ಪ್ರಸಕ್ತ ಸಾಲಿನ ವಿದ್ಯಾರ್ಥಿಗಳ ಅಳಲು ಕೇಳಲಿ ಸರಕಾರ


Team Udayavani, Oct 3, 2022, 6:00 AM IST

ಪ್ರಸಕ್ತ ಸಾಲಿನ ವಿದ್ಯಾರ್ಥಿಗಳ ಅಳಲು ಕೇಳಲಿ ಸರಕಾರ

ನ್ಯಾಯಾಲಯದ ಆದೇಶದಂತೆ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ರ್‍ಯಾಂಕ್‌ ಪಟ್ಟಿಯನ್ನು ಪರಿಷ್ಕರಿಸಿ ಪ್ರಕಟಿಸುವ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವೇನೋ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಿದೆ. ಈ ಪರಿಷ್ಕೃತ ಪಟ್ಟಿ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಸಮಾಧಾನ ತಂದಿರಬಹುದು. ಆದರೆ ದೊಣ್ಣೆಯ ಪೆಟ್ಟು ತಿಂದಿರುವವರು ಪ್ರಸಕ್ತ ಸಾಲಿನ ವಿದ್ಯಾರ್ಥಿಗಳು.

ಈ ಬಾರಿಯ ಸಿಇಟಿ ಫ‌ಲಿತಾಂಶ ಪ್ರಕಟನೆ ವೇಳೆ ಪುನರಾವರ್ತಿತ ವಿದ್ಯಾರ್ಥಿಗಳನ್ನು ಪರಿಗಣಿಸದೆ ರ್‍ಯಾಂಕ್‌ ಪಟ್ಟಿಯನ್ನು ಬಿಡುಗಡೆ ಮಾಡಿದ ಕೆಇಎ ಈ ಎಲ್ಲ ಗೊಂದಲಕ್ಕೆ ನಾಂದಿ ಹಾಡಿತ್ತು. ಕಳೆದೆರಡು ವರ್ಷಗಳಲ್ಲಿ ಕೊರೊನಾ ಹಿನ್ನೆಲೆಯಲ್ಲಿ ಸಿಇಟಿ ಪ್ರಕ್ರಿಯೆಯಲ್ಲಿ ಗೊಂದಲ ಸೃಷ್ಟಿ ಯಾಗಿತ್ತು. ಆದರೆ ಈ ಬಾರಿ ಶೈಕ್ಷಣಿಕ ಚಟುವಟಿಕೆಗಳು, ಪರೀಕ್ಷೆಗಳು, ಸಿಇಟಿ ಪ್ರಕ್ರಿಯೆಗಳು ಎಲ್ಲವೂ ಸುಗಮವಾಗಿಯೇ ನಡೆದಿದ್ದವು. ಹಾಗಾಗಿ ಪರೀಕ್ಷೆ- ಮೌಲ್ಯಮಾಪನ ಎಲ್ಲವೂ ಎಂದಿನಂತೆ ನಡೆದಿತ್ತು. ಆದರೆ ಈ ಬಾರಿ ಸಿಇಟಿಗೆ ಭಾರೀ ಸಂಖ್ಯೆಯಲ್ಲಿ ಪುನರಾವರ್ತಿತ ವಿದ್ಯಾರ್ಥಿಗಳು ನೋಂದಣಿ ಮಾಡಿ ಕೊಂಡಿದ್ದರು. ಆದರೆ ರ್‍ಯಾಂಕ್‌ ಪಟ್ಟಿ ಬಿಡುಗಡೆ ಸಂದರ್ಭದಲ್ಲಿ ಕೆಇಎ ಈ ವಿದ್ಯಾರ್ಥಿಗಳನ್ನು ಪರಿಗಣಿಸಲಿಲ್ಲ. ಇದರಿಂದ ಬೇಸರಗೊಂಡ ಪುನ ರಾವರ್ತಿತ ವಿದ್ಯಾರ್ಥಿಗಳು ಮತ್ತವರ ಹೆತ್ತವರು ನ್ಯಾಯಾಲಯದ ಮೊರೆ ಹೋಗಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್‌ ಪೀಠ ಪುನ ರಾವರ್ತಿತ ವಿದ್ಯಾರ್ಥಿಗಳನ್ನೂ ಪರಿಗಣಿಸಿ ಹೊಸ ರ್‍ಯಾಂಕ್‌ ಪಟ್ಟಿ ಬಿಡುಗಡೆ ಮಾಡುವಂತೆ ಆದೇಶಿಸಿತು. ಆರಂಭದಲ್ಲಿ ಕೆಇಎ ಮತ್ತು ರಾಜ್ಯ ಸರಕಾರ ಸುಪ್ರೀಂನ ಮೆಟ್ಟಿಲೇರುವ ತೀರ್ಮಾನಕ್ಕೆ ಬಂದಿತ್ತಾದರೂ ಕೊನೆಯಲ್ಲಿ ಪರಿಷ್ಕೃತ ರ್‍ಯಾಂಕಿಂಗ್‌ ಪಟ್ಟಿ ಬಿಡುಗಡೆಗೊಳಿಸಿ ಕೈತೊಳೆದುಕೊಂಡಿದೆ.

ಶಿಕ್ಷಣ ಇಲಾಖೆ ಮತ್ತು ಕೆಇಎಯ ಈ ಗೊಂದಲಕಾರಿ ನಡೆಗಳಿಂದ ವಿದ್ಯಾರ್ಥಿಗಳು ಬವಣೆ ಪಡುವಂತಾಗಿದೆ. ಸಿಇಟಿ ಫ‌ಲಿತಾಂಶ ಪ್ರಕಟವಾದಂದಿನಿಂದಲೂ ವಿದ್ಯಾರ್ಥಿಗಳಲ್ಲಿ ಅತಂತ್ರ ಭಾವ ಆರಂಭವಾಗಿತ್ತು. ಈ ಮಧ್ಯೆ ಖಾಸಗಿ ಡೀಮ್ಡ್ ವಿವಿಗಳು ಹಾಗೂ ಕೆಲವು ಖಾಸಗಿ ಕಾಲೇಜುಗಳು ತಮ್ಮ ಪಾಲಿನ ಸೀಟುಗಳಿಗೆ ಪ್ರವೇಶ ನೀಡಿ ಶೈಕ್ಷಣಿಕ ವರ್ಷವನ್ನು ಆರಂ ಭಿಸಿದವು. ಇದರಿಂದ ಸರಕಾರಿ ಸಿಇಟಿ ಪ್ರವೇಶಕ್ಕೆ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಈ ಬಾರಿ ಶೈಕ್ಷಣಿಕ ವರ್ಷ ಆರಂಭವಾಗುತ್ತದೋ ಇಲ್ಲವೋ ಎಂಬ ಆತಂಕವೂ ಹೆಚ್ಚಾಗಿತ್ತು. ಈ ಆತಂಕವನ್ನು ಕೆಇಎ ಪರಿಷ್ಕೃತ ಪಟ್ಟಿ ಕೊಂಚಮಟ್ಟಿಗೆ ಮುಂದೂಡಿರಬಹುದು. ಆದರೆ ಪ್ರಸಕ್ತ ಸಾಲಿನ ವಿದ್ಯಾರ್ಥಿಗಳಿಗೆ ನ್ಯಾಯ ಮರೀಚಿಕೆಯಾಗಿಯೇ ಇದೆ. ಈಗ ಇಡೀ ಪ್ರಕ್ರಿಯೆ ಆರಂಭಗೊಳ್ಳಬೇಕಿದೆ. ಈಗಾಗಲೇ ನಿಗದಿತ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಸಜ್ಜಾಗಿರುವ ಸಹಸ್ರಾರು ವಿದ್ಯಾರ್ಥಿಗಳನ್ನು ಮಾನ ಸಿಕವಾಗಿ ಕುಗ್ಗುವಂತೆ ಮಾಡಿದೆ. ಇದು ಬಡ ಹಾಗೂ ಉತ್ತಮ ಶ್ರೇಣಿಯ ವಿದ್ಯಾರ್ಥಿಗಳ ಸಂಕಷ್ಟವನ್ನು ಹೆಚ್ಚಿಸಿದೆ. ಪ್ರತಿಭಾವಂತ ಬಡ ವಿದ್ಯಾರ್ಥಿಗಳು “ಪಾಲಿಗೆ ಬಂದದ್ದು ಪಂಚಾಮೃತ’ ಎಂಬಂತೆ ತಮಗೆ ಪ್ರವೇಶ ಸಿಕ್ಕ ಕಾಲೇಜುಗಳಿಗೆ ಸೇರಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳುವ ಅನಿವಾರ್ಯ ಸ್ಥಿತಿಯನ್ನು ಕೆಇಎ ನಿರ್ಮಿಸಿದೆ.

ರಾಜ್ಯ ಸರಕಾರ ಪುನರಾವರ್ತಿತ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ಯೋಚಿಸಿದಂತೆಯೇ ಸಾವಿರಾರು ರ್‍ಯಾಂಕ್‌ಗಳ ಏರುಪೇರಿಗೆ ಗುರಿಯಾದ ಬಡ ವಿದ್ಯಾರ್ಥಿಗಳ ಸಹಾಯಕ್ಕೂ ನಿಲ್ಲಬೇಕು. ಮಧ್ಯಮ ಪರಿಹಾರವನ್ನು ಹುಡುಕಬೇಕು. ಜತೆಗೆ ಇನ್ನು ಮುಂದಾದರೂ ಇಂತಹ ಲೋಪಗಳು ಘಟಿಸದಂತೆ ಅಧಿಕಾರಶಾಹಿಗೆ ತಿಳಿ ಹೇಳಬೇಕು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.