ಸರಕಾರ ಶಾಲೆಗಳಲ್ಲಿ ಆಟದ ಮೈದಾನಗಳ ವ್ಯವಸ್ಥೆ ಮಾಡಲಿ


Team Udayavani, Jan 3, 2023, 6:00 AM IST

ಸರಕಾರ ಶಾಲೆಗಳಲ್ಲಿ ಆಟದ ಮೈದಾನಗಳ ವ್ಯವಸ್ಥೆ ಮಾಡಲಿ

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕದ 24 ಸಾವಿರ ಶಾಲೆಗಳಲ್ಲಿ ಆಟದ ಮೈದಾನವೇ ಇಲ್ಲ ಎಂಬುದು ನಿಜಕ್ಕೂ ಅತ್ಯಂತ ಖೇದಕರ ವಿಷಯ. ರಾಜ್ಯ ಸರಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವುದಾಗಿ ಪದೇ ಪದೆ ಹೇಳುತ್ತಿದೆ. ಶಾಲೆಗಳ ಬಗ್ಗೆ ಕೊಠಡಿಗಳ ಬಗ್ಗೆ ಕಾಳಜಿ ವಹಿಸಿದಷ್ಟೇ ಆಟದ ಮೈದಾನಗಳ ಬಗ್ಗೆಯೂ ಕಾಳಜಿ ವಹಿಸಬೇಕಾಗಿದೆ.

ಏಕೆಂದರೆ ಶಿಕ್ಷಣ ಎಂದರೆ ಕೇವಲ ಪಠ್ಯಪುಸ್ತಕದಲ್ಲಿರುವ ಪಾಠ-ಪ್ರವಚನ ಬೋಧನೆಯಲ್ಲ. ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಅತ್ಯಂತ ಆವಶ್ಯಕ. ಇದಕ್ಕೆ ಆಟದ ಮೈದಾನವೇ ಇಲ್ಲ ಎಂದಾದರೆ ಶಿಕ್ಷಣದ ಪರಿಪೂರ್ಣತೆ ಇರುವುದಿಲ್ಲ.

ಕೇಂದ್ರ ಸರಕಾರದ ಮಹತ್ವಕಾಂಕ್ಷೆಯ “ರಾಷ್ಟ್ರೀಯ ಶಿಕ್ಷಣ ನೀತಿ-2020’ಯಲ್ಲಿ ಕ್ರೀಡೆ ಮತ್ತು ದೈಹಿಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗಿದ್ದು, ಪಠ್ಯಕ್ರಮದ ಸ್ಥಾನ ಕೊಡಲಾಗಿದೆ. ಆದರೆ ಆಟದ ಮೈದಾನಗಳೇ ಇಲ್ಲದಿದ್ದರೆ ಇದು ಸಾಕಾರವಾಗುವುದಾದರೂ ಹೇಗೆ?

ದೈಹಿಕ ಶಿಕ್ಷಣ, ಕ್ರೀಡೆ, ಆಟೋಟಗಳು ಮಕ್ಕಳ ಕಲಿಕೆಗೆ ಆವಶ್ಯಕ ಎಂದು ಹೇಳಲಾಗುತ್ತದೆ. ಆದರೆ ಆಟದ ಮೈದಾನಗಳೇ ಇಲ್ಲ ಎಂದಾದರೆ ಸಾವಿರಾರು ಶಾಲೆಗಳ ಲಕ್ಷಾಂತರ ಮಕ್ಕಳು ಕ್ರೀಡಾ ಹಾಗೂ ಇತರೆ ಚಟುವಟಿಕೆಗಳಿಂದ ವಂಚಿತರಾಗುತ್ತಿದ್ದಾರೆ. ಮಕ್ಕಳ ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆ ಇದರಿಂದ ಕುಂಠಿತವಾಗುತ್ತದೆ.

ರಾಜ್ಯದಲ್ಲಿ ಸರ ಕಾರಿ, ಅನುದಾನಿತ ಹಾಗೂ ಖಾಸಗಿ ಸೇರಿ 53,239 ಪ್ರಾಥಮಿಕ ಹಾಗೂ 16,122 ಪ್ರೌಢ ಶಾಲೆ ಸೇರಿ 69,941 ಶಾಲೆಗಳ ಪೈಕಿ 24,332 ಶಾಲೆಗಳಲ್ಲಿ ಆಟದ ಮೈದಾನಗಳಿಲ್ಲ. ನಗರ ಪ್ರದೇಶದ ಶಾಲೆಗಳು ಆಟದ ಮೈದಾನದಿಂದ ವಂಚಿತವಾಗಿವೆ. ಈ ಬಗ್ಗೆ ಸರಕಾರಗಂಭೀರವಾಗಿ ಪರಿಗಣಿಸಬೇಕು.

ಬಜೆಟ್‌ನಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡುವ ಜತೆಗೆ ಆಟದ ಮೈದಾನ ನಿರ್ಮಾಣಕ್ಕೂ ಗಮನಹರಿಸಬೇಕು. ಒಂದೊಮ್ಮೆ ಶಾಲೆಗಳ ವ್ಯಾಪ್ತಿಯಲ್ಲಿ ಅಷ್ಟು ಜಾಗ ಸಿಗದಿದ್ದರೆ ಖಾಸಗಿ ಜಾಗ ಖರೀದಿಸಲು ಮುಂದಾಗಬೇಕು.”ಶಿಕ್ಷಣ ಹಕ್ಕು ಕಾಯ್ದೆ’ ಯಡಿ ಸಹ ಕ್ರೀಡೆ ಮತ್ತು ದೈಹಿಕ ಶಿಕ್ಷಣ ಕಡ್ಡಾಯವಾಗಿದೆ. ಆರ್‌ಟಿಇ ಕಾಯ್ದೆಯಡಿ ಶಾಲೆಗಳಿಗೆ ಕಡ್ಡಾಯವಾಗಿ ಒದಗಿಸಬೇಕಾದ 8 ಭೌತಿಕ ವ್ಯವಸ್ಥೆಗಳಲ್ಲಿ ಆಟದ ಮೈದಾನವೂ ಒಂದು. ಇಷ್ಟಾದರೂ ಶಾಲೆಗಳಲ್ಲಿ ಆಟದ ಮೈದಾನಗಳು ಇಲ್ಲ ಎಂದಾದರೆ ಶಿಕ್ಷಣ ಏಕಮುಖವಾಗುತ್ತದೆ.

ರಾಜ್ಯ ಸರಕಾರ ತತ್‌ಕ್ಷಣ ಆಟದ ಮೈದಾನಗಳನ್ನು ಒದಗಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಸ್ಥಳೀಯ ಸಂಸ್ಥೆಗಳು ಮತ್ತು ಸಾರ್ವಜನಿಕ ಆಟದ ಮೈದಾನಗಳನ್ನು ಕಡ್ಡಾಯವಾಗಿ ಶಾಲಾ ಮಕ್ಕಳ ಬಳಕೆಗೆ ಮೀಸಲಿಡಬೇಕು. ಒತ್ತುವರಿಯಾಗಿರುವ ಶಾಲಾ ಆಟದ ಮೈದಾನಗಳನ್ನು ತೆರವುಗೊಳಿಸುವ ಕೆಲಸ ಮಾಡಬೇಕು.
ರಾಜ್ಯದಲ್ಲಿ ಸಾವಿರಾರು ಎಕರೆ ಸರಕಾರಿ ಭೂಮಿ ಒತ್ತುವರಿಯಿಂದ ತೆರವುಗೊಳಿಸಲಾಗಿದ್ದು ಅಂತಹ ಜಾಗ ಆಟದ ಮೈದಾನಕ್ಕೆ ಮೀಸಲಿಡುವ ಕೆಲಸ ಆಗಬೇಕು. ಕಂದಾಯ ಇಲಾಖೆಯ ಜತೆ ಈ ಕುರಿತು ಚರ್ಚಿಸಿ ಶಿಕ್ಷಣ ಇಲಾಖೆ ಆಟದ ಮೈದಾನ ನಿರ್ಮಾಣಕ್ಕೆ ಮುಂದಾಗಬೇಕು. ಖುದ್ದು ಮುಖ್ಯಮಂತ್ರಿಯವರು ಹಾಗೂ ಶಿಕ್ಷಣ ಸಚಿವರು ಈ ಬಗ್ಗೆ ಕಾಳಜಿ ವಹಿಸಬೇಕು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.