842 ರೈತರ ಆತ್ಮಹತ್ಯೆ; ಮನೋಸ್ಥೈರ್ಯ ತುಂಬುವ ಕಾರ್ಯವಾಗಲಿ


Team Udayavani, May 25, 2024, 6:21 AM IST

Farmer

ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ 842 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರು ನಾನಾ ಕಾರಣಗಳಿಗಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಕಳೆದೆರಡು ದಶಕಗಳಿಂದ ಹೆಚ್ಚುತ್ತಲೇ ಸಾಗಿದೆ. ಇದು ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿರದೆ ದೇಶವ್ಯಾಪಿಯಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ಸಂಭವಿಸುತ್ತಲೇ ಇದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ತಜ್ಞರ ಸಮಿತಿಗಳನ್ನು ರಚಿಸಿ, ತರಹೇವಾರಿ ಅಧ್ಯಯನ ನಡೆಸಿದರೂ ಅನ್ನದಾತರ ಆತ್ಮಹತ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ. ಕರ್ನಾಟಕದ ಸ್ಥಿತಿಯೂ ಇದೇ ತೆರನಾಗಿದ್ದು, ರೈತರ ಆತ್ಮಹತ್ಯೆಗೆ ಕಡಿವಾಣ ಹಾಕುವ ನಿಟ್ಟನಲ್ಲಿ ಸರಕಾರ ರೂಪಿಸಿದ ವಿವಿಧ ಯೋಜನೆಗಳು ನಿರೀಕ್ಷಿತ ಫ‌ಲಿತಾಂಶವನ್ನು ನೀಡಿಲ್ಲ.

ರಾಜ್ಯ ಸರ್ಕಾರದ ಅಂಕಿಅಂಶದ ಪ್ರಕಾರ 2013-2022ರ ವರೆಗೆ ರಾಜ್ಯದಲ್ಲಿ 8,245 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳೆ ಹಾನಿ, ಸಾಲದ ಹೊರೆ, ಸಾಲಗಾರರ ಕಾಟ ಇವೇ ಮೊದಲಾದ ಕಾರಣಗಳಿಂದಾಗಿ ರೈತರು ಆತ್ಮಹತ್ಯೆ ಮಾಡಿಕೊಂಡರೆ ಬೆರಳೆಣಿಕೆ ಸಂಖ್ಯೆಯ ಪ್ರಕರಣಗಳಲ್ಲಷ್ಟೇ ವೈಯಕ್ತಿಕ ಸಮಸ್ಯೆಗಳಿಂದಾಗಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2015-20ರ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2015-16ರಲ್ಲಿ 1,525, 2016-17ರಲ್ಲಿ 1,203, 2017-18ರಲ್ಲಿ 323, 2018-19ರಲ್ಲಿ 1,084, 2019-20ರಲ್ಲಿ 1,091 ರೈತರು ಆತ್ಮಹತ್ಯೆಗೆ ಶರಣಾಗಿದ್ದರು. ಆ ಬಳಿಕದ ವರ್ಷಗಳಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆಯಾದರೂ ಈ ಬಾರಿ ಮತ್ತೆ ಒಂದಿಷ್ಟು ಏರಿಕೆ ಕಂಡಿದೆ.

ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಮೇಲ್ನೋಟಕ್ಕೆ ಬರ, ಬೆಳೆ ಹಾನಿಯೇ ಕಾರಣ ಎನ್ನಲಾಗುತ್ತಿದೆಯಾದರೂ ಈ ಬಗ್ಗೆ ವಿಸ್ತೃತ ಅಧ್ಯಯನ ನಡೆಸುವ ಅಗತ್ಯವಿದೆ. ಅನ್ನದಾತರು ಆತ್ಮಹತ್ಯೆಯಂತಹ ಕಠಿನ ನಿರ್ಧಾರಕ್ಕೆ ಬರಲು ಕಾರಣಗಳೇನು ಎಂಬುದರ ಬಗೆಗೆ ಸಮರ್ಪಕ ಅಧ್ಯಯನ ನಡೆಸಿ, ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಮತ್ತು ಇವುಗಳಿಂದ ಮಾನಸಿಕವಾಗಿ ಒತ್ತಡಕ್ಕೆ ಸಿಲುಕಿರುವ ರೈತರಲ್ಲಿ ಮನೋಸ್ಥೈರ್ಯ ತುಂಬುವ ಕಾರ್ಯ ಜಿಲ್ಲಾಡಳಿತಗಳಿಂದಾಗಬೇಕಿದೆ. ಸಾಲದಾತರು ಅದರಲ್ಲೂ ಮುಖ್ಯವಾಗಿ ಲೇವಾದೇವಿದಾರರು ಸಾಲ ವಾಪಸಾತಿಗಾಗಿ ರೈತರಿಗೆ ಕಿರುಕುಳ ನೀಡುತ್ತಿದ್ದಲ್ಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಇನ್ನು ರೈತರು ಪಡೆದ ಸಾಲ ಮರುಪಾವತಿ ವಿಚಾರದಲ್ಲಿ ಒಂದಿಷ್ಟು ಸಂಯಮ ವಹಿಸುವಂತೆ ಮತ್ತು ಸಂದರ್ಭಕ್ಕನುಸಾರ ಮರುಪಾವತಿಗೆ ಕಾಲಾವಕಾಶ ನೀಡುವಂತೆ ವಾಣಿಜ್ಯ ಮತ್ತು ಸಹಕಾರಿ ಬ್ಯಾಂಕ್‌ಗಳಿಗೆ ಸರಕಾರ ಕಟ್ಟುನಿಟ್ಟಿನ ಆದೇಶ ನೀಡಬೇಕು. ಅಗತ್ಯ ಬಿದ್ದಲ್ಲಿ ಸ್ವತಃ ಸರಕಾರವೇ ರೈತರ ಸಾಲದ ಮೊತ್ತಕ್ಕೆ ಭದ್ರತೆಯಾಗಿ ಈ ಬ್ಯಾಂಕ್‌ಗಳಲ್ಲಿ ಠೇವಣಿ ಇರಿಸಬೇಕು. ಇದರಿಂದ ರೈತರ ಮೇಲಿನ ಒತ್ತಡ ಬಹಳಷ್ಟು ಕಡಿಮೆಯಾಗಲಿದೆ.

ಇದರ ಜತೆಯಲ್ಲಿ ವಿವಿಧ ಕಾರಣಗಳಿಂದಾಗಿ ಮಾನಸಿಕವಾಗಿ ಕುಗ್ಗಿರುವ ರೈತರಲ್ಲಿ ಆಶಾವಾದ ಮೂಡಿಸುವ ನಿಟ್ಟಿನಲ್ಲಿ ಕೌನ್ಸೆಲಿಂಗ್‌ ನಡೆಸುವ ಪ್ರಕ್ರಿಯೆಗೆ ಆಯಾಯ ಜಿಲ್ಲಾಡಳಿತಗಳು ಹೆಚ್ಚಿನ ಉತ್ತೇಜನ ನೀಡಬೇಕು. ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಸ್ಥೆಯಿಂದ ಆಲಿಸಿ, ಅವುಗಳಿಗೆ ಪರಿಹಾರೋಪಾಯಗಳನ್ನು ತಿಳಿಹೇಳುವ ಮೂಲಕ ಅವರಲ್ಲಿ ಧೈರ್ಯ ತುಂಬಬೇಕು. ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಾಗಲಾರದು, ಇದರಿಂದ ಅವರ ಕುಟುಂಬ ಮತ್ತಷ್ಟು ಸಂಕಷ್ಟಕ್ಕೆ ತುತ್ತಾಗುತ್ತದೆ ಎಂದು ಮನದಟ್ಟು ಮಾಡುವ ಕಾರ್ಯವಾಗಬೇಕು. ರೈತಾಪಿ ವರ್ಗ ಯಾವುದೇ ತೆರನಾದ ಸಂಕಷ್ಟವನ್ನು ಎದುರಿಸುವಂತಾಗಲು ಸರಕಾರಿ ಇಲಾಖೆಗಳು ಪರಸ್ಪರ ಬೆರಳು ತೋರಿಸಿ, ಹೊಣೆಗಾರಿಕೆಯಿಂದ ನುಣುಚಿಕೊಳ್ಳುವುದರ ಬದಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.

ಟಾಪ್ ನ್ಯೂಸ್

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

1-wqeqwewqe

Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು

sanjay-raut

TDP ಸ್ಪೀಕರ್‌ ಚುನಾವಣೆಗೆ ಸ್ಪರ್ಧಿಸಿದರೆ ಬೆಂಬಲ: ಉದ್ಧವ್‌ ಪಕ್ಷ

MASIDI

Bakrid; ತ್ಯಾಗದ ಮಹತ್ವವನ್ನು ಸಾರುವ ಹಬ್ಬ: ವಿಶ್ವ ಬಾಂಧವ್ಯದ ಪ್ರತೀಕ

1-MPP

Madhya Pradesh:ಡಿಸ್ಟಿಲರಿಯಲ್ಲಿದ್ದ 58 ಬಾಲ ಕಾರ್ಮಿಕರ ರಕ್ಷಣೆ

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಷ್ಯಾದ ಅಮಾನುಷ ರಣನೀತಿಗೆ ವಿದೇಶಿ ಪ್ರಜೆಗಳು ಬಲಿಪಶು!

ರಷ್ಯಾದ ಅಮಾನುಷ ರಣನೀತಿಗೆ ವಿದೇಶಿ ಪ್ರಜೆಗಳು ಬಲಿಪಶು!

Bi-annual Admission: Pros and Cons Let’s discuss

Editorial: ವರ್ಷಕ್ಕೆರಡು ಬಾರಿ ಪ್ರವೇಶಾತಿ: ಸಾಧಕ-ಬಾಧಕ ಚರ್ಚೆಯಾಗಲಿ

Editorial: ಜನತೆಯ ಸಮತೋಲಿತ ತೀರ್ಪನ್ನು ಪಕ್ಷಗಳು ಗೌರವಿಸಲಿ

Editorial: ಜನತೆಯ ಸಮತೋಲಿತ ತೀರ್ಪನ್ನು ಪಕ್ಷಗಳು ಗೌರವಿಸಲಿ

ಪ್ರಜಾತಂತ್ರದ ಮುಕುಟಕ್ಕೆ ಜಾಗತಿಕ ದಾಖಲೆಯ ಗರಿ

ಪ್ರಜಾತಂತ್ರದ ಮುಕುಟಕ್ಕೆ ಜಾಗತಿಕ ದಾಖಲೆಯ ಗರಿ

Exam 2

Public Examination: ವಿವೇಕಯುತ ನಡೆ ಇರಲಿ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

1-wqeqwewqe

Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು

sanjay-raut

TDP ಸ್ಪೀಕರ್‌ ಚುನಾವಣೆಗೆ ಸ್ಪರ್ಧಿಸಿದರೆ ಬೆಂಬಲ: ಉದ್ಧವ್‌ ಪಕ್ಷ

MASIDI

Bakrid; ತ್ಯಾಗದ ಮಹತ್ವವನ್ನು ಸಾರುವ ಹಬ್ಬ: ವಿಶ್ವ ಬಾಂಧವ್ಯದ ಪ್ರತೀಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.