KEA ನ್ಯಾಯಸಮ್ಮತವಾಗಿ ಪಿಎಸ್‌ಐ ಪರೀಕ್ಷೆ ನಡೆಸಲಿ


Team Udayavani, Nov 17, 2023, 5:20 AM IST

Exam 2

ಪರೀಕ್ಷಾ ಅಕ್ರಮದಿಂದಾಗಿ ಭಾರೀ ವಿವಾದಕ್ಕೀಡಾಗಿದ್ದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗಳ ನೇಮಕಾತಿ ಪರೀಕ್ಷೆಯನ್ನು ನಡೆಸುವ ಹೊಣೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಡಿಲಿಗೆ ಬಿದ್ದಿದೆ. ಇತ್ತೀಚೆಗಷ್ಟೇ ಪಿಎಸ್‌ಐ ಮರು ಪರೀಕ್ಷೆಗೆ ಆದೇಶಿಸಿದ್ದ ಹೈಕೋರ್ಟ್‌, ಸ್ವತಂತ್ರ ಸಂಸ್ಥೆಗೆ ಪರೀಕ್ಷಾ ಹೊಣೆ ನೀಡುವಂತೆ ರಾಜ್ಯ ಸರಕಾರಕ್ಕೆ ಹೇಳಿತ್ತು. ಹೀಗಾಗಿ ಬುಧವಾರವಷ್ಟೇ ರಾಜ್ಯ ಸರಕಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪರೀಕ್ಷೆ ನಡೆಸುವ ಹೊಣೆಗಾರಿಕೆ ನೀಡಿದೆ.

2021ರ ಜ.21ರಂದು ಪಿಎಸ್‌ಐ ಪರೀಕ್ಷೆಗೆ ಅಧಿಸೂಚನೆ ಹೊರಟಿದ್ದು, ಅದೇ ವರ್ಷದ ಅ.3ರಂದು 92 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಆಗ ದೈಹಿಕ ಸಾಮರ್ಥ್ಯ ಪರೀಕ್ಷೆ ಬಳಿಕ 54,103 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. 2022ರ ಜ.19ರಂದು ಪ್ರಾವಿಷನಲ್‌ ಪಟ್ಟಿ ಬಿಡುಗಡೆಯಾಗಿತ್ತು. ಆದರೆ ಪರೀಕ್ಷೆ ಬರೆದಿದ್ದ ಕೆಲವು ಅಭ್ಯರ್ಥಿಗಳು ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ದೂರು ನೀಡಿದ್ದರಿಂದ ರಾಜ್ಯ ಸರಕಾರ ಸಿಐಡಿ ತನಿಖೆಗೆ ಆದೇಶ ನೀಡಿತ್ತು. ತನಿಖೆ ಆರಂಭಿಸಿದ್ದ ಸಿಐಡಿ, ಆರ್‌.ಡಿ.ಪಾಟೀಲ್‌ ಸೇರಿದಂತೆ ಹಲವು ಮಂದಿ ಆರೋಪಿಗಳು, ಪೊಲೀಸರು ಮತ್ತು ಎಡಿಜಿಪಿ ಅಮೃತ್‌ ಪೌಲ್‌ ಅವರನ್ನು ಬಂಧಿಸಿತ್ತು.

ಭಾರೀ ಪ್ರಮಾಣದ ಅಕ್ರಮ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮರು ಪರೀಕ್ಷೆಗೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಕೆಲವು ಅಭ್ಯರ್ಥಿಗಳು ಕೆಎಟಿ ಮೊರೆ ಹೋಗಿದ್ದರು. ಅಲ್ಲದೆ ಹೈಕೋರ್ಟ್‌ಗೂ ಅರ್ಜಿ ಸಲ್ಲಿಕೆಯಾಗಿದ್ದು, 2022ರ ಸೆ.28 ರಂದು ಮರು ಪರೀಕ್ಷೆ ನಡೆಸದಂತೆ ಸೂಚಿಸಿತ್ತು. ಆದರೆ ಇತ್ತೀಚೆಗಷ್ಟೇ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸುವಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡಿತ್ತು. ಈ ಮೂಲಕ ವಂಚನೆಗೊಳಗಾಗಿದ್ದ ಅಭ್ಯರ್ಥಿಗಳಿಗೆ ಸಮಾಧಾನ ನೀಡಿತ್ತು.

ಈಗ ರಾಜ್ಯ ಸರಕಾರ ಕೆಇಎಗೆ ಪರೀಕ್ಷಾ ಹೊಣೆ ಹೊರಿಸಿರುವುದರಿಂದ ಬಹುದೊಡ್ಡ ಜವಾಬ್ದಾರಿ ಈ ಸಂಸ್ಥೆ ಮೇಲೆ ಬಿದ್ದಂತಾಗಿದೆ. ಈಗಾಗಲೇ ಎಫ್ಡಿಎ ಪರೀಕ್ಷೆ ವೇಳೆ ಅಕ್ರಮಗಳಾಗಿರುವ ಬಗ್ಗೆ ಆರೋಪಗಳು ಕೇಳಿಬಂದಿದ್ದು ಮತ್ತೆ ಆರ್‌.ಡಿ.ಪಾಟೀಲ್‌ನನ್ನು ಬಂಧಿಸಲಾಗಿದೆ. ಇದರ ಮಧ್ಯೆಯೇ ಹೊಸ ಪರೀಕ್ಷೆ ನಡೆಸಬೇಕಾಗಿರುವುದರಿಂದ ಮೈಯೆಲ್ಲ ಎಚ್ಚರಿಕೆಯಿಂದ ಇರಬೇಕಾದದ್ದು ಅನಿವಾರ್ಯವಾಗಿದೆ.

ಸದ್ಯ ಕೆಇಎಗೆ ಸಿಇಟಿ ಜತೆಗೆ, ಸಹಾಯಕ ಪ್ರಾಧ್ಯಾಪಕರು, ಉಪನ್ಯಾಸಕರು, ಪಿಡಿಒ, ಸಿವಿಲ್‌ ನ್ಯಾಯಾಧೀಶರು ಸೇರಿದಂತೆ ನಿಗಮ ಮಂಡಳಿಗಳ ನೇಮಕಾತಿ ಪರೀಕ್ಷೆ ನಡೆಸಿದ ಅನುಭವವಿದೆ. ಹೀಗಾಗಿ ಈ ಪರೀಕ್ಷೆಯನ್ನೂ ಸರಿಯಾಗಿ ನಡೆಸಲಿದೆ ಎಂಬ ನಂಬಿಕೆ ಸರಕಾರದ್ದು. ಈಗ ಪಿಎಸ್‌ಐ ನೇಮಕಾತಿ ಪರೀಕ್ಷೆ ಮತ್ತು ಪಿಡಿಎ ಪರೀಕ್ಷೆಯಲ್ಲಿನ ಅಕ್ರಮಗಳಿಂದಾಗಿ, ಜನರಲ್ಲಿ ಸರಕಾರಗಳು ನಡೆಸುವ ನೇಮಕಾತಿ ಪರೀಕ್ಷೆಗಳ ಮೇಲೆ ಅಪನಂಬಿಕೆ ಮೂಡುವಂತಾಗಿದೆ. ಈ ಅಪನಂಬಿಕೆ ಹೋಗಬೇಕಾದರೆ ನ್ಯಾಯ ಸಮ್ಮತವಾಗಿ ಮತ್ತು ಶಿಸ್ತುಬದ್ಧವಾಗಿ ಪರೀಕ್ಷೆ ನಡೆಯಲೇಬೇಕು. ಇಲ್ಲದಿದ್ದರೆ ಸರಕಾರಿ ಹುದ್ದೆಗಳು ಕಾಸಿದ್ದವರಿಗೆ ಮಾತ್ರ ಎಂಬ ಮಾತು ನಿಜವಾಗುವ ಎಲ್ಲ ಅಪಾಯಗಳು ಇರುತ್ತವೆ. ಯಾರ ಮರ್ಜಿಗೂ ಬೀಳದಂತೆ, ಪಾರದರ್ಶಕವಾಗಿ ಪರೀಕ್ಷೆ ನಡೆಸಿದರೆ ಮಾತ್ರ ಜನರ ನಂಬಿಕೆ ವಾಪಸ್‌ ಬರಲು ಸಾಧ್ಯವಾಗುತ್ತದೆ. ಅಲ್ಲದೆ ಈ ಹಿಂದೆ ಪರೀಕ್ಷಾ ಅಕ್ರಮ ನಡೆಸಿದವರ ಮೇಲೆ ಕಟ್ಟುನಿಟ್ಟಿನ ನಿಗಾ ಇರಿಸಿ, ಪರೀಕ್ಷೆ ಹೊತ್ತಲ್ಲಿ ಇವರ ಆಟ ನಡೆಯದಂತೆ ನೋಡಿಕೊಳ್ಳುವ ಜವಾಬ್ದಾರಿಯೂ ಸರಕಾರದ ಮೇಲಿದೆ ಎಂಬುದನ್ನು ಮರೆಯಬಾರದು. ಕೆಇಎ ತನ್ನ ಮೇಲಿನ ನಂಬಿಕೆ ಉಳಿಸಿಕೊಳ್ಳಲು ಇದೊಂದು ಅವಕಾಶ ಎಂಬಂತೆ ಪರಿಗಣಿಸಬೇಕು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.