ದೇಗುಲಗಳ ಆಡಳಿತ ಭಕ್ತರ ಬಳಿಯೇ ಇರಲಿ…


Team Udayavani, Oct 16, 2021, 6:20 AM IST

ದೇಗುಲಗಳ ಆಡಳಿತ ಭಕ್ತರ ಬಳಿಯೇ ಇರಲಿ…

ಹಿಂದೂ ದೇವಾಲಯಗಳ ಆಡಳಿತ ಭಕ್ತರ ಕೈಗೆ ಬರಬೇಕು ಎಂದು ಹೇಳುವ ಮೂಲಕ ಕೆಲವು ವರ್ಷಗಳಿಂದ ನಡೆಯುತ್ತಿದ್ದ ಆಂದೋಲನಕ್ಕೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಮತ್ತಷ್ಟು ಶಕ್ತಿ ತುಂಬಿದ್ದಾರೆ.

ತಮಿಳುನಾಡು ರಾಜ್ಯದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಹೀಗೊಂದು ಚರ್ಚೆ ತೀವ್ರಗೊಂಡಿತ್ತು. ತಮಿಳುನಾಡಿನ ಎಲ್ಲ ದೇಗುಲಗಳ ಆಡಳಿತ ಭಕ್ತರ ಕೈಗೇ ಹೋಗಬೇಕು, ಇದು ಸರಕಾರದ ಬಳಿಯೇ ಇರಬಾರದು ಎಂಬುದು ಆಗಿನ ಒತ್ತಡವಾಗಿತ್ತು. ಸದ್ಗುರು ಜಗ್ಗಿ ವಾಸುದೇವ್‌ ಅವರು ಈ ಬಗ್ಗೆ ತಮಿಳುನಾಡಿನಲ್ಲಿ ಒಂದು ಆಂದೋಲನವನ್ನೇ ಶುರು ಮಾಡಿದ್ದರು. ಜತೆಗೆ ಬಿಜೆಪಿ ಕೂಡ ಆಗಿನ ಚುನಾವಣೆ ಸಂದರ್ಭದಲ್ಲಿ ಈ ವಿಷಯವನ್ನು ಪ್ರಸ್ತಾವಿಸಿ, ಭಕ್ತರ ಕೈಗೇ ದೇಗುಲಗಳ ಆಡಳಿತ ಇರಲಿ ಎಂದು ಒತ್ತಾಯಿಸಿ, ಸದ್ಗುರು ಆರಂಭಿಸಿದ್ದ ಆಂದೋಲನಕ್ಕೆ ಕೈಜೋಡಿಸಿತ್ತು.

ಕರ್ನಾಟಕದಲ್ಲೂ ಈ ಬಗ್ಗೆ ಆಗಾಗ್ಗೆ ಚರ್ಚೆಗಳು ಕೇಳಿಬರುತ್ತಲೇ ಇವೆ. ಇಲ್ಲಿ ಮುಖ್ಯವಾಗಿ ದೇಗುಲಗಳ ಆಡಳಿತ ಯಾರ ಬಳಿ ಇರಬೇಕು ಎಂಬುದಕ್ಕಿಂತ, ಹಿಂದೂ ದೇಗುಲಗಳಲ್ಲಿ ಸಂಗ್ರಹವಾದ ಕಾಣಿಕೆಯನ್ನು ಹಿಂದೂ ದೇಗುಲಗಳ ಅಭಿವೃದ್ಧಿಗೇ ಬಳಕೆ ಮಾಡಬೇಕು. ಬೇರೆ ಧರ್ಮದ ದೇಗುಲಗಳ ಅಭಿವೃದ್ಧಿ ಅಥವಾ ಮತ್ಯಾವುದೇ ಕಾರಣಗಳಿಗಾಗಿ ಬಳಕೆ ಮಾಡಬಾರದು ಎಂದು ಭಕ್ತರ ಕಡೆಯಿಂದಲೇ ಆಗ್ರಹವೂ ಕೇಳಿಬಂದಿತ್ತು. ಇದಕ್ಕೆ ಪೂರಕವಾಗಿ ಕರ್ನಾಟಕದಲ್ಲೂ ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಮುಜರಾಯಿ ಇಲಾಖೆ ಕಡೆಯಿಂದ ಇತರೆ ಧರ್ಮದ ಧಾರ್ಮಿಕ ನಾಯಕರಿಗೆ ವೇತನ ಬಿಡುಗಡೆಗೆ ಆದೇಶ ಹೊರಡಿಸಲಾಗಿತ್ತು. ಆಗ ಮುಜರಾಯಿ ಇಲಾಖೆಯೇ ಈ ಆದೇಶ ತಿದ್ದುಪಡಿ ಮಾಡಿ, ಹಿಂದೂ ದೇಗುಲಗಳಿಂದ ಸಂಗ್ರಹವಾದ ಹಣವನ್ನು ಬೇರೆ ಧರ್ಮದ ಕಾರ್ಯಕ್ಕಾಗಿ ವಿನಿಯೋಗಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿತ್ತು.

ಇದನ್ನೂ ಓದಿ:ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

ಈಗ ಮತ್ತೆ ಇದೇ ವಿಚಾರ ಮುನ್ನೆಲೆಗೆ ಬಂದಿದೆ. ಮೋಹನ್‌ ಭಾಗವತ್‌ ಅವರು ಹಿಂದೂ ದೇಗುಲಗಳ ಆಡಳಿತ ಭಕ್ತರ ಕೈಗೇ ಹೋಗಬೇಕು ಮತ್ತು ಹಿಂದೂ ದೇಗುಲಗಳಿಂದ ಸಂಗ್ರಹವಾದ ಕಾಣಿಕೆಯನ್ನು ಹಿಂದೂ ದೇಗುಲಗಳ ಅಭಿವೃದ್ಧಿಗೇ ಬಳಕೆ ಮಾಡಬೇಕು ಎಂದಿದ್ದಾರೆ.

ಪ್ರಮುಖವಾಗಿ ದಕ್ಷಿಣ ಭಾರತದಲ್ಲಿ ಸರಕಾರಗಳ ಅಡಿಯಲ್ಲಿ ಬಹಳಷ್ಟು ದೇಗುಲಗಳಿವೆ. ಅಷ್ಟೇ ಅಲ್ಲ, ಕೆಲವು ದೇಗುಲಗಳನ್ನು ಭಕ್ತರೇ ಅಲ್ಲದ ಟ್ರಸ್ಟ್‌ಗಳು ನೋಡಿಕೊಳ್ಳುತ್ತಿವೆ. ಹಿಂದೂ ದೇಗುಲಗಳು ಮತ್ತು ದೇಗುಲಗಳ ಆಸ್ತಿಪಾಸ್ತಿಗಳನ್ನು ಭಕ್ತರ ವಶಕ್ಕೇ ಒಪ್ಪಿಸಬೇಕು. ಇದರಿಂದ ಬಂದ ವರಮಾನವನ್ನು ದೇಗುಲಗಳಿಗೇ ಬಳಸಬೇಕು ಎಂಬುದು ಭಾಗವತ್‌ ಅವರ ಅಭಿಪ್ರಾಯ ಜತೆಗೆ ದೇಗುಲ ನೋಡಿಕೊಳ್ಳುತ್ತಿರುವ ಕೆಲವು ಟ್ರಸ್ಟ್‌ಗಳಲ್ಲಿ ದೇವರನ್ನೇ ನಂಬದ ಜಾತ್ಯತೀತವಾದಿಗಳೂ ಇದ್ದಾರೆ. ಇವರು ಹೇಗೆ ಆಡಳಿತ ನಡೆಸಲು ಸಾಧ್ಯ ಎಂಬುದು ಆರ್‌ಎಸ್‌ಎಸ್‌ ಮುಖ್ಯಸ್ಥರ ಪ್ರಶ್ನೆ.

ಈ ಅಭಿಪ್ರಾಯ ಒಪ್ಪುವಂಥದ್ದೇ ಆಗಿದೆ. ದೇಗುಲಗಳನ್ನು ಸರಕಾರಗಳೇಕೇ ನಡೆಸಬೇಕು ಎಂಬುದು ಇಲ್ಲಿನ ಮೂಲ ಪ್ರಶ್ನೆ. ದೇಗುಲಗಳನ್ನು ದೇವರನ್ನು ನಂಬುವ ಭಕ್ತರೇ ನಡೆಸಿಕೊಂಡು ಹೋಗಬೇಕು. ಅಲ್ಲಿಂದ ಬಂದ ಹಣವನ್ನು ದೇಗುಲಗಳಿಗಾಗಿಯೇ ಬಳಕೆ ಮಾಡಬೇಕು. ಇದು ಆಸ್ತಿಕರಿಗೂ ಸಮಾ ಧಾನಕರ ವಿಷಯವಾಗಲಿದೆ. ಇಂಥದ್ದೊಂದು ದಿಕ್ಕಿನಲ್ಲಿ ರಾಜ್ಯ ಸರಕಾರ‌ ಹೆಜ್ಜೆ ಇಡಬೇಕು. ಜತೆಜತೆಗೆ ಈ ಟ್ರಸ್ಟ್‌ಗಳ ವ್ಯವಹಾರ ಪಾರದರ್ಶಕವಾಗಿರುವಂತೆ ನೋಡಿಕೊಳ್ಳುವ ವ್ಯವಸ್ಥೆಯೊಂದನ್ನು ರೂಪಿಸಬೇಕು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.