ಚರ್ಮಗಂಟು ರೋಗ: ರಾಸುಗಳ ಆರೈಕೆ, ಎಚ್ಚರಿಕೆ, ಮುನ್ನೆಚ್ಚರಿಕೆ ಪ್ರಧಾನ


Team Udayavani, Sep 30, 2022, 6:00 AM IST

ಚರ್ಮಗಂಟು ರೋಗ: ರಾಸುಗಳ ಆರೈಕೆ, ಎಚ್ಚರಿಕೆ, ಮುನ್ನೆಚ್ಚರಿಕೆ ಪ್ರಧಾನ

ಜಾನುವಾರುಗಳ ಕೊರೊನಾ ಎಂದು ಬಿಂಬಿತವಾಗಿರುವ ಚರ್ಮ ಗಂಟು ರೋಗ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರದ ಸಕಾಲಿಕ ಕ್ರಮಗಳಿಂದಾಗಿ ಹೆಚ್ಚಿನ ಅನಾಹುತಗಳು ಆಗಿಲ್ಲ ಅನ್ನುವುದು ಸಮಾಧಾನದ ಸಂಗತಿ. ಆದರೂ, ಮುಂಜಾಗ್ರತಾ ಮತ್ತು ನಿಯಂತ್ರಣ ಕ್ರಮಗಳ ಜೊತೆಗೆ ರೈತರು, ಸಮಾಜ ಎಚ್ಚರಿಕೆ ವಹಿಸಬೇಕಿದೆ.

ಮನುಷ್ಯರಲ್ಲಿ ಕೊರೊನಾ ಹರಡುವ ರೀತಿಯಲ್ಲಿ ಜಾನುವಾರುಗಳಿಗೆ ಹರಡುವ ಚರ್ಮ ಗಂಟು ರೋಗ ನಿಯಂತ್ರಣಕ್ಕೆ ಪಶುಸಂಗೋಪಾನಾ ಇಲಾಖೆ ಲಸಿಕೆಯ ಅಸ್ತ್ರ ಬಳಸುತ್ತಿದ್ದು, ಸಮರೋಪಾದಿಯಲ್ಲಿ ಲಸಿಕೆ ಅಭಿಯಾನ ನಡೆಸುತ್ತಿದೆ. ಚರ್ಮ ಗಂಟು ರೋಗ ರಾಜ್ಯದಲ್ಲಿ ಬಹುತೇಕ ತಗ್ಗಿದೆ. ಇದರ ಹೊರತಾಗಿಯೂ ಜಾನುವಾರುಗಳಿಗೆ ಲಸಿಕೆ ಹಾಕುವುದು ಸೇರಿದಂತೆ ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸದ್ಯ ರಾಜ್ಯದಲ್ಲಿ 5 ಲಕ್ಷ ಡೋಸ್‌ ಲಸಿಕೆ ನೀಡಲಾಗಿದೆ. ಮುಂದಿನ ತಿಂಗಳು 25 ಲಕ್ಷ ಡೋಸ್‌ ಲಸಿಕೆ ನೀಡುವ ಯೋಜನೆ ಹಾಕಿಕೊಳ್ಳಲಾಗಿದೆ.  ಅಗತ್ಯಬಿದ್ದಲ್ಲಿ ನವೆಂಬರ್‌ನಲ್ಲೂ 25 ಲಕ್ಷ ಡೋಸ್‌ ಲಸಿಕೆ ನೀಡಲೂ ರಾಜ್ಯ ಸರ್ಕಾರ ಯೋಚಿಸುತ್ತಿದೆ.

ಬೆಳಗಾವಿ, ಹಾವೇರಿ, ದಾವಣಗೆರೆ, ರಾಯಚೂರು, ಧಾರವಾಡ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ 7 ಜಿಲ್ಲೆಗಳ 356 ಗ್ರಾಮಗಳಲ್ಲಿ 3 ಸಾವಿರಕ್ಕೂ ಹೆಚ್ಚು ಜಾನುವಾರುಗಳಲ್ಲಿ ರೋಗ ಕಂಡು ಬಂದಿದೆ ಎಂದು ಸರ್ಕಾರ ಹೇಳುತ್ತಿದೆ. ಅಲ್ಲಿ  ಜಾನುವಾರು ಸಂತೆ ಗಳನ್ನು ನಿಷೇಧಿಸಲಾಗಿದೆ. ಮಹಾರಾಷ್ಟ್ರ, ಆಂಧ್ರಪ್ರದೇಶ ಜತೆ ಗಡಿ ಹಂಚಿ ಕೊಂಡಿರುವ ರಾಜ್ಯದ ಜಿಲ್ಲೆಗಳ ಗಡಿ ಭಾಗಗಳಲ್ಲಿ ಚೆಕ್‌ಪೋಸ್ಟ್‌ ನಿರ್ಮಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿಯೂ ಮುನ್ನೆಚ್ಚರಿಕೆ ಕ್ರಮಗಳನ್ನು ಗೊಳ್ಳಲಾಗಿದೆ.

ರೋಗದಿಂದ ಮೃತಪಟ್ಟ ಜಾನುವಾರುಗಳಿಗೆ  20 ಸಾವಿರ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ. ಇದು ಸ್ವಾಗತಾರ್ಹ ಆದರೂ, ರೋಗಕ್ಕೆ ಜಾನುವಾರುಗಳು ತುತ್ತಾಗದಂತೆ ನೋಡಿಕೊಳ್ಳುವುದು ಸರ್ಕಾರದ ಆದ್ಯತೆಯಾಗಬೇಕು. ಪರಿಹಾರ ವಿತರಣೆಯಲ್ಲಿ ಪಾರದರ್ಶಕತೆಯೂ ಅಷ್ಟೇ ಮುಖ್ಯ. ಪರಿಹಾರ ನೀಡುವ ಪ್ರಕ್ರಿಯೆ ಕ್ಲಿಷ್ಟವಾಗಿರಬಾರದು. ಮಾನದಂಡ-ಮಾರ್ಗಸೂಚಿಗಳು ಜಟಿಲವಾಗಿರಬಾರದು. ರೋಗಕ್ಕೆ ತುತ್ತಾದ ಹಸುಗಳಿಗೆ ಚಿಕಿತ್ಸೆ ವಿಳಂಬವಾದರೆ ಹಾಲು ಉತ್ಪಾದನೆ ಶೇ.80ರಷ್ಟು ಕುಸಿತ ಕಾಣಲಿದೆೆ ಎಂಬ ಸುದ್ದಿಗಳು ಸಾಕಷ್ಟು ಹರಿದಾಡುತ್ತಿವೆ. ಈ ಬಗ್ಗೆ ಸರ್ಕಾರ ಸೂಕ್ತ ವೈಜ್ಞಾನಿಕ ಪುರಾವೆಗಳ ಮೂಲಕ ಭೀತಿಯನ್ನು ನಿವಾರಿಸುವ ಹೊಣೆ ಸರ್ಕಾರದ ಮೇಲೆ ಇದೆ.

ಈಗ ಜಾನುವಾರುಗಳಲ್ಲಿ ಕಂಡು ಬರುತ್ತಿರುವ ಚರ್ಮ ಗಂಟು ರೋಗ ಇದು ಎರಡನೇ ಅಲೆಯಾಗಿದೆ. ಮೊದಲ ಅಲೆ ಈಗಾಗಲೇ ಬಂದು ಹೋಗಿದೆ ಎಂದು ತಜ್ಞರು ಹೇಳುತ್ತಾರೆ. ಕೊರೊನಾ ರೀತಿ ರೋಗ “ಅಲೆ’ಗಳಲ್ಲಿ ಹರಡುತ್ತದೆ ಎಂದಾದರೆ, ಸಂಭಾವ್ಯ ಅಲೆಗಳನ್ನೂ ಅಲ್ಲಗಳೆಯುವಂತಿಲ್ಲ. ರಾಜ್ಯದಲ್ಲಿ 1.18 ಕೋಟಿ ಹಸು, ಎಮ್ಮೆಗಳಿವೆ. 70 ಸಾವಿರಕ್ಕೂ ಹೆಚ್ಚು ಬಿಡಾಡಿ ದನಗಳಿವೆ. ಈ ಪೈಕಿ 30 ಸಾವಿರಕ್ಕೂ ಹೆಚ್ಚು ಜಾನುವಾರುಗಳಲ್ಲಿ ಈ ಚರ್ಮ ಗಂಟು ರೋಗ ಕಂಡು ಬಂದಿದೆ. ಈ ರೋಗ ಕಟ್ಟಿ ಹಾಕದಿದ್ದರೆ ಗೋ ಸಂತತಿ,¤ ಗೋಸಂಪತ್ತಿನ ಮೇಲೆ ಪರಿಣಾಮ ಬೀರಲಿದೆ. ಜಾನುವಾರುಗಳಲ್ಲಿ ಹರಡುವ ಇಂತಹ ಸಾಂಕ್ರಾಮಿಕ ಹಾಗೂ ಮಾರಕ ಕಾಯಿಲೆಗಳ ವಿಚಾರದಲ್ಲಿ ಸರ್ಕಾರದ ಬಳಿ ಖಚಿತ ಹಾಗೂ ದೂರದೃಷ್ಟಿಯ ಉಪಕ್ರಮಗಳು ಇರಬೇಕು. ಹೊಸ ವೈಜ್ಞಾನಿಕ ಅಧ್ಯಯನ ಮತ್ತು ಪಶುವೈದ್ಯಕೀಯ ಸಂಶೋಧನೆಗೆ ಇದು ಸಕಾಲ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.