ಭಾರತೀಯರನ್ನು ಸುರಕ್ಷಿತವಾಗಿ ವಾಪಸ್‌ ಕರೆತರಲಿ


Team Udayavani, Feb 26, 2022, 6:00 AM IST

ಭಾರತೀಯರನ್ನು ಸುರಕ್ಷಿತವಾಗಿ ವಾಪಸ್‌ ಕರೆತರಲಿ

ರಷ್ಯಾ ಮತ್ತು ಉಕ್ರೇನ್‌ ನಡುವೆ ಯುದ್ಧ ನಡೆಯುತ್ತಿದ್ದು, ಸಾವಿರಾರು ಭಾರತೀಯರು ಯುದ್ಧಗ್ರಸ್ಥ ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ, ಈಗಾಗಲೇ ಭಾರತೀಯರು ಮತ್ತು ವಿದ್ಯಾರ್ಥಿಗಳ ಸುರಕ್ಷತೆಗೆ ಒತ್ತು ನೀಡಿದೆ. ಗುರುವಾರವೇ ಉಕ್ರೇನ್‌ನಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಗಳಿಗೆ

ಕೆಲವು ಶಾಲೆಗಳಲ್ಲಿ ಮತ್ತು ಮೆಟ್ರೋ ಸ್ಟೇಶನ್‌ಗಳಲ್ಲಿ, ಬಾಂಬ್‌ ನಿರೋಧಕ ಬಂಕರ್‌ಗಳಲ್ಲಿ ಆಶ್ರಯ ನೀಡುವಲ್ಲಿ ಎಲ್ಲ ರೀತಿಯಸಹಕಾರವನ್ನು ನೀಡಿದೆ.

ಸದ್ಯಕ್ಕೆ ಉಕ್ರೇನ್‌ ಪರಿಸ್ಥಿತಿಯಂತೂ ಉತ್ತಮವಾಗಿಲ್ಲ. ಈಗಾಗಲೇ ರಷ್ಯಾ ಪಡೆಗಳು ಉಕ್ರೇನ್‌ ರಾಜಧಾನಿ ಕೀವ್‌ಗೆ ಪ್ರವೇಶ ಮಾಡಿವೆ. ಒಂದೊಮ್ಮೆ ಕೀವ್‌ ರಷ್ಯನ್ನರ ವಶವಾದರೆ, ಪರಿಸ್ಥಿತಿ ಇನ್ನೂ ಕೈಮೀರಿ ಹೋಗುತ್ತದೆ. ಹೀಗಾಗಿ ತ್ವರಿತಗತಿಯಲ್ಲಿ ಭಾರತೀಯರನ್ನು ವಾಪಸ್‌ ಕಳುಹಿಸಲು ಅಲ್ಲಿನ ರಾಯಭಾರ ಕಚೇರಿ ಶಕ್ತಿ ಮೀರಿ ಕೆಲಸ ಮಾಡಬೇಕಿದೆ.

ಈಗಾಗಲೇ ಉಕ್ರೇನ್‌ ಅಧ್ಯಕ್ಷ ವೋಲೋಡಿಮಿರ್‌ ಝೆಲೆನ್‌ಸ್ಕಿ ಸುರಕ್ಷಿತ ಬಂಕರ್‌ಗೆ ತೆರಳಿ ಆಶ್ರಯ ಪಡೆದು ಕೊಂಡಿರುವ ಸುದ್ದಿಗಳು ಹೊರಬಿದ್ದಿವೆ. ಇದರ ಜತೆಗೆ ರಷ್ಯಾ ಜತೆಗೆ ಸಂಧಾನಕ್ಕೂ ಸಿದ್ಧವಿರುವುದಾಗಿಯೂ ಹೇಳಿಕೊಂಡಿದ್ದಾರೆ. ಇದಕ್ಕೆ ರಷ್ಯಾ ಶಸ್ತ್ರಾಸ್ತ್ರ ತ್ಯಜಿಸಿದರೆ ಮಾತ್ರ ಸಂಧಾನ ಎಂದು ಉಕ್ರೇನ್‌ಗೆ ಹೇಳಿದೆ. ಹೀಗಾಗಿ ಸದ್ಯಕ್ಕೆ ಯುದ್ಧ ನಿಲ್ಲುವ ಸಾಧ್ಯತೆಗಳು ತೀರಾ ಕಡಿಮೆಯೇ ಇವೆ.

ಯುದ್ಧಗ್ರಸ್ಥ ಉಕ್ರೇನ್‌ನಲ್ಲಿ ಕರ್ನಾಟಕ ಸುಮಾರು 340 ವಿದ್ಯಾರ್ಥಿಗಳು ಸೇರಿ, ಭಾರತದ 20 ಸಾವಿರ ಮಂದಿ ವಾಸಿಸುತ್ತಿದ್ದಾರೆ. ಯುದ್ಧ ಆರಂಭವಾಗುವ ಮುನ್ನವೇ ಕೇಂದ್ರ ಸರಕಾರ ಮತ್ತು ಉಕ್ರೇನ್‌ನಲ್ಲಿರುವ ರಾಯಭಾರ ಕಚೇರಿಯ ಸಲಹೆ ಮೇರೆಗೆ ಭಾರತಕ್ಕೆ ವಾಪಸ್‌ ಬಂದಿದ್ದಾರೆ. ಆದರೆ, ಇನ್ನೂ ಸಾವಿರಾರು ಸಂಖ್ಯೆಯಲ್ಲಿ ನಾಗರಿಕರು ಮತ್ತು ವಿದ್ಯಾರ್ಥಿಗಳು ಅಲ್ಲಿಯೇ ಉಳಿದಿದ್ದಾರೆ. ಇವರನ್ನು ಕರೆತರಲು ಸರ್ವಪ್ರಯತ್ನವನ್ನೂ ಮಾಡಬೇಕಾಗಿದೆ.

ಈಗ ಬರುತ್ತಿರುವ ಸುದ್ದಿಗಳ ಪ್ರಕಾರ, ನಾಗರಿಕರು ಮತ್ತು ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲೇ ಉಕ್ರೇನ್‌ ಗಡಿಗೆ ಬಂದು, ನೆರೆಯ ದೇಶಗಳನ್ನು ಸೇರುತ್ತಿದ್ದಾರೆ. ಕೇಂದ್ರ ಸರ್ಕಾರ ಮತ್ತು ರಾಯಭಾರ ಕಚೇರಿಯೂ, ಗಡಿಯ ಹತ್ತಿರದಲ್ಲಿರುವ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವವರಿಗೆ ಗಡಿ ಸನಿಹಕ್ಕೆ ಬರುವಂತೆ ಸೂಚಿಸಿದೆ. ಇವರು ಬಂದ ತತ್‌ಕ್ಷಣವೇ ಭಾರತಕ್ಕೆ ಕರೆತರಲು ನಿರ್ಧರಿಸಿದೆ.

ಇದರ ಜತೆಗೆ ಉಕ್ರೇನ್‌ ನೆರಹೊರೆಯಲ್ಲಿರುವ ರೊಮೇನಿಯಾ, ಹಂಗೇರಿ, ಪೋಲೆಂಡ್‌ ದೇಶಗಳ ಜತೆಯೂ ಕೇಂದ್ರ ಸರಕಾರ ಮಾತುಕತೆ ನಡೆಸಿದ್ದು, ಅಲ್ಲಿಗೆ ಬರುವ ಭಾರತೀಯರನ್ನು ಇಲ್ಲಿಗೆ ಕರೆತರಲು ಶ್ರಮ ವಹಿಸಿದೆ. ಒಟ್ಟಾರೆ ಯಾಗಿ ಯಾವುದಾದರೂ ಮಾರ್ಗದ ಮೂಲಕ ಕರೆತರುವುದಾಗಿ ದೃಢವಾಗಿ ಹೇಳಿದೆ.

ಈ ಎಲ್ಲ ಬೆಳವಣಿಗೆಗಳು ಆಗುತ್ತಿರುವ ಮಧ್ಯೆ, ಭಾರತದಲ್ಲಿರುವ ವಿದ್ಯಾರ್ಥಿಗಳ ಹೆತ್ತವ‌ರು ಯಾವುದೇ ಕಾರಣಕ್ಕೂ ಆಘಾತಕ್ಕೆ ಒಳಗಾಗುವುದು ಬೇಡ. ಕೇಂದ್ರ ಸರಕಾರ ಮತ್ತು ಉಕ್ರೇನ್‌ನಲ್ಲಿರುವ

ರಾಯಭಾರ ಕಚೇರಿ ಭಾರತೀಯರ ಸುರಕ್ಷತೆಗೆ ಎಲ್ಲ ಕ್ರಮ ತೆಗೆದುಕೊಂಡಿದೆ. ಸದ್ಯದಲ್ಲೇ ಎಲ್ಲರನ್ನೂ ವಾಪಸ್‌ ಕರೆತರುವ ಬಗ್ಗೆಯೂ ಭರವಸೆ ನೀಡಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.