ಕೈಗಾರಿಕೆಗಳು ರಾಜ್ಯ ಬಿಟ್ಟು ಹೋಗದಂತೆ ಸರಕಾರ ತಡೆಯಲಿ


Team Udayavani, Mar 8, 2022, 6:00 AM IST

ಕೈಗಾರಿಕೆಗಳು ರಾಜ್ಯ ಬಿಟ್ಟು ಹೋಗದಂತೆ ಸರಕಾರ ತಡೆಯಲಿ

ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ರಾಜ್ಯದ ಆರ್ಥಿಕ ಎಂಜಿನ್‌ ಮಾತ್ರವಲ್ಲ; ಅವಕಾಶಗಳ ಹೆಬ್ಟಾಗಿಲು ಕೂಡ ಆಗಿದೆ. ಕೇವಲ ಎರಡು ವರ್ಷಗಳ ಹಿಂದಿನ ಮಾತು. ಹೂಡಿಕೆದಾರರಿಗೆ ಸಿಲಿಕಾನ್‌ ಸಿಟಿ “ಅಚ್ಚುಮೆಚ್ಚು’ ಆಗಿತ್ತು. ಆದರೆ, ಈಗ ಹೂಡಿಕೆದಾರರು ನೆರೆಯ ರಾಜ್ಯಗಳ ಕಡೆಗೆ ಮುಖ ಮಾಡುತ್ತಿದ್ದಾರೆ. ಜತೆಗೆ ವಿದೇಶಿ ನೇರ ಬಂಡವಾಳ ಹೂಡಿಕೆ ಕೂಡ ರಾಷ್ಟ್ರೀಯ ಬೆಳವಣಿಗೆಗೆ ಹೋಲಿಸಿದರೆ, ಅತ್ಯಂತ ಕಳಪೆಯಾಗಿದೆ. ಇದು ಆರ್ಥಿಕ ಸಮೀಕ್ಷೆ ವರದಿಯಲ್ಲೇ ಬಹಿರಂಗಗೊಂಡಿದ್ದು, ಈ ಬೆಳವಣಿಗೆ ಬಗ್ಗೆ ವರದಿಯಲ್ಲಿ ತೀವ್ರ ಆತಂಕವೂ ವ್ಯಕ್ತವಾಗಿದೆ.

ಸಾಮಾನ್ಯವಾಗಿ ಮಧ್ಯಮ ಮತ್ತು ಕೆಳಮಧ್ಯಮ ವರ್ಗಕ್ಕೆ ಬೆಂಗಳೂರಿನಲ್ಲಿ ಮನೆ ಮಾಡುವುದು ದುಬಾರಿಯಾಗಿತ್ತು. ಆದರೆ, ಹೂಡಿಕೆದಾರರಿಗೂ ಇದರ ಬಿಸಿ ತಟ್ಟುತ್ತಿರುವುದು ಭೂಮಿಯ ಬೆಲೆ ಎಷ್ಟರಮಟ್ಟಿಗೆ ಏರಿಕೆಯಾಗುತ್ತಿದೆ ಎಂಬುದನ್ನು ಇಲ್ಲಿ ಗಮನಿಸಬಹುದು. ಸಾಮಾನ್ಯವಾಗಿ ಕೈಗಾರಿಕೆಯೊಂದರ ಮೂಲ ಹೂಡಿಕೆಯಲ್ಲಿ ಭೂಮಿಗೆ ಶೇ. 20ರಷ್ಟು ವೆಚ್ಚ ತಗುಲುತ್ತದೆ. ಆದರೆ ಉದ್ಯಾನ ನಗರಿಯಲ್ಲಿ ಈ ವೆಚ್ಚ ದುಪ್ಪಟ್ಟು ಆಗುತ್ತದೆ. ಇದರ ಜತೆಗೆ ಮೂಲಸೌಕರ್ಯಗಳ ಕೊರತೆ ಕೂಡ ಕಾಡುತ್ತಿದೆ.

ಹಾಗೆ ನೋಡಿದರೆ ಪ್ರತಿ ವರ್ಷ ಬೆಂಗಳೂರು ಅಭಿವೃದ್ಧಿಗಾಗಿ ಸರಕಾರ ಮತ್ತು ಸ್ಥಳೀಯ ಸಂಸ್ಥೆಗಳು ಹಣದ ಹೊಳೆಯನ್ನೇ ಹರಿಸುತ್ತವೆ. ಈಚೆಗೆ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಕೂಡ ಸುಮಾರು 8,409 ಕೋಟಿ ರೂ.
ಮೀಸಲಿಡಲಾಗಿದೆ. ಇದರಲ್ಲಿ ರಸ್ತೆ, ಮೇಲ್ಸೇತುವೆ, ಗ್ರೇಡ್‌ ಸಪರೇಟರ್‌ ಮತ್ತಿತರ ಯೋಜನೆಗಳಿಗೇ ಗರಿಷ್ಠ ಪ್ರಮಾಣದಲ್ಲಿ ನೀಡಲಾಗಿದೆ. ಆದರೂ ಮೂಲಸೌಕರ್ಯಗಳ ಕೊರತೆ ಕಾಡುತ್ತಿದೆ. ಈ ನಿಟ್ಟಿನಲ್ಲಿ ಸರಕಾರ ತನ್ನ “ಅಭಿವೃದ್ಧಿ ಪಥ’ದ ಅವಲೋಕನ ಮಾಡಿಕೊಳ್ಳುವ ಆವಶ್ಯಕತೆ ಇದೆ.

ಮುಖ್ಯವಾಗಿ ಅಭಿವೃದ್ಧಿಯ ವೇಗ ಮಂದಗತಿಯಲ್ಲಿ ಸಾಗುತ್ತಿದ್ದರೆ, ಮತ್ತೂಂದೆಡೆ ಸುಸ್ಥಿರ ಮತ್ತು ದೂರದೃಷ್ಟಿಯ ಕೊರತೆ ಕಾಡುತ್ತಿದೆ. ಉದಾಹರಣೆಗೆ, ಹೊರವರ್ತುಲ ರಸ್ತೆ ಮತ್ತು ಪೆರಿಫ‌ರಲ್‌ ರಿಂಗ್‌ ರಸ್ತೆ (ಪಿಆರ್‌ಆರ್‌) ಯೋಜನೆ ಚರ್ಚೆ ಹಲವು ವರ್ಷಗಳಿಂದ ನಡೆಯುತ್ತಿದೆ. ಕಳೆದ ಒಂದು ದಶಕದಲ್ಲಿ ಹತ್ತಾರು ಫ್ಲೈಓವರ್‌ಗಳು ತಲೆಯೆತ್ತಿವೆ. ಇದರ ನಡುವೆಯೂ ವಿಶ್ವದಲ್ಲಿ ಅತಿಹೆಚ್ಚು ಸಂಚಾರದಟ್ಟಣೆಯುಳ್ಳ ನಗರ ಎಂಬ ಹಣೆಪಟ್ಟಿ ಕೂಡ ಇದೆ. ಇನ್ನು ಶಾಶ್ವತ ಪರಿಹಾರ ನೀಡಬೇಕಾದ “ನಮ್ಮ ಮೆಟ್ರೋ’ ಒಂದು ದಶಕದಲ್ಲಿ ಕೇವಲ 53 ಕಿ.ಮೀ. ನಿರ್ಮಾಣವಾಗಿದೆ. ಉಪನಗರ ರೈಲು ಯೋಜನೆ ಇನ್ನೂ ಅನುಷ್ಠಾನ ಕೂಡ ಆಗಿಲ್ಲ.

ಕೇವಲ ಮೂಲಸೌಕರ್ಯ ಅಲ್ಲ; ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಪರವಾನಿಗೆಗಳಿಗಾಗಿ ಅಲೆದಾಟ ತಪ್ಪಿಸಲು ರೂಪಿಸಿದ್ದ ಏಕಗವಾಕ್ಷಿ ವ್ಯವಸ್ಥೆ ಕೂಡ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ನೇರವಾಗಿ ಹೇಳಲಾಗಿದೆ. ಈ ಮಧ್ಯೆ ಪ್ರತೀ ವರ್ಷ ವಿದ್ಯುತ್‌ ದರ ಏರಿಕೆ ಶಾಕ್‌ ಪ್ರತಿ ವರ್ಷ ತಟ್ಟುತ್ತಿದೆ. ನೆರೆಯ ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡಿಗೆ ಹೋಲಿಸಿದರೆ, ಕರ್ನಾಟಕದಲ್ಲಿ ವಿದ್ಯುತ್‌ ದರ ಹೆಚ್ಚಿದೆ. ನಮ್ಮಲ್ಲಿನ ಈ ಲೋಪಗಳು ನೆರೆಯವರಿಗೆ “ವರ’ವಾಗಿ ಪರಿಣಮಿಸುತ್ತಿವೆ. ಹೀಗೆ ಕೈಗಾರಿಕೆಗಳ ವಲಸೆಯು ಭವಿಷ್ಯದಲ್ಲಿ ಉದ್ಯೋಗಗಳ ಮೇಲೆ ಕೂಡ ಪರಿಣಾಮ ಬೀರುವ ಸಾಧ್ಯತೆ ಇದೆ. ಇದರಿಂದ ರಾಜ್ಯದ ಉತ್ಪಾದಕತೆ ಹಾಗೂ ಆಂತರಿಕ ಉತ್ಪನ್ನದ ಮೇಲೂ ಪ್ರತಿಕೂಲ ಪರಿಣಾಮ ಬೀರಲಿದೆ.

ಹೀಗಾಗಿ ಯಾವುದೇ ಕಾರಣಕ್ಕೂ ಕೈಗಾರಿಕೆಗಳು ರಾಜ್ಯ ಬಿಟ್ಟು ಹೋಗದಂತೆ ನೋಡಿಕೊಳ್ಳ ಬೇಕು, ಕೈಗೆಟಕುವದರದಲ್ಲಿ ಭೂಮಿ ಸಿಗುವಂತೆ ಮಾಡುವ ಜವಾಬ್ದಾರಿ ರಾಜ್ಯ ಸರಕಾರದ ಕೈಯ ಲ್ಲಿದೆ.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.