ಕೆ-ಸೆಟ್‌ ಅಕ್ರಮ ಸಂಬಂಧ ಪಾರದರ್ಶಕವಾಗಿ ತನಿಖೆಯಾಗಲಿ


Team Udayavani, Dec 27, 2022, 6:00 AM IST

ಕೆ-ಸೆಟ್‌ ಅಕ್ರಮ ಸಂಬಂಧ ಪಾರದರ್ಶಕವಾಗಿ ತನಿಖೆಯಾಗಲಿ

ಇತ್ತೀಚಿನ ದಿನಗಳಲ್ಲಿ ಕರ್ನಾಟಕವು ಪರೀಕ್ಷಾ ಅಕ್ರಮಗಳಿಂದಲೇ ಹೆಚ್ಚು ಕುಖ್ಯಾತಿಗೆ ಒಳಗಾಗುತ್ತಿದೆ. ಪೊಲೀಸ್‌ ನೇಮಕಾತಿ, ಪ್ರಾಧ್ಯಾಪಕರ ನೇಮಕಾತಿ ಸಹಿತ ಹಲವಾರು ಪರೀಕ್ಷಾ ಅಕ್ರಮಗಳು ನಡೆದಿದ್ದು, ದೇಶದ ಮಟ್ಟದಲ್ಲಿ ತಲೆ ತಗ್ಗಿಸುವಂತಾಗಿದೆ. ಈಗ ಈ ಸಾಲಿಗೆ ಉಪನ್ಯಾಸಕರ ಅರ್ಹತೆಗಾಗಿ ಇಲ್ಲೇ ನಡೆಸುವ ಕೆ-ಸೆಟ್‌ ಪರೀಕ್ಷೆಯಲ್ಲಿಯೂ ಅಕ್ರಮ ನಡೆದಿರುವ ವಾಸನೆ ವ್ಯಕ್ತವಾಗಿದ್ದು, ಈ ಸಂಬಂಧ ತನಿಖೆಗಾಗಿ ರಾಜ್ಯ ಸರಕಾರ ಸಮಿತಿಯೊಂದನ್ನೂ ನೇಮಕ ಮಾಡಿದೆ.

ಮೇಲಿನ ಎಲ್ಲ ವಿಚಾರಗಳನ್ನು ಗಮನಿಸಿದರೆ, ಒಂದು ನೇಮಕಾತಿಯ ವೇಳೆಯ ಬೆಳವಣಿಗೆಗಳು ಮತ್ತು ಅರ್ಹತಾ ಪರೀಕ್ಷೆ ವೇಳೆಯ ಪ್ರಕ್ರಿಯೆಗಳು ಹಣ ಮಾಡಿಕೊಳ್ಳಲು ಅತ್ಯುತ್ತಮ ವೇದಿಕೆಯಂತೆ ಕಂಡು ಬಂದಿವೆ. ಅದರಲ್ಲೂ ಪೊಲೀಸ್‌ ಮತ್ತು ಪ್ರಾಧ್ಯಾಪಕರ ನೇಮಕಾತಿ ವೇಳೆಯಲ್ಲಿ ಲಕ್ಷ ಲಕ್ಷ ಹಣ ಹರಿದಾಡಿರುವುದೂ ಎಲ್ಲರ ಗಮನಕ್ಕೆ ಬಂದಿದೆ. ಇದು ಒಂದು ರೀತಿಯಲ್ಲಿ ಶ್ರಮದಿಂದ ಓದಿ ನೇಮಕವಾಗಬೇಕು ಎಂದುಕೊಂಡವರಿಗೆ ಮೋಸ ಮಾಡಿದಂತಾಗಿದೆ.

ಕೆ-ಸೆಟ್‌ ವಿಚಾರಕ್ಕೆ ಬರುವುದಾದರೆ ಇದೊಂದು ಉಪನ್ಯಾಸಕರಾಗಲು ರಾಜ್ಯಮಟ್ಟದಲ್ಲಿ ನಡೆಯುವ ಅರ್ಹತಾ ಪರೀಕ್ಷೆ. ಅದಷ್ಟೋ ವಿದ್ಯಾರ್ಥಿಗಳು ಕ್ಲಿಷ್ಟವಾದ ನೆಟ್‌ ಪರೀಕ್ಷೆ ಪಾಸು ಮಾಡಲಾಗದೇ ಕೆ-ಸೆಟ್‌ ಪಾಸು ಮಾಡಿಕೊಂಡು ಉಪನ್ಯಾಸಕರಾಗಲು ಅರ್ಹತೆ ಗಳಿಸಿಕೊಳ್ಳುತ್ತಾರೆ. ಆದರೆ 2021ರ ಸಾಲಿನಲ್ಲಿ ಪರೀಕ್ಷಾ ಅಕ್ರಮ ನಡೆದಿರುವ ಬಗ್ಗೆ ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರೇ ಆರೋಪ ಮಾಡಿದ್ದು, ಈ ಸಂಬಂಧ ಯುಜಿಸಿ ಚೇರ್‌ಮನ್‌ ಜಗದೀಶ್‌ ಕುಮಾರ್‌ ಅವರಿಗೇ ದೂರು ನೀಡಿದ್ದಾರೆ. ಅಲ್ಲದೆ ಇವರ ಮನವಿ ಮೇರೆಗೆ ಇತ್ತೀಚೆಗಷ್ಟೇ ರಾಜ್ಯ ಸರಕಾರ ಕೆ-ಸೆಟ್‌ ನಡೆಸುವ ಹೊಣೆಯನ್ನು ಮೈಸೂರು ವಿಶ್ವವಿದ್ಯಾನಿಲಯದಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಿದೆ.

ಈ ಬೆಳವಣಿಗೆ ಒಂದು ರೀತಿಯಲ್ಲಿ ಗತಕಾಲದ ಇತಿಹಾಸ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಇಟ್ಟ ಕಪ್ಪು ಚುಕ್ಕೆಯಂತಾಗಿದೆ. ಖಂಡಿತವಾಗಿಯೂ ಹೇಳುವುದಾದರೆ ರಾಜ್ಯ ಸರಕಾರ ಪಾರದರ್ಶಕವಾಗಿ ತನಿಖೆ ನಡೆಸಿ, ಆರೋಪಿಗಳು ಅದೆಷ್ಟೇ ದೊಡ್ಡವರಾಗಿದ್ದರೂ ಸರಿ ಅವರಿಗೆ ಶಿಕ್ಷೆ ಕೊಡಿಸಲೇಬೇಕಾಗಿದೆ. ಇಲ್ಲದಿದ್ದರೆ ವಿದ್ಯಾರ್ಥಿ ಸಮೂಹ ಇಂಥ ಆಯ್ಕೆ ಅಥವಾ ಅರ್ಹತಾ ಪರೀಕ್ಷೆಗಳ ವಿಚಾರದಲ್ಲಿ ನಂಬಿಕೆಯನ್ನೇ ಕಳೆದುಕೊಳ್ಳುತ್ತಾರೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ.

ಕೆ-ಸೆಟ್‌ ಅನ್ನೂ ಯುಜಿಸಿಯ ಅಡಿಯಲ್ಲೇ ನಡೆಸಲಾಗುತ್ತಿದ್ದು, 2020ರಿಂದ ವರ್ಷಕ್ಕೆ ಒಮ್ಮೆಯಂತೆ ಮೂರು ಬಾರಿ ಪರೀಕ್ಷೆ ನಡೆಸುವ ಹೊಣೆಯನ್ನು ಮೈಸೂರು ವಿ.ವಿ.ಗೆ ನೀಡಲಾಗಿದೆ. ಒಟ್ಟು 41 ವಿಷಯಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. 2021ರಲ್ಲಿ ನಡೆದ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿದ್ದು, ಲಕ್ಷಾಂತರ ವಿದ್ಯಾರ್ಥಿಗಳಿಗೆ ಮೋಸವಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಅವ್ಯವಹಾರಕ್ಕೆ ಸಂಯೋಜಕರು ಮತ್ತು ಇತರ ಸಿಬಂದಿ ಹೊಣೆಗಾರರು ಎಂದೂ ಯುಜಿಸಿಗೆ ದೂರು ಹೋಗಿದೆ.

ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕಾದ ಈ  ಸಮೂಹವೇ ಅಕ್ರಮದಲ್ಲಿ ಪಾಲ್ಗೊಂಡು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೋಸ ಮಾಡುವುದು ಸರ್ವಥಾ ಒಪ್ಪುವಂಥದ್ದಲ್ಲ. ಈ ಪ್ರಕರಣಗಳನ್ನು ಸರಕಾರ ಘನಘೋರ ಅಪರಾಧವೆಂದೇ ಪರಿಗಣಿಸಬೇಕು. ಅಷ್ಟೇ ಅಲ್ಲದೆ ಸಿಬಂದಿಗೆ ಶಿಕ್ಷೆ ನೀಡುವುದರ ಜತೆಗೆ ಅಡ್ಡದಾರಿಯಲ್ಲಿ ಅರ್ಹತೆ ಗಿಟ್ಟಿಸಿಕೊಳ್ಳುವಂಥ ವಿದ್ಯಾರ್ಥಿಗಳ ಮೇಲೂ ಕಠಿನ ಕ್ರಮ ತೆಗೆದುಕೊಳ್ಳಬೇಕಾದದ್ದು ಅಷ್ಟೇ ಮುಖ್ಯ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.