ಪಕ್ಷಾಂತರಿಗಳಿಗೆ ಪಾಠ


Team Udayavani, Jul 29, 2019, 5:52 AM IST

mumbai

ರಾಜೀನಾಮೆಯನ್ನು ನಿಮ್ಮ ವಿವೇಚನೆಯಂತೆ ಇತ್ಯರ್ಥಪಡಿಸಬೇಕೆಂದು ಸುಪ್ರೀಂ ಕೋರ್ಟ್‌ ಹೇಳಿದೆ. ಆದರೆ ರಾಜೀನಾಮೆ ಅರ್ಜಿ ವಿಲೇವಾರಿ ಮಾಡದೆ ಅನರ್ಹತೆಯ ಅಸ್ತ್ರ ಪ್ರಯೋಗಿಸಿರುವುದರ ಹಿಂದೆ ಯಾವ ಲೆಕ್ಕಾಚಾರ ಇದೆ ಎನ್ನುವುದು ಜಿಜ್ಞಾಸೆಗೆ ಅರ್ಹವಾದ ವಿಚಾರ.

ಕರ್ನಾಟಕದ ರಾಜಕೀಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.ಇದೀಗ ಸ್ಪೀಕರ್‌ ಕೆ. ಆರ್‌. ರಮೇಶ್‌ಕುಮಾರ್‌ ಪಕ್ಷದ ವಿರುದ್ಧ ಬಂಡೆದ್ದು ರಾಜೀನಾಮೆ ನೀಡಿದ್ದ 14 ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಕಳೆದ ಗುರುವಾರ ಅನರ್ಹಗೊಂಡ ಮೂವರು ಶಾಸಕರನ್ನೂ ಸೇರಿಸಿದರೆ 17 ಶಾಸಕರು ಹಾಲಿ ವಿಧಾನಸಭೆಯಿಂದ ಅನರ್ಹಗೊಂಡಂತಾಯಿತು. ಈ ಮೂಲಕ ಸದನದ ಸಂಖ್ಯಾಬಲ 207ಕ್ಕೆ ಕುಸಿದಿದ್ದು ಬಹುಮತಕ್ಕೆ 104 ಶಾಸಕರು ಇದ್ದರೆ ಸಾಕು. ಇಷ್ಟು ಶಾಸಕರು ಬಿಜೆಪಿ ಬಳಯಿರುವುದರಿಂದ ವಿಶ್ವಾಸಮತ ಸಾಬೀತುಪಡಿಸುವುದು ಖಚಿತ.

ಆದರೆ ಸ್ಪೀಕರ್‌ ನಡೆ ಮಾತ್ರ ಅಚ್ಚರಿ ಹುಟ್ಟಿಸಿರುವುದಲ್ಲದೆ ವ್ಯಾಪಕ ಟೀಕೆಗೂ ಗುರಿಯಾಗಿದೆ. ಕಾನೂನು ತಜ್ಞರು ಮತ್ತು ಬಿಜೆಪಿ ನಾಯಕರು ಸ್ಪೀಕರ್‌ ನಡೆ ಸಂವಿಧಾನಾತ್ಮಕವಾಗಿ ಮತ್ತು ಕಾನೂನು ದೃಷ್ಟಿಕೋನದಿಂದ ಸಮರ್ಪಕವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಶಾಸಕರು ತಿಂಗಳ ಹಿಂದೆಯೇ ರಾಜೀನಾಮೆ ನೀಡಿದ್ದಾರೆ. ಈ ರಾಜೀನಾಮೆಯನ್ನು ನಿಮ್ಮ ವಿವೇಚನೆಯಂತೆ ಇತ್ಯರ್ಥಪಡಿಸಬೇಕೆಂದು ಸುಪ್ರೀಂ ಕೋರ್ಟ್‌ ಹೇಳಿದೆ. ಆದರೆ ರಮೇಶ್‌ ಕುಮಾರ್‌ ರಾಜೀನಾಮೆ ಅರ್ಜಿಗಳನ್ನು ವಿಲೇವಾರಿ ಮಾಡದೆ ದಿಢೀರ್‌ ಎಂದು ಅನರ್ಹತೆಯ ಅಸ್ತ್ರ ಪ್ರಯೋಗಿಸಿರುವುದರ ಹಿಂದೆ ಯಾವ ಲೆಕ್ಕಾಚಾರ ಇದೆ ಎನ್ನುವುದು ಜಿಜ್ಞಾಸೆಗೆ ಅರ್ಹವಾದ ವಿಚಾರ. ರಾಜ್ಯ ಕಂಡ ಅತ್ಯುತ್ತಮ ಸ್ಪೀಕರ್‌ ಎಂದು ಹೆಸರು ಗಳಿಸಿದ್ದ ರಮೇಶ್‌ ಕುಮಾರ್‌ ಈ ಸಲದ ರಾಜಕೀಯ ರಂಪಾಟದಲ್ಲಿ ತನ್ನ ಘನತೆಗೆ ತಕ್ಕಂತೆ ನಡೆದುಕೊಂಡಿಲ್ಲ ಎಂಬ ಅಪವಾದಕ್ಕೂ ಗುರಿಯಾಗಿದ್ದಾರೆ. ಶಾಸಕರ ರಾಜೀನಾಮೆ ಪ್ರಹಸನ ಪ್ರಾರಂಭವಾದ ಬಳಿಕ ಸ್ಪೀಕರ್‌ ನಡೆ ಹೆಜ್ಜೆಗೂ ಹೆಜ್ಜೆಗೂ ಅನುಮಾನ ಹುಟ್ಟಿಸುವಂತಿತ್ತು. ಸ್ಪೀಕರ್‌ ಹುದ್ದೆಗೆ ಆಯ್ಕೆಯಾದವರು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕೆನ್ನುವುದು ಸಂವಿಧಾನದ ಆಶಯ. ಆದರೆ ರಮೇಶ್‌ ಕುಮಾರ್‌ ತನ್ನ ಪಕ್ಷದ ಸರಕಾರವನ್ನು ಉಳಿಸಲು ಪ್ರಯತ್ನಿಸಿದರೇ ಎನ್ನುವ ಅನುಮಾನ ಬರುವುದು ಸಹಜ.

ಶಾಸಕರ ಅನರ್ಹತೆ ವಿಚಾರವನ್ನು ಅಂತಿಮವಾಗಿ ನ್ಯಾಯಾಲಯವೇ ಇತ್ಯರ್ಥಪಡಿಸುತ್ತದೆ. ಸ್ಪೀಕರ್‌ ಕೈಗೊಂಡ ನಿರ್ಧಾರ ಸರಿಯೇ ಅಥವಾ ತಪ್ಪೇ, ಸಂವಿಧಾನ ಬದ್ಧವಾಗಿದೆಯೇ, ನಿಯಮಾವಳಿಗಳಿಗೆ ವಿರುದ್ಧವಾಗಿದೆಯೇ ಎನ್ನುವುದೆಲ್ಲ ನ್ಯಾಯಾಲಯದಲ್ಲಿ ಇತ್ಯರ್ಥವಾಗಬೇಕಾದ ವಿಚಾರಗಳು.

ಆದರೆ ಶಾಸಕರನ್ನು ಅನರ್ಹಗೊಳಿಸುವ ಮೂಲಕ ಪಕ್ಷಾಂತರ ಮಾಡುವವರಿಗೆ ತಕ್ಕ ಪಾಠವೊಂದನ್ನು ಕಲಿಸಿದಂತಾಯಿತು ಎನ್ನುವುದು ಮಾತ್ರ ನಿಜ. ಸ್ಪೀಕರ್‌ ನಿರ್ಧಾರದಿಂದ ಯಾವ ಪಕ್ಷಕ್ಕೆ ಲಾಭವಾಯಿತು, ಯಾವ ಪಕ್ಷಕ್ಕೆ ಹಾನಿಯಾಯಿತು ಎಂದೆಲ್ಲ ಚರ್ಚಿಸುವ ಬದಲು ಒಟ್ಟಾರೆಯಾಗಿ ಪ್ರಜಾತಂತ್ರ ವ್ಯವಸ್ಥೆಯ ಮೇಲೆ ಇದರಿಂದಾಗುವ ಪರಿಣಾಮ ಏನು ಎನ್ನುವುದು ಈ ಸಂದರ್ಭದಲ್ಲಿ ಮುಖ್ಯವಾಗುತ್ತದೆ.

ಅನರ್ಹಗೊಂಡ ಸದಸ್ಯರು ಪಕ್ಷಾಂತರ ನಿಷೇಧ ಕಾಯಿದೆ ಪ್ರಕಾರ ವಿಧಾನಸಭೆಯ ಈ ಅವಧಿ ಮುಗಿಯುವ ತನಕ ಯಾವುದೇ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಹಾಗೂ ಯಾವುದೇ ಸಾಂವಿಧಾನಿಕ ಹುದ್ದೆಯನ್ನು ಹೊಂದುವಂತಿಲ್ಲ.ಚುನಾವಣೆಯಲ್ಲಿ ಒಂದು ಪಕ್ಷದಿಂದ ಗೆದ್ದ ಬಳಿಕ ಸಚಿವ ಸ್ಥಾನ ಸಿಗಲಿಲ್ಲ ಎಂದೋ, ಸರಿಯಾದ ಸ್ಥಾನಮಾನ ಸಿಗಲಿಲ್ಲ ಎಂದೋ ಬಂಡೆದ್ದು , ರಾಜೀನಾಮೆ ಮೂಲಕ ಬ್ಲ್ಯಾಕ್‌ವೆುçಲ್‌ ಮಾಡುವವರಿಗೆ ಈ ರೀತಿಯ ಕ್ರಮಗಳ ಮೂಲಕ ಕಠಿನ ಸಂದೇಶ ರವಾನಿಸುವ ಅಗತ್ಯವಿದೆ.

ಈಗೀಗ ಪಕ್ಷಾಂತರ ಪಿಡುಗು ವ್ಯಾಪಕವಾಗಿ ಹರಡುತ್ತಿದ್ದು, ಈ ಸಂದರ್ಭದಲ್ಲಿ ಸ್ಪೀಕರ್‌ ನಿಭಾಯಿಸಬೇಕಾದ ಪಾತ್ರವೂ ಬಹಳ ಮುಖ್ಯವಾಗುತ್ತದೆ.ಕಠಿನ ನಿರ್ಧಾರಗಳನ್ನು ಕೈಗೊಳ್ಳಬೇಕಾದ ಸಂದರ್ಭದಲ್ಲಿ ಸ್ಪೀಕರ್‌ ಉಭಯಸಂಕಟಕ್ಕೀಡಾಗುವುದು ಸಹಜ. ಸ್ಪೀಕರ್‌ಗೆ ಸಂವಿಧಾನ ಮತ್ತು ನಿಯಮಾವಳಿಗಳ ರಕ್ಷೆಯಿದ್ದರೂ ಕೆಲವೊಮ್ಮೆ ಪ್ರಮಾದಗಳು ಆಗುತ್ತವೆ. ಈ ಹಿನ್ನೆಲೆಯಲ್ಲಿ ಸ್ಪೀಕರ್‌ ಹುದ್ದೆಯನ್ನು ಮರು ವ್ಯಾಖ್ಯಾನಿಸಬೇಕಾದ ಅಗತ್ಯವಿದೆ.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.