ಸಿಎಂ ಸಲಹೆಯನ್ನು ಕೆಎಂಎಫ್ ಗಂಭೀರವಾಗಿ ಪರಿಗಣಿಸಲಿ


Team Udayavani, Oct 1, 2021, 6:00 AM IST

ಸಿಎಂ ಸಲಹೆಯನ್ನು ಕೆಎಂಎಫ್ ಗಂಭೀರವಾಗಿ ಪರಿಗಣಿಸಲಿ

ಕರ್ನಾಟಕ ಹಾಲು ಮಹಾಮಂಡಳಿಯಿಂದ ಹಾಲು ಉತ್ಪಾದಕರಿಗಾಗಿಯೇ ಪ್ರತ್ಯೇಕ ಬ್ಯಾಂಕ್‌ ಸ್ಥಾಪಿಸಬೇಕೆಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿರುವ ಸಲಹೆ ಸಹಕಾರ ವಲಯದಲ್ಲಿ ಒಂದು ವಿಭಿನ್ನ ಚಿಂತನೆಯನ್ನು ಹುಟ್ಟು ಹಾಕಿದೆ. ಈಗಾಗಲೇ ರಾಜ್ಯದಲ್ಲಿ ಸಾಕಷ್ಟು ಸಹಕಾರ ಬ್ಯಾಂಕ್‌ಗಳು ಕಾರ್ಯನಿರ್ವ­ಹಿಸುತ್ತಿರುವಾಗ ಹೈನುಗಾರರಿಗಾಗಿಯೇ ಪ್ರತ್ಯೇಕ ಬ್ಯಾಂಕ್‌ ಸ್ಥಾಪಿಸು ವಂತೆ ಮುಖ್ಯಮಂತ್ರಿ ಕೆಎಂಎಫ್ಗೆ ಸಲಹೆ ನೀಡಿದ್ದೇ ಅಲ್ಲದೆ ಇದಕ್ಕಾಗಿ 100 ಕೋಟಿ ರೂ.ಗಳ ಮೂಲ ಬಂಡವಾಳವನ್ನು ಸರಕಾರ ನೀಡಲಿದೆ ಎಂಬ ಭರವಸೆ ನೀಡಿದ್ದಾರೆ. ಹಾಲು ಉತ್ಪಾದಕರ ಬ್ಯಾಂಕ್‌ ಸ್ಥಾಪನೆ ಯಾದದ್ದೇ ಆದಲ್ಲಿ ರಾಜ್ಯದಲ್ಲಿ ಕಾರ್ಯನಿರ್ವಹಿ­ಸುತ್ತಿರುವ ಎಲ್ಲ ಹಾಲು ಉತ್ಪಾದಕ ಒಕ್ಕೂಟಗಳನ್ನು ಸ್ವಾವಲಂಬಿಯಾಗಿ­ಸಲು ಸಾಧ್ಯ ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟಿದ್ದಾರೆ.

ಕೆಎಂಎಫ್ ಇಂಥ ಒಂದು ಬ್ಯಾಂಕ್‌ ಸ್ಥಾಪಿಸಿದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಹಣಕಾಸು ವಹಿವಾಟುಗಳ ನಿರ್ವಹಣೆ ಸುಲಭ­ವಾಗಲಿದೆ. ಇದರಿಂದ ರಾಜ್ಯದಲ್ಲಿ ಹೈನೋದ್ಯಮ ಇನ್ನಷ್ಟು ಅಭಿವೃದ್ಧಿ ಹೊಂದಲಿದೆ. ಬ್ಯಾಂಕ್‌ ಸ್ಥಾಪನೆಗೆ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಕೆಎಂಎಫ್ ಹೊಂದಿದ್ದು ಇದನ್ನು ಬಳಸಿಕೊಂಡದ್ದೇ ಆದಲ್ಲಿ ಹಾಲು ಉತ್ಪಾದಕರ ಸಹಕಾರ ಒಕ್ಕೂಟಗಳು ಆರ್ಥಿಕವಾಗಿ ಮತ್ತಷ್ಟು ಸದೃಢವಾಗಿ ಮುನ್ನಡೆಯಬಹುದು. ಆರಂಭದಲ್ಲಿ ಸರಕಾರ ಬಂಡವಾಳ ಹೂಡುವ ಮೂಲಕ ಕೆಎಂಎಫ್ಗೆ ನೆರವಾಗಲಿದೆ.  ಬಳಿಕ ಕೆಎಂಎಫ್ ಈ ಬ್ಯಾಂಕ್‌ನ್ನು ಮುನ್ನಡೆಸಿಕೊಂಡು ಹೋಗಬೇಕು ಎಂಬ ಕಿವಿಮಾತನ್ನೂ ಹೇಳಿದ್ದಾರೆ.

ಸದ್ಯ ರಾಜ್ಯದಲ್ಲಿ 14 ಸಾವಿರ ಹಾಲು ಉತ್ಪಾದಕ ಸಂಘಗಳು ಕಾರ್ಯ­ನಿರ್ವಹಿಸುತ್ತಿದ್ದು ಸರಿಸುಮಾರು 25 ಲಕ್ಷ ಮಂದಿ ಸದಸ್ಯರಿದ್ದಾರೆ. ಕೆಎಂಎಫ್ ತನ್ನದೇ ಆದ ಬ್ಯಾಂಕ್‌ ಹೊಂದಿದಲ್ಲಿ ಹಾಲು ಉತ್ಪಾದಕರಿಗೆ ಹೈನುಗಾರಿಕಾ ಚಟುವಟಿಕೆಗಳಿಗೆ ಸಾಲ ಆದಿಯಾಗಿ ಇನ್ನಿತರ ಹಣಕಾಸು ನೆರವನ್ನು ನೀಡಲು ಸುಲಭ ಸಾಧ್ಯವಾಗಲಿದೆ. ಇದರಿಂದ ಹೈನುಗಾರರು ತಮ್ಮ ಚಟುವಟಿಕೆಗಳನ್ನು ಇನ್ನಷ್ಟು ವಿಸ್ತರಿಸ ಬಯಸಿದರೆ ಅವರಿಗೆ ಅನುಕೂಲವಾಗಲಿದೆಯಲ್ಲದೆ ಹೈನುಗಾರಿಕೋದ್ಯಮವೂ ಇನ್ನಷ್ಟು ಪ್ರಗತಿ ಕಾಣಲಿದೆ.  ಜತೆಗೆ ಹಾಲು ಉತ್ಪಾದಕರೂ ತಮ್ಮ ವ್ಯವಹಾರ ಗಳಿಗಾಗಿ ಇತರ ಬ್ಯಾಂಕ್‌ಗಳಿಗೆ ಅಲೆದಾಡುವುದು ತಪ್ಪಲಿದೆ. ಆದರೆ ಇಂತಹ ಬ್ಯಾಂಕ್‌ ಸ್ಥಾಪನೆಯ ಸಂದರ್ಭದಲ್ಲಿ ಅದರ ಭವಿಷ್ಯದ ದೃಷ್ಟಿ ಯಿಂದ ಅಲ್ಲಿನ ಒಟ್ಟಾರೆ ಆಡಳಿತ ವ್ಯವಸ್ಥೆಯ ಮೇಲೆ ಸರಕಾರ ಹದ್ದು ಗಣ್ಣಿರಿಸಬೇಕಿದೆ. ಹಾಗೆಂದ ಮಾತ್ರಕ್ಕೆ ಬ್ಯಾಂಕ್‌ನ ಕಾರ್ಯ ನಿರ್ವಹಣೆ ಯಲ್ಲಿ ಸರಕಾರದ ಹಸ್ತಕ್ಷೇಪ ಸಲ್ಲದು. ಇಲ್ಲವಾದಲ್ಲಿ ಸದ್ಯ ರಾಜ್ಯದಲ್ಲಿ ಕಾರ್ಯನಿರ್ವಹಿಸು­ತ್ತಿರುವ ಬಹುತೇಕ ಸಹಕಾರ ಬ್ಯಾಂಕ್‌ಗಳ ಮಾದರಿಯಲ್ಲೇ ಹಾಲು ಉತ್ಪಾದಕರ ಬ್ಯಾಂಕ್‌ ಕೂಡ ರಾಜಕೀಯ ಮೇಲಾಟಕ್ಕೆ ವೇದಿಕೆಯಾ­ಗುವ ಸಾಧ್ಯತೆ ಇದೆ.

ಮುಖ್ಯಮಂತ್ರಿ  ನೀಡಿರುವ ಸಲಹೆಯನ್ನು ಕೆಎಂಎಫ್  ಗಂಭೀರ ವಾಗಿ ಪರಿಗಣಿಸುವುದು ಸೂಕ್ತ. ಪ್ರತಿಯೊಂದು ಬಾರಿಯೂ ಸರಕಾರದ ಮುಂದೆ ಬೇಡಿಕೆಗಳ ಪಟ್ಟಿಯನ್ನು ಇರಿಸಬೇಕಾದ ಅನಿವಾರ್ಯತೆಯಲ್ಲಿ ಸಿಲುಕಿರುವಾಗ ಬ್ಯಾಂಕ್‌ ಸ್ಥಾಪನೆಯಂಥ ನಿರ್ಧಾರ ಕೈಗೊಳ್ಳುವ ಕುರಿತು ಚರ್ಚೆ ನಡೆಸುವುದು ಆವಶ್ಯಕ. ಈ ವಿಚಾರವಾಗಿ ಕೆಎಂಎಫ್ ರಾಜ್ಯದ ಎಲ್ಲ ಹಾಲು ಉತ್ಪಾದಕರ ಸಹಕಾರ ಸಂಘಗಳು, ಸಂಘಗಳ ಒಕ್ಕೂಟ ಗಳೊಂದಿಗೆ  ಸಮಾಲೋಚನೆ ನಡೆಸಿ ಮುಂದಡಿ ಇಡಲಿ.

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.