ಕುಸ್ತಿ ಪಟುಗಳಿಗೆ ಈಗಲಾದರೂ ನ್ಯಾಯ ಸಿಗಲಿ


Team Udayavani, Jun 6, 2023, 6:10 AM IST

inಕುಸ್ತಿ ಪಟುಗಳಿಗೆ ಈಗಲಾದರೂ ನ್ಯಾಯ ಸಿಗಲಿ

ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್‌ಭೂಷಣ್‌ ಸಿಂಗ್‌ ಅವರ ಬಂಧನ ಮತ್ತು ರಾಜೀನಾಮೆಗೆ ಆಗ್ರಹಿಸಿ ಕಳೆದ ಒಂದೂವರೆ ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿ ಪಟುಗಳು, ಸೋಮವಾರದಿಂದ ರೈಲ್ವೇಯಲ್ಲಿನ ಕೆಲಸಕ್ಕೆ ಹಾಜರಾಗಿದ್ದಾರೆ. ಇಡೀ ವಿವಾದ ಆರಂಭವಾದ ಬಳಿಕ ಶನಿವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕುಸ್ತಿ ಪಟುಗಳ ಜತೆ ಸುದೀರ್ಘ‌ ಚರ್ಚೆ ನಡೆಸಿ, ನ್ಯಾಯ ಸಿಗುವ ಭರವಸೆ ಪಡೆದ ಮೇಲೆ ಕೆಲಸಕ್ಕೆ ಹಾಜರಾಗಿದ್ದಾರೆ. ಆರಂಭದಿಂದಲೂ ಬ್ರಿಜ್‌ಭೂಷಣ್‌ ವಿರುದ್ಧ ಕ್ರಮಕ್ಕೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದ ಕುಸ್ತಿ ಪಟುಗಳು ಈಗ ಕೆಲಸಕ್ಕೆ ತೆರಳಿರುವುದು ಸದ್ಯ ಉತ್ತಮ ನಡೆಯಂತೆ ಕಂಡು ಬರುತ್ತಿದೆ.

ಆದರೆ ಕೆಲಸಕ್ಕೆ ತೆರಳಿದ ಮಾತ್ರಕ್ಕೆ ನಾವು ಪ್ರತಿಭಟನೆ ಬಿಟ್ಟಿದ್ದೇವೆ ಎಂದರ್ಥವಲ್ಲ ಎಂದು ಹೇಳುವ ಮೂಲಕ ವಿನೇಶ್‌ ಪೊಗಟ್‌, ಸಾಕ್ಷಿ ಮಲಿಕ್‌ ಮತ್ತು ಭಜರಂಗ್‌ ಪೂನಿಯ ತಮ್ಮ ಪಟ್ಟು ಸಡಿಲಿಸಿಲ್ಲ ಎಂಬ ವಿಚಾರವೂ ಮನದಟ್ಟಾಗಿದೆ. ಇಲ್ಲಿ ಗೃಹ ಸಚಿವರಿಂದಲೇ ಭರವಸೆ ಸಿಕ್ಕಿರುವುದರಿಂದ ಕೆಲಸಕ್ಕೆ ಆಗಮಿಸಿದ್ದಾರೆ ಅಷ್ಟೇ. ಆದರೆ ಗೃಹ ಸಚಿವರ ಭರವಸೆಯೂ ಸುಳ್ಳಾದರೆ, ಒಂದೊಮ್ಮೆ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ಕ್ರಮ ತೆಗೆದುಕೊಳ್ಳದೇ ಇದ್ದರೆ ಮತ್ತೆ ಕುಸ್ತಿ ಪಟುಗಳು ಪ್ರತಿಭಟನೆಗೆ ಇಳಿಯುವುದು ಖಂಡಿತ ಎಂಬುದು ಸ್ಪಷ್ಟ.

ಸಾಮಾನ್ಯವಾಗಿ ಲೈಂಗಿಕ ಕಿರುಕುಳದಂಥ ಕೇಸುಗಳಲ್ಲಿ ಪೊಲೀಸರ ಕ್ರಮ ತ್ವರಿತವಾಗಿರಬೇಕು ಎಂಬುದನ್ನು ಹಲವಾರು ಬಾರಿ ಸುಪ್ರೀಂ ಕೋರ್ಟ್‌ ಹೇಳಿದೆ. ಆದರೆ ಇಲ್ಲಿ ಈ ನಿಯಮ ಪಾಲನೆಯಾಗಿಲ್ಲ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ದಿಲ್ಲಿ ಪೊಲೀಸರು ಇಷ್ಟು ದಿನವಾದರೂ ಏಕೆ ಬ್ರಿಜ್‌ಭೂಷಣ್‌ ವಿಚಾರಣೆ ನಡೆಸಿಲ್ಲ, ತನಿಖೆಗೆ ಒಳಪಡಿಸಿಲ್ಲ ಎಂಬ ಸಂಗತಿ ಇನ್ನೂ ಪ್ರಶ್ನಾರ್ಹವಾಗಿಯೇ ಉಳಿದಿದೆ. ಅಲ್ಲದೆ ಬ್ರಿಜ್‌ಭೂಷಣ್‌ ವಿರುದ್ಧ ಎಫ್ಐಆರ್‌ ದಾಖಲಾಗಿದ್ದು ಕುಸ್ತಿ ಪಟುಗಳ ಪ್ರತಿಭಟನೆ ಆರಂಭವಾದ ಅನಂತರ. ಇದಾದ ಮೇಲೆ ಕೇಸಿನ ಪ್ರಗತಿ ಎಲ್ಲಿದೆ ಎಂಬುದು ಕುಸ್ತಿ ಪಟುಗಳಿಗೆ ಗೊತ್ತಾಗಬೇಕಾಗಿದೆ. ಒಂದೊಮ್ಮೆ ಬ್ರಿಜ್‌ಭೂಷಣ್‌ ವಿಚಾರಣೆ ನಡೆಸಿದ್ದರೆ, ತನಿಖೆಯ ಪ್ರಗತಿ ಬಗ್ಗೆಯಾದರೂ ಗೊತ್ತಾಗುತ್ತಿತ್ತು. ಹೀಗಾಗಿಯೇ ಅಮಿತ್‌ ಶಾ ಭೇಟಿ ವೇಳೆ ಕುಸ್ತಿ ಪಟುಗಳು ತ್ವರಿತವಾಗಿ ಚಾರ್ಜ್‌ಶೀಟ್‌ ಸಲ್ಲಿಸಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ದಿಲ್ಲಿ ಪೊಲೀಸರು ತ್ವರಿತವಾಗಿ ವಿಚಾರಣೆ ನಡೆಸಿ, ಆರೋಪಪಟ್ಟಿ ನಿಗದಿ ಪಡಿಸಬೇಕು.

ದೇಶದ ಕಾನೂನುಗಳು ಒಬ್ಬರ ಅಥವಾ ಆಳುವವರ ಪರ ಇದೆ ಎಂಬ ಭಾವನೆ ಜನರಲ್ಲಿ ಬರದಂತೆ ಮಾಡುವುದು ಸರಕಾರಗಳ ಆದ್ಯ ಕರ್ತವ್ಯ. ಬ್ರಿಜ್‌ಭೂಷಣ್‌ ವಿರುದ್ಧ ಕ್ರಮ ತೆಗೆದುಕೊಳ್ಳುವುದು ವಿಳಂಬವಾದಷ್ಟು ಕುಸ್ತಿ ಪಟುಗಳಲ್ಲಿ ಅಥವಾ ಜನರಲ್ಲಿ ಇಂಥ ಭಾವನೆ ಹೆಚ್ಚಾಗುವುದು ಸಾಮಾನ್ಯ. ಈಗಾಗಲೇ ಮೇ 28ರಂದು ಕುಸ್ತಿ ಪಟುಗಳ ಪ್ರತಿಭಟನೆ ವೇಳೆ ದಿಲ್ಲಿ ಪೊಲೀಸರು ನಡೆದುಕೊಂಡ ಕ್ರಮ ಜಗತ್ತಿನಾದ್ಯಂತ ಆಕ್ರೋಶಕ್ಕೂ ಕಾರಣವಾಗಿದೆ. ಹೀಗಾಗಿ ಜನರ ನಂಬಿಕೆ ಮತ್ತು ಕುಸ್ತಿ ಪಟುಗಳ ನಂಬಿಕೆ ಉಳಿಸಿಕೊಳ್ಳುವುದು ದಿಲ್ಲಿ ಪೊಲೀಸರ ಸದ್ಯದ ಆದ್ಯತೆಯಾಗಿದ್ದು, ಅವರಿಗೆ ನ್ಯಾಯ ಕೊಡಬೇಕಾಗಿದೆ. ತ್ವರಿತಗತಿಯಲ್ಲಿ ಆರೋಪ ಪಟ್ಟಿ ದಾಖಲಿಸಿ ಬ್ರಿಜ್‌ಭೂಷಣ್‌ ಅವರಿಗೆ ಶಿಕ್ಷೆಯಾಗುವಂತೆ ಮಾಡಬೇಕಾಗಿದೆ. ಆಗಷ್ಟೇ ಕೇಂದ್ರ ಸರಕಾರವೂ ತನ್ನ ಮಾತು ಉಳಿಸಿಕೊಂಡಂತಾಗುತ್ತದೆ.

ಟಾಪ್ ನ್ಯೂಸ್

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Cauvery issue; Vatal Nagaraj calls for KRS siege

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

ನಮ್ಮ ಕೆಲಸಗಳಿಂದ ಮತ್ತೊಬ್ಬರ ಕೆಡುಕಿಗೆ ಕಾರಣವಾಗದಂತೆ ನೋಡಿಕೊಳ್ಳಬೇಕು: ಪೇಜಾವರ ಶ್ರೀ

Chaturmasya: ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನ: ಪೇಜಾವರ ಶ್ರೀ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Yash 19; ರಾಜ್ಯೋತ್ಸವಕ್ಕೆ ಯಶ್‌ ಹೊಸ ಚಿತ್ರ ಘೋಷಣೆ?

Yash 19; ರಾಜ್ಯೋತ್ಸವಕ್ಕೆ ಯಶ್‌ ಹೊಸ ಚಿತ್ರ ಘೋಷಣೆ?

ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ‌ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

Sirsi: ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ‌ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

Green revolution ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

drought

Karnataka: ಬರ ನಿರ್ವಹಣೆ: ಕೇಂದ್ರ, ರಾಜ್ಯ ಸರಕಾರಗಳು ಕಾರ್ಯೋನ್ಮುಖವಾಗಲಿ

supreme court

Supreme Court: ಸುಪ್ರೀಂ ಎಚ್ಚರಿಕೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಲಿ

river…

Cauvery: ಎರಡೆರಡು ಬಂದ್‌ ಸರಿಯಾದ ನಿರ್ಧಾರವಲ್ಲ

terrorism

Terrorism: ಉಗ್ರರ ಆಸ್ತಿ ಜಪ್ತಿ: ಭಾರತದಿಂದ ವಿಶ್ವರಾಷ್ಟ್ರಗಳಿಗೆ ಎಚ್ಚರಿಕೆಯ ಕರೆಗಂಟೆ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

2-chikkodi

Belagavi: ಶೆಫರ್ಡ ಇಂಡಿಯಾ ಇಂಟರ್‌ನ್ಯಾಷನಲ್ ಸಮಾವೇಶಕ್ಕೆ 1.50 ಲಕ್ಷ ಜನ ಸೇರುವ ನಿರೀಕ್ಷೆ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Cauvery issue; Vatal Nagaraj calls for KRS siege

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

ನಮ್ಮ ಕೆಲಸಗಳಿಂದ ಮತ್ತೊಬ್ಬರ ಕೆಡುಕಿಗೆ ಕಾರಣವಾಗದಂತೆ ನೋಡಿಕೊಳ್ಳಬೇಕು: ಪೇಜಾವರ ಶ್ರೀ

Chaturmasya: ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನ: ಪೇಜಾವರ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.