ಪರಿಷತ್‌ನ ಘನತೆ ಎತ್ತಿಹಿಡಿಯುವ ಕೆಲಸವಾಗಲಿ


Team Udayavani, Dec 16, 2021, 6:00 AM IST

ಪರಿಷತ್‌ನ ಘನತೆ ಎತ್ತಿಹಿಡಿಯುವ ಕೆಲಸವಾಗಲಿ

ಪ್ರಜಾಪ್ರಭುತ್ವದಲ್ಲಿ ಲೋಕಸಭೆ, ರಾಜ್ಯಸಭೆ, ರಾಜ್ಯಗಳ ವಿಧಾನಸಭೆ, ವಿಧಾನಪರಿಷತ್‌ಗೆ ತನ್ನದೇ ಆದ ಘನತೆ ಇದೆ. ಇವೆಲ್ಲವೂ ದೇಶದ ಹಿತ ಮತ್ತು ಅಭಿವೃದ್ಧಿಗೆ ಬೇಕಾದ ಶಾಸನ ರೂಪಿಸುವಂಥವು. ಇಲ್ಲಿಗೆ ಆರಿಸಿ ಬರುವವರ ಮೇಲೆಯೂ ಅಂಥದ್ದೇ ಒಂದು ದೊಡ್ಡ ಗೌರವವೂ ಇರುತ್ತದೆ.

ಇತ್ತೀಚಿನ ದಿನಗಳಲ್ಲಿ ಸಂಸತ್‌ ಸೇರಿದಂತೆ ವಿಧಾನಸಭೆ ಅಧಿವೇಶನಗಳಲ್ಲಿ ಚರ್ಚೆಗಿಂತ ಹೆಚ್ಚಾಗಿ ಗದ್ದಲ, ಗಲಾಟೆ ಯೇ ಕಾಣಿಸುತ್ತಿದೆ. ಅದರಲ್ಲೂ ವಿಚಾರವೊಂದನ್ನು ಹಿಡಿದುಕೊಂಡು ಆಡಳಿತ ಮತ್ತು ವಿಪಕ್ಷಗಳು ಸ್ವಪ್ರತಿಷ್ಠೆ ಯಿಂದ ವರ್ತಿಸುತ್ತಿರುವುದೂ ಸಾಮಾನ್ಯ ಸಂಗತಿಯಾಗಿದೆ. ಈಗ ರಾಜ್ಯಸಭೆಯಲ್ಲಿ 12 ಸದಸ್ಯರನ್ನು ಮುಂಗಾರು ಅಧಿವೇಶನದ ಕಡೇ ದಿನ ನಡೆಸಿದ ದಾಂಧಲೆಯ ಕಾರಣಕ್ಕಾಗಿ ಅಮಾನತು ಮಾಡಲಾಗಿದೆ. ಇವರ ಅಮಾನತು ರದ್ದತಿಗಾಗಿ ವಿಪಕ್ಷಗಳು ಸಂಸತ್‌ ಅಧಿವೇಶನದ ಮೊದಲ ದಿನದಿಂದಲೂ ಸದನದ ಹೊರಗೆ ಮತ್ತು ಒಳಗೆ ಪ್ರತಿಭಟನೆ ನಡೆಸಿಕೊಂಡೇ ಬಂದಿವೆ. ಈಗಲೂ ಇದಕ್ಕೆ ಒಂದು ತಾರ್ಕಿಕ ಅಂತ್ಯ ಸಿಕ್ಕಿಲ್ಲ.

ರಾಷ್ಟ್ರಮಟ್ಟದಲ್ಲಿ ಈ ರೀತಿಯಾದರೆ, ರಾಜ್ಯದ ವಿಧಾನಸಭೆ ಮತ್ತು ಪರಿಷತ್‌ ಗದ್ದಲದ ತಾಣಗಳಾಗಿ ಮಾರ್ಪಾಡಾಗಿರುವುದು ಕಂಡು ಬರುತ್ತಿದೆ. ಸದ್ಯ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಸಭಾಪತಿ ಯವರ ಆದೇಶ ಉಲ್ಲಂ ಸಿದ ಕಾರಣಕ್ಕಾಗಿ 14 ಸದಸ್ಯರನ್ನು ಒಂದು ದಿನದ ಮಟ್ಟಿಗೆ ಅಮಾನತು ಮಾಡಲಾಗಿದೆ. ಸ್ವತಃ ಸಭಾಪತಿ ಬಸವರಾಜ ಹೊರಟ್ಟಿಯವರೇ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ:ಎನ್‌ಕೌಂಟರ್‌: ಎ+ ಕೆಟಗರಿಯ ಹಿಜ್ಬುಲ್‌ ಉಗ್ರನ ಹತ್ಯೆ

ಮೊದಲಿನಿಂದಲೂ ರಾಜ್ಯಸಭೆ ಮತ್ತು ವಿಧಾನಪರಿಷತ್‌ ಮೇಲ್ಮನೆ ಎಂದೇ ಹೆಗ್ಗಳಿಕೆ ಪಡೆದಿರುವ ಸದನಗಳು. ಇಲ್ಲಿಗೆ ಆಯ್ಕೆಯಾಗಿ ಬರುವವರು ಹಿರಿಯರು, ಬುದ್ಧಿಜೀವಿಗಳು, ಸಾಕಷ್ಟು ಅರಿತುಕೊಂಡವರು ಎಂಬುದು. ಆದರೆ ಇತ್ತೀಚಿನ ದಿನದಲ್ಲಿ ರಾಜ್ಯಸಭೆ ಮತ್ತು ವಿಧಾನಪರಿಷತ್‌ಗಳಿಗೆ ಈ ವರ್ಗಗಳಿಗಿಂತ ಹೆಚ್ಚಾಗಿ ರಾಜಕೀಯವಾಗಿ ಲೋಕಸಭೆ ಮತ್ತು ವಿಧಾನಸಭೆಗೆ ಪ್ರವೇಸಿಸಲು ಆಗದೇ ಇರುವಂಥವರೇ ಬರುತ್ತಿದ್ದಾರೆ. ಅಷ್ಟೇ ಅಲ್ಲ, ಮಂಗಳವಾರ ವಷ್ಟೇ ಕರ್ನಾಟಕದಲ್ಲಿ ಪರಿಷತ್‌ ಚುನಾವಣೆಯ ಫ‌ಲಿತಾಂಶ ಹೊರಬಿದ್ದಿದ್ದು, ಇದರಲ್ಲಿ 11 ಮಂದಿ ವಿಧಾನಸಭೆ ಯಲ್ಲಿ ಈಗ ಮತ್ತು ಈ ಹಿಂದೆ ಇದ್ದವರ ಕುಟುಂಬಸ್ಥರೇ ಆಗಿದ್ದಾರೆ.

ಈ ಕಾರಣದಿಂದಾಗಿಯೇ ಈಗ ಪರಿಷತ್‌ಗೆ ತಜ್ಞರು, ವಿಚಾರವಾದಿಗಳು, ಹಿರಿಯರು ಬರುತ್ತಿಲ್ಲ. ಇದರ ಬದಲಾಗಿ ಹಿಂಬಾಗಿಲ ಮೂಲಕ ರಾಜಕೀಯದಲ್ಲಿರುವವರೇ ಪ್ರವೇಶಿಸುತ್ತಿದ್ದಾರೆ. ಕೆಳಮನೆಯಲ್ಲಿ ಕಾಣಿಸುವಂಥ ಜಗಳ, ಗದ್ದಲ, ಗಲಾಟೆಗಳು ಮೇಲ್ಮನೆಯಲ್ಲೂ ಹೆಚ್ಚಾಗುತ್ತಿವೆ. ಇದರಿಂದ ಪರಿಷತ್‌ ಘನತೆಗೆ ಕುಂದು ಉಂಟಾಗುತ್ತದೆಯೋ ಹೊರತು, ಬೇರೇನೂ ಅಲ್ಲ.

ಪರಿಷತ್‌ ಅನ್ನು ಮೇಲ್ಮನೆ ಅಥವಾ ಹಿರಿಯರ ಸದನ ಎಂದು ಕರೆದಿರುವ ಕಾರಣಕ್ಕಾದರೂ ಇದರ ಸದಸ್ಯರು ಜವಾಬ್ದಾರಿಯಿಂದ ವರ್ತಿಸಬೇಕು. ಸರಕಾರಗಳು ಕೆಳಮನೆಯಲ್ಲಿ ಅನುಮೋದನೆ ನೀಡುವ ಮಸೂದೆಗಳಿಗೆ, ಇಲ್ಲಿ ಒಂದು ಚರ್ಚೆ ಮಾಡಿ, ಅದರ ಸಾಧಕ

ಬಾಧಕಗಳ ಕುರಿತಂತೆ ಅವಲೋಕಿಸಿ, ಸಾಧ್ಯವಾದಷ್ಟು ಸಲಹೆ ಸೂಚನೆಗಳನ್ನು ನೀಡುವಂತಿರಬೇಕು. ಇದಕ್ಕೆ ಬದಲಾಗಿ ಗದ್ದಲವೇ ಕಲಾಪ ಕೇಂದ್ರಿತವಾಗಬಾರದು.

ಟಾಪ್ ನ್ಯೂಸ್

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

14-editorial

Campaigns: ಪ್ರಚಾರದಲ್ಲಿ ದ್ವೇಷ ಭಾಷಣ: ಸ್ವಯಂ ನಿಯಂತ್ರಣ ಅಗತ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.