ಬೆಳೆ ನಷ್ಟಕ್ಕೀಡಾಗಿರುವ ರೈತರ ಸಂಕಷ್ಟಕ್ಕೆ ಅಧಿಕಾರಿಗಳು ಸ್ಪಂದಿಸಲಿ


Team Udayavani, Sep 15, 2022, 6:00 AM IST

ಬೆಳೆ ನಷ್ಟಕ್ಕೀಡಾಗಿರುವ ರೈತರ ಸಂಕಷ್ಟಕ್ಕೆ ಅಧಿಕಾರಿಗಳು ಸ್ಪಂದಿಸಲಿ

ಈ ಬಾರಿಯ ಮಳೆಗಾಲ ದೇಶದ ರೈತನ ಬೆನ್ನೆಲುಬು ಮುರಿದಿದೆ ಎಂದು ಹೇಳುವುದಕ್ಕೆ ಯಾವುದೇ ಅಡ್ಡಿ ಇಲ್ಲ. ಸತತ ಮಳೆ, ಪ್ರವಾಹದಿಂದಾಗಿ ರೈತ ಬೆಳೆದಿದ್ದ ಬಹುತೇಕ ಬೆಳೆಗಳು ಹಾಳಾಗಿವೆ. ಸಾಲಸೋಲ ಮಾಡಿ ಬೆಳೆದಿದ್ದ ರೈತ ಮುಂದೇನು ? ಎಂದು ಯೋಚನೆ ಮಾಡುತ್ತಾ ಕುಳಿತಿದ್ದಾನೆ. ಇಂಥ ಸಂಕಷ್ಟದ ಕಾಲದಲ್ಲಿ ರೈತನ ಜತೆ ನಿಂತುಕೊಳ್ಳಬೇಕಾಗಿರುವುದು ಎಲ್ಲರ ಕರ್ತವ್ಯ.

ಈ ಬಾರಿಯ ಮಳೆಗಾಲ ಮತ್ತು ಬೆಳೆನಷ್ಟದ ಕುರಿತಂತೆ ಉದಯವಾಣಿ ರಿಯಾಲಿಟಿ ಚೆಕ್‌ ನಡೆಸಿದ್ದು, ಭಾರೀ ಪ್ರಮಾಣದ ಹಾನಿಯಾಗಿರುವುದು ಕಂಡು ಬಂದಿದೆ.

ರಾಜ್ಯದಲ್ಲಿಯೇ ಸುಮಾರು ಐದರಿಂದ ಆರು ಸಾವಿರ ಕೋಟಿ ರೂ. ನಷ್ಟವಾಗಿದೆ ಎಂಬುದು ಸದ್ಯದ ಲೆಕ್ಕಾಚಾರ. ಇದರ ನಡುವೆಯೇ ರಾಜ್ಯ ಸರಕಾರ ಸದ್ಯದ ಪರಿಹಾರಕ್ಕಾಗಿ 1,200 ಕೋಟಿ ರೂ. ಬಿಡುಗಡೆ ಮಾಡುವಂತೆ ಮನವಿ ಮಾಡಿದೆ. ಅಷ್ಟೇ ಅಲ್ಲ, ಇತ್ತೀಚೆಗಷ್ಟೇ ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿದ್ದು, ಈ ವೇಳೆ ಬೆಳೆ, ಮೂಲಸೌಕರ್ಯ ಸೇರಿ 11 ಸಾವಿರ ಕೋಟಿ ರೂ. ಗಳಿಗೂ ಹೆಚ್ಚು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಇನ್ನು ಮಳೆ ಕೂಡ ರೈತನ ಮೇಲೆ ತನ್ನ ಕಡುಕೋಪ ಪ್ರದರ್ಶಿಸಿದೆ. ಈ ವರ್ಷ ಶೇ.144 ಪಟ್ಟು ಹೆಚ್ಚು ಮಳೆಯಾಗಿದೆ. ಸರಕಾರದ ಅಂಕಿ ಅಂಶದ ಪ್ರಕಾರ, 5.39 ಲಕ್ಷ ಹೆಕ್ಟೇರ್‌ ಕೃಷಿ, ತೋಟಗಾರಿಕೆ ಭೂಮಿ ಮತ್ತು 60 ಸಾವಿರ ಹೆಕ್ಟೇರ್‌ ವಾಣಿಜ್ಯ ಬೆಳೆ ಕೊಚ್ಚಿ ಹೋಗಿದೆ.

ಈಗ ರಾಜ್ಯ ಸರಕಾರ ಮಾಡಬೇಕಾಗಿರುವುದು ಇಷ್ಟೇ. ನಷ್ಟಕ್ಕೀ ಡಾಗಿರುವ ರೈತರ ನೆರವಿಗೆ ಮೊದಲು ಧಾವಿಸಿ ಹೋಗಬೇಕು. ಇನ್ನೂ ಎಷ್ಟು ನಷ್ಟವಾಗಿದೆ ಎಂಬ ಕುರಿತಾಗಿ ಪರಿಶೀಲನೆ, ಅವಲೋಕನದಂಥ ಕೆಲಸಗಳನ್ನು ಮಾಡುತ್ತಾ ಕುಳಿತುಕೊಳ್ಳದೇ ಅನ್ನದಾತರಿಗೆ ಮೊದಲು ನೆರವು ನೀಡಬೇಕು. ಇಲ್ಲದಿದ್ದರೆ ಅವರ ಧೈರ್ಯ ಹುದುಗಿ ಹೋಗುವುದರಲ್ಲಿ ಯಾವುದೇ ಸಂಶಯವಿಲ್ಲ.

ಏಕೆಂದರೆ ಈಗಾಗಲೇ ರಾಜ್ಯ ಸರಕಾರ ರೈತರಿಗೆ ಪರಿಹಾರ ಘೋಷಣೆ ಮಾಡಿದೆ. ಆದರೆ ವಸ್ತುಸ್ಥಿತಿಯಲ್ಲಿ ರೈತರಿಗೆ ಪರಿಹಾರದ ಹಣ ಸಿಕ್ಕಿಲ್ಲ. ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ತುಮಕೂರು, ಬೆಳಗಾವಿ, ಗದಗ, ಕಲಬುರಗಿ, ಬೀದರ್‌ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಪರಿಹಾರದ ಬಗ್ಗೆ ಇನ್ನೂ ಗಮನವನ್ನೇ ನೀಡಿಲ್ಲ ಎಂಬುದು ರಿಯಾಲಿಟಿ ಚೆಕ್‌ನಲ್ಲಿ ಗೊತ್ತಾಗಿದೆ. ಅಲ್ಲದೆ, ಹಲವೆಡೆ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂಬ ಆರೋಪಗಳಿವೆ. ಸರಕಾರ ಕೈಗೊಂಡ ಯಾವುದೇ ನಿರ್ಧಾರವನ್ನು ಅನುಷ್ಠಾನಗೊಳಿಸಬೇಕಾದ ಹೊಣೆ ಅಧಿಕಾರಿಗಳದ್ದು, ಮಳೆ ಮತ್ತು ತುರ್ತು ಕಾಮಗಾರಿಗಾಗಿ ಜಿಲ್ಲಾಧಿಕಾರಿಗಳ ಪಿಡಿ ಅಕೌಂಟ್‌ನಲ್ಲಿ 664 ಕೋಟಿ ರೂ. ಹಣವಿದೆ ಎಂದಿದ್ದರೂ ಇದರ ಸಮರ್ಪಕ ಬಳಕೆಯಾಗಿಲ್ಲ ಎಂಬ ಆರೋಪವೂ ಇದೆ. ಆದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ.90 ಮತ್ತು ಕೊಪ್ಪಳದಲ್ಲಿ ಪರಿಹಾರ ವಿತರಣೆ ಸಾಗುತ್ತಿದೆ ಎಂಬುದೇ ಸಮಾಧಾನಕರ ಅಂಶ.

ಈಗ ವಿಧಾನಮಂಡಲ ಅಧಿವೇಶನವೂ ನಡೆಯುತ್ತಿದೆ. ರಾಜ್ಯ ಸರಕಾರ ಮತ್ತು ವಿಪಕ್ಷಗಳು ಸೇರಿ ಈ ಕುರಿತಂತೆ ರಚನಾತ್ಮಕವಾಗಿ ಚರ್ಚೆ ನಡೆಸಬೇಕು. ಕೇವಲ ಬೆಂಗಳೂರು ಪ್ರವಾಹದ ಬಗ್ಗೆ ತಲೆ ಕೆಡಿಸಿಕೊಳ್ಳದೇ ರಾಜ್ಯದ ಇತರ ಭಾಗಗಳತ್ತಲೂ ನೋಡಬೇಕು. ಆದಷ್ಟು ಬೇಗ ರೈತನ ನೆರವಿಗೆ ಹೋದರೆ, ಇದರಿಂದ ಆತನಿಗಾದರೂ ಸಮಾಧಾನವಾದೀತು.

 

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.