Polluted Water: ಕಲುಷಿತ ನೀರಿನ ಸಮಸ್ಯೆಗೆ ಸರಕಾರ ಅಂತ್ಯ ಹಾಡಲಿ


Team Udayavani, May 23, 2024, 6:45 AM IST

Polluted Water: ಕಲುಷಿತ ನೀರಿನ ಸಮಸ್ಯೆಗೆ ಸರಕಾರ ಅಂತ್ಯ ಹಾಡಲಿ

ಬಿರುಬೇಸಗೆ ಅನಂತರ ಮಳೆ ಬೀಳಲು ಪ್ರಾರಂಭವಾಗುತ್ತಿದ್ದಂತೆ ರಾಜ್ಯದಲ್ಲಿ ಕಲುಷಿತ ನೀರಿನ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಮುಖ್ಯಮಂತ್ರಿ ಸಿದ್ದರಾ ಮಯ್ಯನವರ ತವರು ಜಿಲ್ಲೆ ಮೈಸೂರಿನ ಕೆ. ಸಾಲುಂಡಿ ಗ್ರಾಮದ 22 ವರ್ಷದ ಯುವಕನೊಬ್ಬ ಕಲುಷಿತ ನೀರು ಸೇವಿಸಿ ಮೃತಪಟ್ಟಿರುವುದು ತಾಜಾ ಉದಾ ಹರಣೆ. ಈ ಘಟನೆಯಲ್ಲಿ 40ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿದ್ದಾರೆ. ಈ ವರ್ಷ ರಾಜ್ಯದ ಹಲವೆಡೆ ಈ ಕಲುಷಿತ ನೀರಿನ ಪ್ರಕರಣಗಳು ವರದಿಯಾಗಿವೆ.

ಬರಗಾಲ ಮತ್ತು ಮಳೆ ಇವೆರಡಕ್ಕೂ ಕಲುಷಿತ ನೀರಿಗೂ ಪರಸ್ಪರ ಸಂಬಂಧ ಇದೆ. ಬರಗಾಲದಲ್ಲಿ ಅಂತರ್ಜಲ ಮಟ್ಟ ಕುಸಿದಾಗ ಮಾನವ ಜೀವಕ್ಕೆ ಅಪಾಯಕಾರಿ ರಾಸಾಯನಿಕಗಳು ನೀರಿಗೆ ಸೇರಿ ಅದು ಕಲುಷಿತಗೊಳ್ಳುತ್ತದೆ. ಅದೇ ರೀತಿ ಮಳೆಗಾಲ ಆರಂಭವಾಗುತ್ತಿದ್ದಂತೆ ಚರಂಡಿಗಳು ತುಂಬಿ ಅಲ್ಲಿನ ಕಲ್ಮಶ ನೀರು ಕುಡಿಯುವ ನೀರಿಗೆ ಸೇರಿಕೊಂಡರೆ ಅದು ಸಹ ನೀರು ಕಲುಷಿತಗೊಳ್ಳಲು ಕಾರಣವಾಗುತ್ತದೆ. ಇದರ ಸೇವನೆ ಜನರ ಆರೋಗ್ಯದ ಮೇಲೆ ಪರಿಣಾಮ ಉಂಟು ಮಾಡುತ್ತದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಚಿತ್ರದುರ್ಗ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಆರು ಜನ ಪ್ರಾಣ ಕಳೆದುಕೊಂಡಿದ್ದರು. ಇಂತಹದ್ದೆ ಘಟನೆ ರಾಯಚೂರು ಜಿಲ್ಲೆಯಲ್ಲೂ ನಡೆದಿತ್ತು. ಆಗ ಎಚ್ಚೆತ್ತುಕೊಂಡಿದ್ದ ಸರಕಾರ “ನೈರ್ಮಲ್ಯ ಅಭಿಯಾನ’ ಘೋಷಣೆ ಮಾಡಿತ್ತು. ಆದರೆ ಮುಂದೆ ಆ ಅಭಿಯಾನ ಏನಾಯಿತು ಎಂದು ತಿಳಿದಿಲ್ಲ.

ಕಲುಷಿತ ನೀರು ಸೇವಿಸಿದ ಪ್ರಕರಣಗಳು ವರದಿಯಾದ ತತ್‌ಕ್ಷಣ ಆರಂಭ ಶೂರತ್ವ ತೋರಿಸುವ ಆಡಳಿತ ವರ್ಗ ಸತ್ತವರಿಗೆ ಪರಿಹಾರ, ಅಸ್ವಸ್ಥರ ಚಿಕಿತ್ಸಾ ವೆಚ್ಚ ಭರಿಸುವುದು, ಒಂದಿಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸುವ ಅಲ್ಪಕಾಲಿಕ ಕ್ರಮಗಳನ್ನು ಕೈಗೊಳ್ಳುತ್ತದೆ. ಆದರೆ ದೀರ್ಘ‌ಕಾಲಿಕ ಕ್ರಮಗಳ ಬಗ್ಗೆ ಅಷ್ಟೊಂದು ಗಂಭೀರತೆ ತೋರುವುದಿಲ್ಲ. ಇಂತಹ ಪ್ರಕರಣಗಳು ನಡೆದಾಗ ಅಲ್ಪಕಾಲಿಕ ಕ್ರಮಗಳು ಎಷ್ಟು ಆವಶ್ಯಕವೋ ದೀರ್ಘ‌ಕಾಲಿಕ ಕ್ರಮಗಳು, ಶಾಶ್ವತ ಪರಿಹಾರ ಕಂಡುಕೊಳ್ಳುವುದು ಅಷ್ಟೇ ಮುಖ್ಯ. ಬರ ಮತ್ತು ನೆರೆಯಿಂದಾಗಿ ನೀರು ಕಲ್ಮಷಗೊಳ್ಳಲು ಪ್ರಕೃತಿ ವಿಕೋಪ ಕಾರಣ ಎಂಬ ಸಿದ್ದ ಸಬೂಬುಗಳನ್ನು ಹೇಳುವುದನ್ನು ಬಿಟ್ಟು, ಆಡಳಿತ ವರ್ಗ ನಿರ್ಲಕ್ಷ್ಯಗಳತ್ತ ಗಮನ ಹರಿಸಬೇಕು.

ಬರಗಾಲ ಮತ್ತು ಮಳೆ ಜತೆಗೆ ಕಲುಷಿತ ನೀರು ಸಮಸ್ಯೆಗೆ ಮುಖ್ಯವಾಗಿ ಶುದ್ಧ ನೀರು ಪೂರೈಕೆ ವ್ಯವಸ್ಥೆಯ ಕೊರತೆ ಒಂದು ಕಡೆಯಾದರೆ; ನದಿ-ಹಳ್ಳ- ಕೆರೆಗಳಿಗೆ ವಿವಿಧ ತ್ಯಾಜ್ಯಗಳ ಯಥೇತ್ಛ ಸೇರುವಿಕೆ, ಮಿತಿ ಮೀರಿದ ರಸ ಗೊಬ್ಬರ-ಕ್ರಿಮಿನಾಶಕ ಬಳಕೆ, ಬಯಲು ಬಹಿರ್ದೆಸೆ ಹಾಗೂ ಆರ್ಸೆನಿಕ್‌ ಅಂಶ ಸೇರ್ಪಡೆಯೂ ಕಾರಣವಾಗುತ್ತಿದೆ.

ಸುಸ್ಥಿರ ಅಭಿವೃದ್ಧಿ ಗುರಿಗಳ ಮುನ್ನೋಟ-2030ರಕ್ಕೆ ಪೂರಕವಾಗಿ 2020ರಲ್ಲಿ ಪ್ರಕಟಿಸಲಾದ “ಕರ್ನಾಟಕದ ಕಾರ್ಯತಂತ್ರಗಳು ಮತ್ತು ಕ್ರಿಯಾ ಯೋಜನೆ’ ಯಲ್ಲಿ 2030ರ ವೇಳೆಗೆ ಎಲ್ಲರಿಗೂ ಶುದ್ಧವಾದ ಕುಡಿಯುವ ನೀರನ್ನು ಸಮರ್ಪಕ ಪ್ರಮಾಣದಲ್ಲಿ ಒದಗಿಸುವುದನ್ನು ಗುರಿಯನ್ನಾಗಿಟ್ಟುಕೊಳ್ಳಲಾಗಿದೆ. ಹಿಂದಿನ ವರ್ಷಗಳಲ್ಲಿ ಈ ಗುರಿ ಸಾಧನೆಯಲ್ಲಿನ ಪ್ರಗತಿ ಅಷ್ಟೊಂದು ಸಮಾ ಧಾನಕರವಾಗಿಲ್ಲ. ಮನೆಯ ಆವರಣದಲ್ಲಿ ಸುರಕ್ಷಿತ ಮತ್ತು ಸಾಕಷ್ಟು ಪ್ರಮಾಣದ ನೀರು ಹೊಂದುವ ಮನೆಗಳ ಸಂಖ್ಯೆಯನ್ನು 2030ರ ವೇಳೆಗೆ ಗ್ರಾಮೀಣ ಭಾಗದಲ್ಲಿ ಶೇ.96 ಹಾಗೂ ನಗರ ಪ್ರದೇಶದಲ್ಲಿ ಶೇ.98 ಆಗಬೇಕು ಎಂದು ಗುರಿ ಹಾಕಿಕೊಳ್ಳಲಾಗಿದೆ. ಆದರೆ ಸದ್ಯ ಗ್ರಾಮೀಣ ಭಾಗದಲ್ಲಿ ಇದರ ಪ್ರಗತಿ ತುಂಬಾ ಕಡಿಮೆ (ಶೇ. 60) ಇದೆ. ಇತ್ತೀಚಿಗೆ ನಡೆದ ಘಟನೆಗಳು ಸರಕಾರಕ್ಕೆ ಎಚ್ಚರಿಕೆಯ ಗಂಟೆಯಾಗಬೇಕು. ಸ್ಥಳೀಯ ಆಡಳಿತ ಈ ನಿಟ್ಟಿನಲ್ಲಿ ಸಕ್ರಿಯಗೊಳ್ಳಬೇಕು. ಸಕಾಲದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಮೂಲಕ ಮುಂದೆ ಸಂಭವಿಸಬಹುದಾದ ಅವಘಡಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮತ್ತು ಸ್ಥಳೀಯ ಆಡಳಿತ ಕಾರ್ಯೋನ್ಮುಖವಾಗಬೇಕು.

ಟಾಪ್ ನ್ಯೂಸ್

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಷ್ಯಾದ ಅಮಾನುಷ ರಣನೀತಿಗೆ ವಿದೇಶಿ ಪ್ರಜೆಗಳು ಬಲಿಪಶು!

ರಷ್ಯಾದ ಅಮಾನುಷ ರಣನೀತಿಗೆ ವಿದೇಶಿ ಪ್ರಜೆಗಳು ಬಲಿಪಶು!

Bi-annual Admission: Pros and Cons Let’s discuss

Editorial: ವರ್ಷಕ್ಕೆರಡು ಬಾರಿ ಪ್ರವೇಶಾತಿ: ಸಾಧಕ-ಬಾಧಕ ಚರ್ಚೆಯಾಗಲಿ

Editorial: ಜನತೆಯ ಸಮತೋಲಿತ ತೀರ್ಪನ್ನು ಪಕ್ಷಗಳು ಗೌರವಿಸಲಿ

Editorial: ಜನತೆಯ ಸಮತೋಲಿತ ತೀರ್ಪನ್ನು ಪಕ್ಷಗಳು ಗೌರವಿಸಲಿ

ಪ್ರಜಾತಂತ್ರದ ಮುಕುಟಕ್ಕೆ ಜಾಗತಿಕ ದಾಖಲೆಯ ಗರಿ

ಪ್ರಜಾತಂತ್ರದ ಮುಕುಟಕ್ಕೆ ಜಾಗತಿಕ ದಾಖಲೆಯ ಗರಿ

Exam 2

Public Examination: ವಿವೇಕಯುತ ನಡೆ ಇರಲಿ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

1-ssdad

ಅನುಚಿತ ವರ್ತನೆ‌ ; ಜೆಸ್ಕಾಂ ಗುತ್ತಿಗೆದಾರನಿಗೆ‌ ಚಪ್ಪಲಿಯಿಂದ ಹೊಡೆದ ಮಹಿಳೆ

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.