ಲೋಕಾಯುಕ್ತ ಮೂಲೆಗುಂಪು ಸಮಂಜಸವಲ್ಲ


Team Udayavani, Jan 25, 2022, 6:00 AM IST

ಲೋಕಾಯುಕ್ತ ಮೂಲೆಗುಂಪು ಸಮಂಜಸವಲ್ಲ

ದಶಕದ ಹಿಂದೆ ಭ್ರಷ್ಟರ ಪಾಲಿಗೆ ದುಃಸ್ವಪ್ನವಾಗಿ ಕಾಡುತ್ತಿದ್ದ ಲೋಕಾಯುಕ್ತ ಸಂಸ್ಥೆ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಬೇಕಾದ ಅನಿವಾರ್ಯತೆಗೆ ಸಿಲುಕಿಕೊಂಡಿದೆ. ಆಡಳಿತ-ವಿಪಕ್ಷ ಎನ್ನದೆ ಎಲ್ಲ ರಾಜಕೀಯ ಪಕ್ಷಗಳು ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲ ಗೊಳಿಸುವಲ್ಲಿ ಸಮಾನ ಪಾಲು ಹೊಂದಿವೆ. ಸ್ವತಂತ್ರ ಸಂಸ್ಥೆಯಾಗಿದ್ದ ಲೋಕಾಯುಕ್ತಕ್ಕೆ ಪರ್ಯಾಯವಾಗಿ ಸರಕಾರದ ಅಧೀನದಲ್ಲಿ ಕೆಲಸ ಮಾಡುವ “ಭ್ರಷ್ಟಾಚಾರ ನಿಗ್ರಹ ದಳ’ (ಎಸಿಬಿ) ರಚಿಸಿ ಲೋಕಾ ಯುಕ್ತವನ್ನು ಮೂಲೆಗುಂಪು ಮಾಡಲಾಯಿತು.

ಈಗ ಅದರ ಮುಂದುವರಿದ ಭಾಗವೆಂಬಂತೆ ಹೊಸ ಲೋಕಾಯುಕ್ತರ ನೇಮಕವನ್ನು ಸರಕಾರ ಮರೆತಿದೆ. ಹಾಲಿ ಲೋಕಾಯುಕ್ತ ನ್ಯಾಯ ಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು ಜ.27ರಂದು ನಿವೃತ್ತಿ ಹೊಂದಲಿ ದ್ದಾರೆ. ಆದರೆ ಹೊಸ ಲೋಕಾಯುಕ್ತರ ನೇಮಕದ ಪ್ರಕ್ರಿಯೆ ಸರಕಾರ ಆರಂಭಿಸಿಲ್ಲ. ಶಾಸನಬದ್ಧ ಸಂಸ್ಥೆಗಳನ್ನು ಖಾಲಿ ಇಡುವುದು ಆಡಳಿತಾತ್ಮಕ ದೃಷ್ಟಿಯಿಂದ ಒಳ್ಳೆಯದಲ್ಲ. ಅದೇ ರೀತಿ ಇಂತಹ ಬೆಳವಣಿಗೆ ಆಳುವ ವರ್ಗದ ಉದ್ದೇಶವನ್ನು ಅನುಮಾನಿಸುತ್ತದೆ. ಈ ಸೂಕ್ಷ್ಮತೆಯನ್ನು ಸರಕಾರ ಗಮನಿಸಬೇಕು.

ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಬೇಕು, ಭ್ರಷ್ಟರ ಹೆಡೆಮುರಿ ಕಟ್ಟಬೇಕು ಎಂಬುದೇನು ನಿಜ. ಇದೇ ವೇಳೆ ಪ್ರಾಮಾಣಿಕರ ರಕ್ಷಣೆಯೂ ಮುಖ್ಯ. ಆದರೆ ಅದಕ್ಕೆ ಬೇಕಾದ ಸಮರ್ಥ ವ್ಯವಸ್ಥೆ ಬೇಕು. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಲೋಕಾಯುಕ್ತಕ್ಕೆ ಇದ್ದ ಅಧಿಕಾರವನ್ನು ಮೊಟಕುಗೊಳಿಸಿ ಎಸಿಬಿ ಎಂಬ “ರಕ್ಷಣ ವ್ಯವಸ್ಥೆ’ಯನ್ನು ರೂಪಿಸಿಕೊಂಡು ಸರಕಾರಗಳು ಸಾಧಿಸಿದ್ದೇನು ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಎಸಿಬಿ ಲೋಕಾಯುಕ್ತದ ಅಧೀನದಲ್ಲೇ ಕೆಲಸ ಮಾಡಬೇಕು. ಲೋಕಾಯುಕ್ತ ಸಂಸ್ಥೆ ಇನ್ನಷ್ಟು ಬಲಿಷ್ಠಗೊಳ್ಳಬೇಕು ಎಂದು ಸ್ವತಃ ಲೋಕಾಯುಕ್ತ ನ್ಯಾ| ವಿಶ್ವನಾಥ್‌ ಶೆಟ್ಟಿ ಒತ್ತಿ ಹೇಳಿದ್ದಾರೆ. ಸೂಕ್ಷ್ಮತೆ ಮತ್ತು ಸಂವೇದನೆ ಇರುವ ಸರಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಬೇಕು.

ಹಿಂದಿನ ಸರಕಾರದ ಅವಧಿಯಲ್ಲಿ ಎಸಿಬಿ ರಚನೆ ಮಾಡಿದಾಗ ಆಗ ವಿಪಕ್ಷದಲ್ಲಿದ್ದ ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. ಭ್ರಷ್ಟರನ್ನು ರಕ್ಷಿಸ ಲೆಂದು ಸರಕಾರ ಎಸಿಬಿ ರಚಿಸಿದೆ ಎಂದು ಬಿಜೆಪಿ ಆರೋಪಿಸಿತ್ತು. ಅಷ್ಟೇ ಅಲ್ಲ, ಅಧಿಕಾರಕ್ಕೆ ಬಂದ ತತ್‌ಕ್ಷಣ ಎಸಿಬಿ ರದ್ದುಪಡಿಸಿ, ಲೋಕಾಯುಕ್ತಕ್ಕೆ ಶಕ್ತಿ ತುಂಬುವುದಾಗಿ ಬಿಜೆಪಿ ಹೇಳಿತ್ತು. ಆದರೆ ಅಧಿಕಾರ ಬಂದ ಬಳಿಕ ಮರೆತುಬಿಟ್ಟಿತು. ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ಮಾತು ಕೇವಲ ರಾಜಕೀಯ ಭರವಸೆಯಾಗಿ ಉಳಿದಿದೆ. ಎಸಿಬಿ ರಚಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ದಾವೆ ಹೂಡಲಾಗಿದೆ. ಎಸಿಬಿ ಬೇಡ ಅನ್ನುವ ರೀತಿಯಲ್ಲಿ ನ್ಯಾಯಾಲಯದಲ್ಲಿ ಲೋಕಾಯುಕ್ತ ಸಂಸ್ಥೆ ವಾದ ಮಂಡಿಸಿದೆ. ಆದರೆ ಸರಕಾರ ಈವರೆಗೆ ಯಾವುದೇ ಸ್ಪಷ್ಟ ನಿಲುವು ತಾಳದೆ ಕಾಲ ವ್ಯಯ ಮಾಡುತ್ತಿದೆ.

ಏನೇ ಇರಲಿ, ದಶಕದ ಹಿಂದೆ ರಾಜಕೀಯ ವಿಪ್ಲವಗಳಿಗೆ ಕಾರಣ ವಾಗಿದ್ದ, ರಾಜ್ಯದ ಜನರ ಮನೆ ಮಾತಾಗಿದ್ದ ಲೋಕಾಯುಕ್ತ ಸಂಸ್ಥೆಯ ಗತವೈಭವ ಮರುಕಳಿಸಬೇಕು. ಹೆಚ್ಚು ಬಲಿಷ್ಠವಾಗಿ, ಭ್ರಷ್ಟಾಚಾರ ತಡೆಯು ವಲ್ಲಿ ನಿರ್ಣಾಯಕ ಪಾತ್ರವಹಿಸಬೇಕು. ಆ ನಿಟ್ಟಿನಲ್ಲಿ ಸರಕಾರ ತನ್ನ ಶಾಸನ ಬದ್ಧ ಜವಾಬ್ದಾರಿ ನಿರ್ವಹಿಸಬೇಕು. ಯಾವುದೇ ವಿಳಂಬ ಮಾಡದೆ ಹೊಸ ಲೋಕಾಯುಕ್ತರ ನೇಮಕಾತಿ ಪ್ರಕ್ರಿಯೆ ಆರಂಭಿಸಿ ಆದಷ್ಟು ಬೇಗ ಲೋಕಾಯುಕ್ತ ಸಂಸ್ಥೆ ಮುಖ್ಯಸ್ಥರನ್ನು ಹೊಂದುವಂತೆ ಮಾಡಬೇಕು.

ಟಾಪ್ ನ್ಯೂಸ್

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mob

OTT; ಅಸಭ್ಯ ಒಟಿಟಿ ನಿಯಂತ್ರಣ: ಶಾಶ್ವತ ಕಡಿವಾಣ ಅಗತ್ಯ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

MUST WATCH

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

ಹೊಸ ಸೇರ್ಪಡೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.