ಲವ್‌ ಜೆಹಾದ್‌ ಸತ್ಯ ಹೊರ ಬರಲಿ


Team Udayavani, Aug 18, 2017, 7:39 AM IST

18-ANK-3.jpg

ಲವ್‌ ಜೆಹಾದ್‌ಗೆ ಧಾರ್ಮಿಕ, ರಾಜಕೀಯ ಆಯಾಮದ ಜತೆಗೆ ಇದೀಗ ಭಯೋತ್ಪಾದನೆಯ ಆಯಾಮವೂ ಸೇರಿಕೊಂಡಿದೆ. 

ಕಳೆದೆರಡು ದಶಕಗಳಲ್ಲಿ ಆಗಾಗ ಧಾರ್ಮಿಕ ಸಂಘರ್ಷಗಳಿಗೆ ಎಡೆಮಾಡಿಕೊಡುತ್ತಿದ್ದ ಲವ್‌ ಜೆಹಾದ್‌ ವಿವಾದವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೊಪ್ಪಿಸುವ ಮೂಲಕ ಸುಪ್ರೀಂ ಕೋರ್ಟ್‌ ಕಡೆಗೂ ಜಟಿಲ ಮತ್ತು ಸೂಕ್ಷ್ಮ ವಿವಾದವೊಂದರ ಹಿಂದಿರುವ ಸತ್ಯ ಏನೆಂದು ತಿಳಿಯುವ ಪ್ರಯತ್ನ ಮಾಡಿದೆ. ಕೇರಳದ ನಿವೃತ್ತ ಸೇನಾಧಿಕಾರಿಯೊಬ್ಬರ ಪುತ್ರಿಯನ್ನು ಹಿಂದಿನ ವರ್ಷ ಶಫಿನ್‌ ಜಹಾನ್‌ ಎಂಬ ಯುವಕ ಮತಾಂತರಿಸಿ ಮದುವೆಯಾಗಿರುವ ಪ್ರಕರಣವನ್ನು ಎನ್‌ಐಎ ತನಿಖೆಗೊಪ್ಪಿಸಲು ಸುಪ್ರೀಂ ಕೋರ್ಟ್‌ ಆದೇಶಿಸಿದೆ. ತನ್ನ ಮಗಳನ್ನು ಅಪಹರಿಸಿ ಬಲವಂತವಾಗಿ ಮತಾಂತರಿಸಿ ಮದುವೆ ಮಾಡಿಕೊಳ್ಳಲಾಗಿದೆ, ಮಗಳನ್ನು ಐಸಿಸ್‌ ಉಗ್ರ ಸಂಘಟನೆಗೆ ಸೇರಿಸುವ ಸಂಚು ಇದರ ಹಿಂದೆ ಇದೆ ಎಂದು ಸೇನಾಧಿಕಾರಿ ದೂರು ನೀಡಿದ್ದರು. ಕೇರಳ ಹೈಕೋರ್ಟ್‌ ಈ ದೂರನ್ನು ಗಂಭೀರವಾಗಿ ಪರಿಗಣಿಸಿ ಮದುವೆಯನ್ನೇ ಅಸಿಂಧುಗೊಳಿಸಿದೆ. ಶಫಿನ್‌ ಜಹಾನ್‌ ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟಿನ ಮೆಟ್ಟಿಲೇರಿದ್ದು, ಇದೀಗ ಸರ್ವೋಚ್ಚ ನ್ಯಾಯಾಲಯ ಸಮಗ್ರ ತನಿಖೆಗೆ ಆದೇಶಿಸುವುದರೊಂದಿಗೆ ಲವ್‌ ಜೆಹಾದ್‌ ಹಿಂದಿರುವ ರಹಸ್ಯ ಬಯಲಾಗಬಹುದೆಂಬ ನಿರೀಕ್ಷೆಯಿದೆ. ಅನ್ಯ ಧರ್ಮಗಳ ಯುವತಿಯರನ್ನು ಪ್ರೀತಿಸುವ ನಾಟಕವಾಡಿ ಮತಾಂತರಿಸಿ ಮದುವೆಯಾಗುವುದು ಎನ್ನಲಾದ ಲವ್‌ ಜೆಹಾದ್‌ ಎಂಬ ಪಿಡುಗು ಪ್ರಾರಂಭವಾಗಿರುವುದೇ ಕೇರಳದಲ್ಲಿ. ಅನಂತರ ಇದು ಕರ್ನಾಟಕ, ಉತ್ತರ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಿಗೆ ವ್ಯಾಪಿಸಿದೆ ಎನ್ನಲಾಗುತ್ತಿದೆ. 

ಲವ್‌ ಜೆಹಾದ್‌ಗೆ ಧಾರ್ಮಿಕ, ರಾಜಕೀಯ ಆಯಾಮದ ಜತೆಗೆ ಇದೀಗ ಭಯೋತ್ಪಾದನೆಯ ಆಯಾಮವೂ ಸೇರಿಕೊಂಡಿದೆ. ಹಿಂದಿನ ವರ್ಷ ಕೇರಳದ ಕಾಸರಗೋಡು ಮತ್ತು ಪಾಲಕ್ಕಾಡ್‌ ಜಿಲ್ಲೆಯಿಂದ ಐಸಿಸ್‌ ಉಗ್ರ ಸಂಘಟನೆ ಸೇರಲು ಹೋದ 21 ಮಂದಿಯಲ್ಲಿ ಹಲವು ಯುವಕ ಮತ್ತು ಯುವತಿಯರು ಮತಾಂತರಗೊಂಡವರಾಗಿದ್ದರು. ಐಸಿಸ್‌ ಉಗ್ರರನ್ನಾಗಿ ಪರಿವರ್ತಿಸುವ ಸಲುವಾಗಿಯೇ ಅವರನ್ನು ಪ್ರೀತಿಸುವ ನಾಟಕವಾಡಿ, ಮತಾಂತರಿಸಿ ಬ್ರೈನ್‌ವಾಶ್‌ ಮಾಡಲಾಗಿದೆ ಎನ್ನುವ ಆರೋಪವಿದೆ. ನ್ಯಾಯಾಲಯ ಲವ್‌ ಜೆಹಾದ್‌ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲು ಇದೂ ಒಂದು ಪ್ರಮುಖ ಕಾರಣ. ಲವ್‌ ಜೆಹಾದ್‌ ಎಂಬುದು ಕಪೋಲಕಲ್ಪಿತ, ಸಂಘ ಪರಿವಾರ ಮತ್ತು ಬಿಜೆಪಿಯ ಅಪಪ್ರಚಾರ. ಎನ್ನುವುದು ಇದಕ್ಕೆ ವಿರುದ್ಧವಾಗಿ ಮಂಡನೆಯಾಗುತ್ತಿರುವ ವಾದ. ಇದೇ ವೇಳೆ, ಲವ್‌ ಜೆಹಾದ್‌ಗಾಗಿ ಹಲವು ಸಂಘಟನೆಗಳು ಹಣದ ನೆರವು ನೀಡುತ್ತಿವೆ. ಒಂದು ಧರ್ಮದ ಜನಸಂಖ್ಯೆ ಹೆಚ್ಚಿಸಿಕೊಳ್ಳುವುದರ ಜತೆಗೆ ಉಳಿದ ಧರ್ಮಗಳ ಧಾರ್ಮಿಕ ಮತ್ತು ನೈತಿಕ ನೆಲೆಗಟ್ಟು ಕುಸಿಯುವಂತೆ ಮಾಡುವ ದುರುದ್ದೇಶ ಇದರಲ್ಲಿದೆ ಎನ್ನುವುದು ವಿರೋಧಿಸುವವರ ವಾದ.  

ರಾಜ್ಯದ ಹಿರಿಯ ಕಮ್ಯುನಿಸ್ಟ್‌ ನಾಯಕ ವಿ. ಎಸ್‌. ಅಚ್ಯುತಾನಂದನ್‌ ಒಂದು ಸಂದರ್ಭದಲ್ಲಿ, ಅನ್ಯ ಧರ್ಮದ ಯುವತಿಯರನ್ನು ಮತಾಂತರಿಸಿ ಮದುವೆಯಾಗುವುದು ಕೇರಳವನ್ನು ಮುಸ್ಲಿಂ ಬಾಹುಳ್ಯದ ರಾಜ್ಯವಾಗಿ ಮಾಡುವ ಪ್ರಯತ್ನ ಎಂದು ಹೇಳಿದ್ದರು. ಕರ್ನಾಟಕದಲ್ಲಿ ಅದರಲ್ಲೂ ಕರಾವಳಿ ಭಾಗದಲ್ಲಿ ಲವ್‌ ಜೆಹಾದ್‌ ವಿವಾದ ಜೋರಾದಾಗ 2009ರಲ್ಲಿ ಸರಕಾರವೂ ಸಿಐಡಿ ತನಿಖೆಗೆ ಆದೇಶಿಸಿತ್ತು. ಈ ತನಿಖೆಯಲ್ಲಿ ಲವ್‌ ಜೆಹಾದ್‌ ದೃಢಪಟ್ಟಿಲ್ಲ.  ಎನ್‌ಐಎ ಕೇರಳದ ಈ ಒಂದು ನಿರ್ದಿಷ್ಟ ಪ್ರಕರಣವಲ್ಲದೆ ಹಿಂದಿನ ಹಲವು ಪ್ರಕರಣಗಳನ್ನೂ ತನಿಖೆಗೊಳಪಡಿಸಲಿದೆ. ತನಿಖೆ ನಿಷ್ಪಕ್ಷಪಾತವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕೆಂಬ ಕಾರಣಕ್ಕೆ ಬೆಂಗಳೂರನ್ನು ತನಿಖಾ ಕೇಂದ್ರವನ್ನಾಗಿ ಮಾಡಲಾಗಿದೆ ಮಾತ್ರವಲ್ಲದೆ ನಿವೃತ್ತ ನ್ಯಾಯಮೂರ್ತಿಯೊಬ್ಬರಿಗೆ ತನಿಖೆಯ ಮೇಲುಸ್ತುವಾರಿಯನ್ನು ವಹಿಸಲಾಗಿದೆ. ಈ ಎಲ್ಲ ಕ್ರಮಗಳಿಂದ ಲವ್‌ ಜೆಹಾದ್‌ ಸತ್ಯ ಹೊರಬಂದರೆ ಸ್ವಾತಂತ್ರೊéàತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ಹೇಳಿದ 2022ಕ್ಕಾಗುವಾಗ ಕೋಮುಗಲಭೆ ಮುಕ್ತ ನವಭಾರತವನ್ನು ನಿರ್ಮಿಸುವ ಆಶಯಕ್ಕೆ ನ್ಯಾಯಾಲಯ ಪುಟ್ಟ ಕೊಡುಗೆ ನೀಡಿದಂತಾಗುತ್ತದೆ.

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.