ಒಂದು ಸರಣಿ ಸೋತ ಮಾತ್ರಕ್ಕೆ ಇಡೀ ತಂಡವೇ ಕಳಪೆಯಲ್ಲ


Team Udayavani, Jan 26, 2022, 6:00 AM IST

ಒಂದು ಸರಣಿ ಸೋತ ಮಾತ್ರಕ್ಕೆ ಇಡೀ ತಂಡವೇ ಕಳಪೆಯಲ್ಲ

ಭಾರತದಲ್ಲಿ ಕ್ರಿಕೆಟ್‌ ಆಟದ ಮೇಲಿರುವ ಅಭಿಮಾನ ಹೇಳತೀರದ್ದು. ಗೆದ್ದಾಗ ಅತಿಯಾಗಿ ಸಂಭ್ರಮಿಸುವ ಮತ್ತು ಸೋತಾಗ ಅಷ್ಟೇ ಕೋಪದಿಂದಲೇ ವರ್ತಿಸುವುದು ತೀರಾ ಹಿಂದಿನಿಂದಲೂ ನಡೆದುಕೊಂಡೇ ಬಂದಿದೆ. ಇದರಲ್ಲಿ ಅಭಿಮಾನಿಗಳ ತಪ್ಪಿದೆ ಎಂದು ಹೇಳುವುದು ಅಸಾಧ್ಯ. ಇದಕ್ಕೆ ಕಾರಣ, ಕ್ರಿಕೆಟ್‌ ಆಟಗಾರರನ್ನು ಕೆಲವೊಮ್ಮೆ ದೇವರಂತೆ ನೋಡುವ ಸಂಪ್ರದಾಯವೂ ಇಲ್ಲಿದೆ.

ಇದಕ್ಕೆ ತೀರಾ ಇತ್ತೀಚೆಗಿನ ಉದಾಹರಣೆ ಎಂದರೆ, ಇತ್ತೀಚಿನ ದಕ್ಷಿಣ ಆಫ್ರಿಕಾದಲ್ಲಿನ ಟೆಸ್ಟ್‌ ಮತ್ತು ಏಕದಿನ ಸರಣಿ. ಈ ಎರಡೂ ಸರಣಿಗಳನ್ನು ಭಾರತ ಕಳೆದುಕೊಂಡಿದೆ. ಟೆಸ್ಟ್‌ನಲ್ಲಿ 2-1 ಅಂತರದಿಂದ ಸೋತಿತಾದರೂ ಏಕದಿನದಲ್ಲಿ ಮೂರು ಪಂದ್ಯಗಳನ್ನೂ ಕಳೆದುಕೊಂಡು ಹೀನಾಯವಾಗಿಯೇ ಸೋತಿತು. ಇದಕ್ಕೆ ಕಾರಣಗಳು ಹಲವಾರು ಇವೆ.

ಈ ಬಾರಿ ಟೆಸ್ಟ್‌ ತಂಡದ ನೇತೃತ್ವವನ್ನು ವಿರಾಟ್‌ ಕೊಹ್ಲಿ ಅವರೇ ವಹಿಸಿಕೊಂಡಿದ್ದರಾದರೂ, 2ನೇ ಪಂದ್ಯದಲ್ಲಿ ಗಾಯದ ಸಮಸ್ಯೆಯಿಂದ ಹೊರಗುಳಿದರು. ಈ ಪಂದ್ಯದಲ್ಲಿ ಅಜಿಂಕ್ಯ ರೆಹಾನೆ ಮುನ್ನಡೆಸಬೇಕಿತ್ತು. ಆದರೆ ಇವರ ಬದಲಿಗೆ ಕೆ.ಎಲ್‌.ರಾಹುಲ್‌ ಅವರಿಗೆ ನಾಯಕತ್ವ ವಹಿಸಲಾಗಿತ್ತು. ಆದರೆ ಮೊದಲ ಟೆಸ್ಟ್‌ ನಾಯಕತ್ವದ ಪಂದ್ಯವನ್ನೇ ರಾಹುಲ್‌ ಸೋತರು. ಮೂರನೇ ಪಂದ್ಯಕ್ಕೆ ಮತ್ತೆ ಕೊಹ್ಲಿ ಬಂದರಾದರೂ ಫ‌ಲಿತಾಂಶದಲ್ಲಿ ಯಾವುದೇ ಬದಲಾವಣೆಯಾಗಲಿಲ್ಲ. ಇಲ್ಲಿ ರೋಹಿತ್‌ ಶರ್ಮ ಅನುಪಸ್ಥಿತಿ ಹೆಚ್ಚಾಗಿಯೇ ಕಾಡಿತು. ಇನ್ನು ಏಕದಿನ ತಂಡದ ನಾಯಕತ್ವದಿಂದ ವಿರಾಟ್‌ ಕೊಹ್ಲಿ ಅವರನ್ನು ಸ್ವತಃ ಬಿಸಿಸಿಐ ತೆಗೆದುಹಾಕಿದೆ. ಏಕದಿನದಲ್ಲಿ ಕೊಹ್ಲಿ ಅವರದ್ದು ಉತ್ತಮ ಪ್ರದರ್ಶನವಿದೆಯಾದರೂ ವೈಟ್‌ಬಾಲ್‌ ಕ್ರಿಕೆಟ್‌ಗೆ ಒಬ್ಬರೇ ನಾಯಕರಿರಬೇಕು ಎಂಬ ತಣ್ತೀದ ಆಧಾರದ ಮೇಲೆ ಕೊಹ್ಲಿ ಅವರನ್ನು ತೆಗೆದುಹಾಕಿ, ರೋಹಿತ್‌ ಶರ್ಮ ಅವರನ್ನು ನೇಮಿಸಲಾಗಿದೆ. ಆದರೆ ಗಾಯದ ಕಾರಣದಿಂದಾಗಿ ಮೊದಲ ಸರಣಿಯಲ್ಲೇ ರೋಹಿತ್‌ ಭಾಗಿಯಾಗಲಿಲ್ಲ. ಹೀಗಾಗಿ ಕೆ.ಎಲ್‌.ರಾಹುಲ್‌ ಅವರೇ ನಾಯಕತ್ವ ನಿಭಾಯಿಸಬೇಕಾಯಿತು.

ಸದ್ಯ ಟೆಸ್ಟ್‌ ಮತ್ತು ಏಕದಿನ ಸರಣಿಗಳೆರಡನ್ನೂ ಸೋತಿರುವುದರಿಂದ ಕ್ರಿಕೆಟ್‌ ಪಂಡಿತರು ಹೊಸ ಕೋಚ್‌ ರಾಹುಲ್‌ ದ್ರಾವಿಡ್‌ ಮತ್ತು ಕೆ.ಎಲ್‌.ರಾಹುಲ್‌ ಅವರ ಸಾಮರ್ಥ್ಯದ ಬಗ್ಗೆ ಪ್ರಶ್ನಿಸಲು ಮುಂದಾಗಿದ್ದಾರೆ. ರಾಹುಲ್‌ ಮೇಲೆ ಭಾರೀ ನಿರೀಕ್ಷೆ ಇರಿಸಿಕೊಂಡದ್ದೇ ತಪ್ಪಾಯಿತು ಎಂಬ ಮಾತುಗಳೂ ಕೇಳಿಬಂದಿವೆ.  ದಿಢೀರನೇ ವಿರಾಟ್‌ ಕೊಹ್ಲಿ ಅವರನ್ನು ಏಕದಿನ ನಾಯಕತ್ವದಿಂದ ತೆಗೆದುಹಾಕಿದ್ದು, ಟೆಸ್ಟ್‌ ಸರಣಿ ಸೋತ ಅನಂತರ ನಾಯಕತ್ವವನ್ನು ಅವರೇ ಬಿಟ್ಟಿದ್ದು, ಎಲ್ಲೋ ಒಂದು ಕಡೆಯಲ್ಲಿ ತಂಡದ ಮೇಲೆ ಪರಿಣಾಮ ಬೀರಿದೆ. ಈ ಅಂಶವನ್ನು ಸ್ವತಃ ಕೋಚ್‌ ರಾಹುಲ್‌ ದ್ರಾವಿಡ್‌ ಅವರೇ ಹೊರಹಾಕಿದ್ದಾರೆ. ಏಕದಿನ ತಂಡದಲ್ಲಿ ಕೊಂಚ ಅಸಮತೋಲನ ಇರುವುದು ಸತ್ಯ ಎಂದಿದ್ದಾರೆ. ಅಲ್ಲದೆ ಮಧ್ಯಮ ಕ್ರಮಾಂಕದ ಕೆಲವು ಆಟಗಾರರು ಸ್ಥಿರವಾದ ಆಟ ಪ್ರದರ್ಶಿಸಲೇಬೇಕು ಎಂಬ ಕಿವಿಮಾತನ್ನೂ ಹೇಳಿದ್ದಾರೆ.

ಇದೆಲ್ಲದರ ಹೊರತಾಗಿ ರಾಹುಲ್‌ ದ್ರಾವಿಡ್‌ ಅವರಿಗಾಗಲಿ ಅಥವಾ ಹೊಸ ನಾಯಕ ರೋಹಿತ್‌ಗಾಗಲಿ ಒಂದಷ್ಟು ಪಂದ್ಯಗಳನ್ನು ಆಡಲು ಅವಕಾಶ ನೀಡಬೇಕು. ಆಗಷ್ಟೇ ಅವರ ಸಾಮರ್ಥ್ಯವನ್ನು ಒರೆಗೆ ಹಚ್ಚಲು ಸಾಧ್ಯ ಎಂಬುದನ್ನು ಮರೆಯಬಾರದು. ಅಲ್ಲದೆ ಇದೊಂದೇ ಸರಣಿ ಮೂಲಕ ರಾಹುಲ್‌ ದ್ರಾವಿಡ್‌ ಅಥವಾ ಇಡೀ ತಂಡದ ಸಾಧನೆಯನ್ನು ಪರಾಮರ್ಶಿಸಲು ಸಾಧ್ಯವಿಲ್ಲ ಎಂಬುದನ್ನು ಮನಗಾಣಬೇಕು.

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.