ಎಚ್ಚರಿಕೆ ನಡುವೆ ಶೈಕ್ಷಣಿಕ ಚಟುವಟಿಕೆ ನಡೆಯಲಿ


Team Udayavani, Feb 1, 2022, 6:00 AM IST

ಎಚ್ಚರಿಕೆ ನಡುವೆ ಶೈಕ್ಷಣಿಕ ಚಟುವಟಿಕೆ ನಡೆಯಲಿ

ಕೊರೊನಾ ಮೂರನೇ ಅಲೆಯಲ್ಲಿ ಆತಂಕ ತಗ್ಗುತ್ತಿದ್ದಂತೆ ಬೆಂಗಳೂರಿನಲ್ಲಿ ತಿಂಗಳ ಬಳಿಕ ಶಾಲಾ-ಕಾಲೇಜುಗಳು ಸೋಮವಾರದಿಂದ ಆರಂಭವಾಗಿವೆ. ಉಳಿದೆಡೆಗಳಲ್ಲಿ ಆತಂಕದ ನಡುವೆಯೇ ಶೈಕ್ಷಣಿಕ ಚಟುವಟಿಕೆಗಳು ನಡೆಯುತ್ತಿವೆ. ಕೆಲವು ಶಾಲಾ ಕಾಲೇಜುಗಳಿಂದ ಅನಾರೋಗ್ಯದ ವರದಿಗಳು ಬರುತ್ತಿದ್ದು, ಈ ನಿಟ್ಟಿನಲ್ಲಿ ಇದು ಎಲ್ಲರೂ ಎಚ್ಚರ ವಹಿಸಿಕೊಳ್ಳಬೇಕಾದ ಸಮಯ.

ಕೊರೊನಾ ಮೂರನೇ ಅಲೆ ಸಂಪೂರ್ಣವಾಗಿ ನಿವಾರಣೆಯಾಗಿಲ್ಲ. ಹೀಗಾಗಿ ಮುನ್ನಚ್ಚರಿಕೆ ಅನಿವಾರ್ಯ. ಶಾಲಾ-ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರು, ಹೆತ್ತವರು ಹಾಗೂ ವಿದ್ಯಾರ್ಥಿಗಳು ಎಲ್ಲರೂ ಈ ಬಗ್ಗೆ ಜಾಗೃತಿವಹಿಸಬೇಕು. ಮಕ್ಕಳಲ್ಲಿ ಸಣ್ಣಪುಟ್ಟ ಆರೋಗ್ಯ ಸಮಸ್ಯೆ ಎದುರಾದರೂ ಆತಂಕ ಇದ್ದೇ ಇರುತ್ತದೆ. ಹೀಗಾಗಿ ಸರಕಾರಿ ಹಾಗೂ ಖಾಸಗಿ ಶಾಲೆಗಳ ಮುಖ್ಯಸ್ಥರು ಸ್ವತ್ಛತೆ ಹಾಗೂ ಸುರಕ್ಷತೆ ಬಗ್ಗೆ ಹೆಚ್ಚು ಗಮನಹರಿಸಬೇಕು. ಮುಂದಿನ ಎರಡು -ಮೂರು ತಿಂಗಳು ಪರೀಕ್ಷೆ ಸಮಯ.

ಹೀಗಾಗಿ ವಿದ್ಯಾರ್ಥಿಗಳು ಒಂದೆಡೆ ಸೇರುವುದು ಸಹಜ. ಆದರೆ ಇದರಿಂದ ಆರೋಗ್ಯಕ್ಕೆ ತೊಂದರೆಯಾಗದಂತೆ ನೋಡಿ ಕೊಳ್ಳಬೇಕಾಗಿದೆ. ಸರಕಾರದ ನಿಯಮ ಪಾಲನೆ ಒಂದು ಕಡೆ. ಸ್ವಯಂ ನಿಯಂತ್ರಣ ಹಾಗೂ ನಿರ್ಬಂಧಗಳ ಮೂಲಕ ಕೊರೊನಾ ಅಷ್ಟೇ ಅಲ್ಲದೆ ಇತರ ಆರೋಗ್ಯ ಸಮಸ್ಯೆಗಳು ಮಕ್ಕಳನ್ನು, ವಿದ್ಯಾರ್ಥಿಗಳನ್ನು ಬಾಧಿಸದಂತೆ ಎಚ್ಚರಿಕೆ ವಹಿಸಬೇಕಿದೆ. ವಿದ್ಯಾರ್ಥಿ ಸಮೂಹ ಅಷ್ಟೇ ಅಲ್ಲದೆ ಶಿಕ್ಷಕ ಹಾಗೂ ಬೋಧಕೇತರ ಸಿಬಂದಿಯೂ ಕೊರೊನಾ ಸೋಂಕಿನಿಂದ ಬಳಲುತ್ತಿದ್ದು ಅವರ ಆರೋಗ್ಯವೂ ಮುಖ್ಯ. ಸರಕಾರವು ಶಾಲಾ- ಕಾಲೇಜು ಆರಂಭದ ತೀರ್ಮಾನ ಕೈಗೊಂಡಿರುವುದು ಒಳ್ಳೆಯ ಕ್ರಮ. ಜತೆಗೆ ಜತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು.

ಶಾಲಾ- ಕಾಲೇಜುಗಳಲ್ಲಿ ಪಾಲಿಸಬೇಕಾದ ನಿಯಮಗಳ ಬಗ್ಗೆ ಹೊರಡಿಸಲಾದ ಪ್ರತ್ಯೇಕ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ನೋಡಿಕೊಳ್ಳುವುದು ಶಾಲಾ ಆಡಳಿತ ಮಂಡಳಿ ಮತ್ತು ಸಂಬಂಧಿತ ವಲಯದ ಅಧಿಕಾರಿಗಳ ಜವಾಬ್ದಾರಿ. ಜತೆಗೆ ಹೆತ್ತವರಿಗೂ ತಿಳಿವಳಿಕೆ ಮೂಡಿಸಬೇಕು.

ಮೊದಲ ಹಾಗೂ ಎರಡನೇ ಅಲೆಯ ಅನುಭವದ ಆಧಾರದ ಮೇಲೆ ಸಾಕಷ್ಟು ಕ್ರಮ ಕೈಗೊಂಡರೂ ಮೂರನೇ ಅಲೆ ಸಂದರ್ಭದಲ್ಲೂ ಸ್ವಲ್ಪ ಮಟ್ಟಿಗೆ ಸಮಸ್ಯೆಯಾಯಿತು. ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಾಗದಂತೆ ನೋಡಿಕೊಂಡು ಶೈಕ್ಷಣಿಕ ಚಟುವಟಿಕೆಗಳು ಯಥಾ ಪ್ರಕಾರ ನಡೆದು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಯಾವುದೇ ಅಡೆ-ತಡೆ ಎದುರಾಗದಂತೆ ಎಚ್ಚರಿಕೆ ವಹಿಸಬೇಕಾಗಿದೆ. ಹಾಗೆಯೇ 15ರಿಂದ 18ರ ವರೆಗಿನ ವಯೋಮಾನದ (ಹತ್ತನೇ ತರಗತಿಯಿಂದ ದ್ವಿತೀಯ ಪಿಯು ತನಕ) ವಿದ್ಯಾರ್ಥಿಗಳು ಲಸಿಕೆ ತೆಗೆದುಕೊಳ್ಳುವಂತೆ ಪ್ರೇರೇಪಿಸುವುದು ಹಾಗೂ ಪಾಲಕರ ಮನವೊಲಿಕೆ ಮಾಡುವುದು ಸಹ ಶಾಲಾ ಆಡಳಿತ ಮಂಡಳಿಯ ಆದ್ಯ ಕರ್ತವ್ಯವಾಗಿದೆ.

ಈ ನಿಟ್ಟಿನಲ್ಲಿ ಆರೋಗ್ಯ, ಶಿಕ್ಷಣ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗಳು ಜತೆಗೂಡಿಯೇ ಕೆಲಸ ಮಾಡಬೇಕು. ಜತೆಗೆ ಶಿಕ್ಷಕ, ಉಪನ್ಯಾಸಕ ಸಮೂಹ, ಹೆತ್ತವರು ಸಹ ಜತೆಗೂಡಬೇಕಾಗಿದೆ. ಮಕ್ಕಳ ಭವಿಷ್ಯವೂ ಮುಖ್ಯ, ಆರೋಗ್ಯವೂ ಮುಖ್ಯ. ಹೀಗಾಗಿ ಪ್ರತೀ ಹಂತದಲ್ಲೂ ಸೂಕ್ತ ತೀರ್ಮಾನ ಹಾಗೂ ಕ್ರಮಗಳೊಂದಿಗೆ ಮುಂದುವರಿಯಬೇಕು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.