ಕಮಿಷನ್‌ ಆರೋಪ ಬಗ್ಗೆ ದೂರು ನೀಡಲಿ, ತನಿಖೆ ಆಗಲಿ


Team Udayavani, Aug 25, 2022, 6:00 AM IST

ಕಮಿಷನ್‌ ಆರೋಪ ಬಗ್ಗೆ ದೂರು ನೀಡಲಿ, ತನಿಖೆ ಆಗಲಿ

ರಾಜ್ಯದಲ್ಲಿ ಗುತ್ತಿಗೆದಾರರು ತಾವು ಮಾಡಿದ ಕಾಮಗಾರಿ ಬಿಲ್‌ ಪಾವತಿಗೆ ಶೇ.40 ಕಮಿಷನ್‌ ಕೊಡಬೇಕಿದೆ ಎಂಬ ಆರೋಪ ಕಳೆದ ಎರಡು ವರ್ಷಗಳಿಂದಲೂ ಕೇಳಿಬರುತ್ತಿದೆ. ಇದೊಂದು ರೀತಿಯಲ್ಲಿ ತೋಳ ಬಂತು ತೋಳ ಕಥೆಯಂತಾಗಿದೆ.

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಖುದ್ದು ಪ್ರಧಾನಿ ನರೇಂದ್ರ­ಮೋದಿ ಅವರಿಗೆ ಪತ್ರ ಬರೆದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚಿಸಿದರೂ ಸಮಸ್ಯೆ ಬಗೆಹರಿದಿಲ್ಲ. ಶೇ.40ರಷ್ಟು ಇದ್ದ ಕಮಿಷನ್‌ ಬೇಡಿಕೆ ಶೇ.50ಕ್ಕೆ ಹೆಚ್ಚಳವಾಗಿದೆ ಎಂಬುದು ಗುತ್ತಿಗೆದಾರರ ಆರೋಪ. ಇದರಲ್ಲಿ ಎಷ್ಟು ಹುರುಳಿದೆ, ಎಷ್ಟು ಸುಳ್ಳು ಎನ್ನುವುದನ್ನು ತನಿಖೆಯಿಂದಷ್ಟೇ ತಿಳಿಯಬೇಕಿದೆ. ಇದೊಂದು ವೃಥಾ ರಾಜಕೀಯದ ಆರೋಪ-ಪ್ರತ್ಯಾರೋಪದ ರೂಪ ಪಡೆಯುತ್ತಿದೆ. ಇದಕ್ಕೆ ಪೂರಕವಾಗಿ ಗುತ್ತಿಗೆದಾರರ ಸಂಘದ ನಿಯೋಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು ಹೊಸ ರಾಜಕೀಯ ನಾಟಕಕ್ಕೆ ಕಾರಣ­ವಾಗಿದೆ. ಆದರೆ ಸರಕಾರ ಇದಕ್ಕೆ ತಾರ್ಕಿಕ ಅಂತ್ಯ ಹಾಡುವ ಕೆಲಸಕ್ಕೆ ಮುಂದಾಗಬೇಕಾಗಿದೆ.

ಸಚಿವ ಮುನಿರತ್ನ ಅವರ ಹೆಸರು ಬಹಿರಂಗವಾಗಿ ಪ್ರಸ್ತಾಪಿಸಿದ್ದು, ಹಣಕ್ಕಾಗಿ ಬೇಡಿಕೆ ಇಡಲಾಗುತ್ತಿದೆ, ಇಲ್ಲದಿದ್ದರೆ ಮೂರು ವರ್ಷದ ಹಿಂದಿನ ಕಾಮಗಾರಿ ಪರಿಶೀಲನೆ ಮಾಡುವ ಬೆದರಿಕೆ ಹಾಕಲಾಗು­ತ್ತಿದೆ ಎಂಬ ಗಂಭೀರ ಆರೋಪವನ್ನು ಗುತ್ತಿಗೆದಾರರ ಸಂಘದವರು ಮಾಡಿದ್ದಾರೆ. ಇಷ್ಟಾದರೂ ಸರಕಾರ ದಾಖಲೆ ಕೊಡಲಿ ಎಂದು ಕೇಳಿ ಸುಮ್ಮನಾದರೆ ಇದಕ್ಕೆ ಅರ್ಥ ಇರುವುದಿಲ್ಲ. ಸರಕಾರಕ್ಕೂ ಕೆಟ್ಟ ಹೆಸರು.

ಒಂದು ವರ್ಷದಿಂದ ಆರೋಪ ಕೇಳಿಬಂದರೂ ಯಾವುದೇ ರೀತಿಯ ತನಿಖೆ ಅಥವಾ ಲೋಕಾಯುಕ್ತಕ್ಕೆ ಪ್ರಕರಣ ವಹಿಸಿಲ್ಲ. ಗುತ್ತಿಗೆದಾರರೂ ಸಹ ಲೋಕಾಯುಕ್ತಕ್ಕೆ ದೂರು ನೀಡಲು ಅವಕಾಶ ಇತ್ತು. ಈ ಬೆಳವಣಿಗೆ ಸಾರ್ವ­ಜನಿಕ ವಲಯದಲ್ಲೂ ನಾನಾ ಅನುಮಾನಗಳಿಗೆ ಕಾರಣವಾಗಿದೆ. ಇದು ಬರೀ ರಾಜಕೀಯ ಆರೋಪವಾಗಿದೆಯೇ ಎನ್ನುವ ಸಂಶಯ ಸಹಜವೇ. ಸರಕಾರ ಮೊದಲು ಸಾರ್ವಜನಿಕ ವಲಯದಲ್ಲಿ ಇರುವ ಅನು­ಮಾನ ದೂರ ಮಾಡಬೇಕಾಗಿದೆ. ಇದು ಸರಕಾರದ ಜವಾಬ್ದಾರಿಯೂ ಹೌದು.

ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ನೇರವಾಗಿ ಪ್ರಧಾನಿಗೆ ಪತ್ರ ಬರೆಯುವುದು. ಬಹಿರಂಗವಾಗಿ ಕಮಿಷನ್‌ಗೆ ಒತ್ತಾಯ ಮಾಡುತ್ತಿದ್ದರೂ ಅದನ್ನು ಹಗುರವಾಗಿ ಬಿಟ್ಟುಬಿಡುವುದು ಯಾವುದೇ ಒಂದು ವ್ಯವಸ್ಥೆಗೆ ಶೋಭೆ ತರುವುದಿಲ್ಲ. ತತ್‌ಕ್ಷಣ ಈ ಕುರಿತು ತನಿಖೆ ನಡೆಸಿ ಯಾರೇ ತಪ್ಪಿತಸ್ಥರಿ­ದ್ದರೂ ಕ್ರಮ ಕೈಗೊಳ್ಳಬೇಕು. ಗುತ್ತಿಗೆದಾರರೇ ಯಾವುದೇ ಸತ್ಯಾಂಶ ಇಲ್ಲದೆ ಆರೋಪ ಮಾಡುತ್ತಿದ್ದರೆ ಅವರ ಮೇಲೆ ಕ್ರಮ ಆಗಬೇಕು. ಅದು ಬಿಟ್ಟು ನಿರಂತರವಾಗಿ ಆರೋಪ ಮಾಡುತ್ತಿದ್ದರೂ ಮೌನ ವಹಿಸು ವುದು, ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಸುಮ್ಮನಾಗುವುದು ಸರಿಯಲ್ಲ.
ಕೆಂಪಣ್ಣ ಅವರು ಇದೇ ಮೊದಲ ಬಾರಿಗೆ ಆರೋಪ ಮಾಡುತ್ತಿಲ್ಲ. ಹಿಂದೆಯೂ ಮಾಡಿದ್ದರು, ಪ್ರಧಾನಿಯವರೆಗೂ ಪತ್ರವೂ ಬರೆದು ಮುಖ್ಯಮಂತ್ರಿಯವರನ್ನೂ ಭೇಟಿ ಮಾಡಿದ್ದರು.

ಇದೀಗ ವಿಪಕ್ಷ ನಾಯಕರನ್ನು ಭೇಟಿ ಮಾಡಿದ್ದಾರೆ. ತಮಗಾಗುತ್ತಿರುವ ಸಮಸ್ಯೆ ಹೇಳಿಕೊಂಡಿದ್ದಾರೆ. ಅವರು ಲೋಕಾಯುಕ್ತದಂಥ ಅಧಿಕೃತ ತನಿಖಾ ಸಂಸ್ಥೆಗೆ ದೂರು ನೀಡುವ ಧೈರ್ಯ ಮಾಡಲಿ. ಸರಕಾರವೂ ಈ ವಿಚಾರದಲ್ಲಿ ಇಚ್ಛಾಶಕ್ತಿ ಪ್ರದರ್ಶನ ಮಾಡಬೇಕು. ಇದಕ್ಕೆ ಅಂತಿಮ ತೆರೆ ಎಳೆಯಲು ಮುಂದಾಗಬೇಕು. ಇಲ್ಲದಿದ್ದರೆ ಸಂಶಯದ ತೂಗುಗತ್ತಿ ನೇತಾಡುತ್ತಲೇ ಇರುತ್ತದೆ.

ಟಾಪ್ ನ್ಯೂಸ್

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.