ಸಮರೋಪಾದಿಯಲ್ಲಿ ನಡೆಯಲಿ ಪರಿಹಾರ ಕಾರ್ಯ


Team Udayavani, Jul 24, 2023, 6:00 AM IST

ಸಮರೋಪಾದಿಯಲ್ಲಿ ನಡೆಯಲಿ ಪರಿಹಾರ ಕಾರ್ಯ

ಮುಂಗಾರಿನ ಆರಂಭದ ದಿನಗಳಲ್ಲಿ ಕೈಕೊಟ್ಟಿದ್ದ ಮಳೆರಾಯ ಇತ್ತೀಚೆಗೆ ಭಾರೀ ಪ್ರಮಾಣದಲ್ಲೇ ಸುರಿಯುತ್ತಿದ್ದು, ರಾಜ್ಯದ ಉತ್ತರ ಕರ್ನಾಟಕ, ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಬಿಡದೇ ಸುರಿಯುತ್ತಿದ್ದಾನೆ. ಅಷ್ಟೇ ಅಲ್ಲ, ಅತ್ತ ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳಗಾವಿ ಸಹಿತ ಉತ್ತರ ಕರ್ನಾಟಕದ ಕೆಲವು ನದಿಗಳು ತುಂಬಿ ಹರಿಯುತ್ತಿದ್ದು ರಸ್ತೆ, ಸೇತುವೆಗಳು ಮುಳುಗಿವೆ. ಸದ್ಯ ರಾಜ್ಯವೀಗ ಅನಾವೃಷ್ಟಿಯಿಂದ ಅತಿವೃಷ್ಟಿಯತ್ತ ಸಾಗುತ್ತಿದ್ದು, ಮಳೆಗೆ ಸಿಲುಕಿದವರ ರಕ್ಷಣೆಗೆ ರಾಜ್ಯ ಸರಕಾರ ತತ್‌ಕ್ಷಣವೇ ಧಾವಿಸಬೇಕಾಗಿದೆ.

ಇತ್ತೀಚೆಗಷ್ಟೇ ಮುಗಿದ ವಿಧಾನಸಭೆ ಅಧಿವೇಶನ ವೇಳೆಯಲ್ಲಿ ರಾಜ್ಯದಲ್ಲಿನ ಮಳೆ ಕೊರತೆ ಬಗ್ಗೆ ಪ್ರಸ್ತಾವವಾಗಿತ್ತು. ಹಲವಾರು ತಾಲೂಕುಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದ್ದು, ಇಂಥ ಕಡೆಗಳಲ್ಲಿ ಬದಲಿ ವ್ಯವಸ್ಥೆ ಮಾಡುವ ಬಗ್ಗೆ ಚರ್ಚೆಯಾಗಿತ್ತು. ಮಳೆ ಕೊರತೆ ಹಿನ್ನೆಲೆಯಲ್ಲಿ ಬರ ಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇರುವ ಸಮಸ್ಯೆ ಬಗ್ಗೆ ಸದನದಲ್ಲಿ ಪ್ರಸ್ತಾವಿಸಲಾಗಿ, ಸ್ವತಃ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರೇ ಕೇಂದ್ರದ ನಿಯಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

ಈಗ ಮಧ್ಯ ಕರ್ನಾಟಕದ ಕೆಲವು ಭಾಗ ಹೊರತುಪಡಿಸಿ, ಉತ್ತರ ಕರ್ನಾಟಕ, ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಸುರಿಯುತ್ತಿದೆ. ಅಂದರೆ ಅರ್ಧ  ಕರ್ನಾಟಕ ಇನ್ನೂ ಮಳೆ ಕೊರತೆ ಅನುಭವಿಸುತ್ತಿದೆ. ಹವಾಮಾನ ಇಲಾಖೆ ಪ್ರಕಾರವೇ ಮಧ್ಯ ಕರ್ನಾಟಕದಿಂದ ಕೆಳಗೆ ಇನ್ನೂ ಸರಿಯಾದ ಪ್ರಮಾಣದ ಮಳೆಯಾಗಿಲ್ಲ. ಉತ್ತರ ಕರ್ನಾಟಕ, ಮಲೆನಾಡು ಮತ್ತು ಕರಾವಳಿ ಕರ್ನಾಟಕದ ಪ್ರವಾಹದ ಜತೆಗೆ, ರಾಜ್ಯ ಸರಕಾರ ಮಳೆಯಾಗದ ಜಿಲ್ಲೆಗಳಲ್ಲಿನ ಸ್ಥಿತಿ ಬಗ್ಗೆಯೂ ಆಲೋಚನೆ ನಡೆಸಬೇಕಾದ ಅನಿವಾರ್ಯತೆ ಇದೆ.

ಒಂದು ಕಡೆ ಪ್ರವಾಹ, ಮತ್ತೊಂದು ಕಡೆ ಬರದಂಥ ಸ್ಥಿತಿ ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ. ದೇಶದ ವಿವಿಧ ಭಾಗಗಳಲ್ಲಿಯೂ ಇಂಥದ್ದೇ ಸ್ಥಿತಿ ತಲೆದೋರಿದೆ. ತೆಲಂಗಾಣದಲ್ಲೂ ಕೆಲವೆಡೆ ಪ್ರವಾಹ ತಲೆದೋರಿದ್ದರೆ. ಅರ್ಧ ತೆಲಂಗಾಣ ಮಳೆಯಿಲ್ಲದೇ ತತ್ತರಿಸುತ್ತಿದೆ. ಪೂರ್ವ ಉತ್ತರ ಪ್ರದೇಶ, ಬಿಹಾರ, ಝಾರ್ಖಂಡ್‌, ಪಶ್ಚಿಮ ಬಂಗಾಲದ ಕೆಲವು ಪ್ರದೇಶಗಳು, ಮಿಜೋರಾಂ ಸಹಿತ ಈಶಾನ್ಯ ರಾಜ್ಯಗಳ ಕೆಲವು ಪ್ರದೇಶಗಳಲ್ಲಿ ಮಳೆ ಕೊರತೆ ಕಾಡುತ್ತಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಪಶ್ಚಿಮ ಉತ್ತರ ಪ್ರದೇಶ, ಪಂಜಾಬ್‌, ದಿಲ್ಲಿ, ರಾಜಸ್ಥಾನ, ಗುಜರಾತ್‌, ಪಶ್ಚಿಮ ಮಧ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದ ಅಂದರೆ ನಿಗದಿಗಿಂತ ಹೆಚ್ಚು ಮಳೆಯಾಗಿದೆ.

ಹಾಗೆಯೇ ಜಗತ್ತಿನಾದ್ಯಂತ ಇದೇ ಪರಿಸ್ಥಿತಿ ಕಂಡು ಬರುತ್ತಿದೆ. ಹವಾಮಾನ ತಜ್ಞರ ಪ್ರಕಾರ, ಇಂಥ ಸನ್ನಿವೇಶಕ್ಕೆ ತಾಪಮಾನ ಬದಲಾವಣೆಯೇ ಕಾರಣವಾಗಿದ್ದು, ಒಂದು ಕಡೆ ಬಿಸಿ ಮತ್ತೂಂದು ಕಡೆ ಪ್ರವಾಹ ಕಾಣಿಸಿಕೊಳ್ಳುತ್ತಿದೆ. ಹೆಚ್ಚು ತಾಪಮಾನದಿಂದಾಗಿ ಸಮುದ್ರದ ನೀರು ಹೆಚ್ಚು ಆವಿಯಾಗಿ ಬೇರೆ ಕಡೆಗಳಲ್ಲಿ ಪ್ರವಾಹ ಕಾಣಿಸುತ್ತಿದೆ. ಈ ಬಗ್ಗೆ ಸರಕಾರಗಳು ಯೋಚನೆ ಮಾಡಬೇಕಾಗಿದೆ ಎಂದಿದ್ದಾರೆ.

ಈ ಮಧ್ಯೆ ಹೆಚ್ಚು ಮಳೆಯಾಗಿರುವ ಕಡೆಗಳಲ್ಲಿ ರಕ್ಷಣ ಕಾರ್ಯಾಚರಣೆ, ಮಳೆ ಕೊರತೆಯಾಗಿರುವ ಪ್ರದೇಶಗಳಲ್ಲಿ ಪರಿಹಾರ ನೀಡುವ ಕೆಲಸವನ್ನು ಆಯಾ ರಾಜ್ಯ ಸರಕಾರಗಳು ಮತ್ತು ಕೇಂದ್ರ ಸರಕಾರ ಮಾಡಬೇಕಾಗಿದೆ. ಈಗ ಭಾರೀ ಪ್ರಮಾಣದ ಪ್ರವಾಹ ಎದುರಿಸುತ್ತಿರುವ ರಾಜ್ಯಗಳ ಸಹಾಯಕ್ಕೂ ಕೇಂದ್ರ ಸರಕಾರ ನಿಲ್ಲಬೇಕಾಗಿದೆ.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.