ಕನ್ನಡ ಅನುಷ್ಠಾನ ಸಮರ್ಪಕವಾಗಿ ಜಾರಿಯಾಗಲಿ


Team Udayavani, Sep 24, 2022, 6:00 AM IST

ಕನ್ನಡ ಅನುಷ್ಠಾನ ಸಮರ್ಪಕವಾಗಿ ಜಾರಿಯಾಗಲಿ

ರಾಜ್ಯದಲ್ಲಿ ಕನ್ನಡ ಸರಿಯಾಗಿ ಬಳಕೆಯಾಗುತ್ತಿಲ್ಲ, ಸರಕಾರಿ ಕಾರ್ಯಕ್ರಮಗಳಲ್ಲೂ ಕನ್ನಡವನ್ನು ಮರೆತು, ಆಂಗ್ಲ ಭಾಷೆ ಮತ್ತು ಹಿಂದಿಯನ್ನು ಎಗ್ಗಿಲ್ಲದೇ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಲೇ ಇದೆ. ಈ ರೀತಿಯಾದಾಗ ಕನ್ನಡ ಸಂಘಟನೆಗಳು ಈ ಬಗ್ಗೆ ಧ್ವನಿ ಎತ್ತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಒಂದು ದೂರು ಕೊಟ್ಟು, ಅದು ಕೂಡ ಕನ್ನಡ ನಿರ್ಲಕ್ಷ್ಯ ಮಾಡಿದವರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳುವುದಾಗಿ ಹೇಳುತ್ತದೆ. ಆದರೆ ಇಲ್ಲಿವರೆಗೂ ಕಠಿನ ಕ್ರಮ ಕೈಗೊಳ್ಳುವ ಯಾವ ಅಧಿಕಾರವೂ ಇರಲಿಲ್ಲ. ಈಗ ಕನ್ನಡ ಭಾಷಾ ರಕ್ಷಣೆಗೆ ಮಸೂದೆಯನ್ನು ಮಂಡಿಸುವ ಮೂಲಕ ರಾಜ್ಯ ಸರಕಾರ ಅತ್ಯಂತ ಮಹತ್ವವಾದ ಹಾಗೂ ದಿಟ್ಟ ಹೆಜ್ಜೆಯನ್ನು ಇಟ್ಟಿದೆ.

ಈ ಮಸೂದೆಗೆ ವಿಧಾನಮಂಡಲದ ಉಭಯ ಸದನಗಳಲ್ಲಿ ಈ ಕಲಾಪದಲ್ಲೇ ಅನುಮೋದನೆ ನೀಡಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಶಾಸಕರು ಈ ಮಸೂದೆಯನ್ನು ತುರ್ತು ಎಂಬಂತೆ ಪರಿಗಣಿಸಬಹುದು ಎಂಬ ನಿರೀಕ್ಷೆಯೂ ಸಹ ಹುಸಿಯಾಗಿದೆ. ಕರ್ನಾಟಕ ಮತ್ತು ಕನ್ನಡಕ್ಕೆ ಅತ್ಯಂತ ಅಗತ್ಯ ಎನಿಸಿರುವ ಈ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಈ ಕುರಿತು ಮುಂದಿನ ಅಧಿವೇಶನದಲ್ಲಿ ದೀರ್ಘ‌ ಚರ್ಚೆ ನಡೆದು ಅನುಮೋದನೆ ಸಿಗುವುದು ಖಚಿತ.

ಕನ್ನಡದ ಸಾರ್ವಭೌಮತ್ವ ಕಾಪಾಡಲು ಈ ಮಸೂದೆಯಲ್ಲಿ ಹಲವು ಪ್ರಮುಖ ಅಂಶಗಳನ್ನು ಸೇರಿಸಿಕೊಳ್ಳಲಾಗಿದೆ. ಕನ್ನಡ ಅನುಷ್ಠಾನದಲ್ಲಿ ಯಾವುದೇ ನಿರ್ಲಕ್ಷ್ಯ ತೋರಿದರೆ ಮೊದಲ ಬಾರಿ ತಪ್ಪಿಗೆ 5 ಸಾವಿರ, ಎರಡನೇ ಬಾರಿಗೆ 10 ಸಾವಿರ ಮತ್ತು ಮೂರನೇ ಬಾರಿಗೆ 20 ಸಾವಿರ ರೂ. ದಂಡ ವಿಧಿಸುವ ಬಗ್ಗೆ ರಾಜ್ಯ ಸರಕಾರದ ಪ್ರಸ್ತಾವಿತ ಮಸೂದೆಯಲ್ಲಿ ಉಲ್ಲೇಖೀಸಲಾಗಿದೆ. ಕನ್ನಡ ಅನುಷ್ಠಾನದಲ್ಲಿ ತಪ್ಪೆಸಗುವ ಸರಕಾರಿ ಅಧಿಕಾರಿಗಳಿಗೂ ಈ ದಂಡದ ರುಚಿ ತೋರಿಸುವ ಅನಿವಾರ್ಯತೆ ಪ್ರಸ್ತುತದಲ್ಲಿ ಇದೆ.

ಇದರ ಜತೆಗೆ ಕನ್ನಡ ಬಳಕೆಯನ್ನು ಉತ್ತೇಜಿಸುವ ಸಲುವಾಗಿ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಉನ್ನತ, ತಾಂತ್ರಿಕ ಮತ್ತು ವೃತ್ತಿ ಶಿಕ್ಷಣದಲ್ಲಿ ಮೀಸಲಾತಿ ನೀಡುವುದು, ನ್ಯಾಯಾಲಯದಲ್ಲಿ ಕನ್ನಡ ಬಳಕೆ, ಪ್ರಸಾರಕ್ಕೆ ಪ್ರತ್ಯೇಕ ನೀತಿ ತರುವಂಥ ಕ್ರಮಗಳನ್ನೂ ಪ್ರಸ್ತಾವಿತ ಮಸೂದೆಯಲ್ಲಿ ಸೇರಿಸಲಾಗಿದೆ. ಸದ್ಯದ ಮಟ್ಟಿಗೆ ಈ ಎಲ್ಲ ಸಂಗತಿಗಳು ಕನ್ನಡ ನಾಡು-ನುಡಿಯ ಬೆಳವಣಿಗೆಗೆ ಪೂರಕವಾಗಿರಲಿ.

ಈ ಮಸೂದೆ ಅನುಮೋದನೆಗೊಂಡು ನಾಳೆ ಕಾಯ್ದೆಯಾಗಲಿದೆ. ಆದರೆ ಅದರ ಅನುಷ್ಠಾನ ಸಮರ್ಪಕವಾದಲ್ಲಿ ಮಾತ್ರ ಅದಕ್ಕೊಂದು ಅರ್ಥ ಬರುತ್ತದೆ. ವಿಚಿತ್ರವೆಂದರೆ ರಾಜ್ಯದ ಅನ್ನ ನೀಡುವ ಭಾಷೆಯಾಗಿರುವ ಕನ್ನಡವನ್ನು ಎಲ್ಲೆಡೆ ಬಳಕೆ ಮಾಡಿ ಎಂದು ಹೇಳುವ ಸ್ಥಿತಿ ಬಂದಿರುವುದೇ ನಾಚಿಕೆಗೇಡಿನ ವಿಚಾರ.

ಇತ್ತೀಚೆಗೆ ಆಂಗ್ಲ ಭಾಷೆಯ ವ್ಯಾಮೋಹ ಕಡಿಮೆಯಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಸಮಸ್ಯೆಯಾಗುತ್ತಿರುವುದು ಹಿಂದಿ ಬಳಕೆಯಿಂದ. ಕೇಂದ್ರ ಸರಕಾರಿ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಈಗಾಗಲೇ ಹಲವಾರು ಬಾರಿ ಕನ್ನಡವನ್ನು ಸಂಪೂರ್ಣವಾಗಿ ಅವಗಣಿಸಲಾಗಿದೆ. ಈ ಸಂಬಂಧ ಸಂಬಂಧಪಟ್ಟವರ ಬಳಿ ಸ್ಪಷ್ಟನೆ ಕೇಳಿದ್ದಾಗ್ಯೂ ಅವರಿಂದ ಸರಿ ಉತ್ತರ ಬಂದಿಲ್ಲ. ಆದರೆ ಈ ನೆಲದಲ್ಲಿ ಕಾರ್ಯಕ್ರಮ ಮಾಡುವುದು ಕನ್ನಡ ಮರೆಯುವುದೇ ದೊಡ್ಡ ಅಪರಾಧವೆನ್ನಲೇಬೇಕಾಗುತ್ತದೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.