ಹೊಸ ಶಿಕ್ಷಣ ನೀತಿ ಜಾರಿಗೆ ಮುನ್ನ ಗೊಂದಲಗಳು ಬಗೆಹರಿಯಲಿ


Team Udayavani, Aug 23, 2021, 6:00 AM IST

ಹೊಸ ಶಿಕ್ಷಣ ನೀತಿ ಜಾರಿಗೆ ಮುನ್ನ ಗೊಂದಲಗಳು ಬಗೆಹರಿಯಲಿ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ಉದ್ದೇಶ ದೊಂದಿಗೆ ರೂಪಿತವಾಗಿರುವ ದೇಶೀಯತೆಯ ಸೊಗಡಿನಲ್ಲಿ ಕೌಶಲಭರಿತ ವಿದ್ಯಾ ವಂತರನ್ನು ಸೃಷ್ಟಿಸುವ ಮಹತ್ತರ ಗುರಿಯನ್ನು ಹೊಂದಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಸಕ್ತ ಸಾಲಿನಿಂದಲೇ ರಾಜ್ಯದಲ್ಲಿ ಜಾರಿಗೆ ತರಲು ಸರಕಾರ ಮುಂದಾಗಿದೆ. ತಿಂಗಳುಗಳ ಹಿಂದೆಯೇ ಈ ಬಗ್ಗೆ ಅಧಿಕೃತವಾಗಿ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌.ಅಶ್ವತ್ಥನಾರಾಯಣ ಘೋಷಿ ಸಿ ದ್ದರಾದರೂ ಈ ಬಗೆಗಿನ ಗೊಂದಲಗಳು ಇನ್ನೂ ಮುಂದು ವರಿದಿದ್ದು ಸರಕಾರದ ಈ ಆತುರದ ನಿರ್ಧಾರಕ್ಕೆ ಶಿಕ್ಷಣ ತಜ್ಞರಿಂದ ಅಪಸ್ವರಗಳು ಕೇಳಿಬಂದಿವೆ.

ರಾಜ್ಯ ಸರಕಾರದ ನಿರ್ಧಾರದಂತೆ ಸೋಮವಾರದಂದು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕಲಿಕೆಗೆ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ಆನ್‌ಲೈನ್‌ ಮೂಲಕ ಚಾಲನೆ ನೀಡಲಿದ್ದಾರೆ. ರಾಜ್ಯದ ವಿವಿಗಳಲ್ಲಿ ಧಾರವಾಡದ ಕರ್ನಾಟಕ ವಿವಿ ಹಾಗೂ ಮೈಸೂರು ವಿವಿಯು ಹೊಸ ನೀತಿಯನ್ನು ಅನುಷ್ಠಾನಗೊಳಿಸುತ್ತಿರುವ ಮೊದಲ ವಿವಿಗಳು. ಸದ್ಯ ಹೊಸ ಶಿಕ್ಷಣ ನೀತಿಯಡಿ ವಿದ್ಯಾರ್ಥಿಗಳ ದಾಖಲಾತಿ ನಡೆಯಲಿದ್ದು ತರಗತಿಗಳು ಅಕ್ಟೋಬರ್‌ನಿಂದ ನಡೆಯಲಿವೆ. ಸೆಪ್ಟಂಬರ್‌ ಅಂತ್ಯದೊಳಗೆ ಹೊಸ ಪಠ್ಯಕ್ರಮಗಳು ಅಂತಿಮಗೊಳ್ಳಲಿವೆ.

ಆದರೆ ರಾಜ್ಯ ಸರಕಾರದ ಈ ಆತುರದ ನಿರ್ಧಾರದ ಬಗೆಗೆ ಶಿಕ್ಷಣ ತಜ್ಞರು ಮತ್ತು ಶಿಕ್ಷಣ ಸಂಸ್ಥೆಗಳಿಂದಲೇ  ವಿರೋಧ ಕೇಳಿ ಬಂದಿದ್ದು ನೂತನ ಶಿಕ್ಷಣ ನೀತಿಯಲ್ಲಿ ಪ್ರಸ್ತಾವಿಸಲಾಗಿರುವ ಮಹತ್ವದ ವಿಚಾರಗಳೆಲ್ಲವನ್ನೂ ನಿರ್ಲಕ್ಷಿಸಿ ದಿಢೀರನೆ ಹೊಸ ನೀತಿಯನ್ನು ಜಾರಿಗೊಳಿಸುತ್ತಿರುವ ಹಿಂದಿನ ಉದ್ದೇಶವಾದರೂ ಏನು ಎಂಬುದು ಮಾತ್ರ ಯಕ್ಷಪ್ರಶ್ನೆ. ಈ ಮೂಲಕ ರಾಜ್ಯ ಸರಕಾರ ಅತ್ಯುತ್ತಮ ಶಿಕ್ಷಣ ನೀತಿಯನ್ನು ಆರಂಭಿಕ ಹಂತದಲ್ಲಿಯೇ ವಿಫ‌ಲಗೊಳಿಸಲಿದೆಯೇ ಎಂಬ ಆತಂಕವೂ ವ್ಯಕ್ತವಾಗಿದೆ.

ಪದವಿ ತರಗತಿ, ವಿಷಯಗಳ ಆಯ್ಕೆಯ ಗೊಂದಲ, ಭಾಷಾ ವಿಷಯ ಗಳ ಬಗೆಗೆ ನಿರ್ಲಕ್ಷ್ಯ, ಕಾಲೇಜು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೂಲ ಸೌಕ ರ್ಯಗಳ ಕೊರತೆ ಆದಿಯಾಗಿ ಹಲವಾರು ವಿಷಯಗಳ ಬಗೆಗೆ ಗೋಜಲುಗಳು ಇನ್ನೂ ಮುಂದುವರಿದಿರುವಂತೆಯೇ ಸರಕಾರ ಮಾತ್ರ ಹಠಕ್ಕೆ ಬಿದ್ದಂತೆ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸ ಹೊರಟಿ ರುವುದು ತೀವ್ರ ಅಚ್ಚರಿಗೆ ಕಾರಣವಾಗಿದೆ. ಆರಂಭದಿಂದಲೂ ವಿವಿಧ ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಣ ತಜ್ಞರು, ವಿದ್ಯಾರ್ಥಿಗಳ ಹೆತ್ತವರು ಈ ಎಲ್ಲ ಗೊಂದಲಗಳ ಬಗೆಗೆ ಸರಕಾರದ ಮತ್ತು ಸಚಿವರ ಗಮನ ಸೆಳೆದಿದ್ದರು.   ಈ ಗೊಂದಲಗಳ ನಿವಾರಣೆಗೆ ಯಾವುದೇ ಪ್ರಯತ್ನ ನಡೆದಿಲ್ಲ. ಅಷ್ಟು ಮಾತ್ರವಲ್ಲದೆ ಶಿಕ್ಷಣ ನೀತಿಯಲ್ಲಿಯೇ ಹೇಳಲಾಗಿರುವಂತೆ ಹೊಸ ವ್ಯವಸ್ಥೆಯ ಜಾರಿಗೂ ಮುನ್ನ ಶಿಕ್ಷಣ ಸಂಸ್ಥೆಗಳು ಮತ್ತು ವಿವಿ, ಕಾಲೇಜು ಗಳಲ್ಲಿ ಅಗತ್ಯ ಮೂಲಸೌಕರ್ಯ, ಉಪನ್ಯಾಸಕರ ನೇಮಕ ಮತ್ತಿತರ ವಿಚಾರಗಳ ಬಗೆಗೆ ಸರಕಾರ ಚಕಾರವೆತ್ತಿಲ್ಲ.

ಕಾಟಾಚಾರಕ್ಕೆ ಎಂಬಂತೆ ಶಿಕ್ಷಣ ತಜ್ಞರ ಸಭೆ ನಡೆಸಿದ್ದನ್ನು ಬಿಟ್ಟರೆ ಪೂರ್ವತಯಾರಿಯನ್ನು ನಡೆಸದೆ, ವಿದ್ಯಾರ್ಥಿಗಳು, ಹೆತ್ತವರನ್ನು ಕೂಡ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಾಏಕಿ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗುತ್ತಿದೆ. ತರಗತಿ ಆರಂಭಗೊಳ್ಳಲು ಇನ್ನೂ ತಿಂಗಳ ಕಾಲಾವಕಾಶ ಇದ್ದು ಈ ಅವಧಿಯಲ್ಲಾದರೂ ಇತ್ತ ಗಮನಹರಿಸಿ ನೂತನ ಶಿಕ್ಷಣ ನೀತಿಯ ಉದ್ದೇಶ ನೈಜವಾಗಿ ಈಡೇರುವಂತಾಗಬೇಕು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.