ಸಾಮಾನ್ಯ ಮಳೆಯ ಮುನ್ಸೂಚನೆ: ರೈತರಲ್ಲಿ ಚಿಗುರಿದ ಆಶಾವಾದ


Team Udayavani, Apr 12, 2023, 6:00 AM IST

ಸಾಮಾನ್ಯ ಮಳೆಯ ಮುನ್ಸೂಚನೆ: ರೈತರಲ್ಲಿ ಚಿಗುರಿದ ಆಶಾವಾದ

ಪ್ರಸಕ್ತ ವರ್ಷ ಮುಂಗಾರು ಋತುವಿನಲ್ಲಿ ಎಲ್‌ ನಿನೋ ಕಾರಣದಿಂದಾಗಿ ವಾಡಿಕೆಗಿಂತ ಕಡಿಮೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್‌ ಮುನ್ಸೂಚನೆ ನೀಡಿದ ಬೆನ್ನಲ್ಲೇ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಲ್‌ ನಿನೋ ಹೊರತಾಗಿಯೂ ದೇಶದಲ್ಲಿ ಪ್ರಸಕ್ತ ವರ್ಷ ವಾಡಿಕೆಯಷ್ಟು ಮಳೆಯಾಗಲಿದೆ ಎಂದು ತಿಳಿಸಿದೆ. ಈಗಾಗಲೇ ತಾಪಮಾನ ಹೆಚ್ಚಳ ಮತ್ತು ನೀರಿನ ಅಭಾವದಿಂದ ಕಂಗೆಟ್ಟಿರುವ ದೇಶದ ಜನತೆಯ ಅದರಲ್ಲೂ ರೈತರ ಮೊಗದಲ್ಲಿ ಐಎಂಡಿ ನೀಡಿರುವ ಈ ಮುನ್ಸೂಚನೆ ಆಶಾವಾದವನ್ನು ಮೂಡಿಸಿದೆ.

ಸೋಮವಾರವಷ್ಟೇ ಸ್ಕೈಮೆಟ್‌ ಪ್ರಸಕ್ತ ವರ್ಷದ ಮುಂಗಾರಿನ ಕುರಿತಂತೆ ತನ್ನ ಮೊದಲ ಮುನ್ಸೂಚನೆಯನ್ನು ಬಿಡುಗಡೆ ಮಾಡಿ ಮುಂಗಾರು ಋತುವಿನಲ್ಲಿ ಎಲ್‌ ನಿನೋ ಪರಿಣಾಮವಾಗಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಲಿದ್ದು, ದೇಶದಲ್ಲಿ ಶೇ. 20ರಷ್ಟು ಬರಗಾಲ ಉಂಟಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಿತ್ತು. ದೇಶದ ಕೃಷಿ ಕ್ಷೇತ್ರ ಅದರಲ್ಲೂ ಮುಖ್ಯವಾಗಿ ಆಹಾರ ಬೆಳೆಗಳು ಮುಂಗಾರನ್ನೇ ಅವಲಂಬಿಸಿದ್ದು ಈ ವರದಿ ರೈತರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಅಷ್ಟು ಮಾತ್ರವಲ್ಲದೆ ಮುಂಗಾರು ಕೈಕೊಟ್ಟದ್ದೇ ಆದಲ್ಲಿ ಆಹಾರ ಉತ್ಪಾದನೆ ಕುಂಠಿತಗೊಂಡು ಮತ್ತೆ ಬೆಲೆಏರಿಕೆಯ ಬಿಸಿ ತಟ್ಟಿ ಹಣದುಬ್ಬರ ಹೆಚ್ಚಾಗಲಿದೆ. ಇದು ದೇಶದ ಆರ್ಥಿಕತೆಯ ಮೇಲೆ ನೇರ ಪರಿಣಾಮ ಬೀರುವುದರಿಂದ ಒಟ್ಟಾರೆಯಾಗಿ ದೇಶದ ಜನತೆಯಲ್ಲಿ ಒಂದಿಷ್ಟು ಕಳವಳ ಮೂಡಿಸಿತ್ತು.

ಆದರೆ ಕೇಂದ್ರ ಸರಕಾರದ ಅಧೀನದಲ್ಲಿರುವ ಭಾರತೀಯ ಹವಾಮಾನ ಇಲಾಖೆ ಮಂಗಳವಾರ ತನ್ನ ಮುನ್ಸೂಚನೆಯನ್ನು ಬಿಡುಗಡೆ ಮಾಡಿ, ಪ್ರಸಕ್ತ ಮುಂಗಾರು ಅವಧಿಯಲ್ಲಿ ಎಲ್‌ ನಿನೋ ಕಾಣಿಸಿಕೊಂಡರೂ ದೇಶದಲ್ಲಿ ವಾಡಿಕೆಯಷ್ಟು ಮಳೆಯಾಗಲಿದೆ. ಸೆಪ್ಟಂಬರ್‌ ತಿಂಗಳಲ್ಲಿ ಎಲ್‌ ನಿನೋ, ನೈಋತ್ಯ ಮಾರುತಗಳ ಮೇಲೆ ಕೊಂಚ ಪ್ರಭಾವ ಬೀರಲಿದೆಯಾದರೂ ಬರ ಪರಿಸ್ಥಿತಿ ಸೃಷ್ಟಿಯಾಗಲಾರದು. ಮುಂಗಾರಿನ ದೀರ್ಘಾವಧಿಯ ಸರಾಸರಿ ಶೇ.87ರಷ್ಟಾಗಿದ್ದು ಈ ಬಾರಿ ಈ ಅವಧಿಯಲ್ಲಿ ಶೇ.96ರಷ್ಟು ಮಳೆಯಾಗಲಿದೆ ಎಂದು ಅಂದಾಜಿಸಿದೆ. ಈ ಬಾರಿ ಸಾಮಾನ್ಯ ಅಥವಾ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಂಭಾವ್ಯತೆ ಶೇ.67ರಷ್ಟಿದೆ ಎಂದು ಇಲಾಖೆ ತಿಳಿಸಿದೆ.

ಇದೇ ವೇಳೆ ವಾಯುವ್ಯ ಭಾರತ, ಮಧ್ಯ ಭಾರತ ಮತ್ತು ಈಶಾನ್ಯ ಭಾರತದಲ್ಲಿ ನೈಋತ್ಯ ಮಾರುತಗಳು ಸಾಮಾನ್ಯ ಅಥವಾ ಸಾಮಾನ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಸುರಿಸುವ ಸಾಧ್ಯತೆಗಳಿವೆ. ಇನ್ನು ಪರ್ಯಾಯ ದ್ವೀಪ ಪ್ರದೇಶ, ಪೂರ್ವ-ಮಧ್ಯ ಭಾಗಗಳಿಗೆ ತಾಗಿಕೊಂಡಿರುವ ಪ್ರದೇಶಗಳು, ಪೂರ್ವ, ಈಶಾನ್ಯ ಪ್ರದೇಶಗಳ ಹಲವೆಡೆ ಮತ್ತು ವಾಯುವ್ಯ ಭಾರತದ ಕೆಲವೊಂದು ಭಾಗಗಳಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಐಎಂಡಿ ಅಂದಾಜಿಸಿದೆ. ಅಷ್ಟು ಮಾತ್ರವಲ್ಲದೆ ಈಶಾನ್ಯ ಮಾರುತಗಳು ಹಿಂಗಾರು ಋತುವಿನಲ್ಲಿ ದೇಶದಲ್ಲಿ ಉತ್ತಮ ಮಳೆ ಸುರಿಸುವ ಸಾಧ್ಯತೆಗಳಿದ್ದು, ಮುಂಗಾರು ಅವಧಿಯಲ್ಲಿನ ಕೊರತೆಯನ್ನು ನಿವಾರಿಸಲಿದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದೆ.

ಮುಂಗಾರು ಮಳೆಗೆ ಸಂಬಂಧಿಸಿದಂತೆ ಎರಡು ಹವಾಮಾನ ಸಂಸ್ಥೆಗಳು ಒಂದಿಷ್ಟು ವಿಭಿನ್ನವಾದ ಮುನ್ಸೂಚನೆಯನ್ನು ನೀಡಿವೆಯಾದರೂ ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಯುವ ವಿಶ್ವಾಸ ದೇಶದ ರೈತರದ್ದಾಗಿದೆ. ತಾಪಮಾನ ಒಂದೇ ಸಮನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಗಾರು ಅವಧಿಯಲ್ಲಿ ಉತ್ತಮ ಮಳೆಯಾಗಬಹುದು ಎಂಬುದು ಜನತೆಯ ನಿರೀಕ್ಷೆ. ಇದಕ್ಕೆ ಪೂರಕವಾಗಿ ಭಾರತೀಯ ಹವಾಮಾನ ಇಲಾಖೆ ಕೂಡ ವಾಡಿಕೆಯಷ್ಟು ಮಳೆ ಸುರಿಯಲಿದೆ ಎಂದು ಅಂದಾಜಿಸಿದ್ದು ಸಹಜವಾಗಿಯೇ ದೇಶದ ರೈತರ ಮೊಗದಲ್ಲಿ ಸಂತಸ ಮೂಡಿಸಿದೆ. ಮುಂಗಾರು ಆರಂಭಗೊಳ್ಳಲು ಇನ್ನೂ ಒಂದೂವರೆ ತಿಂಗಳು ಬಾಕಿ ಉಳಿದಿರುವುದರಿಂದ ಹಾಲಿ ಋತುವಿನಲ್ಲಿ ಎಷ್ಟು ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಅಂದಾಜಿಸುವುದು ಒಂದಿಷ್ಟು ಆತುರದ ನಡೆಯಾದೀತು. ಸರಿಸುಮಾರು ನಾಲ್ಕು ವರ್ಷಗಳ ವಿರಾಮದ ಬಳಿಕ ಈ ಬಾರಿ ಎಲ್‌ ನಿನೋ ವಿದ್ಯಮಾನ ಸಂಭವಿಸುವುದು ನಿಶ್ಚಿತವಾಗಿರುವುದರಿಂದ ಇಡೀ ದೇಶದ ಚಿತ್ತ ಈ ವಿದ್ಯಮಾನದ ತೀವ್ರತೆ ಮತ್ತು ಪರಿಣಾಮದ ಮೇಲೆ ನೆಟ್ಟಿದೆ.

ಟಾಪ್ ನ್ಯೂಸ್

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.