ಉಳಿದ ತರಗತಿಗಳು ಶೀಘ್ರ ಆರಂಭವಾಗಲಿ


Team Udayavani, Aug 24, 2021, 6:00 AM IST

ಉಳಿದ ತರಗತಿಗಳು ಶೀಘ್ರ ಆರಂಭವಾಗಲಿ

ಸರಿಸುಮಾರು ಒಂದೂವರೆ ವರ್ಷದ ಬಳಿಕ ರಾಜ್ಯದ ಪ್ರೌಢಶಾಲೆ ಹಾಗೂ ಪದವಿ  ಪೂರ್ವ ಕಾಲೇಜುಗಳಲ್ಲಿ ಗಂಟೆಯ ಸದ್ದು ಶುರುವಾಗಿದೆ. ಬಿಕೋ ಎನ್ನುತ್ತಿದ್ದ ಶಾಲಾ ಕಾಲೇಜು ಪರಿಸರ, ತರಗತಿ ಕೊಠಡಿಗಳಿಗೆ  ಜೀವಕಳೆ ಬಂದಿದೆ. ವಿದ್ಯಾರ್ಥಿಗಳು ಶಾಲೆಗೆ ಬರಲಾರಂಬಿಸಿದ್ದಾರೆ. ಭೌತಿಕ ತರಗತಿಗಳಲ್ಲಿ ಬೋಧನೆಯ ಜತೆಗೆ ಶೈಕ್ಷಣಿಕ ಚಟುವಟಿಕೆಯೂ ಚುರುಕುಗೊಂಡಿದೆ. ಶಾಲಾ ಕಾಲೇಜು ಆರಂಭದ ಮೊದಲ ದಿನ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಲವು ಕಡೆಗಳಲ್ಲಿ ತಳಿರು ತೋರಣ, ರಂಗೋಲಿ ಗಳೊಂದಿಗೆ ವಿದ್ಯಾರ್ಥಿಗಳಿಗೆ ಭವ್ಯಸ್ವಾಗತ ನೀಡಲಾಗಿತ್ತು. ಬಹುತೇಕ ಶಾಲಾ ಕಾಲೇಜುಗಳಲ್ಲಿ  ಜನ ಪ್ರತಿನಿಧಿಗಳು ಶಿಕ್ಷಣ ಇಲಾಖೆಅಧಿಕಾರಿಗಳು ಎಸ್‌ಡಿಎಂಸಿ ಸದಸ್ಯರು, ಊರಿನ ಹಿರಿಯರು ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸಿದ್ದಾರೆ. ಒಟ್ಟಿನಲ್ಲಿ ಶಾಲಾ ಕಾಲೇಜು ಆರಂಭ  ವ್ಯವಸ್ಥಿತವಾಗಿ ನಡೆದಿದೆ. ವಿದ್ಯಾರ್ಥಿಗಳ ದಾಖಲಾತಿಯೂ ಚೆನ್ನಾಗಿದೆ.

ಕೊರೊನಾ ಹಿನ್ನೆಲೆಯಲ್ಲಿ ತಾಂತ್ರಿಕ ತಜ್ಞರ ಸಲಹೆಯಂತೆ ರೂಪಿಸಿದ್ದ ಮಾರ್ಗಸೂಚಿ ಅನ್ವಯ ಎಲ್ಲೆಡೆ ಕಠಿನ ನಿಯಮ ಪಾಲನೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರ, ಸ್ಯಾನಿಟೈಜೇಷನ್‌, ಮಾಸ್ಕ್, ದೇಹದ ಉಷ್ಣಾಂಶ ಪರೀಕ್ಷೆ ಸೇರಿದಂತೆ ಎಲ್ಲವೂ ಅಚ್ಚುಕಟ್ಟಾಗಿ ನಡೆದಿದೆ. ಪ್ರೌಢಶಾಲೆ ಹಾಗೂ ಪಿಯುಸಿ ತರಗತಿಗಳು ಮಾತ್ರ ಆರಂಭವಾಗಿದ್ದರಿಂದ ವಿದ್ಯಾರ್ಥಿ ಗಳ ಸಂಖ್ಯೆ ಕಡಿಮೆಯಿತ್ತು. ಅದರಲ್ಲೂ ಶೇ.50ರಷ್ಟು ವಿದ್ಯಾರ್ಥಿಗಳಿಗೆ ಆನ್‌ಲೈನ್‌, ಉಳಿದ ಶೇ.50ರಷ್ಟು ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಇದ್ದುದ್ದ ರಿಂದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಎಲ್ಲ ರೀತಿಯಲ್ಲೂ ಸುರಕ್ಷಿತವಾಗಿತ್ತು. ಇದೇ ರೀತಿಯ ಸುರಕ್ಷಿತ ವ್ಯವಸ್ಥೆ ಮುಂದೆಯೂ ನಿರಂತರವಾಗಬೇಕು. ಪಾಲಕ, ಪೋಷಕರಿಂದಲೂ ಉತ್ತಮ ಸ್ಪಂದನೆ ಸಿಕ್ಕಿರುವುದರಿಂದ ಸರಕಾರ ಉಳಿದ ತರಗತಿಗಳನ್ನು ಶೀಘ್ರ ಆರಂಭಿಸುವ ಅಥವಾ ಆ ವಿದ್ಯಾರ್ಥಿಗಳಿಗೆ ಶಾಲಾವರಣದಲ್ಲಿ ವಿದ್ಯಾಗಮ ತರಗತಿ ನಡೆಸುವ ಬಗ್ಗೆಯೂ ತೀರ್ಮಾನ ತೆಗೆದುಕೊಳ್ಳಬೇಕು.

ಕೊರೊನಾದಿಂದ ಶಿಕ್ಷಣ ಕ್ಷೇತ್ರಕ್ಕೆ ಭಾರಿ ಪೆಟ್ಟು ಬಿದ್ದಿದೆ. ನಿರಂತರ ಕಲಿಕೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಕಲಿಕೆಯೇ ಮರೆತಿದೆ. ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ ಸೇರಿದಂತೆ ಹಲವು ರೀತಿಯ ಕಾನೂನು ಬಾಹಿರ ಆಚರಣೆಗಳೂ ಹೆಚ್ಚಾಗುತ್ತಿವೆ. ಸದ್ಯ ಪ್ರೌಢಶಾಲೆ ಹಾಗೂ ಪಿಯು ಕಾಲೇ ಜುಗಳ ಆರಂಭವಾಗಿದೆ. ಉಳಿದ ತರಗತಿಗಳನ್ನು ಈಗಿರುವಷ್ಟೇ ಸುರಕ್ಷತೆ ಹಾಗೂ ಮುನ್ನೆಚ್ಚರಿಕ ಕ್ರಮಗಳೊಂದಿಗೆ ಶೀಘ್ರಾತಿಶೀಘ್ರ ಆರಂಭಿಸಿದಲ್ಲಿ, ವಿದ್ಯಾರ್ಥಿಗಳ ಕಲಿಕೆಯ ಅಂತರ ಕಡಿಮೆ ಮಾಡಲು ಸಾಧ್ಯವಿದೆ. ಸರಕಾರಿ ಶಾಲಾ ವ್ಯವಸ್ಥೆಯಲ್ಲಿ ಸುಮಾರು 45 ಲಕ್ಷ ಮಕ್ಕಳಿದ್ದಾರೆ. ಇವರಿಗೆ ಆನ್‌ಲೈನ್‌ ಶಿಕ್ಷಣ ಸಮರ್ಪಕವಾಗಿ ಸಿಗುತ್ತಿಲ್ಲ. ಸಂವೇದ ಹಾಗೂ ಪೂರ್ವ ಮುದ್ರಿತ ವೀಡಿಯೋ ತರಗತಿ ಇತ್ಯಾದಿಗಳಷ್ಟೇ ನಡೆಯುತ್ತಿದೆ. ಈ  ಮಕ್ಕಳು ಶಾಲೆಗೆ ಬಂದು  ಶೈಕ್ಷಣಿಕ ಚಟುವಟಿಕೆಯಲ್ಲಿ ಪಾಲ್ಗೊ ಳ್ಳುವ ಜತೆಗೆ ನಿರಂತರ ಕಲಿಕೆಯಲ್ಲೂ ಮುಂದುವರಿಯುವಂತೆ ಆಗಬೇಕು.

9ರಿಂದ 12ನೇ ತರಗತಿ ವಿದ್ಯಾರ್ಥಿಗಳಲ್ಲಿನ ಉತ್ಸಾಹ, ಸಂಭ್ರಮ ಉಳಿದ ತರಗತಿಗಳ ಮಕ್ಕಳಲ್ಲೂ ಇದೆ. ಅದರಂತೆ ಸರಕಾರ ಉಳಿದ ಮಕ್ಕಳಿಗೆ ಸುರಕ್ಷಿತ ವ್ಯವಸ್ಥೆಯಲ್ಲಿ ತರಗತಿಗಳನ್ನು ಆರಂಭಿಸಬೇಕು. ಕನಿಷ್ಠ ವಾರದಲ್ಲಿ 3 ದಿನವಾದರೂ ಈ ಮಕ್ಕಳು ಶಾಲೆಗೆ ಬಂದು ಕಲಿಯುವಂತಾ ಗಬೇಕು. ನಿರಂತರ ಕಲಿಕೆಯಿಂದ ವಂಚಿತರಾಗಿರುವ ವಿದ್ಯಾರ್ಥಿಗಳಿಗೆ ಹೊಸ ಚೈತನ್ಯ ಸಿಗಲಿದೆ. ಸರಕಾರದ ಸುರಕ್ಷತ ಕ್ರಮದ ಜತೆಗೆ ಪಾಲಕ, ಹೆತ್ತವರು ಎಚ್ಚರಿಕೆ, ವಿದ್ಯಾರ್ಥಿಗಳ ಜಾಗೃತ ಪ್ರಜ್ಞೆಯೂ ಅತೀ ಅವಶ್ಯಕ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.