಚೀನ ಸಾಲ ನಂಬಿಕೊಂಡರೆ ಏನು ಆಗುತ್ತದೆ. ಅದಕ್ಕೆ ಸದ್ಯ ನಡೆಯುತ್ತಿರುವ ವಿದ್ಯಮಾನ ಸಾಕ್ಷಿ ಎಂದು ಮನವರಿಕೆ ಮಾಡಿದಲ್ಲಿ ದಕ್ಷಿಣ ಏಷ್ಯಾದಲ್ಲಿ ಭಾರತವೇ ಕಿಂಗ್‌ ಆಗುವುದರಲ್ಲಿ ಸಂಶಯವಿಲ್ಲ.

ಟಾಪ್ ನ್ಯೂಸ್

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.