ರಷ್ಯಾ-ಉಕ್ರೇನ್‌ ನಡುವಣ ಯುದ್ಧ ಶೀಘ್ರ ಕೊನೆಗಾಣಲಿ


Team Udayavani, Jun 7, 2023, 6:00 AM IST

ರಷ್ಯಾ-ಉಕ್ರೇನ್‌ ನಡುವಣ ಯುದ್ಧ ಶೀಘ್ರ ಕೊನೆಗಾಣಲಿ

ರಷ್ಯಾ ಮತ್ತು ಉಕ್ರೇನ್‌ ನಡುವಣ ಸಂಘರ್ಷ ತಾರಕಕ್ಕೇರಿದ್ದು ದಕ್ಷಿಣ ಉಕ್ರೇನ್‌ನ ಕಖೋವಾದಲ್ಲಿರುವ ಬೃಹತ್‌ ಅಣೆಕಟ್ಟೆಯ ಮೇಲೆ ದಾಳಿ ನಡೆಸಲಾಗಿದೆ. ಇದರ ಪರಿಣಾಮ ಅಣೆಕಟ್ಟೆಯ ಪಾರ್ಶ್ವದ ಗೋಡೆ­ಯೊಂದು ಕುಸಿದಿದ್ದು ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಹದ ಭೀತಿ ತಲೆದೋರಿದೆ. ಈ ಅಣೆಕಟ್ಟೆಯ ನೀರನ್ನೇ ಆಶ್ರಯಿಸಿರುವ ಜಲವಿದ್ಯುತ್‌ ಸ್ಥಾವರವೂ ಅಪಾಯದಲ್ಲಿದ್ದು ಈ ದುಷ್ಕೃತ್ಯದ ಸಂಬಂಧ ರಷ್ಯಾ ಮತ್ತು ಉಕ್ರೇನ್‌ ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ನಿರತವಾಗಿವೆ. ಸೋವಿಯತ್‌ ಯೂನಿಯನ್‌ ಕಾಲದಲ್ಲಿ ಇಲ್ಲಿನ ಡ್ನಿಪ್ರೊ ನದಿಗೆ ಅಡ್ಡಲಾಗಿ ಈ ಬೃಹತ್‌ ಅಣೆಕಟ್ಟನ್ನು ನಿರ್ಮಿಸಲಾಗಿತ್ತು. ಕಳೆದ ವರ್ಷದ ಫೆಬ್ರವರಿ ತಿಂಗಳ ಕೊನೆಯ ವಾರದಲ್ಲಿ ಉಕ್ರೇನ್‌ ವಿರುದ್ಧ ಸೇನಾ ಆಕ್ರಮಣ ಆರಂಭಿಸಿದ ಆರಂಭದಲ್ಲಿಯೇ ರಷ್ಯಾ ಈ ಅಣೆಕಟ್ಟು ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ತನ್ನ ವಶಕ್ಕೆ ತೆಗೆದುಕೊಂಡಿತ್ತು.

ಇದೇ ವೇಳೆ ಈ ಅಣೆಕಟ್ಟೆಯಿಂದಲೇ ಯುರೋಪ್‌ನ ಅತೀ ದೊಡ್ಡ ಝಪೋರ್‌ಝಿಯಾ ಪರಮಾಣು ಸ್ಥಾವರಕ್ಕೆ ನೀರು ಪೂರೈಕೆ­ಯಾಗುತ್ತಿತ್ತು. ಸದ್ಯ ಪರಮಾಣು ಸ್ಥಾವರಕ್ಕೆ ಯಾವುದೇ ಅಪಾಯ ಎದುರಾಗಿಲ್ಲವಾದರೂ ಪರಿಸ್ಥಿತಿಯ ಮೇಲೆ ನಿಗಾ ಇರಿಸಲಾಗಿದೆ ಎಂದು ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ ತಿಳಿಸಿದೆ.

ಉಕ್ರೇನ್‌ ಮಾತ್ರವಲ್ಲದೆ ರಷ್ಯಾದ ಹಲವಾರು ಭಾಗಗಳಿಗೆ ಈ ಅಣೆಕಟ್ಟೆ­ಯಿಂದಲೇ ನೀರು ಪೂರೈಕೆಯಾಗುತ್ತಿತ್ತು. ಪ್ರವಾಹ ಭೀತಿಯಲ್ಲಿರುವ ಪ್ರದೇಶಗಳು ರಷ್ಯಾ ಮತ್ತು ಉಕ್ರೇನ್‌ ಈ ಎರಡೂ ದೇಶಗಳ ನಿಯಂತ್ರಣದಲ್ಲಿರುವ ಹಿನ್ನೆಲೆಯಲ್ಲಿ ಇತ್ತಂಡಗಳೂ ಸಂತ್ರಸ್ತರ ರಕ್ಷಣ ಕಾರ್ಯದಲ್ಲಿ ತೊಡಗಿಕೊಂಡಿವೆ. ಇದೇ ವೇಳೆ ಜಲ ವಿದ್ಯುತ್‌ ಸ್ಥಾವರ ಮತ್ತು ಸಮೀಪದಲ್ಲಿರುವ ವಿವಿಧ ಕೈಗಾರಿಕೆಗಳು ದಾಸ್ತಾನು ಇರಿಸಿದ್ದ ನೂರಾರು ಟನ್‌ಗಳಷ್ಟು ತೈಲ ನೀರುಪಾಲಾಗಿದ್ದು ಜಲಚರಗಳ ಪ್ರಾಣಕ್ಕೂ ಕುತ್ತು ಬಂದೊದಗಿದೆ. ಕಳೆದ 16 ತಿಂಗಳುಗಳಿಂದ ನಡೆಯುತ್ತಿರುವ ರಷ್ಯಾ-ಉಕ್ರೇನ್‌ ನಡುವಣ ಯುದ್ಧ ಮತ್ತೆ ಭೀಕರ ಸ್ವರೂಪವನ್ನು ಪಡೆದು­ಕೊಂಡಿರುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಆರೋಪ-ಪ್ರತ್ಯಾರೋಪ­ಗಳೇನೇ ಇರಲಿ, ಯುದ್ಧದ ಭಾಗವಾಗಿ ಈ ದಾಳಿ ನಡೆದಿರುವುದಂತೂ ಸ್ಪಷ್ಟ.

ಯುದ್ಧಾರಂಭದಿಂದಲೂ ರಷ್ಯಾ ಜಾಗತಿಕವಾಗಿ ತನ್ನ ಪ್ರಾಬಲ್ಯವನ್ನು ತೋರ್ಪಡಿಸುವ ಇರಾದೆಯನ್ನು ಪ್ರದರ್ಶಿಸುತ್ತ ಬಂದಿದ್ದರೆ ನ್ಯಾಟೋ ರಾಷ್ಟ್ರಗಳ ಬೆಂಬಲದೊಂದಿಗೆ ಉಕ್ರೇನ್‌ ರಷ್ಯಾಕ್ಕೆ ಸಡ್ಡು ಹೊಡೆದು ನಿಂತಿದೆ. ಆದರೆ ರಷ್ಯಾ ಮಾತ್ರ ವಿಶ್ವಸಂಸ್ಥೆ, ಯುರೋಪಿಯನ್‌ ರಾಷ್ಟ್ರಗಳ ಯಾವುದೇ ನಿರ್ಬಂಧ, ಷರತ್ತು ಮತ್ತು ಬೆದರಿಕೆಗಳಿಗೆ ಮಣಿಯದೆ ಉಕ್ರೇನ್‌ ವಿರುದ್ಧದ ಯುದ್ಧವನ್ನು ಮುಂದುವರಿಸಿದೆ. ಇದೇ ವೇಳೆ ಉಕ್ರೇನ್‌ ಕೂಡ ಅಮೆರಿಕ ಆದಿಯಾಗಿ ಯುರೋಪಿಯನ್‌ ರಾಷ್ಟ್ರಗಳ ಪ್ರತ್ಯಕ್ಷ ಮತ್ತು ಪರೋಕ್ಷ ಬೆಂಬಲದೊಂದಿಗೆ ರಷ್ಯಾ ವಿರುದ್ಧ ಪ್ರತಿದಾಳಿಯನ್ನು ನಡೆಸುತ್ತಲೇ ಬಂದಿದೆ. ಪರಿಸ್ಥಿತಿ ಇದೇ ತೆರನಾಗಿ ಮುಂದುವರಿದದ್ದೇ ಆದಲ್ಲಿ ಭಾರೀ ಅನಾಹುತ ಸಂಭವಿಸಲಿರುವುದಂತೂ ನಿಶ್ಚಿತ.

ರಷ್ಯಾ-ಉಕ್ರೇನ್‌ ನಡುವೆ ತಲೆದೋರಿರುವ ಸಮಸ್ಯೆಗೆ ಮಾನವೀಯ ನೆಲೆಯಲ್ಲಿ ಪರಿಹಾರ ಕಂಡುಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ವಿಶ್ವಸಂಸ್ಥೆ ಮುಂದಡಿ ಇಡಬೇಕಾಗಿದೆಯಾದರೂ ಈ ಇಚ್ಛಾಶಕ್ತಿಯನ್ನು ಅದು ಪ್ರದರ್ಶಿಸುತ್ತಿಲ್ಲ. ಇಂದಿನ ಪರಮಾಣು ಯುಗದಲ್ಲೂ ವರ್ಷ ಕಾಲ ಯುದ್ಧ ಮುಂದುವರಿದಿದೆ ಎಂದಾದರೆ ಇದು ಬಲುದೊಡ್ಡ ವಿನಾಶಕ್ಕೆ ನಾಂದಿ ಹಾಡಿದಂತೆಯೇ. ಇನ್ನಾದರೂ ಜಾಗತಿಕ ಸಮುದಾಯ ಮತ್ತು ವಿಶ್ವಸಂಸ್ಥೆ ಎಚ್ಚೆತ್ತುಕೊಂಡು ತಮ್ಮ ಹೊಣೆಗಾರಿಕೆಯನ್ನು ನಿಭಾಯಿಸಿದ್ದೇ ಆದಲ್ಲಿ ಈ ಯುದ್ಧಕ್ಕೆ ಅಂತ್ಯ ಹಾಡುವುದು ಕಷ್ಟಸಾಧ್ಯವೇನಲ್ಲ.

ಟಾಪ್ ನ್ಯೂಸ್

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.