ವಿಧಾನಮಂಡಲ ಕಲಾಪ: ಶಾಸಕರ ಅನುಪಸ್ಥಿತಿ ಖಂಡನೀಯ


Team Udayavani, Sep 20, 2022, 6:00 AM IST

ವಿಧಾನಮಂಡಲ ಕಲಾಪ: ಶಾಸಕರ ಅನುಪಸ್ಥಿತಿ ಖಂಡನೀಯ

ಕ್ಷೇತ್ರದ ಜನರ ಕಷ್ಟಕಾರ್ಪಣ್ಯಗಳನ್ನು ಸರಕಾರದ ಗಮನಕ್ಕೆ ತರಲು ಇರುವ ಮುಖ್ಯ ವೇದಿಕೆಯೇ ವಿಧಾನಮಂಡಲ ಕಲಾಪ. ಇಲ್ಲಿ ದನಿ ಎತ್ತಿದರೆ ಆ ಕ್ಷೇತ್ರದ ಸಮಸ್ಯೆಗಳು ಇಡೀ ರಾಜ್ಯದ ಗಮನ ಸೆಳೆಯುತ್ತವೆ. ಆದರೆ ಕಲಾಪಕ್ಕೆ ಶಾಸಕರು ಗೈರಾಗುತ್ತಿರುವುದು ಮಾತ್ರ ಅತ್ಯಂತ ಖೇದಕರ ಸಂಗತಿ.

ವಿಧಾನಮಂಡಲ ಅಧಿವೇಶನ ಆರಂಭವಾಗಿ ಈಗಾಗಲೇ ವಾರ ಕಳೆದಿದೆೆ. ಸೋಮವಾರ ಎರಡನೇ ವಾರದ ಮೊದಲ ದಿನ. ಬೆಳಗ್ಗೆ ಕಲಾಪ ಆರಂಭವಾದರೂ ಶಾಸಕರೇ ಇರಲಿಲ್ಲ. ಅಲ್ಲದೆ ಪ್ರಶ್ನೆಗಳನ್ನು ಕೇಳುವ ಸಲುವಾಗಿ ಹೆಸರು ನೀಡಿದ್ದವರೂ ಬರದೇ ಹೋಗಿದ್ದುದು ಮಾತ್ರ ದುರಂತ. ವಿಧಾನಸಭೆಯಲ್ಲಿ ಸೋಮವಾರ ಬೆಳಗ್ಗೆಯೇ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಶ್ನೋತ್ತರ ಕಲಾಪ ಕೈಗೆತ್ತಿಕೊಂಡಿದ್ದರು. 15 ಮಂದಿ ಶಾಸಕರು ಪ್ರಶ್ನೋತ್ತರ ಕಲಾಪದಲ್ಲಿ ಭಾಗಿಯಾಗುವ ಸಂಬಂಧ ಹೆಸರು ನೀಡಿದ್ದರು. ಇದರಲ್ಲಿ ಅರ್ಧಕ್ಕರ್ಧ ಶಾಸಕರು ಬಂದೇ ಇರಲಿಲ್ಲ. ಇದು ಸ್ಪೀಕರ್‌ ಕಾಗೇರಿ ಅವರ ಸಿಟ್ಟಿಗೂ ಕಾರಣವಾಯಿತು. ಅಲ್ಲದೆ 11.10ಕ್ಕೆ ಆರಂಭವಾದ ಪ್ರಶ್ನೋತ್ತರ ಕಲಾಪ ಕೇವಲ ಅರ್ಧ ಗಂಟೆಯಲ್ಲಿ ಮುಗಿದು ಹೋಗಿದೆ.

ಎರಡು ದಿನ ರಜೆ ಬಳಿಕ ಕಲಾಪ ಆರಂಭವಾಗಿದ್ದು, ಸದನದಲ್ಲಿ ಶಾಸಕರು ಗೈರಾಗಿದ್ದು ಏಕೆ ಎಂಬುದು ಸ್ಪೀಕರ್‌ ಅವರ ಪ್ರಶ್ನೆಯಾಗಿತ್ತು. ರಾಜ್ಯದ ಸಮಸ್ಯೆಗಳು, ವಿಚಾರಗಳ ಬಗ್ಗೆ ಚರ್ಚೆಯಾಗಲಿ ಎಂಬ ಉದ್ದೇಶದಿಂದಲೇ ವಿಧಾನಸಭೆ ಅಧಿವೇಶನ ನಡೆಯುತ್ತದೆ. ಇದರಲ್ಲಿ ಕ್ಷೇತ್ರದ ಸಮಸ್ಯೆಗಳಷ್ಟೇ ಅಲ್ಲ, ಸರಕಾರದ ವೈಫ‌ಲ್ಯಗಳ ಬಗ್ಗೆಯೂ ಗಮನಾರ್ಹ ಚರ್ಚೆಯಾಗುತ್ತದೆ. ಜತೆಗೆ ಮುಂದೇನು ಮಾಡಬೇಕು ಎಂಬ ಕುರಿತಾಗಿಯೂ ಸುದೀರ್ಘ‌ ಚರ್ಚೆ ನಡೆಯುತ್ತದೆ.

ಅಲ್ಲದೆ ಪ್ರತಿಯೊಂದು ಅಧಿವೇಶನ ನಡೆಸುವಾಗಲೂ ಜನರ ಕೋಟ್ಯಂತರ ರೂ. ತೆರಿಗೆ ಹಣ ವೆಚ್ಚವಾಗುತ್ತದೆ. ಶಾಸಕರೂ ವಿಶೇಷ ಭತ್ತೆ ಪಡೆಯುತ್ತಾರೆ. ಆದರೆ ಸರಿಯಾಗಿ ಅಧಿವೇಶನ ನಡೆಯದೇ ಹೋದರೆ ಈ ಎಲ್ಲ ಹಣ ನೀರಿನಲ್ಲಿ ಹುಣಸೆಹಣ್ಣು ತೊಳೆದಂತೆ ಆಗುವುದಿಲ್ಲವೇ ಎಂಬ ಪ್ರಶ್ನೆ ಜನರದ್ದು.

ಪ್ರತೀ ಬಾರಿ ಅಧಿವೇಶನ ಆರಂಭದ ಹೊತ್ತಲ್ಲಿ, ಈ ಬಾರಿಯಾದರೂ ರಚನಾತ್ಮಕವಾಗಿ ಅಧಿವೇಶನ ನಡೆಯಲಿ ಎಂಬ ಒಂದು ನಿರೀಕ್ಷೆ ಇರುತ್ತದೆ. ಎಷ್ಟೋ ಬಾರಿ ಗದ್ದಲಗಳಿಂದಲೇ ಅಧಿವೇಶನ ಮುಗಿದಿರುವುದು ಉಂಟು. ಈ ಬಾರಿ ಮೊದಲ ವಾರ ಸರಕಾರದ ಕೆಲವು ವೈಫ‌ಲ್ಯಗಳತ್ತ ವಿಪಕ್ಷಗಳ ನಾಯಕರು ಬೆಟ್ಟು ಮಾಡಿದ್ದು, ಉತ್ಪಾದಕತೆ ಉತ್ತಮವಾಗಿಯೇ ಇದೆ. ಆದರೆ ಎರಡನೇ ವಾರ ಶಾಸಕರಲ್ಲಿ ತೀವ್ರ ನಿರುತ್ಸಾಹ ಕಂಡು ಬಂದಿರುವುದು ಸರಿಯಾದ ವರ್ತನೆಯಲ್ಲ.

ಸದ್ಯ ರಾಜ್ಯ ಪ್ರವಾಹದಂಥ ಭೀಕರ ಸಮಸ್ಯೆ ಎದುರಿಸುತ್ತಿದೆ. ಸಿಲಿಕಾನ್‌ ಸಿಟಿ ಎಂದೇ ಖ್ಯಾತವಾಗಿರುವ ಬೆಂಗಳೂರಿನ ಮರ್ಯಾದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ. ಮಳೆಯಿಂದಾಗಿ ರೈತರು ಬೆಳೆದ ಬೆಳೆ ನೀರಿನಲ್ಲಿ ಕೊಳೆತು ಹೋಗಿದೆ. ಬಹುತೇಕ ಜಿಲ್ಲೆಗಳಲ್ಲಿ ಇದೇ ಪರಿಸ್ಥಿತಿ ಇದೆ. ಇಂಥ ಹೊತ್ತಲ್ಲಿ ಸರಕಾರ ಮತ್ತು ವಿಪಕ್ಷಗಳು ಒಟ್ಟಾಗಿ, ಕೇಂದ್ರದಿಂದ ಪ್ರವಾಹ ಪರಿಹಾರ ಪಡೆಯುವ ಸಲುವಾಗಿ ಒತ್ತಡ ಹೇರಬೇಕು. ಆದರೆ ಸರಿಯಾಗಿ ಅಧಿವೇಶನಕ್ಕೇ ಬರದೇ ಹೋದರೆ ಸಮಸ್ಯೆ ಕೇಳುವವರು ಯಾರು ಎಂಬ ಪ್ರಶ್ನೆ ಎದುರಾಗುತ್ತದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.