ಆಡಳಿತ ಯಂತ್ರ ಚುರುಕಾಗಲಿ


Team Udayavani, Oct 1, 2019, 5:30 AM IST

a-35

ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳಾಯಿತು. ಈ ವಿಧಾನಸಭೆಯ ಅವಧಿಯಲ್ಲಿ ಎರಡನೇ ಸರಕಾರವಿದು. ಆದರೂ ರಾಜ್ಯದ ಜನರಿಗೆ ಇನ್ನೂ ಸರಕಾರ ಅಸ್ತಿತ್ವಕ್ಕೆ ಬಂದಂತೆ ಎನಿಸುತ್ತಿಲ್ಲ. ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರಕಾರ ಆಡಳಿತ ನಡೆಸುತ್ತಿದ್ದಾಗಲೂ ಒಟ್ಟಂದದಲ್ಲಿ ಸರಕಾರವೊಂದು ಕ್ರಿಯಾಶೀಲವಾಗಿದೆ ಎಂದೆನಿಸುತ್ತಿರಲಿಲ್ಲ. ಕೆಲವು ನಿರ್ದಿಷ್ಟ ನಾಯಕರು, ಮಂತ್ರಿಗಳ ಕಾರ್ಯ ಚಟುವಟಿಕೆಗಳು ಕಾಣುತ್ತಿತ್ತೇ ಹೊರತೂ ಇಡೀ ಸರಕಾರದ್ದಲ್ಲ. ಆ ಸರಕಾರ ಉರುಳಿ ಬಿಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದರೂ ಈ ಅಪವಾದ ದೂರವಾದಂತೆ ತೋರುತ್ತಿಲ್ಲ.

ಸುಮಾರು ಒಂದು ತಿಂಗಳು ಪೂರ್ಣ ಪ್ರಮಾಣದ ಸರಕಾರವೇ ರಚನೆಯಾಗಿರಲಿಲ್ಲ. ಸಚಿವ ಸಂಪುಟವಿಲ್ಲದೆ ಯಡಿಯೂರಪ್ಪನವರೊಬ್ಬರೇ ಎಲ್ಲವನ್ನೂ ನಿಭಾಯಿಸಬೇಕಾಗಿ ಬಂತು. ಈ ಸಂದರ್ಭದಲ್ಲಿ ರಾಜ್ಯ ಭೀಕರ ಪ್ರವಾಹಕ್ಕೂ ತುತ್ತಾಯಿತು. ಯಡಿಯೂರಪ್ಪನವರೇನೋ ಶಕ್ತಿಮೀರಿ ಓಡಾಡಿ ಸಂತ್ರಸ್ತರಿಗೆ ನೆರವು ನೀಡಿದರು. ಅನಂತರ ಸಚಿವ ಸಂಪುಟ ರಚನೆಯಾಗಿ, ಖಾತೆಗಳ ಹಂಚಿಕೆಯೂ ಆಗಿ ಆಡಳಿತ ಚುರುಕುಗೊಳ್ಳಬೇಕಿತ್ತು. ಆದರೆ ಆ ಲಕ್ಷಣ ಕಾಣಿಸುತ್ತಿಲ್ಲ. ಸಚಿವರನ್ನಾಗಿ ಮಾಡುವಾಗ, ಖಾತೆಗಳನ್ನು ಹಂಚುವಾಗ ಅಸಮಾಧಾನ ಕಾಣಿಸಿಕೊಳ್ಳುವುದು ಸಹಜ. ಬಿಜೆಪಿಯಲ್ಲೂ ಇದು ಇತ್ತು. ಆದರೆ ಅದು ಉಲ್ಬಣಿಸದಂತೆ ನೋಡಿಕೊಳ್ಳುವಲ್ಲಿ ಪಕ್ಷದ ಹೈಕಮಾಂಡ್‌ ಯಶಸ್ವಿಯಾಗಿತ್ತು. ಈ ಮಟ್ಟಿಗೆ ಯಡಿಯೂರಪ್ಪನವರ ದೊಡ್ಡ ಸಮಸ್ಯೆಯೊಂದು ಸುಲಭವಾಗಿ ಪರಿಹಾರವಾಗಿತ್ತು.

ಆದರೆ ಇದೇ ವೇಳೆ ಕಾಣದ ಯಾವುದೋ ಕೈ ಸರಕಾರವನ್ನು ಪೂರ್ಣ ಪ್ರಮಾಣದಲ್ಲಿ ಅಧಿಕಾರದಲ್ಲಿ ತೊಡಗಿಸಿಕೊಳ್ಳದಂತೆ ತಡೆಯುತ್ತಿದೆ ಎಂಬ ಭಾವನೆ ಬರುತ್ತಿದೆ. ಮಂತ್ರಿಗಳನ್ನು ಆರಿಸುವಾಗ, ಖಾತೆಗಳನ್ನು ಹಂಚುವಾಗ ಮುಖ್ಯಮಂತ್ರಿಗೆ ಪೂರ್ಣ ಸ್ವಾತಂತ್ರ್ಯ ಸಿಕ್ಕಿರಲಿಲ್ಲ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಅದೇ ರೀತಿ ಪಕ್ಷದ ನೂತನ ರಾಜ್ಯಾಧ್ಯಕ್ಷರ ಆಯ್ಕೆ ಸಂದರ್ಭದಲ್ಲೂ ತುಸು ಅಸಮಾಧಾನ ಇತ್ತು ಎಂಬ ಮಾತೂ ನಿಜ. ಪಕ್ಷ ಮತ್ತು ಸರಕಾರ ಪರಸ್ಪರ ಪೂರಕವಾಗಿದ್ದುಕೊಂಡು ಕೆಲಸ ಮಾಡಿದರೇನೆ ಆಡಳಿತ ಯಂತ್ರ ಸುಸೂತ್ರವಾಗಿ ಸಾಗೀತು. ಈ ವಿಚಾರದಲ್ಲಿ ಪಕ್ಷದ ವರಿಷ್ಠರು ಸಾಕಷ್ಟು ಎಚ್ಚರಿಕೆಯ ನಡೆ ಇಡುವುದು ಸ್ವತಃ ಸರಕಾರದ ಭವಿಷ್ಯದ ಹಾಗೂ ಪಕ್ಷದ ವರ್ಚಸ್ಸಿನ ದೃಷ್ಟಿಯಿಂದ ಅಗತ್ಯ.

ಪ್ರವಾಹ ಸಂತ್ರಸ್ತರಿಗೆ ನೆರವಾಗುವ ವಿಚಾರದಲ್ಲೂ ರಾಜ್ಯ ಸರಕಾರದ ನಡೆಗಳು ಸಂಪೂರ್ಣ ತೃಪ್ತಿಕರವಾಗಿಲ್ಲ. ಕೇಂದ್ರ ಗೃಹ ಸಚಿವ ಮತ್ತು ರಕ್ಷಣಾ ಸಚಿವರೇ ಪ್ರವಾಹ ಸಂದರ್ಭದಲ್ಲಿ ಸಮೀಕ್ಷೆ ನಡೆಸಿ ಹೋಗಿದ್ದರೂ ಕೇಂದ್ರದಿಂದ ದೊಡ್ಡ ಮಟ್ಟದ ನೆರವನ್ನು ಪಡೆಯುವಲ್ಲಿ ರಾಜ್ಯ ಸಂಪೂರ್ಣ ಸಫ‌ಲವಾಗಿಲ್ಲ. ಇದಕ್ಕೆ ಜನರು ಸರಕಾರ ಮತ್ತು ರಾಜ್ಯದ ಸಂಸದರನ್ನೇ ನೇರ ಹೊಣೆ ಮಾಡುತ್ತಿದ್ದಾರೆ. ವಿಪಕ್ಷಗಳಿಗೂ ಸರಕಾರದ ವಿರುದ್ಧ ಹೋರಾಟ ಮಾಡಲು ಇದು ಒಂದು ಅಸ್ತ್ರವಾಗಿದೆ. ಅಲ್ಪಮತದ ಸರಕಾರ ಇರುವಾಗ ಇಂಥ ಸೂಕ್ಷ್ಮ ವಿಚಾರಗಳಿಗೆ ಸಂಬಂಧಿಸಿದಂತೆ “ಮೇಲಿನವರು’ ತುಸು ಸಂವೇದನಾಶೀಲವಾಗಿ ವರ್ತಿಸಬೇಕಿತ್ತು.

ಈಗಾಗಲೇ ಒಂದು ವರ್ಷಕ್ಕೂ ಹೆಚ್ಚಿನ ಅವಧಿ ಸಮ್ಮಿಶ್ರ ಸರಕಾರದ ಆಂತರಿಕ ಕಚ್ಚಾಟದಿಂದ ಸೃಷ್ಟಿಯಾಗಿದ್ದ ಗೊಂದಲದಲ್ಲಿ ಕಳೆದು ಹೋಗಿದೆ. ಈ ನೂತನ ಸರಕಾರವೂ ಅಂಥದ್ದೇ ಗೊಂದಲದಲ್ಲಿ ಮುಳುಗಿದರೆ ರಾಜ್ಯದ ಜನರು ರಾಜಕೀಯ ಪಕ್ಷಗಳ ಮೇಲೆಯೇ ವಿಶ್ವಾಸ ಕಳೆದುಕೊಂಡಾರು. ಜತೆಗೆ ರಾಜ್ಯ ಮತ್ತು ಜನರಿಗಾಗುವ ನಷ್ಟವನ್ನು ಯಾರೂ ತುಂಬಿಕೊಡಲಾರರು. ಒಂದೆಡೆ ನೆರೆ ಮತ್ತು ಬರ ಸಂತ್ರಸ್ತರ ಪುನರ್‌ವಸತಿಗಾಗಿ ಸಮರೋಪಾದಿಯಲ್ಲಿ ಕಾರ್ಯಗಳಾಗಬೇಕು. ಇನ್ನೊಂದೆಡೆ ರಾಜ್ಯವನ್ನು ಸುಸ್ಥಿರ ಅಭಿವೃದ್ಧಿಯತ್ತ ಕೊಂಡೊಯ್ಯುವ ಕೆಲಸವೂ ಆಗಬೇಕು. ಇವೆಲ್ಲ ಸಾಧ್ಯವಾಗಬೇಕಾದರೆ ಸರಕಾರ ಆಡಳಿತದಲ್ಲಿ ಪೂರ್ಣವಾಗಿ ತೊಡಗಿಕೊಳ್ಳಬೇಕು.
ಈ ನಡೆಗಳೇ ಆಡಳಿತ ನಡೆಸುವವರ ಆದ್ಯತೆಗಳಾಗಬೇಕು.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.