ಮಾರ್ಗಸೂಚಿ ಜಾರಿ ಮಾತ್ರ ಕಠಿನವಾಗಿರಲಿ


Team Udayavani, May 8, 2021, 6:10 AM IST

ಮಾರ್ಗಸೂಚಿ ಜಾರಿ ಮಾತ್ರ ಕಠಿನವಾಗಿರಲಿ

ರಾಜ್ಯದಲ್ಲಿ ಕೋವಿಡ್ ನಿಟ್ಟಿನಲ್ಲಿ ಜಾರಿಯಲ್ಲಿದ್ದ ಲಾಕ್‌ಡೌನ್‌ ಮಾದರಿ  ಕರ್ಫ್ಯೂ ಅವಧಿ ಪೂರ್ಣಗೊಳ್ಳುವ ಮುಂಚೆಯೇ ಮೇ 10 ರಿಂದ 24 ರ ವರೆಗೆ ಮತ್ತಷ್ಟು ಕಟ್ಟುನಿಟ್ಟಿನ ಬಿಗಿ ಕ್ರಮಗಳೊಂದಿಗೆ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ. ಮುಖ್ಯಮಂತ್ರಿಯವರ ಪ್ರಕಾರ ಲಾಕ್‌ಡೌನ್‌, ಮುಖ್ಯ ಕಾರ್ಯದರ್ಶಿಯವರ ಪ್ರಕಾರ ನಿರ್ಬಂಧ. ಹೊಸ ಆದೇಶದ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿ ಸಹ ಸರಕಾರ ಜಾರಿಗೊಳಿಸಿ ಬಿಡುಗಡೆಗೊಳಿಸಿದೆ.

ಕರ್ಫ್ಯೂ ಸಂದರ್ಭದಲ್ಲಿನ ಕೆಲವು ಸಡಿಲಿಕೆ ರದ್ದುಪಡಿಸಿ ಬೆಳಗ್ಗೆ 6 ರಿಂದ 10ರ ವರೆಗೆ ಅಗತ್ಯ ವಸ್ತು ಖರೀದಿಗೆ ವಾಹನಗಳಲ್ಲಿ ಹೋಗದೆ ನಡೆದುಕೊಂಡು ಹೋಗಿ ಖರೀದಿಸಲು ಅವಕಾಶ ಮಾಡಿಕೊಟ್ಟಿದೆ. ಉಳಿದಂತೆ ಪಾರ್ಸೆಲ್‌ ಸೇವೆ ಇ ಕಾಮರ್ಸ್‌ಗೆ ಅವಕಾಶ ಕಲ್ಪಿಸಿಕೊಟ್ಟಿದೆ.ಬಹುತೇಕ ಈ ಮಾರ್ಗಸೂಚಿ ಹಿಂದಿನಂತೆಯೇ ಇದೆ. ಇನ್ನೊಂದು ಅರ್ಥದಲ್ಲಿ ಹೇಳುವುದಾದರೆ ಅದೇ ನಿರ್ಬಂಧಗಳನ್ನು ಮುಂದುವರೆಸಲಾಗಿದೆ. ಪ್ರಸಕ್ತ ಜಾರಿಯಲ್ಲಿರುವ ನಿರ್ಬಂಧಗಳ ಜಾರಿಯಲ್ಲಿ ವ್ಯವಸ್ಥೆ ವಿಫ‌ಲವಾಗಿದೆ ಎಂದು ವ್ಯಾಖ್ಯಾನಿಸುವುದಾದರೆ, ಹೊಸ ಮಾರ್ಗಸೂಚಿಯ ಅನುಷ್ಠಾನಕ್ಕೆ ಸರಕಾರ ಯಾವ ಕ್ರಮ, ದಂಡನೆ ಕೈಗೊಳ್ಳುತ್ತದೆ ಎನ್ನುವುದು ಇನ್ನೂ ಖಚಿತವಾಗಿಲ್ಲ. ಸರಕಾರ ಕಠಿನವಾಗಿ ಅನುಷ್ಠಾನಕ್ಕೆ ಮುಂದಾದಲ್ಲಿ ಮಾತ್ರ ಇದರ ಉದ್ದೇಶ ಸಫ‌ಲವಾಗುತ್ತದೆ.

ರಾಜ್ಯ ಸರಕಾರ ಏನೇ ಕಠಿನ ಕ್ರಮ ಕೈಗೊಂಡರೂ ಅದು ಸಮರ್ಪ ಕವಾಗಿ ಅನುಷ್ಠಾನವಾಗಬೇಕು. ಅದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ. ಕೊರೊನಾ ನಿಯಂತ್ರಣ ವಿಚಾರದಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ನಿರ್ಬಂಧ ಹೇರಿಕೊಳ್ಳುವುದು ಉತ್ತಮ. ಅದು ಅಗತ್ಯವೂ ಕೂಡ.

ಏಕೆಂದರೆ ಕೊರೊನಾ ಎರಡನೇ ಅಲೆ ವ್ಯಾಪಿಸುತ್ತಿರುವ ರೀತಿ ಹಾಗೂ ಸೋಂಕು ಹರಡುತ್ತಿರುವ ವೇಗ ನೋಡಿದರೆ ನಿಜಕ್ಕೂ ಅಘಾತವಾಗುತ್ತದೆ. ಅಪಾಯಕಾರಿ ಸ್ಥಿತಿ ತಲುಪಿದೆ. ಕೊರೊನಾ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಹಾಸಿಗೆ, ಆಕ್ಸಿಜನ್‌, ಐಸಿಯು ಹಾಸಿಗೆ, ರೆಮಿಡಿಸಿವಿಯರ್‌ ಚುಚ್ಚುಮದ್ದು, ಲಸಿಕೆ ಎಲ್ಲವೂ ಕೊರತೆಯಾಗಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಜನತೆ ತಮ್ಮ ಪ್ರಾಣ ತಮ್ಮ ಕುಟುಂಬದವರ ಪ್ರಾಣ  ಉಳಿಸಿಕೊಳ್ಳುವ ಜತೆಗೆ ಸಮುದಾಯದ ಆರೋಗ್ಯ ಕಾಪಾಡುವ ಹೊಣೆಗಾರಿಕೆಯೂ ಇದೆ.

ಮೊದಲನೇ ಅಲೆಗೆ ಹೋಲಿಸಿದರೆ ಎರಡನೇ ಅಲೆಯ ಬಿಸಿ ಜೋರಾಗಿಯೇ ತಟ್ಟಿರುವುದರಿಂದ ಜನತೆ ಎಚ್ಚರಿಕೆ ವಹಿಸಿದ್ದಾರೆ. ಆದರೂ ಸಾಲದಾಗಿದೆ. ಇನ್ನೂ ಮುನ್ನಚ್ಚರಿಕೆ ವಹಿಸಬೇಕಾಗಿದೆ. ಸರಕಾರದ ಜತೆ ಸಂಘ-ಸಂಸ್ಥೆಗಳೂ  ಈ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ.

ಸರಕಾರವು ಲಾಕ್‌ಡೌನ್‌ ಅಥವಾ ಕರ್ಫ್ಯೂ ಬಿಗಿಯಾಗಿ ಪಾಲನೆ ಮಾಡುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ತರಬೇಕಾಗಿದೆ. ಇಷ್ಟು ಅವಧಿಯಲ್ಲಿ ಏನೆಲ್ಲ ಸಾಧ್ಯವೋ ಅಷ್ಟನ್ನೂ ಮಾಡಬೇಕಾಗಿದೆ.

ಒಟ್ಟಾರೆ, ಸರಕಾರ ಜಾರಿಗೊಳಿಸಿರುವ ಬಿಗಿ ಕ್ರಮ ಪಾಲಿಸಿ ಕೊರೊನಾ ಹಿಮ್ಮೆಟ್ಟಿಸಿ ಪ್ರತಿಯೊಬ್ಬರೂ ಮಾಸ್ಕ್ ಧರಿಸಿ, ಸ್ಯಾನಿಟೈಸರ್‌ ಬಳಸಿ, ಭೌತಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೊರೊನಾ ವಿರುದ್ಧ ಜಯಗಳಿಸಬೇಕಾಗಿದೆ.

ಟಾಪ್ ನ್ಯೂಸ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.