ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು ಕದನ ವಿರಾಮ ಘೋಷಿಸಿ


Team Udayavani, Mar 19, 2020, 6:30 AM IST

ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು ಕದನ ವಿರಾಮ ಘೋಷಿಸಿ

ತಮ್ಮ ಸರ್ಕಾರ, ಕೋವಿಡ್ ತಡೆಗೆ ಬದ್ಧ ಎಂದು ಕಮಲ್‌ನಾಥ್‌ ಹೇಳುತ್ತಿದ್ದಾರಾದರೂ, ಅಲುಗುತ್ತಿರುವ ಕುರ್ಚಿಯ ಮೇಲೆ ಕುಳಿತು, ಜನರತ್ತ ಗಮನ ಕೊಡಲು ಅವರಿಗೆ ನಿಜಕ್ಕೂ ಸಾಧ್ಯವೇ? ಈ ಯುದ್ಧವೀಗ ನಿಲ್ಲಲೇಬೇಕಿದೆ. ಬಿಜೆಪಿ- ಕಾಂಗ್ರೆಸ್‌ ನಡುವೆ ಕದನವಿರಾಮ ಘೋಷಣೆಯಾಗಲೇಬೇಕಿದೆ.

ಇಡೀ ದೇಶವೇ ಕೋವಿಡ್ ವೈರಸ್‌ ವಿರುದ್ಧದ ಹೋರಾಟದಲ್ಲಿ ತೊಡಗಿದ್ದರೆ, ಅತ್ತ ಮಧ್ಯಪ್ರದೇಶದಲ್ಲಿ ಬೇರೆಯದ್ದೇ ಹೋರಾಟ ನಡೆದಿದೆ. ಅಧಿಕಾರಕ್ಕಾಗಿ ಕಾಂಗ್ರೆಸ್‌ ಮತ್ತು ಬಿಜೆಪಿ ಚದುರಂಗದಾಟ ನಡೆಸಿವೆ. ಕಾಂಗ್ರೆಸ್‌ ನಾಯಕ, ಮುಖ್ಯಮಂತ್ರಿ ಕಮಲ್‌ನಾಥ್‌ರ ಸರ್ಕಾರ ಅಲುಗಾಡುತ್ತಿದ್ದರೆ, ಇನ್ನೊಂದೆಡೆ ಜ್ಯೋತಿರಾದಿತ್ಯ ಸಿಂಧಿಯಾ, ಬಂಡಾಯ ಶಾಸಕರು ಮತ್ತು ಬಿಜೆಪಿ ಕೂಡಲೇ ಫ್ಲೋರ್‌ ಟೆಸ್ಟ್‌ ಆಗಬೇಕು ಎಂದು ಬಯಸುತ್ತಿದ್ದಾರೆ. ತಮ್ಮ ಸರ್ಕಾರ ಅಲುಗಾಡುತ್ತಿಲ್ಲ, ನಮ್ಮ ಬಳಿ ಸಂಖ್ಯಾಬಲವಿಲ್ಲ ಎನ್ನುವುದನ್ನು ಬಿಜೆಪಿ ರುಜುವಾತು ಮಾಡಲಿ ಎನ್ನುತ್ತಿದ್ದಾರೆ ಕಮಲ್‌ನಾಥ್‌. ಕಾಂಗ್ರೆಸ್‌ ತನ್ನ ಸಂಖ್ಯಾಬಲ ರುಜುವಾತ ಮಾಡಬೇಕೆಂದು ಬಿಜೆಪಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಒಟ್ಟಲ್ಲಿ, ಮಧ್ಯಪ್ರದೇಶದ ರಾಜಕೀಯ ಗದ್ದಲ ಇಷ್ಟಕ್ಕೇ ಮುಗಿಯುವ ಲಕ್ಷಣ ಗೋಚರಿಸುತ್ತಿಲ್ಲ. ಬಂಡಾಯ ಶಾಸಕರ ತಂಡವೀಗ ರೆಸಾರ್ಟ್‌ ರಾಜಕಾರಣಕ್ಕೆ ಕುಖ್ಯಾತವಾದ ಬೆಂಗಳೂರಿನಲ್ಲಿ ಇದೆ. ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಕಮಲ್‌ನಾಥ್‌ ಸರಕಾರಕ್ಕೆ ವಿಶ್ವಾಸಮತ ಯಾಚಿಸಲು ಹತ್ತು ದಿನಗಳ ರಿಲೀಫ್ ಸಿಕ್ಕ ಕಾರಣ ಶಾಸಕರ ಮನವೊಲಿಕೆಗೆ ದಿಗ್ವಿಜಯ್‌ ಸಿಂಗ್‌ ಬೆಂಗಳೂರಿಗೆ ಆಗಮಿಸಿದ್ದರು. ಬುಧವಾರ ರೆಸಾರ್ಟ್‌ನಲ್ಲಿ ವಾಸ್ತವ್ಯವಿರುವ ಮಧ್ಯಪ್ರದೇಶ ಕೈ ನಾಯಕರ ಮನವೊಲಿಕೆಗೆ ಬಂದ ದಿಗ್ವಿಜಯ್‌ ಸಿಂಗ್‌ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರನ್ನು ಪೊಲೀಸರು ವಶಕ್ಕೆ ಪಡೆದದ್ದೂ ಸೇರಿದಂತೆ, ಹಲವು ಪ್ರಹಸನಗಳಿಗೆ ಬೆಂಗಳೂರು ಸಾಕ್ಷಿಯಾಯಿತು.

ಒಟ್ಟಲ್ಲಿ, ಈ ಪರಿಸ್ಥಿತಿ ನಿರ್ಮಾಣವಾಗಲು ಬಿಜೆಪಿಯ ಅಧಿಕಾರದಾಸೆಯೇ ಕಾರಣ ಎಂದು ಕಾಂಗ್ರೆಸ್‌ ದೂರುತ್ತಿದೆ. ಆದರೆ, ಇದೇ ವೇಳೆಯಲ್ಲೇ, ಈ ಪರಿಸ್ಥಿತಿಯನ್ನು ಖುದ್ದು ಕಮಲ್‌ನಾಥ್‌-ದಿಗ್ವಿಜಯ್‌ ಸಿಂಗ್‌ ಜೋಡಿ ಹಾಗೂ ಕಾಂಗ್ರೆಸ್‌ನ ಹೈಕಮಾಂಡ್‌(ಮುಖ್ಯವಾಗಿ ಸೋನಿಯಾ ಮತ್ತು ರಾಹುಲ್‌) ಮೈಮೇಲೆ ಎಳೆದುಕೊಂಡಿದ್ದಾರೆ ಎನ್ನುವುದನ್ನೂ ಕಾಂಗ್ರೆಸ್‌ ಒಪ್ಪಿಕೊಳ್ಳಬೇಕಿದೆ.

ಕಾಂಗ್ರೆಸ್‌ನಲ್ಲಿ ಗಾಂಧಿಯೇತರ ಯುವ ನಾಯಕರ ಏಳಿಗೆಯನ್ನು ಹೈಕಮಾಂಡ್‌ ಸಹಿಸುವುದಿಲ್ಲ ಎನ್ನುವ ಕೂಗೂ ಹೆಚ್ಚಾಗುವಂತೆ ಮಾಡಿದೆ ಈ ಇಡೀ ವಿದ್ಯಮಾನ. ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸಿಗಬೇಕಾಗಿದ್ದ ಗೌರವ, ಸ್ಥಾನಮಾನ ಸಿಕ್ಕಿದ್ದರೆ ಅವರು ಪಕ್ಷ ತೊರೆಯುವ ಪ್ರಮೇಯ ಎದುರಾಗುತ್ತಿರಲಿಲ್ಲವೇನೋ? ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಬಲವರ್ಧನೆಗಾಗಿ ದುಡಿದ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಬರಲು ಕಾರಣರಾದ ಸಿಂಧಿಯಾರನ್ನು ಕಾಂಗ್ರೆಸ್‌ ಕಡೆಗಣಿಸುತ್ತಲೇ ಬಂದು, ಇಂದು ಈ ಸ್ಥಿತಿ ನಿರ್ಮಿಸಿಕೊಂಡಿದೆ. ಕಾಂಗ್ರೆಸ್‌ ಮಾಡಿದ ತಪ್ಪಿನ ಲಾಭವನ್ನು ಬಿಜೆಪಿ ಚಾಣಾಕ್ಷತನದಿಂದ ಬಳಸಿಕೊಳ್ಳುತ್ತಿದೆ.

ಆದರೆ, ಇಲ್ಲಿ ಯಾರು ಗೆಲ್ಲುತ್ತಾರೆ, ಯಾರು ಸೋಲುತ್ತಾರೆ ಎನ್ನುವ ಚರ್ಚೆಗಿಂತ, ಇದರಿಂದ ಆಡಳಿತದ ಮೇಲೆ, ಸಾರ್ವಜನಿಕರ ಮೇಲೆ ಯಾವ ರೀತಿಯ ಪರಿಣಾಮ ಉಂಟಾಗುತ್ತದೆ ಎನ್ನುವ ಪ್ರಶ್ನೆ ಎದುರಾಗುತ್ತದೆ. ಈ ರಾಜಕೀಯ ಹಗ್ಗಜಗ್ಗಾಟದಲ್ಲೇ ಮಧ್ಯಪ್ರದೇಶದ ನಾಯಕರು ವ್ಯಸ್ತರಾದರೆ, ಕೊರೊನಾದ ವಿರುದ್ಧ ಪ್ರಾಮಾಣಿಕ ಹೋರಾಟ ಸಾಧ್ಯವಾಗಬಲ್ಲದೆ? ಆದಾಗ್ಯೂ, ತಮ್ಮ ಸರ್ಕಾರ, ಕೋವಿಡ್‌-19 ತಡೆಗೆ ಬದ್ಧ ಎಂದು ಕಮಲ್‌ನಾಥ್‌ ಹೇಳುತ್ತಿದ್ದಾರಾದರೂ, ಅಲುಗುತ್ತಿರುವ ಕುರ್ಚಿಯ ಮೇಲೆ ಕುಳಿತು, ರಾಜ್ಯದ ಜನರ ಕಾಳಜಿಗೆ ಗಮನ ಕೊಡಲು ಅವರಿಗೆ ಸಾಧ್ಯವೇ? ಇಂಥ ದುರಿತ ಕಾಲದಲ್ಲಿ ಅವರನ್ನು ಕುರ್ಚಿಯಿಂದ ಕೆಡವಲೇಬೇಕು ಎಂಬ ಅವಸರವೇಕೆ ಬಿಜೆಪಿಗೆ? ಈ ಯುದ್ಧವೀಗ ನಿಲ್ಲಲೇಬೇಕಿದೆ. ಬಿಜೆಪಿ ಕಾಂಗ್ರೆಸ್‌ ನಡುವೆ ಕದನವಿರಾಮ ಘೋಷಣೆಯಾಗಲೇಬೇಕಿದೆ. ಮೊದಲು ಈ ಎರಡೂ ಪಕ್ಷಗಳ ನಾಯಕರು ಕೊರೊನಾ ವಿರುದ್ಧ ಜಯ ಸಾಧಿಸಲು ಪ್ರಯತ್ನಿಸಲಿ. ಆಮೇಲೆ, ಯಾರಾದರೂ ಅಧಿಕಾರಕ್ಕೆ ಬರಲಿ.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.