ಹಬ್ಬಗಳ ಸಂಭ್ರಮದಲ್ಲಿ ಕೋವಿಡ್ ನಿಯಮ ಪಾಲನೆಯಾಗಲಿ


Team Udayavani, Aug 13, 2022, 6:00 AM IST

ಹಬ್ಬಗಳ ಸಂಭ್ರಮದಲ್ಲಿ ಕೋವಿಡ್ ನಿಯಮ ಪಾಲನೆಯಾಗಲಿ

ಸ್ವಾತಂತ್ರ್ಯೋತ್ಸವದಿಂದ ಹಿಡಿದು, ಆಗಸ್ಟ್‌ ತಿಂಗಳಿನಾದ್ಯಂತ ಸರಣಿ ಹಬ್ಬಗಳು ಬರುತ್ತಿವೆ. ಆ. 13ರಿಂದಲೇ ಮೂರು ದಿನಗಳ ಕಾಲ ಎಲ್ಲೆಡೆ ಸ್ವಾತಂತ್ರ್ಯೋತ್ಸವ ಸಮಾರಂಭ ನಡೆಯಲಿದೆ. ಈ ಸಂಭ್ರಮದ ನಡುವೆಯೇ ದೇಶಾದ್ಯಂತ ಕೊರೊನಾ ಸೋಂಕುಗಳು ಹೆಚ್ಚಳವಾಗು ತ್ತಿರುವುದು ಮಾತ್ರ ಆತಂಕಕ್ಕೆ ಕಾರಣವಾಗಿದೆ.

ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಪ್ರತಿದಿನವೂ ಒಂದು ಸಾವಿರದಿಂದ ಎರಡು ಸಾವಿರದ ಆಸುಪಾಸಿಗೆ ಸೋಂಕುಗಳು ಕಂಡುಬರುತ್ತಿವೆ. ಅಂದರೆ ಪಾಸಿಟಿವಿಟಿ ದರ ಶೇ.7ರ ಸುಮಾರಿನಲ್ಲಿದೆ. ಶುಕ್ರವಾರವೇ ಶೇ.6.63ರಷ್ಟು ಪಾಸಿಟಿವಿಟಿ ದರ ಕಂಡು ಬಂದಿದೆ. ಜತೆಗೆ, 2,032 ಮಂದಿಗೆ ಸೋಂಕು ತಗಲಿದ್ದು, ಬೆಂಗಳೂರಿನಲ್ಲೇ 1,202 ಮಂದಿಗೆ ಸೋಂಕು ದೃಢಪಟ್ಟಿದೆ. 5 ಮಂದಿ ಸಾವನ್ನಪ್ಪಿದ್ದಾರೆ ಕೂಡ. ಹೀಗಾಗಿ ಎಚ್ಚರಿಕೆಯಿಂದ ಇರಬೇಕಾದದ್ದು ಅನಿವಾರ್ಯವಾಗಿದೆ.

ಇದು ಕೇವಲ ರಾಜ್ಯದ ಕಥೆಯಲ್ಲ. ದೇಶದಲ್ಲಿಯೂ ಪ್ರತಿದಿನ 20 ಸಾವಿರದ ಆಸುಪಾಸಿನಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಶುಕ್ರವಾರ 16,561 ಪ್ರಕರಣ ಪತ್ತೆಯಾಗಿವೆ. 49 ಮಂದಿ ಸಾವನ್ನಪ್ಪಿದ್ದಾರೆ. ಆದರೆ ಕಳೆದ ವರ್ಷದ ಇದೇ ಸುಮಾರಿಗೆ ನೋಡುವುದಾದರೆ ಸಾವಿನ ಸಂಖ್ಯೆ ತೀರಾ ಕಡಿಮೆ ಇದೆ ಎಂದೇ ಹೇಳಬಹುದು.
ಕೊರೊನಾ ಎರಡನೇ ಅಲೆಗೆ ಹೋಲಿಕೆ ಮಾಡಿದರೆ ಈ ಪ್ರಕರಣಗಳು ತೀರಾ ಕಡಿಮೆ ಎಂದೇ ಹೇಳಬಹುದು. ಆದರೆ ಎಚ್ಚರ ತಪ್ಪಿದರೆ ಮಾತ್ರ ಕೇಸು ಹೆಚ್ಚಳವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದೇ ತಜ್ಞರು ಹೇಳುತ್ತಾರೆ.

ಈಗಾಗಲೇ ಜನ ಕೊರೊನಾ ದೂರ ವಾಗಿದೆ ಎಂಬ ಲೆಕ್ಕಾಚಾರಕ್ಕೆ ಬಂದಾಗಿದೆ. ಹೀಗಾಗಿ ಸಾಮಾಜಿಕ ಅಂತರ, ಮಾಸ್ಕ್ ಧಾರಣೆ, ಶುಚಿತ್ವ ಕಾಪಾಡಿಕೊಳ್ಳುವುದು ಜನರಿಂದ ಮರೆಯಾಗಿದೆ. ಇದರ ನಡುವೆಯೇ, ಇತ್ತೀಚಿನ ದಿನಗಳಲ್ಲಿ ಒಂದಷ್ಟು ವಾತಾವರಣಕ್ಕೆ ಹೊಂದಿಕೊಂಡಂಥ ರೋಗಗಳಾದ ಜ್ವರ, ತಲೆನೋವು, ಶೀತ, ಕೆಮ್ಮು ಕೂಡ ಕಾಣಿಸಿಕೊಳ್ಳುತ್ತಿದೆ. ಈ ಲಕ್ಷಣಗಳು ಕೊರೊನಾವೇ ಅಥವಾ ಬೇರಾವ ಜ್ವರವೇ ಎಂಬ ದ್ವಂದ್ವದಲ್ಲಿಯೂ ಆಸ್ಪತ್ರೆಗಳು ಮತ್ತು ಜನರಿದ್ದಾರೆ.

ಏನೇ ಆದರೂ ಈ ರೋಗ ಲಕ್ಷಣಗಳ ಸಂಬಂಧ ಯಾರೂ ನಿರ್ಲಕ್ಷ್ಯ ತೋರಬಾರದು. ಇಂಥ ರೋಗ ಲಕ್ಷಣಗಳು ಕಂಡ ಬಳಿಕ ವೈದ್ಯರ ಸಲಹೆ ಮೇರೆಗೆ ಪರೀಕ್ಷೆ ಮಾಡಿಸಿಕೊಳ್ಳಬೇಕು. ಇನ್ನು ಸ್ವಾತಂತ್ರ್ಯೋತ್ಸವದ ಮುನ್ನೆಚ್ಚರಿಕೆಯಾಗಿ ಕೇಂದ್ರ ಸರಕಾರ ಶುಕ್ರವಾರ ಕೆಲವೊಂದು ಸೂಚನೆಗಳನ್ನೂ ನೀಡಿದೆ.

ಅಂದರೆ, ಕಡ್ಡಾಯ ವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಹೆಚ್ಚು ಜನರನ್ನು ಸೇರಿಸದೇ ಸ್ವಾತಂತ್ರ್ಯೋತ್ಸವ ನಡೆಸುವುದು ಇದರಲ್ಲಿ ಸೇರಿದೆ. ಈ ನಿಯಮಗಳನ್ನು ಪಾಲನೆ ಮಾಡಿಕೊಂಡು ಸ್ವಾತಂತ್ರ್ಯೋತ್ಸವ ಆಚರಿಸಿದರೆ, ಕೊರೊನಾವನ್ನು ನಿಯಂತ್ರಿಸಬಹುದು. ಇಲ್ಲದಿದ್ದರೆ ಕಷ್ಟಕರ ಸನ್ನಿವೇಶ ನಿರ್ಮಾಣವಾಗುವುದರಲ್ಲಿ ಸಂಶಯವಿಲ್ಲ.

ಈಗಾಗಲೇ ದಿಲ್ಲಿ ಸರಕಾರ ಮಾಸ್ಕ್ ಧಾರಣೆ ಸಂಬಂಧ ದಂಡ ವಿಧಿಸುವ ಕ್ರಮಕ್ಕೆ ಮುಂದಾಗಿದೆ. ಕರ್ನಾಟಕದಲ್ಲೂ ಮಾರುಕಟ್ಟೆ, ಮಾಲ್‌ಗ‌ಳು ಸೇರಿದಂತೆ ಜನರು ಸೇರುವಂಥ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ.

ಸದ್ಯ ದಂಡವಿಲ್ಲ ಎಂದಾದರೂ, ಇದೇ ಕಾರಣಕ್ಕಾಗಿ ಮಾಸ್ಕ್ ಇಲ್ಲದೇ ಓಡಾಟ ನಡೆಸುವುದು ತರವಲ್ಲ. ಈ ವಿಚಾರವನ್ನು ಮನದಲ್ಲಿ ಇರಿಸಿಕೊಂಡು ಎಲ್ಲರೂ ನಿಯಮ ಪಾಲನೆ ಮಾಡಬೇಕು. ಇದೆಲ್ಲವೂ ಜನರ ಕೈಯಲ್ಲಿಯೇ ಇದೆ ಎಂಬುದನ್ನು ಮರೆಯಬಾರದು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.