ಜನಸ್ಪಂದನೆಯತ್ತ ಚಿತ್ತ ಹರಿಸಲಿ


Team Udayavani, Apr 25, 2019, 6:00 AM IST

Voting 2

ಇನ್ನಾದರೂ ಸಚಿವರು, ಶಾಸಕರು ರಾಜಕೀಯ ಲಾಭ- ನಷ್ಟದ ಲೆಕ್ಕಾಚಾರ, ಆರೋಗ್ಯ- ಪ್ರತ್ಯಾರೋಪಗಳನ್ನು ಬದಿಗಿಟ್ಟು ಜನರ ಸಮಸ್ಯೆಗೆ ಪರಿಹಾರ ನೀಡಲು ಖುದ್ದು ಧಾವಿಸುವ ಅಗತ್ಯವಿದೆ.

ರಾಜ್ಯದ 28 ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ಸಂಪೂರ್ಣ ಮುಗಿದಿದ್ದು, ಫ‌ಲಿತಾಂಶಕ್ಕಾಗಿ ಇಡೀ ರಾಜ್ಯವೇ ಕಾದು ಕುಳಿತಿದೆ. ಈ ನಡುವೆ ಲೋಕಸಭಾ ಚುನಾವಣೆ ಪ್ರಕ್ರಿಯೆ ಬಹುತೇಕ ಪೂರ್ಣಗೊಳ್ಳುತ್ತಿದ್ದಂತೆ ಅಭಿವೃದ್ಧಿ ಕಾರ್ಯದತ್ತ ದೃಷ್ಟಿ ಹರಿಸಬೇಕಿದ್ದ ಆಡಳಿತಯಂತ್ರ ಬಹುತೇಕ ಇನ್ನೂ ಜಡಾವಸ್ಥೆಯಲ್ಲಿದ್ದರೆ, ಹಲವು ಸಚಿವರು, ಆಡಳಿತ- ಪ್ರತಿಪಕ್ಷ ಶಾಸಕರು ರಾಜಕೀಯ ಜಂಜಾಟದಲ್ಲಿ ದಿನಕಳೆಯುತ್ತಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಲೋಕಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಪ್ರಗತಿಯಲ್ಲಿದ್ದ ಕಾಮಗಾರಿಗಳು ಅರ್ಧಕ್ಕೆ ಸ್ಥಗಿತಗೊಂಡಿದ್ದು, ಕಾಮಗಾರಿಗೆ ಮತ್ತೆ ಚಾಲನೆ ದೊರಕಿಲ್ಲ. ಇನ್ನೊಂದೆಡೆ ಚುನಾವಣಾ ಪ್ರಚಾರ, ಕಾರ್ಯತಂತ್ರದಲ್ಲೇ ನಿರತರಾಗಿದ್ದ ಸಚಿವರು, ಶಾಸಕರು, ಸಂಸದರು ಮತದಾನ ಮುಗಿದರೂ ಚುನಾವಣಾ ಗುಂಗಿನಿಂದ ಹೊರಬಂದಿಲ್ಲ. ರಾಜ್ಯದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತದಲ್ಲಿ ತಲಾ 14 ಕ್ಷೇತ್ರಗಳ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಬಹುತೇಕ ಸಚಿವರು, ಜನಪ್ರತಿನಿಧಿಗಳು ವಿಶ್ರಾಂತಿ ಮೊರೆ ಹೋಗಿದ್ದರೆ, ಇನ್ನೂ ಕೆಲವರು ಸೋಲು- ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಆದರೆ ಜನರ ಸಮಸ್ಯೆಗಳಿಗೆ ಸ್ಪಂದಿಸುವತ್ತ ಬಹುತೇಕರು ಈವರೆಗೆ ಚಿತ್ತ ಹರಿಸಿಲ್ಲ.

ರಾಜ್ಯದ ಬಹುತೇಕ ಕಡೆ ಜನ ಶುದ್ಧ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದರು. ಜಾನುವಾರುಗಳು ಸಹ ನೀರು, ಮೇವಿನ ಕೊರತೆಯಿಂದ ಬಳಲುತ್ತಿವೆ. ತೀವ್ರ ತಾಪಮಾನ, ಅಕಾಲಿಕ ಮಳೆಯಿಂದ ಕೃಷಿ, ತೋಟಗಾರಿಕೆ ಬೆಳೆಗಳ ನಾಶವಾಗಿ ದ್ದರೆ, ಕರಾವಳಿಯಲ್ಲಿ ಮತ್ಸಕ್ಷಾಮ, ಮಲೆನಾಡಿನಲ್ಲಿ ಮಂಗನ ಕಾಯಿಲೆ, ಉತ್ತರ ಕರ್ನಾಟಕ ಹಾಗೂ ಮಧ್ಯಕರ್ನಾಟಕದಲ್ಲಿ ಉದ್ಯೋಗ ಸೃಷ್ಟಿ ಕೊರತೆ, ಅಭಿವೃದ್ಧಿ ಕಾರ್ಯಗಳ ಹಿನ್ನಡೆ ಸಹಿತವಾಗಿ ನೂರಾರು ಸಮಸ್ಯೆಗಳು ನಗರ ಮತ್ತು ಗ್ರಾಮೀಣ ಪ್ರದೇಶದ ಜನರನ್ನು ಕಾಡುತ್ತಿವೆ.

ಜೂನ್‌ ಆರಂಭದಲ್ಲಿ ಮುಂಗಾರು ನಿರೀಕ್ಷೆಯಿದ್ದು, ರಾಜಧಾನಿ ಸಹಿತವಾಗಿ ಹಲವು ನಗರ, ಪಟ್ಟಣ ಪ್ರದೇಶಗಳಲ್ಲಿ ಮಳೆ ಅವಾಂತರ ತಡೆಗೆ ಕ್ರಿಯಾ ಯೋಜನೆಯೂ ಸಿದ್ಧವಾಗಿಲ್ಲ. ರಾಜಧಾನಿಯಲ್ಲಂತೂ ಈ ನಿಟ್ಟಿನಲ್ಲಿ ಯಾವುದೇ ಸಿದ್ಧತೆ ಮಾಡಿಕೊಳ್ಳದಿರುವುದು ನಗರದ ಜನರಲ್ಲಿ ಆತಂಕ ಸೃಷ್ಟಿಸಿದೆ.
ಲೋಕಸಭಾ ಚುನಾವಣೆಯ ಫ‌ಲಿತಾಂಶ ಘೋಷಣೆಯಾಗುವುದು ಬಾಕಿಯಿರುವುದನ್ನು ಹೊರತುಪಡಿಸಿದರೆ ರಾಜ್ಯದಲ್ಲಿ ಚುನಾವಣೆ ಪ್ರಕ್ರಿಯೆಗಳು ಬಹುತೇಕ ಮುಗಿದಿದೆ. ಇನ್ನು ಒಂದು ತಿಂಗಳು ಫ‌ಲಿತಾಂಶಕ್ಕಾಗಿ ಕಾಯಬೇಕಿದೆ. ಇನ್ನಾದರೂ ಸಚಿವರು, ಶಾಸಕರು ರಾಜಕೀಯ ಲಾಭ- ನಷ್ಟದ ಲೆಕ್ಕಾಚಾರ, ಆರೋಪ- ಪ್ರತ್ಯಾರೋಪಗಳನ್ನು ಬದಿಗಿಟ್ಟು ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸಿ ರಾಜ್ಯದ ಜನರ ಸಮಸ್ಯೆಗೆ ಪರಿಹಾರ ನೀಡಲು ಖುದ್ದು ಧಾವಿಸುವ ಅಗತ್ಯವಿದೆ. ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಮೇಲಾಟಗಳೇ ಜೋರಾಗಿದೆ.

ಶಾಸಕರ ರಾಜೀನಾಮೆ, ಮೈತ್ರಿ ಸರ್ಕಾರದ ಪತನ, ಹೊಸ ಸರ್ಕಾರದ ರಚನೆಗೆ ಕಾರ್ಯತಂತ್ರ ಇತ್ಯಾದಿ ವಿಷಯಗಳ ಬಗ್ಗೆಯೇ ರಾಜಕೀಯ ಪಕ್ಷದ ಮುಖಂಡರು ಶಾಸಕರು, ಸಚಿವರು ಚರ್ಚಿಸುತ್ತಿರುವುದು ಕಾಣುತ್ತಿದೆ. ಗ್ರಾಮೀಣ ಭಾಗದ ಜನ, ಜಾನುವಾರು ಕುಡಿಯಲು ನೀರಿಲ್ಲದೆ ಪರಿತಪಿಸುತ್ತಿದ್ದಾರೆ. ಹಲವು ಕಡೆಗಳಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಪ್ರಕ್ರಿಯೆ ಆರಂಭವಾಗಿದೆ. ಸ್ಥಳೀಯ ಆಡಳಿತಗಳ ಕಾರ್ಯವೈಖರಿ, ಜನರ ಸಮಸ್ಯೆಗಳಿಗೆ ಸ್ಪಂದನೆ ಬಗ್ಗೆ ಯಾರೊಬ್ಬರು ಮಾತನಾಡುತ್ತಿಲ್ಲ. ಚುನಾವಣೆ ಮುಗಿದ ತಕ್ಷಣವೇ ಜನರ ಸಮಸ್ಯೆಯನ್ನು ಆಲಿಸಬೇಕಾದ‌ವರೆ, ಕಣ್ಣು ಮುಚ್ಚಿ ಕುಳಿತರೆ, ಜನ ಸಾಮಾನ್ಯರ ಪಾಡು ಏನಾಗಬೇಕು?

ನೀತಿ ಸಂಹಿತೆ ಜಾರಿಯಲ್ಲಿದೆಯಾದರೂ, ಈಗಾಗಲೇ ಟೆಂಡರ್‌ ಪ್ರಕ್ರಿಯೆ ಮುಗಿದಿದ್ದು, ಅನುಷ್ಠಾನ ಮಾಡಬಹುದಾದ ಹತ್ತಾರು ಅಭಿವೃದ್ಧಿ ಕಾರ್ಯಗಳು ಹಾಗೇ ಉಳಿದುಕೊಂಡಿದೆ. ಇನ್ನಾದರೂ ಆ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ನೀತಿ ಸಂಹಿತೆ ತರೆವಾದ ನಂತರ ಇನ್ನಷ್ಟು ಅಭಿವೃದ್ಧಿ ಕಾರ್ಯಗಳಿಗೆ ಚುರುಕು ಮುಟ್ಟಿಸುವ ಪ್ರಯತ್ನದ ಕುರುಹೂ ಕಾಣುತ್ತಿಲ್ಲ. ಮಳೆಗಾಲ ಸಮೀಪಿಸುತ್ತಿದ್ದು, ರಸ್ತೆ, ಕಾಲುವೆ, ಹೆದ್ದಾರಿಗಳ ದುರಸ್ತಿ, ಅಭಿವೃದ್ಧಿಗೆ ಆದ್ಯತೆ ಕಾಣುತ್ತಿಲ್ಲ. ಇನ್ನಾದರೂ ಜನ ಪ್ರತಿನಿಧಿಗಳು, ಅಧಿಕಾರಶಾಹಿ ಒಟ್ಟಿಗೆ ರಾಜ್ಯದ ಜನರಿಗೆ ಸ್ಪಂದಿಸುವ ತುರ್ತು ಅಗತ್ಯವಿದ್ದು, ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.