ಅಧ್ಯಯನ ಪೀಠಗಳಲ್ಲಿ ಸಂಶೋಧನೆ ನಡೆಯಲಿ


Team Udayavani, Jan 29, 2022, 6:00 AM IST

ಅಧ್ಯಯನ ಪೀಠಗಳಲ್ಲಿ ಸಂಶೋಧನೆ ನಡೆಯಲಿ

ರಾಜ್ಯದ 17 ವಿವಿಗಳಲ್ಲಿನ ಅಧ್ಯಯನ ಪೀಠಗಳಲ್ಲಿ ಬಹುತೇಕ ಪೀಠಗಳು ಮತ್ತು ಸಂಶೋಧನ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಲ್ಲದೆ ಸೊರಗುತ್ತಿವೆ. ಸ್ವತಃ ಉದಯವಾಣಿ ನಡೆಸಿದ ರಿಯಾಲಿಟಿ ಚೆಕ್‌ನಲ್ಲಿ ಈ ಅಂಶ ಬಹಿರಂಗವಾಗಿದೆ. ಜಗತ್ತು ತಂಡ ಮಹನೀಯರನ್ನು ಸ್ಮರಿಸುವ ಸಲುವಾಗಿಸ್ಥಾಪಿತವಾದ ಅಧ್ಯಯನ ಪೀಠಗಳಲ್ಲಿ ವಿದ್ಯಾರ್ಥಿಗಳು ಅಥವಾ ಸಂಶೋಧನಾರ್ಥಿಗಳು ಇಲ್ಲದೇ ಇರುವುದು ದುರಂತವೇ ಸರಿ.

ಅಧ್ಯಯನ ಪೀಠಗಳ ವಿಚಾರದಲ್ಲಿ ಸರಕಾರದ ನಿರ್ಲಕ್ಷ್ಯ ಅಥವಾ ವಿದ್ಯಾರ್ಥಿಗಳ ನಿರಾಸಕ್ತಿ ಕುರಿತಂತೆ ಒಂದು ಅಧ್ಯಯನದ ಅಗತ್ಯ ಜರೂರತ್ತಾಗಿದೆ. ಬಹು ಹಿಂದಿನಿಂದಲೂ ವಿಶ್ವವಿದ್ಯಾನಿಲಯಗಳಲ್ಲಿ ಅಧ್ಯಯನ ಪೀಠಗಳನ್ನು ರಚಿಸುವ ರೂಢಿ ನಡೆದುಕೊಂಡು ಬಂದಿದೆ. ಕೆಲವೊಮ್ಮೆ ಅಂತೂ ಜಾತಿಗಳ ನಡುವಿನ ಜಿದ್ದಾಜಿದ್ದಿಗಾಗಿ ಅಧ್ಯಯನ ಪೀಠ ರಚನೆಯಾಗಿರಬಹುದೇ ಎಂಬ ಸಂದೇಹಗಳೂ ಮೂಡುತ್ತವೆ.

ಸದ್ಯ ರಾಜ್ಯದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ, ಬಸವಣ್ಣ, ಸಂವಿಧಾನ ಶಿಲ್ಪಿ ಡಾ|ಬಿ.ಆರ್‌. ಅಂಬೇಡ್ಕರ್‌, ಸ್ವಾಮಿ ವಿವೇಕಾನಂದ, ರಾಷ್ಟ್ರಕವಿ ಕುವೆಂಪು, ಬಾಬು ಜಗಜೀವನ್‌ ರಾಂ, ಡಾ| ರಾಜಕುಮಾರ್‌, ಕೆಂಪೇಗೌಡ ಹಾಗೂ ಆಯಾಯ ಸ್ಥಳೀಯ ಸಂಸ್ಕೃತಿ ಮತ್ತು ಪರಂಪರೆಗೆ ಅನುಸಾರವಾಗಿ ಅಧ್ಯಯನ ಪೀಠಗಳು ರಚನೆಯಾಗಿವೆ. ಒಂದು ಲೆಕ್ಕಾಚಾರದಲ್ಲಿ ನೋಡುವುದಾದರೆ ಇದು ಅತ್ಯಂತ ಉತ್ತಮವಾದ ಕೆಲಸ. ಸಾಮಾನ್ಯವಾಗಿ ವಿದ್ಯಾರ್ಥಿಗಳು ಯಾವುದೇ ಮಹನೀಯ ವ್ಯಕ್ತಿ ಬಗ್ಗೆ ಸುದೀರ್ಘ‌ವಾಗಿ ಅಧ್ಯಯನ ನಡೆಸಿರುವುದಿಲ್ಲ. ಅಲ್ಲದೆ ಕೆಲವು ಮಹನೀಯರ ನುಡಿಯಾದರ್ಶಗಳು ಮುಂದಿನ ಪೀಳಿಗೆಗೂ ತೆಗೆದುಕೊಂಡು ಹೋಗಬೇಕಾದ ಅನಿವಾರ್ಯತೆಯೂ ಇದೆ. ಇಂಥ

ಸಂದರ್ಭದಲ್ಲಿ ಮಹನೀಯರ ಕುರಿತಾದ ಅಧ್ಯಯನ ಪೀಠಗಳು ಹೆಚ್ಚೆಚ್ಚು ಕೆಲಸ ಮಾಡಿ, ಇವರ ಸಾಧನೆಗಳನ್ನು ಮುಂದುವರಿಸಿಕೊಂಡು ಹೋಗಬೇಕಾಗಿದೆ.

ಆದರೆ ರಾಜ್ಯದಲ್ಲಿರುವ ಬಹುತೇಕ ಅಧ್ಯಯನ ಪೀಠಗಳಿಗೆ ಸರಿಯಾದ ಅನುದಾನವೇ ಸಿಗುತ್ತಿಲ್ಲ. ಅಲ್ಲದೆ ಈ ಅಧ್ಯಯನ ಪೀಠಗಳಿಗೆ ಪ್ರತಿಧೀವರ್ಷವೂ ಸರಕಾರದ ಕಡೆಯಿಂದ ಅನುದಾನ ಹೋಗಬೇಕು. ಈ ಅನುದಾನದ ವಿಚಾರದಲ್ಲೇ ರಾಜ್ಯ ಸರಕಾರ‌ ಅತ್ಯಂತ ನಿರ್ಲಕ್ಷ್ಯ ವಹಿಸಿದೆ ಎಂಬುದು ಅಧ್ಯಯನ ಪೀಠಗಳ ಸ್ಥಿತಿ ನೋಡಿದರೆ ಗೊತ್ತಾಗುತ್ತದೆ. ಏಕೆಂದರೆ ಎಲ್ಲ ವಿವಿಗಳಲ್ಲಿನ ಅಧ್ಯಯನ ಪೀಠಗಳನ್ನು ನೋಡಿದಾಗ, ಎಲ್ಲರದ್ದೂ ಇದೊಂದೇ ಆಕ್ಷೇಪ ಕೇಳಿಬಂದಿತ್ತು.

ಎಲ್ಲಕ್ಕಿಂತ ಮುಖ್ಯವಾಗಿ, ಅಧ್ಯಯನ ಪೀಠಗಳು ಇನ್ನಷ್ಟು ಕಾರ್ಯಚಟುವಟಿಕೆಗಳನ್ನು ನಡೆಸಲೇಬೇಕಾಗಿದೆ. ಕಾರ್ಯಚಟುವಟಿಕೆ ಎಂದರೆ, ಕೇವಲ ಜಯಂತಿ ಮತ್ತು ವಿಚಾರ ಸಂಕಿರಣ ನಡೆಸುವುದಲ್ಲ. ಇದಕ್ಕಿಂತಲೂ ಮಹನೀಯರ ಜೀವನಾದರ್ಶಗಳನ್ನು ವಿದ್ಯಾರ್ಥಿ ಸಮುದಾಯಕ್ಕೆ ತಿಳಿಸಿ ಹೇಳಬೇಕಾಗಿದೆ. ಇದನ್ನು ಬಿಟ್ಟು,
ಹೆಸರಿಗಷ್ಟೇ ಪೀಠ ಮಾಡಿ, ಅವುಗಳಿಗೆ ಅನುದಾನ ನೀಡದೇ

ಹೋದರೆ ಆ ಮಹನೀಯರಿಗೆ ಅವಮಾನ ಮಾಡಿದಂತೆಯೇ ಸರಿ. ಯಾವುದೇ ಕಾರಣಕ್ಕೂ ಸರಕಾರಗಳಾಗಲಿ ಅಥವಾ ವಿಶ್ವವಿದ್ಯಾನಿಲಯಗಳಾಗಲಿ ಮಹನೀಯರಿಗೆ ಅವಮಾನ ಮಾಡುವ ಕೆಲಸ ಮಾಡಬಾರದು. ಈ ಕೂಡಲೇ ಅಧ್ಯಯನ ಪೀಠಗಳಿಗೆ ಅಗತ್ಯ ಅನುದಾನ ನೀಡಿ,ಸಂಶೋಧನಾರ್ಥಿಗಳು ಮತ್ತು ವಿದ್ಯಾರ್ಥಿಗಳ ಅಧ್ಯಯನಕ್ಕೆ ಅವಕಾಶ ಮಾಡಿಕೊಡಬೇಕು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.