ರೈತ ಕಾಯ್ದೆಗಳ ಹಿಂದೆಗೆತ ಚುನಾವಣ ತಂತ್ರವಾಗದಿರಲಿ


Team Udayavani, Nov 20, 2021, 6:40 AM IST

ರೈತ ಕಾಯ್ದೆಗಳ ಹಿಂದೆಗೆತ ಚುನಾವಣ ತಂತ್ರವಾಗದಿರಲಿ

ಅಂತೂ ರೈತರ ಪ್ರತಿಭಟನೆಗೆ ಮಣಿದಿರುವ ಕೇಂದ್ರ ಸರಕಾರ ಮೂರು ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆದಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಶುಕ್ರವಾರ ಬೆಳಗ್ಗೆ ಗುರುನಾನಕ್‌ ಜಯಂತಿ ಭಾಷಣದ ವೇಳೆ ಈ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಘೋಷಿಸಿದ್ದಾರೆ. ಅಷ್ಟೇ ಅಲ್ಲ, ಒಂದು ವರ್ಗದ ರೈತರ ಮನವೊಲಿಕೆ ಮಾಡುವಲ್ಲಿ ನಾವು ವಿಫ‌ಲರಾಗಿದ್ದೇವೆ ಎಂದಿರುವ ಅವರು ಈ ಕುರಿತಂತೆ ರೈತರ ಕ್ಷಮೆಯನ್ನೂ ಕೇಳಿದ್ದಾರೆ.

ಸರಿಸುಮಾರು ಕಳೆದ ಒಂದು ವರ್ಷದಿಂದಲೂ ಈ ಮೂರು ಕಾಯ್ದೆಗಳನ್ನು ವಿರೋಧಿಸಿ ಉತ್ತರ ಭಾರತದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆಯೇ ನಡೆದಿತ್ತು. ಆರಂಭದಲ್ಲಿ ಪಂಜಾಬ್‌ ಮತ್ತು ಹರಿಯಾಣದ ರೈತರು ಈ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ಆರಂಭಿಸಿದ್ದರೆ  ಅನಂತರದಲ್ಲಿ ಇದು ಉತ್ತರ ಪ್ರದೇಶಕ್ಕೂ ವ್ಯಾಪಿಸಿತ್ತು. ಅಲ್ಲದೆ

ಪ್ರತಿಭಟನ ಸ್ಥಳದಲ್ಲಿಯೇ ನೂರಾರು ರೈತರು ಪ್ರಾಣವನ್ನೂ ಕಳೆದುಕೊಳ್ಳುವಂತಾಯಿತು.

ಕಳೆದ ವರ್ಷದ ಸೆಪ್ಟಂಬರ್‌ನಲ್ಲಿ ಜಾರಿಗೆ ಬಂದ ಈ ಈ ಕೃಷಿ ಕಾಯ್ದೆಗಳ ವಿರುದ್ಧ ನ.25ರಂದು ದಿಲ್ಲಿ ಚಲೋ ಹೆಸರಿನಲ್ಲಿ ಪಂಜಾಬ್‌ ಮತ್ತು ಹರಿಯಾಣದ ರೈತರು ಪ್ರತಿಭಟನೆ ಆರಂಭಿಸಿದ್ದರು. ಅಲ್ಲಿಂದ ಜನವರಿ ವರೆಗೆ ಸುಮಾರು ಏಳು ಸುತ್ತು ಕೇಂದ್ರ ಮತ್ತು ರೈತರ ನಡುವೆ ಮಾತುಕತೆಯೂ ನಡೆದಿತ್ತು. ಇದರ ಮಧ್ಯೆಯೇ ಸುಪ್ರೀಂ ಕೋರ್ಟ್‌ನಲ್ಲೂ ಕಾಯ್ದೆಗಳ ವಿರುದ್ಧ ಅರ್ಜಿ ಹಾಕಲಾಗಿದ್ದು, ಈ ಮೂರನ್ನು ಜಾರಿ ಮಾಡದಂತೆ ಕೋರ್ಟ್‌ ಆದೇಶ ನೀಡಿ, ಸಮಿತಿಯೊಂದನ್ನೂ ರಚಿಸಿತ್ತು.

ಇದನ್ನೂ ಓದಿ:ಸಮಾನ ನಾಗರಿಕ ಸಂಹಿತೆ ಜಾರಿ ಮಾಡಿ: ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

ರೈತರ ಪ್ರತಿಭಟನೆ ಆರಂಭವಾಗಿ ಈಗಾಗಲೇ ವರ್ಷ ಕಳೆಯಿತು. ಇಂಥ ಸಮಯದಲ್ಲೇ ಕೇಂದ್ರ ಸರಕಾರ ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆದುಕೊಳ್ಳುವ ತೀರ್ಮಾನ ಮಾಡಿದೆ. ತಜ್ಞರು ಹೇಳುವಂತೆ ಈ ಕಾಯ್ದೆಗಳ ವಿಚಾರದಲ್ಲಿ ಕೇಂದ್ರ ಸರಕಾರ ಕೆಲವೊಂದು ತಪ್ಪು ಹೆಜ್ಜೆ ಇಟ್ಟಿತು. ಅಂದರೆ ಈ ಕಾಯ್ದೆಗಳ ಫ‌ಲಾನುಭವಿಗಳು, ಅಂದರೆ ರೈತ ಸಂಘಟನೆಗಳ ಜತೆಗೆ ಮೊದಲು ಮಾತನಾಡಿ ಬಳಿಕ ಇವುಗಳ ಅಂಗೀಕಾರ ಮಾಡಬಹುದಿತ್ತು. ಹಾಗೆಯೇ ಸಂಸತ್‌ನಲ್ಲೂ ಸ್ಥಾಯೀ ಸಮಿತಿಗೆ ಮಸೂದೆಗಳನ್ನು ಕಳುಹಿಸಿ ಒಂದಷ್ಟು ದಿನ ಸಾಧ್ಯಾಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಬಹುದಿತ್ತು.

ಒಂದು ಲೆಕ್ಕಾಚಾರದಲ್ಲಿ ಈ ಮೂರು ಕಾಯ್ದೆಗಳು ರೈತರ ಪರವಾಗಿದ್ದರೂ ಅವಸರ ರೀತಿಯಲ್ಲಿ ಜಾರಿ ಮಾಡಿದ್ದರಿಂದ ರೈತರು ಅನಗತ್ಯ ಗೊಂದಲಕ್ಕೆ ಒಳಗಾದರು. ಹಾಗೆಯೇ ಈ ಕಾಯ್ದೆಗಳಿಂದಾಗುವ ಅನುಕೂಲಗಳ ಬಗ್ಗೆ ಅರಿವು ಮೂಡಿಸುವಲ್ಲಿ ಕೇಂದ್ರ ಸರಕಾರ ವಿಫ‌ಲವಾಯಿತು ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ.

ಕಾಯ್ದೆಗಳನ್ನು ವಾಪಸ್‌ ಪಡೆದ ಮೇಲೆ ವಿಪಕ್ಷಗಳ ನಾಯಕರು, ಮುಂಬರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ  ಈ ಕ್ರಮ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಅದರಲ್ಲಿಯೂ ಉತ್ತರ ಪ್ರದೇಶ ಮತ್ತು ಪಂಜಾಬ್‌ ಚುನಾವಣೆಯ ಮೇಲೆ ಗಮನ ಇರಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಹೀಗಾಗಿ, ಕೇಂದ್ರ ಸರಕಾರ ಈಗ ತೆಗೆದುಕೊಂಡಿರುವ ನಿರ್ಧಾರ ಚುನಾವಣ ತಂತ್ರವಾಗಬಾರದು. ಇದಕ್ಕೆ ಬದಲಾಗಿ ಮುಂದಿನ ದಿನಗಳಲ್ಲಿ ಭಾಗೀದಾರರು ಮತ್ತು ರಾಜ್ಯ ಸರಕಾರಗಳ ಜತೆ ಮಾತುಕತೆ ನಡೆಸಿ ಕೃಷಿ ಸುಧಾರಣೆಗೆ ಮನಸ್ಸು ಮಾಡಬೇಕು.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.