ಸರಾಗವಾಗಿ ಸಂಸತ್‌ ಅಧಿವೇಶನ ನಡೆಯಲಿ


Team Udayavani, Nov 30, 2021, 6:00 AM IST

ಸರಾಗವಾಗಿ ಸಂಸತ್‌ ಅಧಿವೇಶನ ನಡೆಯಲಿ

ಸೋಮವಾರದಿಂದ ಸಂಸತ್‌ನ ಚಳಿಗಾಲದ ಅಧಿವೇಶನ ಶುರುವಾಗಿದ್ದು, ಮೊದಲ ದಿನವೇ ಗದ್ದಲಗಳಿಂದಾಗಿ ಕಲಾಪ ವ್ಯರ್ಥವಾಗಿದೆ. ಕೇಂದ್ರ ಸರಕಾರ ಈ ಹಿಂದೆಯೇ ರೈತರಿಗೆ ವಾಗ್ಧಾನ ನೀಡಿದಂತೆ ಮೊದಲ ದಿನವೇ ಮೂರು ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯುವ ಮಸೂದೆಯನ್ನು ಉಭಯ ಸದನಗಳಲ್ಲೂ ಮಂಡಿಸಿ ಒಪ್ಪಿಗೆ ಪಡೆದುಕೊಂಡಿದೆ.

ಯಾವುದೇ ಚರ್ಚೆಗೆ ಅವಕಾಶವಿಲ್ಲದೇ ಈ ಮಸೂದೆಗಳನ್ನು ಕೇಂದ್ರ ಸರಕಾರ ಮಂಡಿಸಿ, ಅನುಮೋದನೆ ಪಡೆದುಕೊಂಡಿದೆ ಎಂಬುದು ವಿಪಕ್ಷಗಳ ಆಕ್ಷೇಪವಾದರೆ, ಈ ಹಿಂದೆಯೇ ಚರ್ಚೆ ನಡೆಸಲಾಗಿದ್ದ ಕಾಯ್ದೆಗಳ ಬಗ್ಗೆ ಈಗ ಮತ್ತೆ ಏಕೆ ಚರ್ಚೆ ಎಂಬುದು ಕೇಂದ್ರ ಸರಕಾರದ ವಾದ. ಅಲ್ಲದೇ ರೈತರಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಕುರಿತಂತೆ ಕಾಯ್ದೆ, ಪ್ರತಿಭಟನೆ ವೇಳೆ ಮೃತಪಟ್ಟಿರುವ ರೈತರಿಗೆ ಪರಿಹಾರ ಘೋಷಣೆ ಸೇರಿದಂತೆ ಕೆಲವೊಂದು ವಿಚಾರಗಳ ಬಗ್ಗೆ ಚರ್ಚೆಯಾಗಬೇಕಿತ್ತು ಎಂದು ವಿಪಕ್ಷಗಳು ಒತ್ತಾಯಿಸಿವೆ. ಈ ಗದ್ದಲದ ನಡುವೆಯೇ ಮೊದಲ ದಿನದ ಕಲಾಪ ಮಧ್ಯಾಹ್ನಕ್ಕೇ ಮುಗಿದಿದೆ.

ಇದರ ಜತೆಗೆ ಮುಂಗಾರು ಅಧಿವೇಶನದ ವೇಳೆ ರಾಜ್ಯಸಭೆಯಲ್ಲಿ ಅನುಚಿತವಾಗಿ ವರ್ತಿಸಿದ್ದ ಆರೋಪದ ಮೇಲೆ 12 ಸದಸ್ಯರನ್ನು ಇಡೀ ಚಳಿಗಾಲದ ಅಧಿವೇಶನದಿಂದಲೇ ಅಮಾನತು ಮಾಡಲಾಗಿದೆ. ಇದರಲ್ಲಿ ಕಾಂಗ್ರೆಸ್‌ನ ಆರು, ಟಿಎಂಸಿ, ಶಿವಸೇನೆಯ ತಲಾ ಇಬ್ಬರು, ಸಿಪಿಎಂ, ಸಿಪಿಐನ ತಲಾ ಒಬ್ಬರನ್ನು ಸಸ್ಪೆಂಡ್‌ ಮಾಡಲಾಗಿದೆ. ಆದರೆ ಮುಂಗಾರು ಅಧಿವೇಶನದಲ್ಲಿನ ಗದ್ದಲಕ್ಕೆ ಸಂಬಂಧಿಸಿದಂತೆ ಈಗ ಅಮಾನತು ಮಾಡಿರುವ ಕ್ರಮ ಸರಿಯಲ್ಲ ಎಂದು ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ಆದರೆ ಈ ಬಗ್ಗೆ ಸದನದ ವೀಡಿಯೋ ಸೇರಿದಂತೆ ಹಲವಾರು ಸಾಕ್ಷಿಗಳನ್ನು ಪರಿಗಣಿಸಿ, ಶಿಸ್ತು ಕ್ರಮ ಸಮಿತಿಯ ಶಿಫಾರಸಿನ ಮೇರೆಗೆ ಈ 12 ಮಂದಿಯನ್ನು ಅಮಾನತು ಮಾಡಲಾಗಿದೆ ಎಂದು ಕೇಂದ್ರ ಸರಕಾರ ಸಮರ್ಥಿಸಿಕೊಂಡಿದೆ. ಇದೂ ವಿಪಕ್ಷಗಳ ಕೋಪಕ್ಕೆ ಕಾರಣವಾಗಿದ್ದು, ಮಂಗಳವಾರ ಸಭೆ ಸೇರಿ ಮುಂದಿನ ನಡೆ ಏನಿರಬೇಕು ಎಂಬ ಬಗ್ಗೆ ಚರ್ಚೆ ನಡೆಸುವುದಾಗಿ ಹೇಳಿಕೊಂಡಿವೆ. ಅಲ್ಲದೆ, ಕೇಂದ್ರ ಸರಕಾರ ಈ 12 ಮಂದಿಯ ಅಮಾನತು ನಿರ್ಧಾರವನ್ನು ವಾಪಸ್‌ ಪಡೆಯದಿದ್ದರೆ, ಇಡೀ ಚಳಿಗಾಲದ ಅಧಿವೇಶನದಿಂದಲೇ ದೂರ ಉಳಿಯುವುದಾಗಿ ಎಚ್ಚರಿಕೆಯನ್ನೂ ನೀಡಿವೆ.

ಇದನ್ನೂ ಓದಿ:ರಾಜ್ಯದಲ್ಲಿ 257ಮಂದಿಯಲ್ಲಿ ಕೋವಿಡ್‌ ಸೋಂಕು ಪತ್ತೆ: ಐವರು ಸಾವು

ಈ ಎಲ್ಲ ಬೆಳವಣಿಗೆಗಳು ಮೊದಲ ದಿನವೇ ನಡೆದಿದ್ದು, ಇಡೀ ಅಧಿವೇಶನ ಹಾದಿ ತಪ್ಪುವ ಎಲ್ಲ ಲಕ್ಷಣಗಳು ಗೋಚರಿಸಿವೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಬೇರೆ ಬೇರೆ ಕಾರಣಗಳನ್ನು ಇರಿಸಿಕೊಂಡು ಅಧಿವೇಶನ ಮುಂದೂಡುವ ಕ್ರಮ ಸರಿಯಲ್ಲ. ಮುಂಗಾರು ಅಧಿವೇಶನವೂ ಸರಿಯಾಗಿ ನಡೆದಿಲ್ಲ. ಈಗ ಚಳಿಗಾಲದ ಅಧಿವೇಶನವೂ ಗದ್ದಲದಲ್ಲೇ ಕೊಚ್ಚಿ ಹೋದರೆ ಎಷ್ಟೋ ಮಸೂದೆಗಳು, ದೇಶ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆಯಾಗುವುದೇ ಇಲ್ಲ. ಇಲ್ಲಿ ಕೇಂದ್ರ ಸರಕಾರ ಮತ್ತು ವಿಪಕ್ಷಗಳು ತಮ್ಮ ಪ್ರತಿಷ್ಠೆಯನ್ನು ಬದಿಗಿಟ್ಟು ಮಾತನಾಡಿಕೊಂಡೇ ಕಾರ್ಯ ನಿರ್ವಹಣೆ ಮಾಡಬೇಕಾಗಿದೆ.

ಅಷ್ಟೇ ಅಲ್ಲದೆ, ಈಗಷ್ಟೇ ಕೊರೊನಾದ ಒಮಿಕ್ರಾನ್‌ ವೈರಸ್‌ ಜಗತ್ತಿನಾದ್ಯಂತ ಆತಂಕ ಸೃಷ್ಟಿಸಿದೆ. ಈ ಬಗ್ಗೆಯೂ ಚರ್ಚೆ ನಡೆಸಿ, ಆಡಳಿತ ಮತ್ತು ವಿಪಕ್ಷಗಳು ಒಟ್ಟಾಗಿ ಕೆಲಸ ಮಾಡಬೇಕಾದ ಅಗತ್ಯವೂ ಇದೆ. ಹೀಗಾಗಿ ಸರಾಗವಾಗಿ ಸಂಸತ್‌ ಅಧಿವೇಶನ ಸರಾಗವಾಗಿ ನಡೆಯಬೇಕು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.